ಬೆಂಡೆಕಾಯಿ ಬಾಯಿಗಷ್ಟೇ ರುಚಿಯಲ್ಲ …ಆರೋಗ್ಯಕ್ಕೂ ಒಳ್ಳೆಯದು…
ಬೆಂಡೆಕಾಯಿ ಉಪಯೋಗ ಕೇಳಿದ್ರೆ ಇಂದಿನಿಂದಲೇ ತಿನ್ನಲು ಶುರು ಮಾಡ್ತೀರಾ!
ಶ್ರೀರಾಮ್ ನಾಯಕ್, Nov 11, 2022, 5:50 PM IST
ಬೆಂಡೆಕಾಯಿ ಬಾಯಿಗಷ್ಟೇ ರುಚಿಯಲ್ಲ .ಆರೋಗ್ಯಕ್ಕೂ ಒಳ್ಳೆಯದು . ಇದರ ಸೇವನೆಯಿಂದ ದೊಡ್ಡ ಕರುಳಿನ ಕ್ಯಾನ್ಸರ್, ಮಲಬದ್ಧತೆ ದೂರವಾಗುತ್ತದೆ ಹಾಗೂ ಜೀರ್ಣಕ್ರಿಯೆ ಸುಲಭವಾಗುತ್ತದೆ. ಅಲ್ಲದೆ ಹಿಮೋಗ್ಲೋಬಿನ್ ಅಂಶ ಹೆಚ್ಚಾಗಿ ರಕ್ತಹೀನತೆ ದೂರವಾಗುತ್ತದೆ. ಮಾತ್ರವಲ್ಲದೇ ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಬೆಂಡೆಕಾಯಿ ಹೇಳಿ ಮಾಡಿಸಿದ ತರಕಾರಿಯಾಗಿದೆ.
ಬೆಂಡೆಕಾಯಿಂದ ಪಲ್ಯ, ಫ್ರೈ , ಕರಿ, ಸಾಂಬಾರು, ಬೆಂಡೆಕಾಯಿ ಹುಳಿ,ಗೊಜ್ಜು ಹೀಗೆ ನಾನಾ ರೀತಿಯ ಅಡುಗೆಯನ್ನು ಮಾಡಬಹುದು.ಆದರೆ ನಾವು ಇಂದು ನಿಮಗಾಗಿ ಬೆಂಡೆಕಾಯಿ ಮಸಾಲ ಫ್ರೈ ಮತ್ತು ಬೆಂಡೆ ಪಲ್ಯವನ್ನು ಮಾಡುವ ವಿಧಾನವನ್ನು ತಿಳಿಸುತ್ತಿದ್ದೇವೆ.
ಬೆಂಡೆಕಾಯಿ ಮಸಾಲ ಫ್ರೈ
ಬೇಕಾಗುವ ಸಾಮಗ್ರಿಗಳು
ಬೆಂಡೆಕಾಯಿ-10ರಿಂದ 15, ಕೊತ್ತಂಬರಿ ಪುಡಿ-1ಚಮಚ, ಜೀರಿಗೆ ಪುಡಿ-ಅರ್ಧ ಚಮಚ, ಖಾರದ ಪುಡಿ-1ಚಮಚ, ಜೀರಿಗೆ ಪುಡಿ-ಸ್ವಲ್ಪ, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ
ಮೊದಲಿಗೆ ಬೆಂಡೆಕಾಯಿಯನ್ನು ಚೆನ್ನಾಗಿ ನೀರಿನಲ್ಲಿ ತೊಳೆದು ,ಒರೆಸಿ ಅದರಲ್ಲಿ ನೀರಿನಂಶ ಇದ್ದರೆ ತೆಗೆಯಿರಿ. ತದನಂತರ ಅದನ್ನು ಉದ್ದವಾಗಿ ಎರಡು ಭಾಗವಾಗಿ ಕಟ್ ಮಾಡಿ ಒಂದು ಬೌಲ್ ಗೆ ಹಾಕಿರಿ. ಆಮೇಲೆ ಇದಕ್ಕೆ ಜೀರಿಗೆ ಪುಡಿ, ಖಾರದ ಪುಡಿ, ಕೊತ್ತಂಬರಿ ಪುಡಿ, ಒಂದು ಚಮಚ ಎಣ್ಣೆ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ಒಂದು ಬಾಣಲೆಗೆ ಎಣ್ಣೆ ಹಾಕಿ, ಕಾದನಂತರ ಮಿಶ್ರಣಮಾಡಿಟ್ಟ ಬೆಂಡೆಕಾಯಿಯನ್ನು ಹಾಕಿ ಎಣ್ಣೆಯಲ್ಲಿ ಕರಿಯಿರಿ.ಚಿಪ್ಸ್ ತರ ಗರಿಗರಿಯಾಗಿ ಕರಿದರೆ ರುಚಿಕರವಾದ ಬೆಂಡೆ ಮಸಾಲ ಫ್ರೈ ಸವಿಯಲು ಸಿದ್ಧ.
