ಜ್ವರನಾಶಿನಿ….ಅಮೃತ ಬಳ್ಳಿಯಂತಾಗಬೇಕು!


Team Udayavani, Sep 21, 2020, 5:00 AM IST

ws-17

ಬರೋಬ್ಬರಿ ಒಂದು ತಿಂಗಳಿನಿಂದ ನೆಗಡಿಯ ಕಾಟ. ಅದೆಷ್ಟೋ ವೈದ್ಯ ಮಹಾಶಯರನ್ನೂ ಕಂಡರೂ, ಬಗೆ ಬಗೆಯ ಗುಳಿಗೆ ನುಂಗಿದರೂ ನನಗೆ ನೆಗಡಿಯಿಂದ ಮುಕ್ತಿ ದೊರಕಲಿಲ್ಲ. ಹೀಗಿರಲು ನನ್ನ ಆಪ್ತರೊಬ್ಬರು ಅಮೃತಬಳ್ಳಿಯ ಕಷಾಯ ಕುಡಿಯಲು ಸಲಹೆಯನ್ನಿತ್ತರು. ಅಷ್ಟು ಪರಿಣಾಮಕಾರಿಯಾದ ಇಂಗ್ಲಿಷ್‌ ಮಾತ್ರೆಗಳಿಂದಾಗದ್ದು, ಈ “ಬರಿಯ ಬಳ್ಳಿ’ಯಿಂದ ಸಾಧ್ಯವೇ ಎಂದು ನಕ್ಕು ಸುಮ್ಮನಾದೆ. ಅಷ್ಟಕ್ಕೂ ನಾವು ಬದುಕುತ್ತಿರುವುದು ಸ್ಪರ್ಧಾತ್ಮಕ ಪ್ರಪಂಚದಲ್ಲಿ. ಇಲ್ಲಿ ಒಂದು ನಿಮಿಷ ಹಳೆಯದ್ದು, ಹಳಸಿದ್ದು ಎನ್ನುವ ಭಾವ. ಹೀಗಿರಲು ತ್ವರಿತ ಉಪಶಮನ ನೀಡುವ ಇಂಗ್ಲಿಷ್‌ ಮದ್ದುಗಳ ಹೊರತು, ತಿಂಗಳು°ಗಟ್ಟಲೇ ಪಥ್ಯ, ಜೊತೆಗೆ ಕಹಿಯಾದ ಈ ಆಯುರ್ವೇದಿಕ್‌ ಔಷಧಿಗಳು ನಮಗೆ ಸೇರುವುದೆಂತು?

ಆದರೆ, ಕಾಕತಾಳೀಯ ಎಂಬಂತೆ ಇದೇ ಸಮಯದಲ್ಲಿ ಲೇಖಕಿ ನೇಮಿಚಂದ್ರರ ಬದುಕು ಬದಲಿಸಬಹುದು ಎಂಬ ಹೊತ್ತಗೆ ನನ್ನ ಕೈ ಸೇರಿತು. ಈ ಪುಸ್ತಕದಲ್ಲಿ ನೇಮಿಚಂದ್ರರವರು ಅಮೃತ ಬಳ್ಳಿಗೆ ಸಾವಿಲ್ಲ ಎಂಬ ತಲೆಬರಹದಡಿ ಅಮೃತಬಳ್ಳಿಯ ಮಹಿಮೆಯ ಹಾಡಿ ಹೊಗಳಿದ್ದರು. ಆಗಲೆ ನನಗೆ ಈ “ಬರಿಯ ಬಳ್ಳಿಯ’ ಕುರಿತು ಅರಿವಾದದ್ದು

