ಬಣ್ಣದ ವೈಭವ-4 : ಮರೆತು ಹೋದ ರಾಕ್ಷಸ ಪಾತ್ರಗಳ ಮೇಕಪ್ ಕಲೆಗಾರಿಕೆ
ಬಣ್ಣಗಾರಿಕೆಯ ಶ್ರಮ ಈಗ ಮಾಯ !.. ಬೇರೆಲ್ಲಾ ಪಾತ್ರಗಳಿಗಿಂದ ಹೆಚ್ಚು ಸಮಯ ವ್ಯಯ
Team Udayavani, Sep 28, 2022, 8:11 PM IST
ಬಡಗು ತಿಟ್ಟು ಯಕ್ಷಗಾನ ರಂಗದಲ್ಲಿ ಬೇರೆಲ್ಲಾ ಪಾತ್ರಗಳಿಂದ ಬಣ್ಣದ ವೇಷಗಳ ಮುಖವರ್ಣಿಕೆಗೆ (ಮೇಕಪ್) ಹೆಚ್ಚು ಸಮಯ ಹಿಡಿಯುತ್ತದೆ. ರಂಗದಲ್ಲಿ ರಾಕ್ಷಸನಾಗಿ ಕಾಣುವ ಸಾಮಾನ್ಯ ವ್ಯಕ್ತಿಯ ಪರಿಚಯವೇ ಆಗದ ರೀತಿಯಲ್ಲಿ ಬಣ್ಣಗಾರಿಕೆಯ ಚಮತ್ಕಾರವಿರುತ್ತದೆ. ಸಾಮಾನ್ಯವಾಗಿ ತೆಂಕು ತಿಟ್ಟಿನಲ್ಲೂ ಬಣ್ಣದ ವೇಷಗಳಿಗೆ ಚಿಟ್ಟೆ ಇಟ್ಟು ಮುಖವರ್ಣಿಕೆ ಮಾಡಲಾಗುತ್ತದೆ. ಒಂದು ರಾಕ್ಷಸ ವೇಷದ ಸಿದ್ದತೆಗೆ ಗಂಟೆಗೂ ಹೆಚ್ಚು ಕಾಲ ಮೇಕಪ್ ಗಾಗಿ ಕಲಾವಿದ ಶ್ರಮ ವಹಿಸಬೇಕಾಗಿತ್ತು.
ಇದನ್ನೂ ಓದಿ: ಬಣ್ಣದ ವೈಭವ-3: ರಾವಣ, ಘಟೋತ್ಕಚನಂತಹ ಪಾತ್ರಗಳೂ ಬಣ್ಣದ ವೇಷದ ಸ್ಥಾನಮಾನ ಕಳೆದುಕೊಂಡಿವೆ…
ತಮ್ಮ ಬದುಕಿನ ಬಣ್ಣದ ಮಾತು ಮುಂದುವರಿಸಿದ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರು, ಹಿಂದಿನ ಪರಂಪರೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ರಂಗದಲ್ಲಿ ಪಾತ್ರದ ಪ್ರಸ್ತುತಿಯಲ್ಲಿನ ಅರ್ಥ ಪೂರ್ಣತೆಯ ಕುರಿತು ಹೇಳುತ್ತಾ ಸದ್ಯ ಬಡಗುತಿಟ್ಟಿನಲ್ಲಿ ಪಾರಂಪರಿಕ ಮುಖವರ್ಣಿಕೆ ಮರೆಯಾಗಿದೆ ಎಂದು ನೋವು ಹೊರ ಹಾಕಿದರು.
ಬಣ್ಣದ ವೇಷ ವೆಂದರೆ ರಾಕ್ಷಸ ಬಂದು ಅಬ್ಬರಿಸಿ ಮಡಿದು ಚೌಕಿ(ಬಣ್ಣದ ಮನೆ) ಸೇರುವುದಷ್ಟೆ ಅಲ್ಲ, ಆಯಾಯ ಪಾತ್ರಗಳಲ್ಲಿ ವಿಭಿನ್ನತೆ ಪ್ರತ್ಯೇಕತೆ ಅನ್ನುವುದು ಇದೆ ಎನ್ನುವುದೇ ವಿಶೇಷ ಎಂದರು.
