ಗಾಢಾಂಧಕಾರದಲ್ಲಿ ಮುಳುಗಿದ ಇಸ್ಲಾಮಾಬಾದ್… ಶ್ರೀಲಂಕಾದಂತೆ ಪಾಕ್ ಕೂಡಾ ದಿವಾಳಿ!

ಹವಾನಿಯಂತ್ರಣ ಸಾಧನಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.

Team Udayavani, Jun 15, 2022, 4:11 PM IST

ಗಾಢಾಂಧಕಾರದಲ್ಲಿ ಮುಳುಗಿದ ಇಸ್ಲಾಮಾಬಾದ್… ಶ್ರೀಲಂಕಾದಂತೆ ಪಾಕ್ ಕೂಡಾ ದಿವಾಳಿ!

ದ್ವೀಪ ರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸಿದ್ದು, ಪೆಟ್ರೋಲ್, ಡೀಸೆಲ್ ಇಲ್ಲದೆ ಪರದಾಡುವಂತಾಗಿದೆ. ಇದೀಗ ಪಾಕಿಸ್ತಾನ ಕೂಡಾ ಅದೇ ಸಾಲಿಗೆ ಸೇರಿದ್ದು ದೇಶದಲ್ಲಿ ವಿದ್ಯುತ್ ಕೊರತೆ ತೀವ್ರವಾಗಿದೆ. ಪಾಕಿಸ್ತಾನದಲ್ಲಿ ಇಂಧನ ಕೊರತೆಯಿಂದಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮ ಪಾಕ್ ನಲ್ಲಿ ಲೋಡ್ ಶೆಡ್ಡಿಂಗ್ ಅವಧಿಯನ್ನು 12ಗಂಟೆಗಳಿಗೆ ಏರಿಕೆ ಮಾಡಲಾಗಿದೆ.

ಶ್ರೀಲಂಕಾದಂತೆ ಪಾಕ್ ಕೂಡಾ ದಿವಾಳಿಯತ್ತ?

ಪ್ರಸ್ತುತ ಪಾಕಿಸ್ತಾನದಲ್ಲಿನ ಸ್ಥಿತಿ ಶ್ರೀಲಂಕಾದ ಸನ್ನಿವೇಶವನ್ನು ನೆನಪಿಸುತ್ತಿದೆ. ಏತನ್ಮಧ್ಯೆ ಪಾಕಿಸ್ತಾನ ಸರ್ಕಾರ ಮುಂಬರುವ ದಿನಗಳಲ್ಲಿ ಬ್ಲ್ಯಾಕ್ ಔಟ್ (ಲೋಡ್ ಶೆಡ್ಡಿಂಗ್) ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂಬ ಆತಂಕ ಪಾಕಿಸ್ತಾನಿಯರದ್ದಾಗಿದೆ.

ವಾಸ್ತವವಾಗಿ ಪಾಕಿಸ್ತಾನದಲ್ಲಿ ಭಾರೀ ಪ್ರಮಾಣದಲ್ಲಿ ಇಂಧನ ಕೊರತೆಯನ್ನು ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಶಹಬಾಜ್ ಷರೀಫ್ ನೇತೃತ್ವದ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಹಲವಾರು ನಿರ್ಧಾರವನ್ನು ತೆಗೆದುಕೊಂಡಿತ್ತು.

1)ದೇಶದ ಹಲವು ಕಚೇರಿಗಳು ವರ್ಕ್ ಫ್ರಂ ಹೋಮ್ ಅನ್ನು ಕಡ್ಡಾಯಗೊಳಿಸಿತ್ತು.

2)ವಿವಾಹ ಸಮಾರಂಭಗಳನ್ನು ರಾತ್ರಿ 10ಗಂಟೆಯೊಳಗೆ ಮುಕ್ತಾಯಗೊಳಿಸುವಂತೆ ಆದೇಶ ಹೊರಡಿಸಲಾಗಿತ್ತು.

