BJP; ರಾಜಸ್ಥಾನದಲ್ಲಿ ಅಧಿಕಾರ ಸಿಕ್ಕರೆ ಮಾನ್ ಸಿಂಗ್ 2 ಮೊಮ್ಮಗಳಿಗೆ ಪಟ್ಟ?

ಲೆಕ್ಕಾಚಾರ ಮಾಡಿಯೇ ಸಂಸದೆಯನ್ನು ಕಣಕ್ಕಿಳಿಸಿದ್ದು ಎನ್ನಲಾಗುತ್ತಿದೆ...

Team Udayavani, Dec 2, 2023, 6:23 PM IST

1-sadsd-sad

ಜೈಪುರ: ವಿಧಾನಸಭಾ ಚುನಾವಣ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು ಪ್ರಮುಖವಾಗಿ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರವನ್ನು ಮರಳಿ ಪಡೆಯುವ ಭಾರಿ ವಿಶ್ವಾಸ ಹೊಂದಿದೆ. ಹಲವು ಸಮೀಕ್ಷೆಗಳೂ ಬಿಜೆಪಿಗೆ ಅಧಿಕಾರ ಸಿಗಲಿದೆ ಎನ್ನುವ ಭವಿಷ್ಯ ನುಡಿದಿದೆ.

ಬಿಜೆಪಿ ದೊಡ್ಡ ಬದಲಾವಣೆ ಮಾಡುವ ಸಾಹಸಕ್ಕೆ ಮುಂದಾಗಲಿದೆ ಎನ್ನುವ ಮಾತುಗಳು ರಾಷ್ಟ್ರ ರಾಜಕೀಯದಲ್ಲಿ ತೀವ್ರವಾಗಿ ಕೇಳಿಬರುತ್ತಿದ್ದು, ಬಹುಮತ ದೊರೆತು ಅಧಿಕಾರ ಸಿಕ್ಕರೆ  ಮಾಜಿ ಮುಖ್ಯಮಂತ್ರಿ,70 ರ ಹರೆಯದ ವಸುಂಧರಾ ರಾಜೇ ಅವರ ಬದಲಾಗಿ ರಾಜ ಮನೆತನದ ಪರಂಪರೆಯ ದಿಯಾ ಕುಮಾರಿ ಅವರಿಗೆ ಮಹಿಳಾ ಕೋಟಾದ ಅಡಿಯಲ್ಲಿ ಪ್ರಮುಖ ಹುದ್ದೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಬಿಜೆಪಿ ಸಂಸದೆಯಾಗಿರುವ 52 ರ ಹರೆಯದ ದಿಯಾ ಅವರು ವಿದ್ಯಾಧರ್‌ನಗರದಿಂದ ಕಣಕ್ಕಿಳಿದಿದ್ದಾರೆ. ಮಹಾರಾಜ ಸವಾಯಿ ಮಾನ್ ಸಿಂಗ್ 2  ಅವರ ಮೊಮ್ಮಗಳಾಗಿ ಬಲವಾದ ರಾಜಕೀಯ ಹಿನ್ನೆಲೆ ಮತ್ತು ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದ್ದಾರೆ.

ಜೈಪುರ ಸಿಟಿ ಪ್ಯಾಲೇಸ್ ಸೇರಿದಂತೆ ಹಲವಾರು ಆಸ್ತಿಗಳು, ವ್ಯವಹಾರಗಳು, ಟ್ರಸ್ಟ್‌ಗಳು ಮತ್ತು ಶಾಲೆಗಳನ್ನು ನಿರ್ವಹಿಸುತ್ತಿರುವ ದಿಯಾ ಬಿಲಿಯನೇರ್. ಜೈಗಢ್ ಫೋರ್ಟ್, ಮಹಾರಾಜ ಸವಾಯಿ ಮಾನ್ ಸಿಂಗ್ 2 ಮ್ಯೂಸಿಯಂ ಟ್ರಸ್ಟ್, ಜೈಪುರ ಮತ್ತು ಜೈಗಢ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಅರಮನೆ ಶಾಲೆ ಮತ್ತು ಮಹಾರಾಜ ಸವಾಯಿ ಭವಾನಿ ಸಿಂಗ್ ಶಾಲೆಗಳನ್ನೂ ನಡೆಸುತ್ತಿದ್ದಾರೆ. ಜೈಪುರದ ರಾಜಮಹಲ್ ಅರಮನೆ, ಮೌಂಟ್ ಅಬುನಲ್ಲಿರುವ ಹೋಟೆಲ್ ಜೈಪುರ ಹೌಸ್ ಮತ್ತು ಹೋಟೆಲ್ ಲಾಲ್ ಮಹಲ್ ನ ಮಲಕತ್ವವನ್ನೂ ಹೊಂದಿದ್ದಾರೆ.