ಬಣ್ಣದ ವೇಷಕ್ಕೆ ಹಿಂದೆ ಬೆಳ್ತಿಗೆ ಅಕ್ಕಿಯನ್ನು ನೆನೆಸಿಟ್ಟು ನುಣ್ಣಗೆ ಅರೆದು ಅದಕ್ಕೆ ಸುಣ್ಣ ಬೆರೆಸಿ ಚಿಟ್ಟೆ ಇಡಲು ಬಳಸುತ್ತಿದ್ದರು. ವೃತ್ತಿ ಮೇಳಗಳಲ್ಲಿ ಸಾಮಾನ್ಯವಾಗಿ ಕೆಲಸದ ಆಳುಗಳು ಅಕ್ಕಿಯನ್ನು ಎರಡು ದಿನಕ್ಕೊಮ್ಮೆ ಅರೆದು ತಂದು ಬಣ್ಣದ ವೇಷಧಾರಿಯ ಪೆಟ್ಟಿಗೆಯ ಬಳಿ ಇಡುತ್ತಿದ್ದರು ಎಂದು ಎಳ್ಳಂಪಳ್ಳಿಯವರು ಹೇಳಿದರು. ಈಗ ಆ ಕ್ರಮ ಮರೆಯಾಗಿದ್ದು ಹೊಸ ರೀತಿಯ ಬಣ್ಣಗಳನ್ನೂ ಥರ್ಮಕೋಲ್, ಅಂಟು ಪದಾರ್ಥಗಳ ಮೂಲಕ ಚಿಟ್ಟೆಯನ್ನೂ ತಯಾರಿಸಿ ಮೂಲ ಆಕಾರವನ್ನು ನೀಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶುಭ್ರವಾದ ಬೆಳ್ಳಗಿನ ಚಿಟ್ಟೆಗಳು ಮುಳ್ಳುಮುಳ್ಳಾಗಿ ರಕ್ಕಸ ರೂಪದ ಭೀಕರತೆಯನ್ನು ತೋರಿಸುತ್ತವೆ. ಅದು ಕಲಾವಿದನ ಸಾಮರ್ಥ್ಯ ದ ಮೇಲೆ ಗಾತ್ರವನ್ನು, ಅಂದವನ್ನೂ ಪಡೆದುಕೊಳ್ಳುತ್ತಿತ್ತು. ರಾಕ್ಷಸ ಮುಖವರ್ಣಿಕೆಯಲ್ಲಿ ವಿಭಿನ್ನತೆಯನ್ನೂ ಕಾಣಬಹುದು. ಏಕ ಸುಳಿ ಅಂದರೆ ಒಂದು ಸುಳಿ ಶಾಪಕ್ಕೆ ಗುರಿಯಾದ ಗಂಧರ್ವರಿಗೆ ಸಾಮಾನ್ಯವಾಗಿ ಕಂಸ ಜನ್ಮದಲ್ಲಿ ಬರುವ ಧ್ರುಮಿಳ ಗಂಧರ್ವನಿಗೆ ಈ ರೀತಿಯಲ್ಲಿ ಮುಖವರ್ಣಿಕೆ ಮಾಡಲಾಗುತ್ತದೆ. ದ್ವಿಸುಳಿ (ಎರಡು ಸುಳಿ) ಪಾತ್ರಗಳನ್ನು ಮಾಡಲಾಗುತ್ತದೆ. ಪಾತ್ರಗಳಿಗನುಗುಣವಾಗಿ ತ್ರಿಸುಳಿ(ಮೂರು ಸುಳಿ)ಯನ್ನು ಬರೆಯುವ ಕ್ರಮವಿದೆ ಎಂದು ವೈಶಿಷ್ಟ್ಯತೆಗಳ ಬಗ್ಗೆ ಹೇಳಿದರು.
