ಕೇವಲ ಒಂದು ರನ್ ಗಾಗಿ ಆರು ವರ್ಷ ಕಾದಿದ್ದ ಮರ್ವನ್ ಅಟ್ಟಪಟ್ಟು

ಈತನ ಕಥೆ ಶಾಲಾ ಪುಸ್ತಕಗಳಲ್ಲಿ ಪಾಠದ ವಿಚಾರವಾಗಬಹುದು.. ಇದು ಸ್ಪೂರ್ತಿಯ ಕಥೆ

Team Udayavani, Nov 10, 2022, 5:40 PM IST

thumbnail cricket mrvan attapattu

ಅದು 2003 ಡಿಸೆಂಬರ್ ತಿಂಗಳು. ಇಂಗ್ಲೆಂಡ್ ತಂಡವು ಟೆಸ್ಟ್ ಸರಣಿ ಆಡಲೆಂದು ದ್ವೀಪ ರಾಷ್ಟ್ರ ಶ್ರೀಲಂಕಾಗೆ ಬಂದಿತ್ತು. ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದ ಆಟವದು. ಕ್ಯಾಂಡಿಯಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದ್ದಂತೆ ಲಂಕಾ ಪೊಲೀಸರ ತಂಡವೊಂದು ತಮಗೆ ಬಂದ ಮಾಹಿತಿಯೊಂದನ್ನು ಆಧರಿಸಿ ಲಂಕಾ ಆಟಗಾರನೊಬ್ಬನ ಹೋಟೆಲ್ ಕೊಠಡಿಗೆ ನುಗ್ಗಿತ್ತು. ಅವರ ಮಾಹಿತಿ ಸರಿಯಾಗಿತ್ತು.  ಅಲ್ಲಿ ಅವರಿಗೆ ಕಂಡಿದ್ದು ಲಕ್ಷಾಂತರ ರೂ. ಅಂದಹಾಗೆ ಅದು ಆಗಿನ ಶ್ರೀಲಂಕಾದ ಏಕದಿನ ತಂಡದ ನಾಯಕ ಮರ್ವನ್ ಅಟ್ಟಪಟ್ಟು ಕೋಣೆ.

ಈ ಸುದ್ದಿ ಹೊರ ಬೀಳುತ್ತಿದ್ದಂತೆ ದೊಡ್ಡ ಸಂಚಲನ ಉಂಟು ಮಾಡಿತು. ಅಟ್ಟಪ್ಪಟ್ಟು ಕೋಣೆಯಲ್ಲಿ ಎಷ್ಟು ಹಣ ಹೇಗೆ ಬಂತು? ಯಾಕೆ ಬಂತು? ಅಟ್ಟಪಟ್ಟು ಫಿಕ್ಸಿಂಗ್ ಮಾಡಿದರೆ? ಲಂಕಾ ಕ್ಯಾಪ್ಟನ್ ಫಿಕ್ಸರ್ ಆದರಾ?  ಇದು ದೇಶದ್ರೋಹ..! ಒಂದೇ ಎರಡೇ..  ಅದುವರೆಗೆ ದೇಶದ ಜನರ ಕಣ್ಣಲ್ಲಿ ಹೀರೋ ಆಗಿದ್ದ ಅದ್ಭುತ ಬ್ಯಾಟರ್ ಮರ್ವನ್ ಅಟ್ಟಪಟ್ಟು ಅಂದು ಒಂದೇ ಕ್ಷಣದಲ್ಲಿ ವಿಲನ್ ಆಗಿ ಬಿಟ್ಟಿದ್ದರು.

ಪೊಲೀಸರ ವಿಚಾರಣೆಯಲ್ಲಿ ಮರ್ವನ್ ಹೇಳಿದ್ದು ಒಂದೇ ಮಾತು, ‘ಆ ಹಣ ಯಾರದ್ದು ಎಂದು ನನಗೆ ಗೊತ್ತಿಲ್ಲ. ನಾನು ಅಷ್ಟೊಂದು ಹಣವನ್ನು ತಂದಿರಲಿಲ್ಲ. ನಾನು ಹೋಟೆಲ್ ಬಿಟ್ಟು ಮೈದಾನಕ್ಕೆ  ತೆರಳಿದ ಬಳಿಕ ಯಾರೋ ಬಂದು ಹಣ ಇಟ್ಟಿರಬಹುದು’

