2 ವಾರಗಳಲ್ಲಿ 5 ಮಿಲಿಯನ್ ಡೌನ್ ಲೋಡ್ ಕಂಡ ರಿಮೂವ್ ಚೀನಾ ಆ್ಯಪ್: ಏನಿದರ ವಿಶೇಷತೇ ?


Team Udayavani, Jun 2, 2020, 7:32 PM IST

remove

ಭಾರತ ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಒಂದೆಡೆ ಬಡತನ, ನಿರುದ್ಯೋಗ ತಾಂಡವವಾಡುತ್ತಿದ್ದರೇ ಮತ್ತೊಂದೆಡೆ ಕೋವಿಡ್ -19 ವೈರಸ್  ಜನಜೀವನವನ್ನು ಅಕ್ಷರಶಃ ನಲುಗಿಸಿದೆ. ಮಾತ್ರವಲ್ಲದೆ ಗಡಿ ಸಮಸ್ಯೆಯೂ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇವೆಲ್ಲದರ ನಡುವೆಯೂ ಚೀನಾ ವಸ್ತುಗಳು ಮತ್ತು  ತಂತ್ರಜ್ಞಾನಗಳು ದೇಶದಲ್ಲಿ ಪಾರುಪತ್ಯ ಸಾಧಿಸುತ್ತಿವೆಯೇ ?  ಎಂಬ ಗುಮಾನಿ ಸದ್ಯದ ಮಟ್ಟಿಗೆ ಕಾಡುತ್ತಿರುವುದಂತೂ  ಸುಳ್ಳಲ್ಲ.

ಇಷ್ಟೆಲ್ಲಾ ಪೀಠಿಕೆಗೆ ಕಾರಣವೆಂದರೇ ‘ರಿಮೂವ್ ಚೀನಾ ಆ್ಯಪ್’ ಎಂಬ ಹೊಸ ಅಪ್ಲಿಕೇಶನ್. ಒಂದೆಡೆ ಭಾರತದ ಗಡಿಯಲ್ಲಿ ಚೀನಾ ಕ್ಯಾತೆ ತೆಗೆಯುತ್ತಿದ್ದರೇ, ಮತ್ತೊಂದೆಡೆ ಚೀನಾದಲ್ಲಿ ಸೃಷ್ಟಿಯಾದಂತಹ  ವೈರಸ್ ಭಾರತದಲ್ಲಿ ಕಬಂಧಬಾಹುವವನ್ನು ಚಾಚುತ್ತಿದೆ. ಈ ಕಾರಣಕ್ಕಾಗಿಯೇ ಚೀನಾದ ಆರ್ಥಿಕತೆಗೆ ಹೊಡೆತ ನೀಡಲು ‘ಚೀನಾದ ವಸ್ತುಗಳ ಬಹಿಷ್ಕಾರ, ಚೀನಾ ಆ್ಯಪ್ ಗಳಿಗೆ ಗುಡ್ ಬಾಯ್’ ಮುಂತಾದ ವಿಧಾನಗಳನ್ನು ಭಾರತೀಯರು ಅನುಸರಿಸುತ್ತಿದ್ದಾರೆ. ಈ ಅಭಿಯಾನದ ಒಂದು ಅಂಗವೇ ರಿಮೂವ್ ಚೀನಾ ಆ್ಯಪ್ ಎಂಬ ಅಪ್ಲಿಕೇಶನ್.

ಏನಿದು ರಿಮೂವ್ ಚೀನಾ ಆ್ಯಪ್ ?

ಸ್ಮಾರ್ಟ್ ಫೋನ್ ಗಳಲ್ಲಿ ಚೀನಾ ಮೂಲದ ಆ್ಯಪ್ ಗಳನ್ನು ಗುರುತಿಸಿ ಅದನ್ನು ಅಳಿಸಿ ಹಾಕಲು ಸಹಾಯ ಮಾಡುವ ಅಪ್ಲಿಕೇಶನ್ ಇದು. ಮೇ 17 ರಂದು ಅಧಿಕೃತವಾಗಿ ಪ್ಲೇಸ್ಟೋರ್ ನಲ್ಲಿ ಕಾಣಿಸಿಕೊಂಡ ಈ ಆ್ಯಪ್ ಬಿಡುಗಡೆಯಾದ ಎರಡೇ ವಾರಗಳಲ್ಲಿ 5 ಮಿಲಿಯನ್ (50 ಲಕ್ಷ) ಡೌನ್ ಲೋಡ್ ಕಂಡಿದೆ. ಮಾತ್ರವಲ್ಲದೆ ಬಳಕೆದಾರರಿಂದ 4.9 ರೇಟಿಂಗ್ ಸಿಕ್ಕಿದೆ. ಅತೀ ಹೆಚ್ಚು ಜನರು 5 ಸ್ಟಾರ್ ನೀಡಿದ್ದಾರೆ.

ಇದು ಕೇವಲ 3.8 ಎಂಬಿ ಗಾತ್ರದಲ್ಲಿದ್ದು, ಪ್ಲೇಸ್ಟೋರ್ ನಿಂದ ರಿಮೂವ್ ಚೀನಾ ಆ್ಯಪ್ ಎಂದು ಸರ್ಚ್ ಮಾಡಿ ಇನ್ ಸ್ಟಾಲ್ ಮಾಡಿಕೊಂಡರೇ ನಿಮ್ಮ ಮೊಬೈಲ್ ಫೋನ್ ನಲ್ಲಿರುವ ಚೀನಾ ಮೂಲದ ಎಲ್ಲಾ ಆ್ಯಪ್ ಗಳನ್ನು ಗುರುತಿಸಿ ಪಟ್ಟಿ ಮಾಡುತ್ತದೆ. ನಿಮಗೆ ಅಲ್ಲಿಂದಲೇ ಅನ್ ಇನ್ ಸ್ಟಾಲ್ ಮಾಡುವ ಅವಕಾಶಗಳನ್ನು ಕೂಡ ಕಲ್ಪಿಸಲಾಗಿದೆ.

