ಪ್ರವಾಸಿಗರ ಸ್ವರ್ಗ ಅಂಬೋಲಿ ಜಲಪಾತ


Team Udayavani, May 30, 2021, 10:30 AM IST

456543354444444

ಮಳೆಗಾಲ ಆರಂಭವಾದ್ರೆ ಸಾಕು ಜಲಪಾತಗಳತ್ತ ಪ್ರವಾಸಿಗರು ಮುಖ ಮಾಡತ್ತಾರೆ. ಅದರಲ್ಲೂ ಮೂರು ರಾಜ್ಯಗಳ ಗಡಿಯಲ್ಲಿ ಇರುವ ಆ ಚಲುವೆಯನ್ನ ಕಣ್ಣತ್ತುಂಬಿ ನೋಡಲು ಜನಸಾಗರವೇ ಹರಿದು ಬರುತ್ತದೆ. ಅವಳ ಸೌಂದರ್ಯದ ಸೊಬಗಿನಲ್ಲಿ ಪ್ರತಿಯೊಬ್ಬರು ಮೈಮರೆತು ಹೋಗುತ್ತಾರೆ. ಅದುವೇ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಅಂಬೋಲಿ ಜಲಪಾತ.

ಹೌದು, ಈ ಜಲಪಾತದ ಸೌಂದರ್ಯವೇ ಅಂತಹದು. ಅಂಬೋಲಿ ಜಲಪಾತ ತುಂಬಾ ವಿಶೇಷವಾಗಿದೆ. ಅಂಬೋಲಿಯ ವೈಯಾರವನ್ನ, ಅವಳ ಸೌಂದರ್ಯವನ್ನು. ಬೆಟ್ಟದಿಂದ ಕೆಳಕ್ಕೆ ಧುಮ್ಮುಕ್ಕು ನರ್ತನವನ್ನ ನಾವು ಸ್ವಂಯ ಸ್ಪರ್ಶಿಸಿ ಆನಂದಿಸಬಹುದು.

ಅಂಬೋಲಿ ಫಾಲ್ಸ್ ವರ್ಷವಿಡೀ ಇದು ಬಹುತೇಕ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತದೆ. ಮಳೆಗಾಲದಲ್ಲಂತೂ ಹಾಲಿನ ನೊರೆಯಂತೆ ಧುಮುಕುವ ಜಲಪಾತ ಹಾಗೂ ಸುತ್ತಲಿನ ಸುಂದರವಾದ ಹಚ್ಚ ಹಸಿರು ಎಂಥವರ ಕಣ್ಮನಗಳನ್ನೂ ಸೆಳೆಯುತ್ತದೆ. ಮಳೆಗಾಲದಲ್ಲಿ ಸುತ್ತಲಿನ ಪ್ರದೇಶವೆಲ್ಲ ಮಂಜು ಕವಿದಂತಿದ್ದು ನೋಡಲು ಅತ್ಯಂತ ರಮಣೀಯವಾಗಿರುತ್ತದೆ.

ಈ ಜಲಪಾತವೂ ಮಹಾರಾಷ್ಟ್ರ ರಾಜ್ಯದ ಸಿಂದುರ್ಗ ಜಿಲ್ಲೆಯ ಸಾವಂತವಾಡಿ ತಾಲೂಕಿನ ಅಂಬೋಲಿ ಗ್ರಾಮದಲ್ಲಿದೆ. ಪಶ್ಚಿಮ ಘಟ್ಟದ ಸಾಲಿನಲ್ಲಿ ಈ ಮೋಹಕ ಚಲುವೆ ಇದ್ದಾಳೆ. ಪಶ್ಚಿಮ ಘಟ್ಟದ ಬೆಟ್ಟಗಳ ಸಾಲಿನ ನೂರಾರು ಚಿಕ್ಕು-ಪುಟ್ಟ ಜಲಪಾತಗಳು ನಮಗೆ ನೋಡಲು ಸಿಗುತ್ತವೆ.. ಆದ್ರೆ ಈ ಅಂಬೋಲಿ ಜಲಪಾತ ವಿಶೇಷವೆಂದ್ರೆ ಅದು ರಸ್ತೆಗೆ ಹತ್ತಿಕೊಂಡಿದೆ. ಸುಮಾರು 40 ಅಡಿ ಎತ್ತರ ಬೆಟ್ಟದಿಂದ ಜಲದಾರೆ ಭೂಮಿಯನ್ನ ಸ್ಪರ್ಶಿಸುವ ದೃಶ್ಯವೇ ಇಲ್ಲಿ ಮನಮೋಹಕ. ಎತ್ತರದ ಬೆಟ್ಟದಿಂದ ಶುದ್ಧ ಹಾಲು ಬೀಳುತಿರುವಂತೆ ಭಾಸವಾಗುತ್ತದೆ.