ಕೇವಲ ಒಂದೇ ಒಂದು ರನ್ನಿಗೋಸ್ಕರ ಆರು ವರ್ಷ ಕಾದ ಮರ್ವನ್ ಫಿಕ್ಸಿಂಗ್ ಮಾಡಲು ಸಾಧ್ಯವೇ? ಹಠ ಮತ್ತು ದೃಢ ಸಂಕಲ್ಪದ ಮೂರ್ತಿಯಂತಿದ್ದ ಅಟ್ಟಪಟ್ಟು ಇಷ್ಟು ಕೀಳು ಮಟ್ಟಕ್ಕೆ ಇಳಿಯಲು ಸಾಧ್ಯವೇ? ಹೀಗೆಂದು ಯೋಚಿಸಿತ್ತು ಅಂದು ಪೂರ್ಣ ಶ್ರೀಲಂಕಾ. ಯಾಕೆಂದರೆ ಮರ್ವನ್ ಸ್ಯಾಮ್ಸನ್ ಅಟ್ಟಪಟ್ಟು ಎಂದರೆ ಕೇವಲ ಒಬ್ಬ ಕ್ರಿಕೆಟರ್ ಅಲ್ಲ. ಆತ ಶಾಲೆಗಳ ಪಾಠಗಳಲ್ಲಿ ವಿಷಯವಾಗಲ್ಲ ಸ್ಪೂರ್ತಿ, ಇಷ್ಟೇ ಜೀವನ ಎಂದು ಕೈಚೆಲ್ಲಿ ಕೂತವರಿಗೆ ಓರ್ವ ನೀತಿ ಕಥೆ.

ಅದು 1990ರ ನವೆಂಬರ್. ಸೀಲೋನ್ ನ ಕಲುತರದಲ್ಲಿ ಜನಿಸಿದ ಮರ್ವನ್ ಗೆ ಆಗ 20 ವರ್ಷ. ಬಲಗೈ ಬ್ಯಾಟರ್ ಆಗಿದ್ದ ಈ ಹುಡುಗನಿಗೆ ಮೊದಲ ಬಾರಿಗೆ ರಾಷ್ಟ್ರೀಯ ಟೆಸ್ಟ್ ತಂಡದ ಕರೆ ಬಂದಿತ್ತು. ಅದು ಲಂಕಾ ತಂಡದ ಭಾರತ ಪ್ರವಾಸ. ಏಕೈಕ ಟೆಸ್ಟ್ ಪಂದ್ಯ ನಡೆದಿದ್ದು ಮೊಹಾಲಿಯಲ್ಲಿ. ರೋಶನ್ ಮಹಾನಮಾ, ಅರವಿಂದ ಡಿಸಿಲ್ವ , ಅರ್ಜುನ್ ರಣತುಂಗ ಮುಂತಾದ ದಿಗ್ಗಜರಿದ್ದ ತಂಡದಲ್ಲಿ ಈ ಹುಡುಗ ಸ್ಥಾನ ಪಡೆದಿದ್ದ. ಬ್ಯಾಟಿಂಗ್ ಆರಂಭಿಸಿದ ಲಂಕಾ ತಂಡವು ವೆಂಕಟಪತಿ ರಾಜು ದಾಳಿಗೆ ಸಿಲುಕಿತ್ತು. ಕೇವಲ 54 ರನ್ ಗೆ ತಂಡದ ಐವರು ಪೆವಿಲಿಯನ್ ಸೇರಿಯಾಗಿದ್ದರು. ಈ ವೇಳೆ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬ್ಯಾಟ್ ಮಾಡಲು ಬಂದ ಮರ್ವನ್. ನಾನ್ ಸ್ಟ್ರೇಕ್ ನಲ್ಲಿ ಇದ್ದಿದ್ದು ಅಸಂಕ ಗುಣಸಿಂಹ. ಆಗಲೇ ಲಂಕನ್ನರ ಮೇಲೆ ಮೇಲುಗೈ ಸಾಧಿಸಿದ್ದ ರಾಜು ಮತ್ತೊಂದು ಎಸೆತ ಎದುರು. ಯಾವ ಮಾಯೆಯಲ್ಲಿ ಅದು ಮರ್ವನ್ ಬ್ಯಾಟ್ ಸವರಿ ಕೀಪರ್ ಕಿರಣ್ ಮೋರೆ ಕೈ ಸೇರಿತೋ ಗೊತ್ತಾಗಲೇ ಇಲ್ಲ. ಮೊದಲ ಅಂತಾರಾಷ್ಟ್ರೀಯ ಇನ್ನಿಂಗ್ ನಲ್ಲೇ ಮರ್ವನ್ ಸಂಪಾದಿಸಿದ್ದು ಶೂನ್ಯ!.

