ಸಿಹಿಗೂ ಸೈ, ಸಾಂಬಾರಿಗೂ ಜೈ; ಇದು ಪೈನಾಪಲ್ ಪಾಕ ಲೋಕ!


ಶ್ರೀರಾಮ್ ನಾಯಕ್, Aug 13, 2020, 7:00 PM IST

pineapple–750

ಪೈನಾಪಲ್(ಅನಾನಸ್)ಕೇವಲ ಹಣ್ಣಿನ ರೂಪದಲ್ಲಿ ಅಥವಾ ಪಾನೀಯ ರೂಪದಲ್ಲಿ ಮಾತ್ರ ಉಪಯೋಗಿಸುತ್ತಾರೆ. ಅದರಿಂದ ವಿಶೇಷವಾದ ಅಡುಗೆ ಮತ್ತು ತಿಂಡಿ ಮಾಡಬಹುದೆಂದು ಅನೇಕರಿಗೆ ತಿಳಿದಿರಲಾರದು. ಹೇರಳವಾದ ಮಿಟಮಿನ್ ಸಿ, ಕಬ್ಬಿಣಾಂಶ, ನಾರಿನಂಶ ಹಾಗೂ ಕಡಿಮೆ ಕೊಬ್ಬಿನಾಂಶ ಹೊಂದಿರುವ ಪೈನಾಪಲ್ ಹಣ್ಣಿನಿಂದ ಹಲವಾರು ರೆಸಿಪಿ ಮಾಡಬಹುದು. ಕೇವಲ ಸಿಹಿಯೊಂದೇ ಅಲ್ಲ, ಅನ್ನಕ್ಕೆ ಮತ್ತು ಚಪಾತಿಗೆ ಹೊಂದುವ ರುಚಿಯಾದ ಪದಾರ್ಥಗಳನ್ನು ತಯಾರಿಸ ಬಹುದು. ಹಾಗಿದ್ದರೆ ಇನ್ನೇಕೆ ತಡ ಪೈನಾಪಲ್ ನಿಂದ ತಯಾರಿಸಬಹುದಾದ ಕೆಲವೊಂದು ರೆಸಿಪಿಗಳು ಇಲ್ಲಿವೆ…..

ಪೈನಾಪಲ್ ಕೇಸರಿ ಬಾತ್
ಬೇಕಾಗುವ ಸಾಮಗ್ರಿ
ಬಾಂಬೆ (ಚಿರೋಟಿ)ರವೆ 1ಕಪ್, ಸಕ್ಕರೆ 2 ಕಪ್, ಪೈನಾಪಲ್ ನ ತುರಿ 1ಕಪ್ , ತುಪ್ಪ  4 ಚಮಚ, ಹಾಲು 2 ಕಪ್, ಕೇಸರಿ ಬಣ್ಣ, ಏಲಕ್ಕಿ ಪುಡಿ ಸ್ವಲ್ಪ, ದ್ರಾಕ್ಷಿ, ಗೋಡಂಬಿ ಸ್ವಲ್ಪ.

ತಯಾರಿಸುವ ವಿಧಾನ
ಬಾಂಬೆ ರವೆಯನ್ನು ಸ್ವಲ್ಪ ತುಪ್ಪ ಹಾಕಿ ಪರಿಮಳ ಬರುವವರೆಗೆ ಹುರಿದಿಟ್ಟುಕೊಳ್ಳಿ. 2 ಕಪ್ ಹಾಲನ್ನು ಕುದಿಯಲು ಇಟ್ಟು ಅದಕ್ಕೆ ಕೇಸರಿ ಬಣ್ಣವನ್ನು ಹಾಕಿರಿ. ನಂತರ ಹುರಿದಿಟ್ಟ ರವೆಯನ್ನು ಹಾಕಿ. ರವೆ ಚೆನ್ನಾಗಿ ಬೆಂದ ನಂತರ ಸಕ್ಕರೆ , ಪೈನಾಪಲ್ ತುರಿ, ತುಪ್ಪವನ್ನು ಹಾಕಿರಿ. ಸ್ವಲ್ಪ ಹೊತ್ತು ಮುಚ್ಚಿಟ್ಟು ಸಣ್ಣ ಉರಿಯಲ್ಲಿ ಇಡಿ. ನಂತರ ಏಲಕ್ಕಿ ಪುಡಿ, ತುಪ್ಪದಿಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಯನ್ನು ಹಾಕಿರಿ. ಬಿಸಿ ಬಿಸಿಯಾದ ಪೈನಾಪಲ್ ಕೇಸರಿ ಬಾತ್ ಸವಿಯಲು ಸಿದ್ಧ.