ಅಂಬೋಲಿಯಲ್ಲಿರುವ ಈ ಜಲಪಾತಗಳ ಸ್ವರ್ಗವಷ್ಟೇ ಅಲ್ಲ ಬೆಟ್ಟದ ಮೇಲೆ ಆವರಿಸುವ ದಟ್ಟ ಮಂಜು ಸಹ ನೋಡುಗರ ಕಣ್ಮನ ಸೆಳೆಯುತ್ತದೆ. ಸಹ್ಯಾದ್ರಿ ಶ್ರೇಣಿಗಳಲ್ಲಿರುವ ಈ ಅಂಬೋಲಿ ಕಣಿವೆಯಲ್ಲಿ ಸಾಗುತ್ತಿದ್ದರೆ ಆ ಮಂಜಿನ ಚಿತ್ತಾರ, ಬೆಟ್ಟಗಳ ಸಾಲಿನಲ್ಲಿ ಜಲಪಾತದ ಹರ್ಷೋದ್ಘಾರ ಈ ಸುಂದರ ದೃಶ್ಯಕಾವ್ಯವನ್ನು ಬಣ್ಣಿಸಲು ಪದಗಳೇ ಸಾಲದು.

ತಲುಪುದು ಹೇಗೆ..?

ಅಂಬೋಲಿ ಫಾಲ್ಸ್​​ ಎಂಜಾಯ್​ ಮಾಡಬೇಕು ಅಂದ್ರೆ ರಸ್ತೆ ಮೂಲಕವೇ ಸಾಗಬೇಕು. ಬೆಳಗಾವಿಯಿಂದ ಸರಿ ಸುಮಾರು 72 ಕಿಲೋಮೀಟರ್​ ಇದೆ. ಅಂದಾಜು 2 ಗಂಟೆಗಳ ಪ್ರಯಾಣ. ಬೆಂಗಳೂರಿನಿಂದ 576 ಕಿಲೋಮೀಟರ್​ ದೂರ. ಸುಮಾರು 10 ಗಂಟೆಗಳ ಜರ್ನಿ. ಬೆಂಗಳೂರಿನಿಂದ ಬೆಳಗಾವಿಗೆ ಸಾಕಷ್ಟು ವಾಹನಗಳ ವ್ಯವಸ್ಥೆ ಇದೆ. ಬೆಳಗಾವಿಯಿಂದಲೂ ಅಂಬೋಲಿ ತಲುಪಲು ಸುಲಭಕ್ಕೆ ಸಿಗುವ ವ್ಯವಸ್ಥೆ ಇದೆ. ಪ್ರವಾಸಿಗರು ಬೆಳಗಾವಿ ರಸ್ತೆ ಮಾರ್ಗ, ರೈಲು ಮಾರ್ಗ ಮತ್ತು ವಿಮಾನದ ಮೂಲಕ ಆಗಮಿಸಿ, ಬೆಳಗಾವಿಯಿಂದ 65 ಕೀ.ಮೀಟರ್ ರಸ್ತೆ ಮಾರ್ಗವಾಗಿ ಅಂಬೋಲಿ ತಲುಪಬಹುದು.

ಇನ್ನು ಬೇರೆ ರಾಜ್ಯದ ಪ್ರವಾಸಿಗರು ಗೋವಾ ಮತ್ತು ಸಾವಂತವಾಡಿ ಮೂಲಕ ಬಸ್, ವಿಮಾನ ಮತ್ತು ರೈಲಿನಲ್ಲಿ ಅಂಬೋಲಿಯನ್ನು ತಲುಪಬಹುದು. ಗೋವಾ ಹತ್ತಿರದ ವಿಮಾನ ನಿಲ್ದಾಣವಾಗಿದ್ದು ಅಲ್ಲಿಂದ ಅಂಬೋಲಿ ಸುಮಾರು 70 ಕಿಮೀ.ದೂರದಲ್ಲಿದೆ. ಸಾವಂತವಾಡಿ ಹತ್ತಿರದ ರೈಲು ನಿಲ್ದಾಣ. ಅಲ್ಲಿಂದ ಟ್ಯಾಕ್ಸಿ, ಕ್ಯಾಬ್ ಮೂಲಕ ಅಂಬೋಲಿ ತಲುಪಬಹುದು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.