ಕಿರಿಯ ವಯಸ್ಸಿನಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲಾಧಿಕಾರಿಯಾದ ಶುಭಂ

ಎದೆಗುಂದದ ಅವರು 2018 ರಲ್ಲಿ ನಾಲ್ಕನೇ ಬಾರಿ ಪರೀಕ್ಷೆ ಬರೆಯುತ್ತಾರೆ.

Team Udayavani, Sep 6, 2021, 11:40 AM IST

ಕಿರಿಯ ವಯಸ್ಸಿನಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲಾಧಿಕಾರಿಯಾದ ಶುಭಂ

ಸಾಧಿಸುವ ಛಲವೊಂದಿದ್ದರೆ ಸಾಕು ಎಂತಹ ಕಷ್ಟ-ಕಾರ್ಪಣ್ಯಗಳು ಎದುರಾದರೂ ಸಾಧನೆಯ ಶಿಖರವನ್ನೇರಬಹುದು. ಗುರಿ ತಲುಪಲು ಬಡತನ ಅಡ್ಡಿಯಾಗದು ಎನ್ನುವ ಮಾತು ಸಾಕಷ್ಟು ಸಾರಿ ಸಾಬೀತಾಗಿದೆ. ಈ ಮೇಲಿನ ಮಾತುಗಳಿಗೆ ಸಾಕ್ಷಿ ಎಂಬಂತೆ ಕಾಣುತ್ತಿದ್ದಾರೆ ನಮ್ಮ ಕಣ್ಮುಂದೆ ಇರುವ ಈ ಸಾಧಕ. ಹೌದು, ಈತ ಮಧ್ಯಮ ವರ್ಗದಲ್ಲಿ ಹುಟ್ಟಿ ಬೆಳೆದವ. ಚಪ್ಪಲಿ ಅಂಗಡಿಯಲ್ಲಿ ಬೆವರು ಸುರಿಸಿ ದುಡಿದವ, ಶಾಲೆಗಾಗಿ ದಿನನಿತ್ಯ ಹತ್ತಾರೂ ಕಿ.ಮೀ ಪಯಣಿಸಿದವ. ಈತನ ಪಾಲಿಗೆ ಬಡತನ ಎನ್ನುವುದು ಒಂದು ಸಮಸ್ಯೆಯೇ ಆಗಲಿಲ್ಲ. ಕಷ್ಟ ಪಟ್ಟು ಓದಿ ಕಿರಿಯ ವಯಸ್ಸಿನಲ್ಲಿಯೇ ಯುಪಿಎಸ್ಸಿ ಪಾಸ್ ಮಾಡಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡವ. ಈತನ ಹೆಸರು ಶುಭಂ ಗುಪ್ತಾ.

ಶುಭಂ ಗುಪ್ತಾ ಎದೆಗುಂದದ ಛಲಗಾರ. ಅಂದುಕೊಂಡಿದ್ದ ಕೆಲಸ ಮುಗಿಯೋವರೆಗೆ ವಿಶ್ರಮಿಸದ ಶ್ರಮಗಾರ. ರಾಜಸ್ಥಾನದ ಜೈಪುರಿನಲ್ಲಿ ಜನಿಸಿದ ಶುಭಂ ಅವರದು ಆರ್ಥಿಕವಾಗಿ ಸದೃಢವಾದಂತಹ ಕುಟುಂಬವಲ್ಲ. ಹೊಟ್ಟೆ-ಬಟ್ಟೆಗೆ ಕೊರತೆ ಇಲ್ಲದಿದ್ದರೂ ಆರ್ಥಿಕವಾಗಿ ಸಮಸ್ಯೆ ಇದ್ದೆ ಇತ್ತು. ಭದ್ರವಾದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಇವರ ತಂದೆ ಮಹಾರಾಷ್ಟ್ರದ ಪುಟ್ಟ ಹಳ್ಳಿಯೊಂದಕ್ಕೆ ವಲಸೆ ಹೋಗುತ್ತಾರೆ.

ಮಹಾರಾಷ್ಟ್ರದ ಹಳ್ಳಿಗೆ ವಲಸೆ ಬಂದ ಶುಭ ಕುಟುಂಬ ಅಲ್ಲಿಯೇ ನೆಲೆಯೂರಿ ಸುಂದರ ಭವಿಷ್ಯದ ಕನಸು ಕಾಣುತ್ತದೆ. ಆದರೆ, ಅಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳು ಇಲ್ಲದಿರುವುದು ಶುಭಂ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಕಾರಣ ಮರಾಠಿ ಮಾಧ್ಯಮದಲ್ಲಿ ಓದುವುದು ಈತನಿಗೆ ಕಷ್ಟವಾಗುತ್ತದೆ. ಹೀಗಾಗಿ ಕೊನೆಗೆ ವಾಪಿ ಎಂಬಲ್ಲಿಯ ಶಾಲೆಯೊಂದಕ್ಕೆ ಪ್ರವೇಶ ಪಡೆದ ಶುಭಂಗೆ ಮತ್ತೊಂದು ಸಮಸ್ಯೆ ಎದುರಾಗುತ್ತದೆ. ಈ ಶಾಲೆ ಮನೆಯಿಂದ ಬಹು ದೂರ. ಹೀಗಾಗಿ ಪ್ರತಿ ನಿತ್ಯ ಟ್ರೈನ್ ನಲ್ಲಿ ಪ್ರಯಾಣ. ಸಹೋದರಿ ಜೊತೆ ಮುಂಜಾನೆ 6 ಗಂಟೆಯಿಂದ ಮನೆಯಿಂದ ಹೊರಟರೆ ಸಾಯಂಕಾಲ ವಾಪಸ್ ಬರುತ್ತಿದ್ದರು. ದಿನದ ಹೆಚ್ಚಿನ ಸಮಯ ಪ್ರಯಾಣದಲ್ಲಿ ಕಳೆದು ಹೋಗುತ್ತಿತ್ತು.

