ಚಾಕೊಲೆಟ್ ತಿನ್ನಲು ಎಷ್ಟು ಸಿಹಿಯೋ, ಜಾಸ್ತಿಯಾದ್ರೆ ಆರೋಗ್ಯಕ್ಕೆ ಅಷ್ಟೇ ಕಹಿ..!


Team Udayavani, May 17, 2021, 3:05 PM IST

vfgfgfgfg

ಚಾಕೊಲೆಟ್ ಯಾರಿಗೆ ತಾನೇ ಇಷ್ಟವಾಗದು? ವಿಶೇಷವಾಗಿ ಮಕ್ಕಳಿಗೆ ಅತಿಯಾಗಿ ಇಷ್ಟಪಡುವ ಚಾಕಲೇಟ್ ಹಲ್ಲಿನ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಎಷ್ಟು ಪ್ರಮಾಣದಲ್ಲಿ ಸೇವಿಸಿದರೆ ದೇಹಕ್ಕೆ ಒಳ್ಳೆಯದು ಎಂಬುದನ್ನು ನೋಡೋಣ.

ಚಾಕೊಲೇಟ್ ಸೇವನೆ ಹಿತಮಿತವಾಗಿದ್ದರೆ ಯಾವುದೇ ತೊಂದರೆಯೂ ಉಂಟಾಗುವುದಿಲ್ಲ. ಇಂದು ಮಾರುಕಟ್ಟೆಗಳಲ್ಲಿ ಹಲವು ಬಗೆಗಳ ಚಾಕೊಲೇಟ್ ಅಥವಾ ಸಿಹಿತಿನಿಸುಗಳು ದೊರೆಯುತ್ತವೆ. ಹೆಚ್ಚು ಸಿಹಿಯಾದ ಮತ್ತು ಸಕ್ಕರೆಯಿಂದ ತಯಾರಿಸಲಾದ ಚಾಕೊಲೇಟುಗಳು ಹಲ್ಲಿನ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ.

ಸಕ್ಕರೆಯುಕ್ತ ಚಾಕೊಲೇಟನ್ನು ತಿನ್ನುವುದರಿಂದ ಬಾಯಿಯಲ್ಲಿನ ಸಕ್ಕರೆಯ ಪ್ರಮಾಣವೂ ಹೆಚ್ಚುತ್ತದೆ. ಇದು ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯಕವಾಗಿ ಪ್ಲ್ಯಾಕ್​ನ (ಬ್ಯಾಕ್ಟೀರಿಯಾ ವೃದ್ಧಿಯಾಗಲು ಅವಕಾಶ ಕೊಡುವಂತಹ ಹಲ್ಲಿನ ಮೇಲಿನ ಲೋಳೆಯ ನಿಕ್ಷೇಪ) ರಚನೆಗೆ ಪುಷ್ಟಿ ನೀಡುತ್ತದೆ. ಅಲ್ಲದೆ ಬಾಯಿಯ ಆಮ್ಲೀಯತೆಯನ್ನು ಹೆಚ್ಚಾಗಿಸಿ ಹಲ್ಲಿನ ಮೇಲಿರುವ ಎನಾಮಲ್ ಅನ್ನು ನಷ್ಟಗೊಳಿಸಿ ಹುಳುಕಾಗುವಂತೆ ಮಾಡುತ್ತದೆ. ಹಾಗಾದರೆ ಚಾಕಲೇಟ್ ಅಥವಾ ಸಿಹಿಪದಾರ್ಥಗಳನ್ನು ತಿನ್ನಲೇಬಾರದೇ? ಹೀಗೆ ಹೇಳುವುದು ತಪ್ಪಾಗುತ್ತದೆ. ಸಕ್ಕರೆಯುಕ್ತ ಚಾಕೊಲೇಟ್ ಅಥವಾ ಸಿಹಿತಿನಿಸು ಅಥವಾ ಜಿಗುಟಾದ ಸಿಹಿಪದಾರ್ಥಗಳನ್ನು ಯಾವಾಗಲೂ ಊಟದ ಜೊತೆಯಲ್ಲೇ ತಿನ್ನುವುದು ಸೂಕ್ತ. ಅಲ್ಲದೆ ತಿಂದ ತಕ್ಷಣ ಬಾಯಿಯನ್ನು ಶುಚಿಗೊಳಿಸಿಕೊಳ್ಳಬೇಕು. ಇದರಿಂದ ಹಲ್ಲುಗಳ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಉಂಟಾಗುವುದಿಲ್ಲ.