ಕುಮಾರಿಯವರ ತಂದೆ, ಜೈಪುರದ ಮಾಜಿ ಪಟ್ಟದ ರಾಜ ದಿವಂಗತ ಭವಾನಿ ಸಿಂಗ್ ಅವರು 1989 ರ ಲೋಕಸಭಾ ಚುನಾವಣೆಯಲ್ಲಿ ಜೈಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು, ಆದರೆ ಬಿಜೆಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. ಕುಮಾರಿಯವರ ಮಲತಾಯಿ ಮತ್ತು ಜೈಪುರದ ಮಾಜಿ ರಾಣಿ ಗಾಯತ್ರಿ ದೇವಿ ಅವರು 1962, 1967 ಮತ್ತು 1971 ರಲ್ಲಿ ಜೈಪುರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅವರು ಸ್ವತಂತ್ರ ಪಕ್ಷದ ಟಿಕೆಟ್‌ನಲ್ಲಿ ದಾಖಲೆಯ ಅಂತರದಿಂದ ಈ ಚುನಾವಣೆಗಳನ್ನು ಗೆದ್ದಿದ್ದರು.

ಜೈಪುರದಲ್ಲಿ 2013 ಸೆಪ್ಟೆಂಬರ್ 10 ರಂದು ನಡೆದ ಬೃಹತ್ ರ‍್ಯಾಲಿಯಲ್ಲಿ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸಮ್ಮುಖದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

2013 ರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸವಾಯಿ ಮಾಧೋಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದರು. ವಿರೋಧಿ ಅಲೆಯಿಂದಾಗಿ ಬಿಜೆಪಿ ಸೋತಿದ್ದ 2018 ರ ಚುನಾವಣೆಯಲ್ಲಿ ಸ್ಪರ್ಧಿಸದೇ ಬುದ್ದಿವಂತಿಕೆ ತೋರಿದ್ದರು. 2019 ರಲ್ಲಿ ರಾಜ್‌ಸಮಂದ್‌ನಿಂದ ಲೋಕಸಭೆಗೆ ಆಯ್ಕೆಯಾದರು. 8.58 ಲಕ್ಷ ಮತಗಳನ್ನು ಪಡೆದು, ದಾಖಲೆಯ 5.51 ಲಕ್ಷ ಮತಗಳ ಅಂತರದ ದಿಗ್ವಿಜಯ ಸಾಧಿಸಿದ್ದರು. 2019 ರ ಅಗ್ರ 20 ಗೆಲುವಿನ ಅಂತರಗಳಲ್ಲಿ ಇವರದ್ದೂ ಒಂದಾಗಿದೆ.

”ನಾಯಕತ್ವದ ವಿಚಾರ ಫಲಿತಾಂಶ ಪ್ರಕಟವಾದ ನಂತರ ಪಕ್ಷದ ಸಂಸದೀಯ ಮಂಡಳಿ ಮತ್ತು ಪಕ್ಷದ ಉನ್ನತ ನಾಯಕತ್ವ ನಿರ್ಧರಿಸುತ್ತದೆ.ಪಕ್ಷ ನನಗೆ ಯಾವುದೇ ಕೆಲಸ ನೀಡಿದರೂ, ನಾನು ಯಾವಾಗಲೂ ಅದನ್ನು ಪೂರ್ಣಗೊಳಿಸುತ್ತೇನೆ”ಎಂದು ದಿಯಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

IPL 2025;ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

6–bamboo-shoot

Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.