ಪಂಜಾಬ್ ಲೋಕಸಭಾ ಉಪಚುನಾವಣೆ; AAPಗೆ ಸೋಲು, ಶಿರೋಮಣಿಯ ಸಿಮ್ರಂಜಿತ್ ಜಯಕ್ಕೆ ವಿರೋಧವೇಕೆ?

ಆಮ್ ಆದ್ಮಿ ಪಕ್ಷದ ಗುರ್ಮೈಲ್ ಸಿಂಗ್ ಅವರನ್ನು 5822 ಮತಗಳ ಅಂತರದಿಂದ ಪರಾಜಯಗೊಳಿಸಿದ್ದರು.

Team Udayavani, Jun 28, 2022, 1:37 PM IST

ಪಂಜಾಬ್ ಲೋಕಸಭಾ ಉಪಚುನಾವಣೆ; AAPಗೆ ಸೋಲು, ಶಿರೋಮಣಿಯ ಸಿಮ್ರಂಜಿತ್ ಜಯಕ್ಕೆ ವಿರೋಧವೇಕೆ?

ಪಂಜಾಬ್ ನ ಸಂಗ್ರೂರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಗೆಲುವು ಸಾಧಿಸಿದ್ದು, ತಾನು ಜಯಗಳಿಸಲು ಖಲಿಸ್ತಾನಿ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಸಿದ್ಧಾಂತವೇ ಕಾರಣ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಾಹನಗಳು ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಶಿರೋಮಣಿ ಅಕಾಲಿದಳದ (ಅಮೃತಸರ್) ಅಧ್ಯಕ್ಷ ಸಿಮ್ರಂಜಿತ್ ಸಿಂಗ್ ಮಾನ್, ಇದು ನಮ್ಮ ಪಕ್ಷದ ಕಾರ್ಯಕರ್ತರ ಗೆಲುವು ಮತ್ತು ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಸಿದ್ಧಾಂತದ ಪಾಠಗಳಿವೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.ಸಂಗ್ರೂರ್ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹುಟ್ಟೂರಾಗಿದ್ದು, ಈ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳದ ಸಿಮ್ರಂಜಿತ್ ಸಿಂಗ್ ತನ್ನ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಗುರ್ಮೈಲ್ ಸಿಂಗ್ ಅವರನ್ನು 5822 ಮತಗಳ ಅಂತರದಿಂದ ಪರಾಜಯಗೊಳಿಸಿದ್ದರು.

ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ದೌರ್ಜನ್ಯಗಳ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುವುದಾಗಿ ಮಾನ್ ಗೆಲುವಿನ ನಂತರ ಪ್ರತಿಕ್ರಿಯೆ ನೀಡಿದ್ದು, ಬಿಹಾರ ಮತ್ತು ಛತ್ತೀಸ್ ಗಢದಲ್ಲಿ ಬುಡಕಟ್ಟು ಜನಾಂಗದ ಹತ್ಯೆಯ ಕುರಿತು ಮಾತನಾಡುವುದಾಗಿ ತಿಳಿಸಿದ್ದಾರೆ.

ಸಿಮ್ರಂಜಿತ್ ಸಿಂಗ್ ಮಾನ್ ಗೆಲುವಿಗೆ ಕಾಂಗ್ರೆಸ್ ಪಕ್ಷದ ಸುರ್ಜೇವಾಲಾ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪಂಜಾಬ್ ನಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವ ಕಳೆದುಕೊಂಡಿದ್ದು, ಇನ್ನು ಭವಿಷ್ಯದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆಗಳ ತಾಣವಾಗಲಿದೆಯೇ ಎಂಬ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಯಾರೀತ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ:

ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಧಾರ್ಮಿಕ ಮುಖಂಡನಾಗಿದ್ದ. ಬಳಿಕ ಪಾಕ್ ಬೆಂಬಲಿತ ಪ್ರತ್ಯೇಕ ಖಲಿಸ್ತಾನಿ ರಾಜ್ಯದ ಅಭಿಯಾನಕ್ಕೆ ಕೈಜೋಡಿಸುವ ಮೂಲಕ 1982ರಲ್ಲಿ ಸಿಖ್ಖರ ಪವಿತ್ರ ಗೋಲ್ಡನ್ ಟೆಂಪಲ್ ಕಾಂಪ್ಲೆಕ್ಸ್ ನಲ್ಲಿ ತನ್ನ ಅನುಯಾಯಿಗಳ ಜತೆ ಶಸ್ತ್ರಾಸ್ತ್ರದೊಂದಿಗೆ ವಾಸ್ತವ್ಯ ಹೂಡಿದ್ದ. ಇದೊಂದು ಉಗ್ರ ಕೃತ್ಯ ಎಂದು ಘೋಷಿಸಿದ್ದ ಪ್ರಧಾನಿ ಇಂದಿರಾ ಗಾಂಧಿ ಆಪರೇಶನ್ ಬ್ಲೂ ಸ್ಟಾರ್ ಸೇನಾ ಕಾರ್ಯಾಚರಣೆ ಮೂಲಕ 1984ರಲ್ಲಿ ಭಿಂದ್ರನ್ ವಾಲ್ ಹಾಗೂ ಇತರರನ್ನು ಹತ್ಯೆಗೈಯಲಾಗಿತ್ತು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.