ಒನ್  ಟಚ್ ಆ್ಯಪ್ ಲ್ಯಾಬ್ಸ್ ಎಂಬ ಜೈಪುರ ಮೂಲದ ಕಂಪೆನಿಯೊಂದು ಈ ಆ್ಯಪ್ ತಯಾರಿಸಿದೆ. ಗಮನಾರ್ಹ ಸಂಗತಿಯೆಂದರೇ ಬಳಕೆದಾರರು ಪ್ಲೇ ಸ್ಟೋರ್ ಮತ್ತು ಇತರ ಕಡೆಗಳಿಂದ ಇನ್ ಸ್ಟಾಲ್ ಮಾಡಿಕೊಂಡ ಆ್ಯಪ್ ಗಳನ್ನು ಮಾತ್ರ ಗುರುತಿಸುತ್ತದೆಯೇ ಹೊರತು ಇನ್ ಬಿಲ್ಟ್ (ಚೀನಾ ಮೊಬೈಲ್ ಗಳಲ್ಲಿ ಮೊದಲೇ ಇನ್ ಸ್ಟಾಲ್ ಆಗಿರುವ ) ಆ್ಯಪ್ ಗಳನ್ನು ಪತ್ತೆಹಚ್ಚುವುದಿಲ್ಲ.

ಚೀನಾದ ಹಲವು ತಂತ್ರಜ್ಞಾನ ಕಂಪೆನಿಗಳಿಗೆ ಭಾರತವೇ ಆದಾಯದ ಮೂಲವಾಗಿದೆ.  ಇದೀಗ ಹಲವು ಚೀನಾ ಮೂಲದ ಅಪ್ಲಿಕೇಶನ್ ಗಳು ಭಾರೀ ಪ್ರಮಾಣದಲ್ಲಿ ಅನ್ ಇನ್ ಸ್ಟಾಲ್ ಆಗುತ್ತಿದ್ದು ಇದಕ್ಕೆ ರಿಮೂವ್ ಚೀನಾ ಆ್ಯಪ್ ಅಪ್ಲಿಕೇಶನ್ ವೇದಿಕೆ ಒದಗಿಸಿರುವುದು ಸುಳ್ಳಲ್ಲ.   ಅದಾಗ್ಯೂ ನಾವು ಶೈಕ್ಷಣಿಕ ಉದ್ದೇಶಕ್ಕಾಗಿ ಈ ಆ್ಯಪ್ ಅಭಿವೃದ್ಧಿ ಪಡಿಸಿದ್ದೇವೆಯೇ ಹೊರತು ಬಲವಂತವಾಗಿ ಅಪ್ಲಿಕೇಶನ್ ಗಳನ್ನು  ಅನ್ ಇನ್ ಸ್ಟಾಲ್ ಮಾಡಲು ಅಲ್ಲ. ಪ್ಲೇಸ್ಟೋರ್ ನಲ್ಲಿರುವ ಅಪ್ಲಿಕೇಶನ್ ಗಳು ಯಾವ ದೇಶಕ್ಕೆ ಸೇರಿವೆ ಎಂಬ ಮಾಹಿತಿಯನ್ನು ಬಳಕೆದಾರರಿಗೆ ತಿಳಿಸಲು ಇದು ಸಹಾಯಕ. ಇದು ಶಿಕ್ಷಣ ವಿಭಾಗಕ್ಕೆ ಸೇರಿದ್ದು, ವಾಣಿಜ್ಯ ಉದ್ದೇಶಕ್ಕಾಗಿ ಅಲ್ಲ ಎಂದು ಕಂಪೆನಿ ಹೇಳಿಕೊಂಡಿದೆ.

ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆ್ಯಪ್ ಆಗಿ ಬದಲಾಗಿತ್ತು. ಆದರೇ ಕಳೆದ 2/3 ವಾರಗಳಿಂದ  #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್ ಗಳು ಏಕಾಏಕಿ ಟ್ರೆಂಡ್ ಸೃಷ್ಟಿಸಿದ್ದವು.  ಇದಕ್ಕೆ ಕಾರಣ ವ್ಯಕ್ತಿಯೊಬ್ಬರು ಮಾಡಿದ ಪೋಸ್ಟ್. ಈ ವಿಡಿಯೋಗಳಿಗೆ ಭಾರೀ ಆಕ್ಷೇಪ ಕೇಳಿಬಂದಿದ್ದು ಮಾತ್ರವಲ್ಲದೆ ಯೂಟ್ಯೂಬ್ ಮತ್ತು ಟಿಕ್ ಟಾಕ್ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಪರಿಣಾಮವೆಂಬಂತೆ ಪ್ಲೇಸ್ಟೋರ್ ನಲ್ಲಿ ಟಿಕ್ ಟಾಕ್ ರೇಟಿಂಗ್ ಭಾರೀ ಕುಸಿತ ಕಂಡಿದ್ದು. ಈ ಮೊದಲು 4.6 ರಷ್ಟಿದ್ದ ರೇಟಿಂಗ್ 1.2ಕ್ಕೆ ಇಳಿದಿತ್ತು. ಆದರೇ ಗೂಗಲ್ ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಆದ್ದರಿಂದ ಮತ್ತೆ ಟಿಕ್ ಟಾಕ್ ರೇಟಿಂಗ್ 4.4ಕ್ಕೆ ಏರಿಕೆಯಾಗಿದೆ.

-ಮಿಥುನ್ ಮೊಗೇರ

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.