ನೀವೂ ತಡರಾತ್ರಿಯವರೆಗೂ ಸ್ಮಾರ್ಟ್ ಪೋನ್‌ ಬಳಸುತ್ತೀರಾ ? : ನಿಮ್ಮಲ್ಲಿ ಈ ಸಮಸ್ಯೆಗಳಿರಬಹುದು


Team Udayavani, Apr 7, 2021, 10:55 AM IST

ನೀವೂ ತಡರಾತ್ರಿಯವರೆಗೂ ಸ್ಮಾರ್ಟ್ ಪೋನ್‌ ಬಳಸುತ್ತೀರಾ ? : ನಿಮ್ಮಲ್ಲಿ ಈ ಸಮಸ್ಯೆಗಳಿರಬಹುದು

ಸಾಂದರ್ಭಿಕ ಚಿತ್ರ

ಇದು ಸ್ಮಾರ್ಟ್ ಫೋನ್ ಯುಗ. 2021 ರ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಅಂದಾಜು 760 ಮಿಲಿಯನ್ ಜನರು ಮೊಬೈಲ್ ಬಳಸುತ್ತಿದ್ದಾರೆ. ಮೊದಮೊದಲು ಫೋನ್ ಕರೆಗಳಿಗೆ ಸೀಮಿತವಾಗಿದ್ದ ಮೊಬೈಲ್ ಗಳು, ಸ್ಮಾರ್ಟ್ ಪೋನ್ ಗಳು ಬಂದ ನಂತರ ಮನರಂಜನೆಯ ಸಾಧನವಾಗಿ ಬದಲಾಗಿವೆ. ಇದರ ಮೂಲಕ ಪ್ರತಿನಿತ್ಯ ಕರೆ, ಸಂದೇಶ, ವಿಡಿಯೋ ಕರೆ, ಸಾಮಾಜಿಕ ಜಾಲತಾಣಗಳ ಬಳಕೆ ಮುಂತಾದವುಗಳ ಕ್ರಿಯೆಯಲ್ಲಿ ಜನರು ನಿರತರಾಗಿದ್ದಾರೆ.

ಇಂದಿನ ಕಾಲಮಾನದಲ್ಲಿ ಸ್ಮಾರ್ಟ್ ಫೋನ್ ಗಳಿಂದ ಎಷ್ಟು ಉಪಯೋಗವಿದೆಯೋ ಅಷ್ಟೇ ಪ್ರಮಾಣದಲ್ಲಿ ಅಪಾಯಕಾರಿ ಅಂಶಗಳು ಅಡಗಿವೆ.  ಓದಿನ ಕಡೆ ಗಮನಹರಿಸಬೇಕಾದ ಹಲವು ಮಕ್ಕಳು, ಗೇಮಿಂಗ್ ಆಡುವುದರಲ್ಲಿ ನಿರತರಾಗಿದ್ದಾರೆ. ಭವಿಷ್ಯಕ್ಕೆ ಭದ್ರಬುನಾದಿಯನ್ನು ಹಾಕಿಕೊಳ್ಳಬೇಕಾದ ಯುವಕ ಯುವತಿಯರು ಸ್ಮಾರ್ಟ್ ಫೋನ್ ಎಂಬ ಮಾಯಾಜಾಲಕ್ಕೆ ಸಿಲುಕಿದ್ದಾರೆ.  ಹಿರಿಯರು ಕೂಡ ಸ್ಮಾರ್ಟ್ ಯುಗಕ್ಕೆ ತಮ್ಮನ್ನು ತಾವು ಒಗ್ಗಿಸಿಕೊಂಡಿದ್ದಾರೆ.