ಚೇಳು ಸುಳಿ ಕಾಟು ಬಣ್ಣದ ವೇಷಗಳಿಗೆ ಬಳಸುವ ಕ್ರಮವಿದೆ. ಕವಿ ಮುದ್ದಣ ವಿರಚಿತ ರತ್ನಾವತಿ ಕಲ್ಯಾಣದಲ್ಲಿ ಬರುವ ಕಾಟು ಬಣ್ಣದ ವೇಷವಾದ ವಿದ್ಯುಲ್ಲೋಚನ ನ ಪಾತ್ರ ಅಂತಹ ವೇಷಗಳಲ್ಲಿ ಒಂದು. ಈಗ ರಂಗದಲ್ಲಿ ಆ ಪಾತ್ರ ಮರೆಯಾಗಿದ್ದು, ನಾಟಕೀಯ ಪಾತ್ರಗಳಲ್ಲೋ , ಪುಂಡು ವೇಷಧಾರಿಗಳ ಕೈಯಲ್ಲಿಯೋ ಮಾಡಿಸುತ್ತಿರುವುದು ಹೊಸತನಕ್ಕೆ ಸಾಕ್ಷಿಯಾಗಿದ್ದು, ಪ್ರೇಕ್ಷಕರಿಗೆ ರಾಕ್ಷಸ ವೇಷದ ಸವಿಯನ್ನು ಕಾಣಲು ಅಸಾಧ್ಯವಾಗಿದೆ ಎಂದರು.
ಪಾತಾಳದಲ್ಲಿರುವ ರಾಕ್ಷಸರಿಗೆ ಸರ್ಪ ಸುಳಿ ಬರೆಯುವ ಕ್ರಮವೂ ಇತ್ತು. ಬಣ್ಣದ ವೇಷದ ಪಾತ್ರಗಳ ಕಲ್ಪನೆಯೇ ಬಡಗುತಿಟ್ಟಿನಲ್ಲಿ ಮರೆಯಾಗುತ್ತಿರುವ ವೇಳೆ ಇನ್ನು ಆ ವಿಶೇಷತೆಗಳ ಕುರಿತು ಚಿಂತಿಸುವತ್ತ ಕಲಾವಿದರು ಮುಂದಾಗುತ್ತಿಲ್ಲ. ದೇವಿ ಮಾಹಾತ್ಮೆಯಲ್ಲಿ ಬರುವ ವಿದ್ಯುನ್ಮಾಲಿಯಂತಹ ಪ್ರಮುಖ ಪಾತ್ರ ವನ್ನು ಆ ರೀತಿ ಮಾಡಬಹುದು. ಆ ಪಾತ್ರವನ್ನು ಮುಂಡಾಸು ವೇಷವಾಗಿ ಮಾಡಲಾಗುತ್ತಿದೆ. ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಬಣ್ಣದ ವೇಷಗಳಿಗೆ ಸಾಕಷ್ಟು ಅವಕಾಶವಿದೆ.ಸಾಂಪ್ರದಾಯಿಕ ವೇಷಗಳನ್ನು ತೋರಿಸಿಕೊಳ್ಳುವ ಅವಕಾಶವಿದೆ. ಆದರೆ ಬಡಗಿನಲ್ಲಿ ಆ ಪ್ರಯತ್ನ ಯಾರೂ ಮಾಡುತ್ತಿಲ್ಲ ಎಂದು ನೋವು ಹೊರ ಹಾಕಿದರು.
ಹೆಣ್ಣು ಬಣ್ಣ ದ ವೇಷಗಳಿಗೆ ಸಣ್ಣ ಚಿಟ್ಟೆ ಇಡುವುದು ಸಾಮಾನ್ಯವಾಗಿತ್ತು. ಶೂರ್ಪನಖಿ, ಅಜೋಮುಖಿ ಸೇರಿದಂತೆ ಇತರ ಪಾತ್ರಗಳು ತನ್ನದೇ ವಿಶಿಷ್ಟತೆ ಹೊಂದಿದ್ದವು. ಬಣ್ಣದ ವೇಷ ಮಾಡುವಲ್ಲಿ ಹೆಚ್ಚು ಶ್ರಮ ಮತ್ತು ಸಮಯ ಅಗತ್ಯವಾಗಿರುತ್ತದೆ. ಮುಖವರ್ಣಿಕೆಗೇ ಹೆಚ್ಚು ಸಮಯ ತಗಲುತ್ತದೆ. ತಾಳ್ಮೆ ಬಣ್ಣದ ವೇಷಧಾರಿಗೆ ಇರಲೇ ಬೇಕಾಗುತ್ತದೆ. ಆಗ ಮಾತ್ರ ಮುಖವರ್ಣಿಕೆಯಲ್ಲಿ ವಿಶೇಷತೆಯನ್ನು ತೋರಬಹುದು ಎಂದು ಎಳ್ಳಂಪಳ್ಳಿಯವರು ಹೇಳಿದರು.
ಮುಂದುವರಿಯುವುದು…
ಬರಹ : ವಿಷ್ಣುದಾಸ್ ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