ಪೈನಾಪಲ್ ಮೆಣಸುಕಾಯಿ
ಬೇಕಾಗುವ ಸಾಮಗ್ರಿ
ಪೈನಾಪಲ್ 1 ಕಪ್, ಬೆಲ್ಲ ಸ್ವಲ್ಪ, ಒಣಮೆಣಸು 6 ರಿಂದ 8, ಉದ್ದಿನ ಬೇಳೆ 3 ಚಮಚ, ದನಿಯಾ 2 ಚಮಚ, ಎಳ್ಳು 3 ಚಮಚ, ಅರಶಿನ ಪುಡಿ ಸ್ವಲ್ಪ, ಹುಣಸೇ ಹುಳಿ ಒಂದು ಲಿಂಬೆ ಗಾತ್ರದಷ್ಟು, ಕರಿಬೇವು, ಎಣ್ಣೆ ಸ್ವಲ್ಪ, ತೆಂಗಿನ ಕಾಯಿ ತುರಿ 2ಕಪ್, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲು ಎಳ್ಳನ್ನು (ಎಣ್ಣೆ ಹಾಕದೇ)ಹುರಿಯಿರಿ. ದನಿಯಾ, ಕರಿಬೇವನ್ನು ಎಣ್ಣೆ ಹಾಕಿ ಹುರಿಯಿರಿ. ಎಲ್ಲವನ್ನು ಮಿಕ್ಸಿಗೆ ಹಾಕಿ ತೆಂಗಿನ ತುರಿಯೊಂದಿಗೆ ರುಬ್ಬಿಕೊಳ್ಳಿ. ಹುಣಸೇ ರಸ, ಉಪ್ಪು, ಅರಶಿನ ಪುಡಿ, ಬೆಲ್ಲವನ್ನು ಒಂದು ಪಾತ್ರೆಯಲ್ಲಿ ಹಾಕಿ ಕುದಿಯಲು ಇಡಿ. ಕುದಿಯುವ ಮಿಶ್ರಣಕ್ಕೆ ಪೈನಾಪಲ್ ಹೋಳುಗಳನ್ನು ಹಾಕಿ ಅನಂತರ ರುಬ್ಬಿಟ್ಟ ಮಸಾಲೆಯನ್ನು ಹಾಕಿ ಕುದಿಸಿ ಇದಕ್ಕೆ ಕರಿಬೇವು ಸೇರಿಸಿದ ಸಾಸಿವೆ ಒಗ್ಗರಣೆ ಹಾಕಿರಿ. ಪೈನಾಪಲ್ ಮೆಣಸಿನಕಾಯಿ ಸವಿಯಲು ಸಿದ್ಧ. ಆನ್ನಕ್ಕೆ ಮಾತ್ರವಲ್ಲದೆ ಚಪಾತಿ, ದೋಸೆಗಳಿಗೂ ಇದು ರುಚಿಕರ.

ಪೈನಾಪಲ್ ಸಾಸಿವೆ
ಬೇಕಾಗುವ ಸಾಮಗ್ರಿ
ಪೈನಾಪಲ್ 1ಕಪ್, ಬೆಲ್ಲ 2 ಚಮಚ, ತೆಂಗಿನ ತುರಿ ಅರ್ಧ ಕಪ್, ಸಾಸಿವೆ 2 ಚಮಚ, ಒಣಮೆಣಸು 3ರಿಂದ 5, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಸಣ್ಣಗೆ ಹೆಚ್ಚಿದ ಪೈನಾಪಲ್ ಹಣ್ಣಿನ ಹೋಳುಗಳಿಗೆ ಬೆಲ್ಲವನ್ನು ಬೆರೆಸಿಡಿ. ತೆಂಗಿನ ತುರಿಗೆ ಸಾಸಿವೆ ಹಾಗೂ ಒಣ ಮೆಣಸನ್ನು ಸೇರಿಸಿ ನುಣ್ಣಗೆ ರುಬ್ಬಿ. ಪೈನಾಪಲ್ ಹೋಳುಗಳಿಗೆ ಸೇರಿಸಿ. ಇದಕ್ಕೆ ರುಚಿಗೆ ಬೇಕಷ್ಟು ಉಪ್ಪು ಮತ್ತು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ರುಚಿಕರವಾದ ಪೈನಾಪಲ್ ಸಾಸಿವೆ ಸವಿಯಲು ಸಿದ್ಧ. ಚಪಾತಿ, ಅನ್ನದ ಜೊತೆ ಸೇರಿಸಿ ಸವಿಯಬಹುದು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.