ಮಕ್ಕಳ ಹಲ್ಲುಗಳು ಹುಳುಕಾಗುವುದಕ್ಕೆ – ಸಿಹಿಪದಾರ್ಥಗಳಾದ ಬಿಸ್ಕತ್ತ, ಚಾಕೊಲೇಟ್ ಅಥವಾ ಚಿಪ್ಸ್​ನಂತಹ ಜಿಗುಟಾದ ಆಹಾರಗಳು ಪ್ರಮುಖ ಕಾರಣ. ಜಿಗುಟಾದ ಸಿಹಿಪದಾರ್ಥಗಳು ಹಲ್ಲುಗಳ ಸಂದುಗಳಲ್ಲಿ ಸೇರಿಕೊಂಡು ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಪೂರಕ ವಾತಾವರಣವನ್ನು ನಿರ್ವಿುಸುತ್ತವೆ. ಆದ್ದರಿಂದ ಯಾವುದೇ ರೀತಿಯ ಚಾಕೊಲೇಟ್, ಸಿಹಿತಿನಿಸುಗಳು ಅಥವಾ ಜಿಗುಟಾದ ಸಿಹಿಪದಾರ್ಥಗಳನ್ನು ತಿಂದ ನಂತರ ಬಾಯಿಯನ್ನು ಶುಚಿಗೊಳಿಸಿಕೊಳ್ಳುವುದರ ಮೂಲಕ ಹಲ್ಲುಗಳು ಹುಳುಕಾಗದ ಹಾಗೆ ನೋಡಿಕೊಳ್ಳಬಹುದು.

ಹಲ್ಲಿನ ಕಲೆಗಳಲ್ಲಿ ಬಾಹ್ಯ ಹಾಗೂ ಆಂತರಿಕ ಎಂದು ಎರಡು ಬಗೆಗಳಿವೆ. ಆಂತರಿಕ ಕಲೆಗಳು ಹಲ್ಲಿನ ಒಳಭಾಗದಿಂದ ಉಂಟಾಗುತ್ತವೆ. ಇದಕ್ಕೆ ಹಲವು ಕಾರಣಗಳಿವೆ. ಉದಾಹರಣೆಗೆ ಫ್ಲೋರೈಡ್ ಕಲೆಗಳು ಅಥವಾ ಹಲ್ಲಿನಲ್ಲಿ ಆಂತರಿಕ ರಕ್ತಸ್ರಾವ ಉಂಟಾದಾಗ – ಹೀಗೆ ಹಲವು ಬಗೆ. ಇನ್ನು ಬಾಹ್ಯ ಕಲೆಗಳು ಹಲ್ಲಿನ ಮೇಲ್ಮೈಯಲ್ಲಿ ಉಂಟಾಗುತ್ತವೆ. ಇದು ಸಾಮಾನ್ಯವಾಗಿ ತಂಬಾಕು ಬಳಕೆಯಿಂದ, ಅತಿಯಾಗಿ ಕಾಫಿ ಅಥವಾ ಚಹಾ ಕುಡಿಯುವುದರಿಂದ ಮತ್ತು ಆಮ್ಲೀಯ ಪಾನೀಯಗಳಿಂದಲೂ ಉಂಟಾಗುತ್ತವೆ. ಯಾವ ರೀತಿಯ ಕಲೆಗಳಿವೆ ಎಂದು ಪರೀಕ್ಷಿಸಿ ತಕ್ಕ ಚಿಕಿತ್ಸೆಯನ್ನು ಪಡೆಯಬಹುದು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.