ನಟರಾಜ ದೇಗುಲ ವಿವಾದ ಏನು? ಎತ್ತ?
Team Udayavani, Jun 9, 2022, 10:10 AM IST
ತಮಿಳುನಾಡಿನ ಚಿದಂಬರಂನಲ್ಲಿರುವ ಪ್ರಸಿದ್ಧ ನಟರಾಜ ದೇವಸ್ಥಾನ ಈಗ ವಿವಾದಕ್ಕೀಡಾಗಿದೆ. ಈ ದೇಗುಲದ ವಿಚಾರವಾಗಿ ತಮಿಳು ನಾಡು ಸರಕಾರ ಮತ್ತು ಅರ್ಚಕರ ನಡುವೆ ದೊಡ್ಡ ಗದ್ದಲವೇ ಏರ್ಪ ಟ್ಟಿದೆ. ಇದಕ್ಕೆ ಕಾರಣ, ದೇಗುಲದ ಆಡಳಿತ ಮತ್ತು ಆರ್ಥಿಕ ವಿಷಯಗಳ ಪರಿಶೀಲನೆ ಮಾಡಲು ಸರಕಾರ ಮುಂದಾಗಿರುವುದು. ಈ ಕುರಿತ ಒಂದು ಸೂಕ್ಷ್ಮ ನೋಟ ಇಲ್ಲಿದೆ.
ನಟರಾಜ ದೇವಾಲಯ
ಸುಮಾರು 12ನೇ ಶತಮಾನದಲ್ಲಿ ತಮಿಳುನಾಡಿನ ಚಿದಂಬರಂನಲ್ಲಿ ಸ್ಥಾಪಿಸಿರುವ ದೇಗುಲವಿದು. ಇಲ್ಲಿ ಶಿವನನ್ನು ನಟರಾಜನ ರೂಪದಲ್ಲಿ ನೋಡಬಹುದು. ಹಾಗೆಯೇ ಈ ದೇಗುಲ ಕಂಬಗಳಿಂದಾಗಿಯೂ ಹೆಚ್ಚು ಪ್ರಸಿದ್ಧಿ. ನೃತ್ಯ ಸಭಾ ಮಂಟಪದಲ್ಲಿ 50, ರಾಜಸಭಾದಲ್ಲಿ 1000, ಶತಶಿಲಾದಲ್ಲಿ 100 ಕಂಬಗಳಿವೆ. ಭರತನಾಟ್ಯದ 108 ಪ್ರಕಾರ ಕೆತ್ತಲಾಗಿದೆ.
ವಿವಾದವೇನು?
ಆಡಳಿತ ಮಂಡಳಿ ಅವ್ಯವಹಾರ ನಡೆಸಿದೆ ಎಂಬ ಆರೋಪ ಸಂಬಂಧ ದೂರುಗಳು ಸಲ್ಲಿಕೆಯಾಗಿವೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಸರಕಾರದ ಪ್ರತಿನಿಧಿಗಳು ಮಂಗಳವಾರ ದೇಗುಲಕ್ಕೆ ಹೋಗಿದ್ದರು. ಆದರೆ ಅಲ್ಲಿನ ಅರ್ಚಕರನ್ನು ಒಳಗೊಂಡ ಆಡಳಿತ ಮಂಡಳಿ ಇವರಿಗೆ ದೇಗುಲದೊಳಗೆ ಬರಲು ಅನುಮತಿ ನೀಡಿಲ್ಲ.
ಅರ್ಚಕರ ವಿರೋಧವೇಕೆ?
ಈ ದೇಗುಲದ ನಿರ್ವಹಣೆ ವಿಚಾರದಲ್ಲಿ ಅರ್ಚಕರು ಮತ್ತು ಸರಕಾರದ ನಡುವಿನ ತಿಕ್ಕಾಟ ಸುಪ್ರೀಂ ಕೋರ್ಟ್ವರೆಗೂ ಹೋಗಿತ್ತು. ಅಲ್ಲಿ ಪೂಜೆಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಗಳು ದೀಕ್ಷಿತರಿಗೆ ಮತ್ತು ಆಡಳಿತ ಹಾಗೂ ಹಣಕಾಸು ನಿರ್ವಹಣೆ ಸರಕಾರದ ಬಳಿ ಇರಬೇಕು ಎಂದು ಸುಪ್ರೀಂ ತೀರ್ಪು ನೀಡಿತ್ತು.
ಸರಕಾರದ ವಾದವೇನು?
2014ರಲ್ಲೇ ಸುಪ್ರೀಂಕೋರ್ಟ್ ಈ ಬಗ್ಗೆ ಆದೇಶ ನೀಡಿರುವುದರಿಂದ ದೇಗುಲದಲ್ಲಿನ ಆಡಳಿತ ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಜತೆಗೆ ಈ ಬಗ್ಗೆ ಹಲವಾರು ಆರೋಪಗಳು ಬಂದಿರುವುದರಿಂದ ಪರಿಶೀಲನೆ ನಡೆಸುತ್ತಿದ್ದೇವೆ. ಒಂದು ವೇಳೆ ಅಕ್ರಮ ಕಂಡು ಬಂದಿಲ್ಲವೆಂದರೆ, ಹೆದರಿಕೆ ಏಕೆ ಎಂದು ಸಂಬಂಧಪಟ್ಟ ಸಚಿವರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್