NEET ಪರೀಕ್ಷೆ…ಮಗಳ ಭವಿಷ್ಯಕ್ಕಾಗಿ ತಂದೆಯ ಕೊನೆ ಪ್ರಯತ್ನ:ಮಧ್ಯರಾತ್ರಿ ನಡೆದ ಕೋರ್ಟ್ ವಿಚಾರಣೆ

ತಂದೆ, ಮಗಳು ಎಲ್ಲಾ ಭರವಸೆಗಳನ್ನು ಕಳೆದುಕೊಂಡು ಹತಾಶರಾಗಿ ಕುಳಿತುಕೊಂಡಿದ್ದರು.

ನಾಗೇಂದ್ರ ತ್ರಾಸಿ, Sep 14, 2021, 1:39 PM IST

NEET ಪರೀಕ್ಷೆ…ಮಗಳ ಭವಿಷ್ಯಕ್ಕಾಗಿ ತಂದೆಯ ಕೊನೆ ಪ್ರಯತ್ನ:ಮಧ್ಯರಾತ್ರಿ ನಡೆದ ಕೋರ್ಟ್ ವಿಚಾರಣೆ

ನವದೆಹಲಿ: ಒಂದು ಚಿಕ್ಕ ತಾಂತ್ರಿಕ ದೋಷದಿಂದ ಭವಿಷ್ಯವೇ ಹಾಳಾಗುವ ಪ್ರಸಂಗ ನಡೆಯುತ್ತಿರುವುದನ್ನು ಓದಿರುತ್ತೀರಿ. ಇಲ್ಲೊಂದು ಅಂತಹ ಘಟನೆ ನಡೆದಿದ್ದು, ಕೊನೆ ಗಳಿಗೆಯಲ್ಲಿ ಕೋರ್ಟ್ ನಲ್ಲಿ ವಿದ್ಯಾರ್ಥಿನಿಯ ಭವಿಷ್ಯ ಉಳಿದ ಅಪರೂಪದ ಪ್ರಸಂಗ ನಡೆದಿದೆ.

ಏನಿದು ಪ್ರಕರಣ:

ಲಾರಿ ಚಾಲಕರೊಬ್ಬರ ಮಗಳು ಎಂಬಿಬಿಎಸ್ ಮಾಡಬೇಕೆಂಬ ಅದಮ್ಯ ಕನಸು ಕಂಡಿದ್ದಳು. ಈಕೆ ಕಲಿಯುವಿಕೆಯಲ್ಲಿ ತುಂಬಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು, ವಿದ್ಯಾಭ್ಯಾಸದಲ್ಲಿ ಟಾಪರ್ ಆಗಿದ್ದಳು, ಆದರೆ ಮೆಡಿಕಲ್ ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿನ ತಾಂತ್ರಿಕ ದೋಷದಿಂದಾಗಿ ಆಕೆಯ ಕನಸು ನುಚ್ಚು ನೂರಾಗುವುದರಲ್ಲಿತ್ತು.!

ತಮಿಳುನಾಡಿನ ಮದುರೈ ನಿವಾಸಿ ವಿ.ಷಣ್ಮುಗಪ್ರಿಯ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಳು. ಶನಿವಾರ ತಂದೆ ಜತೆ ಸಮೀಪದ ಬ್ರೌಸಿಂಗ್ ಸೆಂಟರ್ ಗೆ ಆಗಮಿಸಿ ಹಾಲ್ ಟಿಕೆಟ್ ಅನ್ನು ಡೌನ್ ಲೋಡ್ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀರ್ಣಳಾಗಿದ್ದ, ಈಕೆ ಮೆಡಿಕಲ್ ಪ್ರವೇಶ ಪರೀಕ್ಷೆಗೆ ಹಾಜರಾಗಲು ತೀರ್ಮಾನಿಸಿದ್ದಳು.

ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿದ ನಂತರ ತಂದೆ, ಮಗಳು ಬೆಚ್ಚಿಬಿದ್ದಿದ್ದರು. ಅದಕ್ಕೆ ಕಾರಣ ಹಾಲ್ ಟಿಕೆಟ್ ನಲ್ಲಿ ಈಕೆಯ ಬದಲು ಬೇರೊಬ್ಬರ ಫೋಟೊ ಮತ್ತು ಸಹಿ ಇತ್ತು. ಆದರೆ ಆಕೆಯ ಮನೆಯ ವಿಳಾಸ, ಹೆಸರು, ರೋಲ್ ನಂಬರ್, ತಂದೆಯ ಹೆಸರು ಈಕೆಯದ್ದೇ ಆಗಿತ್ತು!

ತಾಂತ್ರಿಕ ದೋಷದ ಯಡವಟ್ಟಿನಿಂದಾಗಿ ಕಂಗಾಲಾದ ವಿದ್ಯಾರ್ಥಿನಿ ಮತ್ತು ಪೋಷಕರು ಹಾಲ್ ಟಿಕೆಟ್ ವಿತರಿಸುವ ರಾಷ್ಟ್ರೀಯ ಪರೀಕ್ಷಾ ಕೇಂದ್ರವನ್ನು ಇ-ಮೇಲ್ ಹಾಗೂ ದೂರವಾಣಿ ಕರೆ ಮಾಡುವ ಮೂಲಕ ಪ್ರಯತ್ನಿಸಿದರೂ ಯಾವುದೇ ಫಲ ನೀಡಿರಲಿಲ್ಲವಾಗಿತ್ತು. ಎಲ್ಲಾ ಪ್ರಯತ್ನಗಳು ವಿಫಲವಾದಾಗ ತಂದೆ, ಮಗಳು ಎಲ್ಲಾ ಭರವಸೆಗಳನ್ನು ಕಳೆದುಕೊಂಡು ಹತಾಶರಾಗಿ ಕುಳಿತುಕೊಂಡಿದ್ದರು.