3)ನಿರ್ದಿಷ್ಟ ಸಮಯದವರೆಗೆ ಬೀದಿ ದೀಪಗಳನ್ನು ಆಫ್ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

4)ಹವಾನಿಯಂತ್ರಣ ಸಾಧನಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.

ಆದರೂ ಇಷ್ಟೆಲ್ಲಾ ಮುನ್ನೆಚ್ಚರಿಕೆಗಳ ಹೊರತಾಗಿಯೂ ಇಂಧನ ಬಿಕ್ಕಟ್ಟಿನಿಂದ ಹೊರಬರಲು ಪಾಕಿಸ್ತಾನಕ್ಕೆ ಸಾಧ್ಯವಾಗಿಲ್ಲ. ಇದರಿಂದಾಗಿ ಬ್ಲ್ಯಾಕ್ ಔಟ್ ಸಮಯವನ್ನು ಹೆಚ್ಚಳ ಮಾಡಲು ಪಾಕ್ ಸರ್ಕಾರ ನಿರ್ಧರಿಸಿದೆ. ಇಂಧನ ಕೊರತೆಯಿಂದ ಇಸ್ಲಾಮಾಬಾದ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳು ಕತ್ತಲಲ್ಲಿ ಮುಳುಗಿದೆ!

ಪಾಕಿಸ್ತಾನದ ಆರ್ಥಿಕತೆ ತೀವ್ರ ಬಿಕ್ಕಟ್ಟಿನತ್ತ ಸಾಗತೊಡಗಿದೆ. ದೇಶದಲ್ಲಿನ ಬೆಲೆ ಏರಿಕೆ ದರ ಶೇ.13.08ಕ್ಕೆ ಏರಿಕೆಯಾಗಿದೆ. ಇದರ ಪರಿಣಾಮ ಆಹಾರ ಸಮಸ್ಯೆಯೂ ಶೋಚನೀಯ ಸ್ಥಿತಿಗೆ ತಲುಪಿದೆ.

ಈ ಬಾರಿ ಪ್ರತಿಯೊಬ್ಬ ಪಾಕಿಸ್ತಾನದ ನಾಗರಿಕ ಹಸಿವಿನಿಂದ ಹೆಚ್ಚು ಉರಿಯಬೇಕಾಗುತ್ತದೆ. ಒಟ್ಟಿನಲ್ಲಿ ಪರಿಸ್ಥಿತಿ ಭಾರೀ ಹದಗೆಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಳವಳ ವ್ಯಕ್ತಪಡಿಸಿರುವುದು ಪಾಕ್ ನ ಶೋಚನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಸಂಕಷ್ಟದ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವಾಗದೆ ನೂತನ ಪ್ರಧಾನಿ ಶೆಹಬಾಝ್ ಶರೀಫ್ ಅಸಹಾಯಕರಾಗಿದ್ದಾರೆ. ಪಾಕಿಸ್ತಾನದಲ್ಲಿ ನೈಸರ್ಗಿಕ ಅನಿಲ ಬೆಲೆ ಭಾರೀ ದುಬಾರಿಯಾಗಿದೆ. ವಿದ್ಯುತ್ ಕೊರತೆ ನೀಗಿಸಲು ತೈಲವನ್ನು ಖದೀದಿಸುವುದು ಕೂಡಾ ದುಬಾರಿಯಾಗಿದೆ ಎಂದು ಶರೀಫ್ ಕೈಚೆಲ್ಲಿದ್ದಾರೆ. ಅದಕ್ಕೆ ಕಾರಣ ಪಾಕಿಸ್ತಾನದ ಹಣದ ಖಜಾನೆಯೇ ಖಾಲಿಯಾಗಿರುವುದು! ಇದೀಗ ಪಾಕಿಸ್ತಾನ ಕೂಡಾ ಶ್ರೀಲಂಕಾದ ಸಾಲಿಗೆ ಸೇರುವ ದಿನ ದೂರವಿಲ್ಲ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.