ಅಮೃತಬಳ್ಳಿ ವಾತ, ಪಿತ್ತ ಮತ್ತು ಕಫ‌ಹರವಾಗಿದೆ. ಇದರ ಎಲೆ, ಕಾಂಡ, ಬೇರು ಹೀಗೆ ಎಲ್ಲದರಲ್ಲೂ ಔಷಧೀಯ ಗುಣವಿದೆ. ಜ್ವರಕ್ಕೆ ಅಮೃತಬಳ್ಳಿ ರಾಮಬಾಣ. “ಅಮೃತ’ (ಸಾವಿಲ್ಲದ)ಎಂಬ ಹೆಸರಿನ ಈ ಬಳ್ಳಿಯ ಕಷಾಯ “ಜ್ವರನಾಶಿನಿ’ ಎಂದು “ಚರಕ ಸಂಹಿತೆ’ಯಲ್ಲಿ ಉಲ್ಲೇಖವಿದೆ. ಅಮೃತಬಳ್ಳಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣ ಪಡೆದಿದೆ. ಈ ಗುಣ ಕ್ಯಾನ್ಸರ್‌ ವಿರುದ್ಧದ ಹೋರಾಟದಲ್ಲೂ ನೆರವಾಗುತ್ತದೆ ಎನ್ನುತ್ತಾರೆ. ಈ ಬಳ್ಳಿಗೆ ಸಾಕ್ಷಾತ್‌ ಧನ್ವಂತರಿಯ ವರವೇ ಏನೋ, ಅಷ್ಟು ಔಷಧೀಯ ಗುಣವನ್ನು ತನ್ನೊಡಲಲ್ಲಿ ಇರಿಸಿದೆ.

ಆದರೆ, ನನಗೆ ಅಮೃತ ಬಳ್ಳಿಯ ಪರಿಚಯವಿರಲಿಲ್ಲ. ಅಮ್ಮನನ್ನು ಕೇಳಲು ಅವರು, “ನೆರೆಮನೆಯವರ ಹಿತ್ತಲಲ್ಲಿ ಕಂಡಿ¨ªೆ’ ಅಂದರು. ಆದರೆ, ನೆರೆಮನೆಯವರು ಮನೆಮುಂದೆ ಪೊದೆಯಂತಾಗುತ್ತದೆ ಎಂದು ಕಡಿದಿದ್ದರು. ನಿರಾಸೆಯಿಂದ ಅವರು ಕಡಿದು ರಾಶಿ ಹಾಕಿದ್ದ ಕಡೆಗೆ ನೋಡಲು ಹೋದೆ. ಅಲ್ಲಿ ಅಚ್ಚರಿ ಕಾದಿತ್ತು. ಕಾರಣ, ಆ ಒಣ ಕಡ್ಡಿಯಲ್ಲೂ ಜೀವಂತಿಕೆ ಹಾಗೇ ಇತ್ತು.

ಅಲ್ಲೇ ಇತ್ತು ನೋಡಿ, “ಪ್ರಕೃತಿಯ ಪಾಠ’. ಕಡಿದೆಸೆದವರು ಬಳ್ಳಿಯ ಅಮೃತೀಯ ಗುಣವರಿಯರು. ಆದರೆ, ತನ್ನನ್ನು ಎಸೆದರು ಎಂದ ಮಾತ್ರಕ್ಕೆ ಅಮೃತಬಳ್ಳಿ ತನ್ನ ಔಷಧೀಯ ಗುಣಗಳನ್ನು ಕಳೆದುಕೊಳ್ಳಲಿಲ್ಲ. ಅದೇ ರೀತಿ ಒಬ್ಬ ವ್ಯಕ್ತಿಯನ್ನು ಈ ಸಮಾಜ ಎಲ್ಲೂ ಸಲ್ಲದವನು ಎಂದು ನಿಂದಿಸಿ, ತಿರಸ್ಕರಿಸಿದ ಮಾತ್ರಕ್ಕೆ ಆ ವ್ಯಕ್ತಿ ಕೆಲಸಕ್ಕೆ ಬಾರದವನು ಎಂದರ್ಥವಲ್ಲ. ಆತನಲ್ಲಿ ಎಲ್ಲರನ್ನೂ ಮೀರಿಸುವ ಪ್ರತಿಭೆ ಸುಪ್ತವಾಗಿರಬಹುದು. ಜನ ತನ್ನನ್ನು ದೂರ ತಳ್ಳಿದರೆಂದು ಆತ ತನ್ನತನವನ್ನು ತ್ಯಜಿಸಬಾರದು, ಬದುಕುವ ಛಲ ಬಿಡಬಾರದು. ಈ ಮೂಲಕ ಕಡಿದವರ ಮುಂದೆಯೇ ಹುಲುಸಾಗಿ ಬೆಳೆಯುವ ಸಾಹಸ ಮಾಡುವ ಅಮೃತಬಳ್ಳಿಯಂತಾಗಬೇಕು.

ಹರ್ಷಿತಾ
ದ್ವಿತೀಯ ಬಿಎ (ಪತ್ರಿಕೋದ್ಯಮ), ವಿಶ್ವವಿದ್ಯಾನಿಲಯದ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

IPL 2025;ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

6–bamboo-shoot

Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.