ಏತನ್ಮಧ್ಯೆ ಕೊನೆಯ ಪ್ರಯತ್ನ ಎಂಬಂತೆ ಶನಿವಾರ ಸಂಜೆ 5ಗಂಟೆಗೆ ವಿದ್ಯಾರ್ಥಿನಿಯ ತಂದೆ ಮದುರೈ ಮೂಲದ ವಕೀಲರೊಬ್ಬರನ್ನು ಭೇಟಿಯಾಗಿ, ಆದಷ್ಟು ಶೀಘ್ರವಾಗಿ ಮದುರೈ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವೇ ಎಂದು ವಿಚಾರಿಸಿದ್ದರು.

ತರಾತುರಿಯಲ್ಲೇ ಹಾಲ್ ಟಿಕೆಟ್ ನಲ್ಲಾದ ತಾಂತ್ರಿಕ ದೋಷದ ಕುರಿತ ದೂರನ್ನು ಸಂಜೆ 6ಗಂಟೆಗೆ ಮದ್ರಾಸ್ ಹೈಕೋರ್ಟ್ ಪೀಠಕ್ಕೆ ಸಲ್ಲಿಸಿದ್ದರು. 7 ಗಂಟೆಗೆ ಅರ್ಜಿಯ ಕ್ಷಿಪ್ರ ವಿಚಾರಣೆ ನಡೆಸಲು ಅನುಮತಿ ನೀಡಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದರು. ಮುಂದಿನ ಎರಡು ಗಂಟೆ ಅವಧಿಯೊಳಗೆ ಕೋರ್ಟ್ ನ ಸಿಬಂದಿಗಳು, ಅಧಿಕಾರಿಗಳು ಹಾಜರಾಗಿದ್ದರು. ರಾತ್ರಿ 9.15ರಿಂದ 10-30ರವರೆಗೆ ಜಸ್ಟೀಸ್ ಸುರೇಶ್ ಕುಮಾರ್ ಅರ್ಜಿಯ ವಿಚಾರಣೆ ನಡೆಸಿದ್ದರು.

ಹಾಲ್ ಟಿಕೆಟ್ ಕುರಿತ ಅರ್ಜಿಯ ವಿಚಾರಣೆ ನಡೆಸಿ ಆದೇಶ ನೀಡಿದ್ದ ಪ್ರತಿ ರಾತ್ರಿ 11ಗಂಟೆಗೆ ಲಭ್ಯವಾಗಿತ್ತು. ಮಗಳ ಭವಿಷ್ಯ ಏನಾಗುತ್ತೋ ಎಂದು  ಉಸಿರು ಬಿಗಿ ಹಿಡಿದು ತಂದೆ ಕೋರ್ಟ್ ಹೊರಗೆ ಕಾಯುತ್ತಿದ್ದು, ಮಧ್ಯರಾತ್ರಿ ಕೋರ್ಟ್ ಆದೇಶದ ಅಂತಿಮ ಪ್ರತಿ ಸಿಕ್ಕಿತ್ತು. ಅಂತಿಮವಾಗಿ ಕೋರ್ಟ್ ಆದೇಶ, ವಕೀಲರ ಮಧ್ಯಪ್ರವೇಶದಿಂದ ವಿದ್ಯಾರ್ಥಿನಿಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ದೊರಕಿದ್ದು, ಭಾನುವಾರ ನೀಟ್ ಪರೀಕ್ಷೆ ಬರೆಯುವ ಮೂಲಕ ತನ್ನ ಕನಸನ್ನು ನನಸು ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಕೋರ್ಟ್ ಆದೇಶದಲ್ಲಿ ಏನಿತ್ತು?

ವಿದ್ಯಾರ್ಥಿನಿಯ ಹಾಲ್ ಟಿಕೆಟ್ ನಂಬರ್, ಅಪ್ಲಿಕೇಶನ್ ನಂಬರ್ ಎಲ್ಲವೂ ಸಮರ್ಪಕವಾಗಿದೆ. ಈ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೋರ್ಟ್ ಆದೇಶ ಹೊರಡಿಸಿತ್ತು. ಈಕೆ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ, ಎಸ್ಸೆಸ್ಸೆಲ್ಸಿಯಲ್ಲಿ ಶೇ.92.8ರಷ್ಟು, ದ್ವಿತೀಯ ಪಿಯುಸಿಯಲ್ಲಿ ಶೇ.91.54ರಷ್ಟು ಅಂಕವನ್ನು ಪಡೆದಿದ್ದಾಳೆ. ಪ್ರಸಕ್ತ ಸಾಲಿನ ಪರೀಕ್ಷೆ ಬರೆಯುವ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಆಕೆಯ ವಿದ್ಯಾಭ್ಯಾಸದ ಭವಿಷ್ಯವನ್ನು ಮೊಟಕುಗೊಳಿಸಬೇಡಿ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.