ಕೋವಿಡ್ ಲಾಕ್ ಡೌನ್ ನಂತರದಲ್ಲಿ ನಮ್ಮ ದೇಶದಲ್ಲಿ ಪ್ರತಿನಿತ್ಯ ಕನಿಷ್ಠ 4.3 ಗಂಟೆ ಗಳ ಕಾಲ ಜನರು ಸ್ಮಾರ್ಟ್ ಫೋನ್ ನಲ್ಲೇ ಕಳೆಯುತ್ತಿದ್ದಾರೆ. ಇನ್ನು ಕೆಲವು ವರದಿಗಳ ಪ್ರಕಾರ ದಿನವೊಂದಕ್ಕೆ 7 ರಿಂದ 8 ಗಂಟೆಗಳ ಕಾಲವೂ ಮೊಬೈಲ್ ಬಳಸುವವರು ಇದ್ದಾರೆ. ರಾತ್ರಿ ಸಮಯದಲ್ಲೂ ಮೊಬೈಲ್ ಬಳಸುವವವರ ಸಂಖ್ಯೆ ಅಧಿಕವಾಗುತ್ತಿದೆ. ಅತೀಯಾದ ಮೊಬೈಲ್ ಬಳಕೆಯಿಂದ ಅನೇಕ ಕಾಯಿಲೆಗಳು ನಮಗರಿವಿಲ್ಲದಂತೆ ವಕ್ಕರಿಸಿಕೊಳ್ಳುತ್ತವೆ. ಮುಖ್ಯವಾಗಿ ಸ್ಮಾರ್ಟ್ ಫೋನ್ ನಿಂದ ಹೊರಸೂಸುವ ವಿಕಿರಣಗಳು ವ್ಯಕ್ತಿಯೊಬ್ಬರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ವರದಿ ತಿಳಿಸುತ್ತವೆ. ಹಾಗಾದರೆ ರಾತ್ರಿ ಸಮಯದಲ್ಲಿ ಸ್ಮಾರ್ಟ್ ಫೋನ್ ಬಳಸುವುದರಿಂದ ಯಾವೆಲ್ಲಾ ಅಪಾಯಗಳು ಎದುರಾಗುತ್ತವೆ ಎಂಬ ಮಾಹಿತಿ ಇಲ್ಲಿದೆ.

ಆತಂಕ ಮತ್ತು ಖಿನ್ನತೆಯಿಂದ ಬಳಲುವವರ ಪ್ರಮಾಣ ಹೆಚ್ಚಳ: ಸಾಮಾನ್ಯವಾಗಿ ಮೊಬೈಲ್‌ ಅನ್ನು ಹೆಚ್ಚಾಗಿ ಅವಲಂಬಿಸಿರುವುದು ಖಿನ್ನತೆಯ ಸಮಸ್ಯೆಗೆ ಕಾರಣವಾಗುತ್ತದೆ. ಕೆಲವೊಮ್ಮೆ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಳ್ಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಸಮೀಕ್ಷೆಯ ಪ್ರಕಾರ ವಿಡಿಯೋ ಗೇಮ್‌ ನಲ್ಲಿ ಸದಾ ತೊಡಗಿರುವವರಲ್ಲಿ ಆತಂಕ ಹೆಚ್ಚಾಗಿ ಕಂಡುಬರುತ್ತದೆ. ಸ್ನೇಹಿತರಿಂದ ದೂರಾಗುವುದು, ಸದಾ ಮೊಬೈಲ್‌ ತನ್ನ ಸಂಗಾತಿ ಎಂದು ಭಾವಿಸುವುದು ಖಿನ್ನತೆಗೆ ಎಡೆಮಾಡಿಕೊಡುತ್ತದೆ.

ಬೆನ್ನು ಹುರಿಯ ಸಮಸ್ಯೆ ತೀವ್ರಗೊಳ್ಳುತ್ತದೆ:  ಸಮೀಕ್ಷೆಯೊಂದರ ಪ್ರಕಾರ  ಶೇ.25 ರಷ್ಟು ಮೊಬೈಲ್‌ ಬಳಕೆದಾರರಲ್ಲಿ ಬೆನ್ನು ಹುರಿಯ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯ ಎಂಬಂತಾಗಿದೆ. 16 ರಿಂದ 24 ವರ್ಷದ ಯುವಕರು ಬೆನ್ನು ಹುರಿಯ ನೋವಿನಿಂದ ಹೆಚ್ಚಾಗಿ ಬಳಲುತ್ತಿದ್ದಾರೆ ಎಂಬುದನ್ನೂ ವರದಿ ತಿಳಿಸಿದೆ.