ಬೆಂಡೆಕಾಯಿ ಪಲ್ಯ
ಬೇಕಾಗುವ ಸಾಮಗ್ರಿಗಳು
ಬೆಂಡೆಕಾಯಿ-20ರಿಂದ 25, ಸಾಸಿವೆ-1ಚಮಚ, ಜೀರಿಗೆ-ಅರ್ಧ ಚಮಚ, ಟೊಮೆಟೋ -1, ಅರಿಶಿನ ಪುಡಿ-ಸ್ವಲ್ಪ, ಗರಂ ಮಸಾಲ-ಅರ್ಧ ಚಮಚ, ಖಾರದ ಪುಡಿ-2ಚಮಚ, ಈರುಳ್ಳಿ -1, ಶುಂಠಿ-ಬೆಳ್ಳುಳ್ಳಿ ಪೇಸ್ಟ್-1ಚಮಚ, ಎಣ್ಣೆ-3 ಚಮಚ, ಕಸೂರಿ ಮೇಥಿ-ಸ್ವಲ್ಪ ಮತ್ತು ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ
ಮೊದಲಿಗೆ ಬೆಂಡೆಕಾಯಿಯನ್ನು ತೊಳೆದು ಸಣ್ಣದಾಗಿ ಹೆಚ್ಚಿರಿ. ನಂತರ ಒಂದು ಬಾಣಲೆಗೆ 2ಚಮಚ ಎಣ್ಣೆಯನ್ನು ಹಾಕಿ ಕಟ್ ಮಾಡಿಟ್ಟ ಬೆಂಡೆಕಾಯಿಯನ್ನು ಹಾಕಿ 2ರಿಂದ 3 ನಿಮಿಷಗಳ ಕಾಲ ಹುರಿದಿಟ್ಟುಕೊಳ್ಳಿ. ತದನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ಸಾಸಿವೆ,ಈರುಳ್ಳಿ,ಟೊಮೆಟೋ,ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಬೇಯಿಸಿರಿ.ನಂತರ ಅರಿಶಿನ ಪುಡಿ,ಖಾರದ ಪುಡಿ,ಕಸೂರಿ ಮೇಥಿ,ಗರಂ ಮಸಾಲ ಪುಡಿ ಹಾಗೂ ಹುರಿದಿಟ್ಟ ಬೆಂಡೆಕಾಯಿ ಹಾಕಿ ಸರಿಯಾಗಿ ಮಿಶ್ರಣ ಮಾಡಿ ಬೇಯಿಸಿದರೆ ಬೆಂಡೆಕಾಯಿ ಪಲ್ಯ ಸವಿಯಲು ಸಿದ್ಧ. ಇದು ಚಪಾತಿ ಹಾಗೂ ಅನ್ನದ ಜೊತೆಗೆ ಚೆನ್ನಾಗಿ ಹೊಂದುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!