ಅಂದು ಲಂಕಾ ಕೇವಲ 82 ರನ್ ಗೆ ಆಲೌಟಾಗಿತ್ತು. ಮರ್ವನ್ ಸೇರಿ ಐವರು ಅಂದು ಡಕ್ ಔಟಾಗಿದ್ದರು. ಭಾರತ ಫಾಲೋ ಆನ್ ನೀಡಿತು. ಎರಡನೇ ಇನ್ನಿಂಗ್ ನಲ್ಲೂ ಪರಿಸ್ಥಿತಿ ಸುಧಾರಣೆ ಆಗಲಿಲ್ಲ. ತಂಡದ ಮೊತ್ತ 110 ರನ್ ಆಗಿದ್ದ ವೇಳೆ ಕ್ರೀಸ್ ಗೆ ಬಂದ ಮರ್ವನ್ ಗೆ ಕಪಿಲ್ ದೇವ್ ಎಸೆದ ಚೆಂಡು ಬಂದು ಕಾಲಿಗೆ ಬಡಿದಿದ್ದು ತಿಳಿಯಲೇ ಇಲ್ಲ. ಮರ್ವನ್ ಮತ್ತೆ ಜೀರೋ.

ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶೂನ್ಯ ಸಂಪಾದನೆ ಮಾಡಿದರೆ ಮುಂದೆ ಅವಕಾಶ ಸಿಗುವುದು ಕಡಿಮೆ. ಮರ್ವನ್ ಗೂ ಹಾಗೆಯೇ ಆಯಿತು. ಮುಂದಿನ ಸರಣಿಗೆ ಆಯ್ಕೆಯಾಗಲಿಲ್ಲ. ನೆಟ್ ನಲ್ಲಿ ಬೆವರು ಹರಿಸಿದರು. ಮತ್ತಷ್ಟು ಪ್ರಥಮ ದರ್ಜೆ ಕ್ರಿಕೆಟ್ ಆಡಿದರು. ಆಯ್ಕೆಗಾರರ ಗಮನ ಸೆಳೆದರು. ಹೀಗೆ ಕಳೆದಿದ್ದು 21 ತಿಂಗಳು. ಮತ್ತೆ ಲಂಕಾ ತಂಡ ಕರೆಯಿತು.

ಮೊದಲ ಪಂದ್ಯದ ಸೋಲನ್ನು ಮರ್ವನ್ ಇನ್ನೂ ಮರೆತಿರಲಿಲ್ಲ. ಸಿಕ್ಕ ಮತ್ತೊಂದು ಅವಕಾಶವನ್ನು ಬಳಸಲೇ ಬೇಕು ಎಂದು ಬ್ಯಾಟ್  ಹಿಡಿದು ಬಂದರು. ಆದರೆ ಅದೃಷ್ಟವು ತನ್ನ ಸ್ಕ್ರಿಪ್ಟ್ ಬದಲು ಮಾಡಿರಲಿಲ್ಲ. ಮತ್ತೆ ಶೂನ್ಯಕ್ಕೆ ಔಟ್. ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ ಮೊದಲ ರನ್ ಓಡಿದ ಮರ್ವನ್ ನಿರಾಳತೆಯ ಉಸಿರೊಂದನ್ನು ಹೊರಹಾಕಿದರು. ಆದರೆ ಅಷ್ಟೇ ಔಟ್. ಹೌದು 21 ತಿಂಗಳ ಅಂತರದಲ್ಲಿ ಆಡಿದ ನಾಲ್ಕು ಇನ್ನಿಂಗ್ಸ್ ಗಳಲ್ಲಿ ಮರ್ವನ್ ಸಾಧನೆ ಒಂಟಿ ರನ್.

ಮತ್ತೆ ತಂಡದಿಂದ ಕೈಬಿಡಲಾಯಿತು. ಮತ್ತೆ ನೆಟ್ಸ್ ನಲ್ಲಿ ಬೆವರು ಹರಿಸಿದ. ದೇಶಿಯ ಕೂಟಗಳಲ್ಲಿ ಭರ್ಜರಿ ಆಡಿದ. ಮತ್ತೊಂದು ಕರೆಗಾಗಿ ಕಾದ. ಹದಿನೇಳು ತಿಂಗಳ ಕಾಯುವಿಕೆಗೆ ಬೆಲೆ ಸಿಕ್ಕಿತು, ಮತ್ತೆ ಟೆಸ್ಟ್ ತಂಡಕ್ಕೆ ಕರೆಸಲಾಯಿತು. ಈ ಬಾರಿ ಆಡಲೇ ಬೇಕು ಎಂದು ಬ್ಯಾಟ್ ಹಿಡಿದು ಮೈದಾನಕ್ಕೆ ಆಗಮಿಸಿದ ಮರ್ವನ್ ಅಟ್ಟಪಟ್ಟು ಮೇಲೆ ಪೂರ್ತಿ ಲಂಕಾ ಕಣ್ಣಿಟ್ಟಿತ್ತು. ಮತ್ತೆ ಭರವಸೆಯಿಂದ ಅವಕಾಶ ನೀಡಿದ ಆಯ್ಕೆ ಸಮಿತಿಯೂ ಕಾಯುತ್ತಿತ್ತು. ಎಲ್ಲರ ಹಾರೈಕೆ ಒಂದೇ ಮರ್ವನ್ ಚೆನ್ನಾಗಿ ಆಡಲಿ. ಆದರೆ ಅದೃಷ್ಟದಾಟ ಬೇರೆಯೇ ಇತ್ತು. ಆ ಪಂದ್ಯದಲ್ಲಿ ಎರಡು ಇನ್ನಿಂಗ್ಸ್ ಗಳಲ್ಲಿ ಮರ್ವನ್ ಗಳಿಸಿದ್ದು 0 ಮತ್ತು 0.