ಚಪ್ಪಲಿ ಅಂಗಡಿಯಲ್ಲಿ ಕೆಲಸ :
ಶುಭಂ 8 ರಿಂದ 12ನೇ ತರಗತಿ ವರೆಗೆ ವಿಪಾ ಶಾಲೆಯಲ್ಲಿ ಓದುತ್ತಾನೆ. ಇದೇ ವೇಳೆ ಆತನ ತಂದೆ ಹೊಸ ಬ್ಯುಸಿನೆಸ್ ಶುರು ಮಾಡುತ್ತಾರೆ. ಮಹಾರಾಷ್ಟ್ರದ ಧನು ರಸ್ತೆಯಲ್ಲಿ ಪುಟ್ಟ ‘ಶೂ’ ಅಂಗಡಿಯೊಂದನ್ನು ತೆರೆಯುತ್ತಾರೆ. 12 ನೇ ತರಗತಿ ನಂತರ ಶೂ ಅಂಗಡಿಯಲ್ಲಿ ಕೆಲಸ ಮಾಡುತ್ತ ಅಪ್ಪನಿಗೆ ನೆರವಾಗುತ್ತಾನೆ. ಗ್ರಾಹಕರ ಕಾಲುಗಳಿಗೆ ಶೂ ತೊಡಿಸುತ್ತ ಐಎಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿದ್ದ. ಪಿಯುಸಿ ನಂತರ ಮಹಾರಾಷ್ಟ್ರದಿಂದ ದೆಹಲಿಗೆ ಆಗಮಿಸಿದ ಶುಭಂ, ಅಲ್ಲಿಯೇ ಬಿ.ಕಾಂ ಹಾಗೂ ಎಮ್ ಕಾಂ ಪದವಿ ಪಡೆಯುತ್ತಾನೆ. ಇದಾದ ನಂತರ 2015 ರಲ್ಲಿ ಯುಪಿಎಸ್ಸಿ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾನೆ.

ನಾಲ್ಕನೇ ಪ್ರಯತ್ನದಲ್ಲಿ ಆರನೇ Rank :
ಮೊದಲ ಪ್ರಯತ್ನಕ್ಕೆ ಎಲ್ಲವೂ ಸಿಗುವುದಿಲ್ಲ ಎನ್ನುವುದು ಶುಭಂ ಜೀವನದಲ್ಲೂ ಸತ್ಯವಾಯಿತು. ಮೊದಲ ಪ್ರಯತ್ನದಲ್ಲಿ ವಿಫಲಗೊಳ್ಳುವ ಇವರು 2016 ರಲ್ಲಿ ಎರಡನೇ ಭಾರಿ ಯುಪಿಎಸ್ಸಿ ಪರೀಕ್ಷೆ ಬರೆದು 366 Rank ಪಡೆದು ಪಾಸ್ ಆಗುತ್ತಾರೆ. ಇದರ ಫಲವಾಗಿ ಭಾರತೀಯ ಅಡಿಟ್ ಹಾಗೂ ಅಕೌಂಟ್ ಇಲಾಖೆಯಲ್ಲಿ ನೇಮಕಗೊಳ್ಳುತ್ತಾರೆ. ಆದರೆ, ಶುಭಂ ಅವರ ಕನಸು ಜಿಲ್ಲಾಧಿಕಾರಿಯಾಗುವುದಾಗಿತ್ತು. ಅದಕ್ಕಾಗಿ ಮತ್ತೆ ಪರೀಕ್ಷೆಗೆ ಸಜ್ಜಾಗುತ್ತಾರೆ. ಆದರೆ, ಮೂರನೇ ಪ್ರಯತ್ನದಲ್ಲಿ ಪ್ರಿಲಿಮ್ಸ್ ಕೂಡ ಪಾಸಾಗುವುದಿಲ್ಲ. ಇದರಿಂದ ಎದೆಗುಂದದ ಅವರು 2018 ರಲ್ಲಿ ನಾಲ್ಕನೇ ಬಾರಿ ಪರೀಕ್ಷೆ ಬರೆಯುತ್ತಾರೆ. ಈ ಬಾರಿ ಅವರ ಕನಸು ನನಸಾಗುವ ಕಾಲ ಕೂಡಿ ಬಂದಿರುತ್ತದೆ. 6 ನೇ Rank ಪಡೆದು ಪಾಸಾದ ಶುಭಂ ತರಬೇತಿ ಮುಗಿಸಿಕೊಂಡು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನಿಜವಾದ ಸಾಧನೆ ಅಂದ್ರೆ ಇದೆ ಅಲ್ವಾ ? ಶುಭಂ ರಿಯಲ್ ಸ್ಟೋರಿ ಹಲವು ಯುವಕರಿಗೆ ಸ್ಫೂರ್ತಿಯಾಗುವಂತಿದೆ. ಯುಪಿಎಸ್ಸಿ ನಮ್ಮಂದಿ ಸಾಧ್ಯವಾಗದು ಎಂದು ಯೋಚಿಸುವ ವಿದ್ಯಾರ್ಥಿಗಳು ಶುಭಂ ಅವರಿಂದ ಸ್ಫೂರ್ತಿ ಪಡೆಯಬಹುದಾಗಿದೆ.

*ಗಣೇಶ್ ಹಿರೇಮಠ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.