ನಿದ್ರಾಹೀನತೆ ಎಂಬ ಸಂಕಷ್ಟ: ಯುವಜನಾಂಗದಲ್ಲಿ ಹೆಚ್ಚಾಗಿ ಈ ಸಮಸ್ಯೆ ಕಂಡುಬರುತ್ತಿದೆ. ತಡರಾತ್ರಿಯವರೆಗೂ ಮೊಬೈಲ್‌ ಬಳಸುವುದು ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನುಂಟುಮಾಡುತ್ತದೆ. ಪ್ರತಿ ವ್ಯಕ್ತಿಯು ೬ ರಿಂದ ೮ ಗಂಟೆ ನಿದ್ರಿಸುವುದು ಉತ್ತಮ. ಸಮೀಕ್ಷೆಯೊಂದು  ಇಂದು ಶೇ. ೬೮% ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

ಕಣ್ಣಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಸಂಶೋಧನೆಯ ಪ್ರಕಾರ ಮೊಬೈಲ್‌ ಮೊಬೈಲ್‌ ಡಿಸ್‌ ಪ್ಲೇಯಿಂದ ಹೊರಹೊಮ್ಮುವ ಬೆಳಕು ಕಣ್ಣಿನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡುತ್ತದೆ. ಈ ಬೆಳಕು ರೆಟಿನಾದ ಮೇಲೆ ನೇರವಾಗಿ ಬೀಳುವುದರಿಂದ ಕಣ್ಣಿಗೆ ಹೆಚ್ಚಿನ ಒತ್ತಡ ಉಂಟಾಗುತ್ತದೆ.

ಒತ್ತಡದ ಸಮಸ್ಯೆ: ಮೊಬೈಲ್‌ ನ ನಿರಂತರ ಬಳಕೆಯಿಂದ  ಅಥವಾ ಸತತವಾಗಿ ಬರುವ ಕರೆ, ಸಂದೇಶ, ನೋಟಿಫಿಕೇಶನ್‌ ಗಳಿಂದ ಹೆಚ್ಚಿನ ಜನರು ಮಾನಸಿಕ ಒತ್ತಡಕ್ಕೆ ಸಿಲುಕುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ಕಿವುಡುತನದ ಸಮಸ್ಯೆ: ವಿಪರೀತ ಫೋನ್‌ ಕರೆಗಳಲ್ಲಿ ತೊಡಗಿಕೊಳ್ಳುವುದು ಮತ್ತು ಇಯರ್‌ ಫೋನ್‌ ಗಳಿಂದ ಬರುವ ಹೆಚ್ಚಿನ ಶಬ್ದದಿಂದ ಕಿವುಡುತನ ಉಂಟಾಗುತ್ತದೆ. ಅಮೆರಿಕವೊಂದರಲ್ಲೇ ೨೬ ಮಿಲಿಯನ್‌ ಜನರು ಈ ಸಮಸ್ಯೆಗೆ ತುತ್ತಾಗಿದ್ದಾರೆ ಎಂದು ಸಮೀಕ್ಷೆಯೊಂದರ ವರದಿ ತಿಳಿಸಿದೆ.

ರೇಡಿಯೇಷನ್ ಅಪಾಯ: ಮೊಬೈಲ್‌ ನಿಂದ ಹೊರಹೊಮ್ಮುವ ತರಂಗಗಳು ಅಥವಾ ವಿಕಿರಣಗಳು ಮನುಷ್ಯನ ಮೆದುಳಿನ ಮೇಲೆ ನೇರವಾದ ಪರಿಣಾಮ ಬೀರುತ್ತದೆ. ಇದು ಹಲವು ಸಮಸ್ಯೆಗೆಳಿಗೆ ಎಡೆಮಾಡಿಕೊಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಇದರ ಹೊರತಾಗಿಯೂ ಸ್ಮಾರ್ಟ್‌ ಫೋನ್‌ ಬಳಕೆಯಿಂದ ಹಲವು ಸಮಸ್ಯೆಗಳು ಎದುರಾಗುತ್ತದೆ. ಸಮಾಜದೊಂದಿಗೆ ಬೆರೆಯುವುದು ಕಡಿಮೆಯಾಗುತ್ತದೆ.  ವ್ಯಕ್ತಿಯೊಬ್ಬನಿಗೆ ಏಕಾಂಗಿತನ ಕಾಡಲು ಆರಂಭವಾಗುತ್ತದೆ. ಮುಖ್ಯವಾಗಿ ಖಾಸಗಿ ಅಥವಾ ವ್ಯಯಕ್ತಿಕ ಮಾಹಿತಿಗಳ ಸೋರಿಕೆಯನ್ನು ಅಲ್ಲಗಳೆಯುವಂತಿಲ್ಲ. ಹಿತಮಿತವಾದ ಸ್ಮಾರ್ಟ್‌ ಫೋನ್‌ ಬಳಕೆಯಿಂದ ಉತ್ತಮ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಯನ್ನು ಗಳಿಸಿಕೊಳ್ಳಬಹುದು.

 

 ಸಂಗ್ರಹ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.