ಇಂತವ್ರಿಗೆ ಯಾಕ್ರಿ ಅವಕಾಶ ಕೊಡ್ತೀರಾ ಅಂದ್ರು ಜನ. ಈ ಹುಡುಗನಿಗೆ ದೊಡ್ಡ ಪಂದ್ಯಕ್ಕೆ ಬೇಕಾದ ಸಂಯಮ, ಮನಸ್ಥಿತಿ ಇಲ್ಲ ಎಂದರು. ಸಾಕು ಅವಕಾಶ ಎಂದರು. ಸಾಕು ನೀನು ಕ್ರಿಕೆಟ್ ಆಡಿದ್ದು ಎಂದರು ಸ್ನೇಹಿತರು. ಪ್ರಾಯ ಇದ್ದಾಗಲೇ ಬೇರೆ ಕೆಲಸ ಮಾಡು ಎಂದರು.  ಆದರೆ ಮರ್ವನ್ ಹಠ ಬಿಡಲಿಲ್ಲ. ಮತ್ತೆ ಆಡಿದ. ಮತ್ತೆ ಬೆವರು ಹರಿಸಿದ, ತನ್ನ ಟೆಕ್ನಿಕ್ ಸರಿ ಮಾಡಿಕೊಂಡ. ಮೂರು ವರ್ಷದ  ಬಳಿಕ ಮತ್ತೆ ಚಾನ್ಸ್ ಸಿಕ್ಕಿತು. ಈ ಬಾರಿ ಆಡಿದ ಚೆನ್ನಾಗಿಯೇ ಆಡಿದ.

1990ರಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ ಮರ್ವನ್ 1997ರಲ್ಲಿ ಮೊದಲ ಶತಕ ಗಳಿಸಿದ. ಅಲ್ಲಿಂದ ಮತ್ತೆ ಹಿಂತಿರುಗಿ ನೋಡಲಿಲ್ಲ. ಎಲ್ಲಿಯವರೆಗೆ ಎಂದರೆ ಮುಂದೆ ಮರ್ವನ್ ಗಳಿಸಿದ್ದು ಬರೋಬ್ಬರಿ ಆರು ದ್ವಿಶತಕಗಳು ಮತ್ತು 16 ಶತಕಗಳು. 90 ಟೆಸ್ಟ್ ಪಂದ್ಯ, 268 ಏಕದಿನ ಪಂದ್ಯಗಳನ್ನಾಡಿದ. ಟೆಸ್ಟ್ ನಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ. ಟೆಸ್ಟ್ ಮಾನ್ಯತೆ ಪಡೆದ ಎಲ್ಲಾ ದೇಶಗಳ ವಿರುದ್ದ ಶತಕ ಬಾರಿಸಿದ. ಲಂಕಾ ತಂಡ ನಾಯಕನಾದ. 18 ವರ್ಷ ಲಂಕಾ ಪರ ಆಡಿದ.

ಹಠ, ತನ್ನ ಕೆಲಸದ ಮೇಲಿನ ಶೃದ್ಧೆ, ಅದೃಷ್ಟಕ್ಕಿಂತ ಕಠಿಣ ಪರಿಶ್ರಮವನ್ನು ನೆಚ್ಚಿಕೊಂಡರೆ ತಡವಾಗಿಯಾದರೂ ಸರಿಯೇ ಫಲಿತಾಂಶ ಖಂಡಿತ ಸಿಗುತ್ತದೆ ಎನ್ನುವುದಕ್ಕೆ ಮರ್ವನ್ ಅಟ್ಟಪಟ್ಟು ಜೀವನವೇ ಸಾಕ್ಷಿ.

  • ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.