ಕಾಲಗರ್ಭ ಸೇರಿದರೆ ‘ದುರುಗ ಮುರುಗಿ’ಯರು ?

ಇದಕ್ಕೆ ಪ್ರತಿಯಾಗಿ ಮೊರಕ್ಕೆ ಭಂಡಾರ ಇಟ್ಟು ಮರಳಿ ಕೊಡುತ್ತಿದ್ದರು. ಆ ಭಂಡಾರವನ್ನು ನಂತರ ಮನೆ ಮಕ್ಕಳಿಗೆಲ್ಲಾ ಹಚ್ಚುವ ಪರಂಪರೆಯಿತ್ತು.

ಗಣೇಶ್ ಹಿರೇಮಠ, Apr 13, 2021, 6:11 PM IST

cgdgds

ನಾವು ಚಿಕ್ಕವರಿದ್ದಾಗ ನಮ್ಮ ಹಳ್ಳಿಗಳಲ್ಲಿ ‘ದುರುಗ ಮುರುಗಿ’ಯರ ಆಗಮನವಾಗುತ್ತಿತ್ತು. ಆ ಹೆಣ್ಣು ಮಗಳು ಬಡಿಯುತ್ತಿದ್ದ ವಾದ್ಯದಿಂದ ಹೊಮ್ಮುತ್ತಿದ್ದ ‘ದರ್ರಬುರ್ರ’ಎನ್ನುವ ಶಬ್ಧ ನಮ್ಮ ಕಿವಿಗೆ ಬೀಳುವುದಷ್ಟೆ ತಡ ನಾವು ಎಲ್ಲೆ ಇದ್ದರೂ ಅವರ ಎದುರು ಹಾಜರಾಗುತ್ತಿದ್ದೇವು.

ತಲೆಮೇಲೆ ಮುರಗಮ್ಮನ ಮೂರ್ತಿಯನ್ನು ಹೊತ್ತು ಡೋಲಿನಾಕಾರದ ವಾದ್ಯವನ್ನು ಭಾರಿಸುವ ಹೆಣ್ಣುಮಗಳು ‘ಮುರಗಮ್ಮ ಬಂದಾಳ್ರೆಯವ್ವಾ, ದಾನ ಮಾಡ್ರಿ’ ಎಂಬ ಧ್ವನಿಯೊಂದಿಗೆ ಮನೆ ಮನೆಗೆ ಸಾಗುತ್ತಿದ್ದಳು. ಜೊತೆಗೆ ಕೈಯಲ್ಲಿ ಬಾರಕೋಲು ಹಿಡಿದು ಅಬ್ಬರಿಸುವ ಪೋತರಾಜ ತನ್ನದೇ ಅವತಾರದಲ್ಲಿ ಚಾಟಿ ಬೀಸುತ್ತ ಎದುರಾದವರಲ್ಲಿ ಬೇಡುತ್ತ, ಕೆಲವೊಮ್ಮೆ ಆ ಬಾರಕೋಲಿನಿಂದ ತನ್ನ ಶರೀರವನ್ನು ದಂಡಿಸಿಕೊಂಡು ಭಿಕ್ಷೆ ಬೇಡುತ್ತಿದ್ದ.

ಹೀಗೆ ಹಳ್ಳಿ ಹಳ್ಳಿ ಅಲೆದು ಹೊಟ್ಟೆ ಹೊರೆದುಕೊಳ್ಳುವ ಅಲೆಮಾರಿ ಜನಾಂಗದವರೇ ದುರುಗ ಮುರುಗಿಯರು. ಕೆಲ ಕಡೆ ಇವರನ್ನು ಬುರ ಬುರ ಪೋಚಮ್ಮನವರೆಂದೂ, ಮುರಗಮ್ಮದವರೆಂದೂ ಸಹ ಕರೆಯುತ್ತಾರೆ. ವಿಶಿಷ್ಟ ಜನಪದ ಕಲೆ,ಮುರಗಮ್ಮನ ರೂಪದ ಈ ದೇವತೆ ಒಂದು ಕಡೆ ನೆಲೆ ನಿಲ್ಲುವವಳಲ್ಲ, ಊರೂರು ಸುತ್ತುವವಳು. ತಮ್ಮ ದೇವತೆಯನ್ನು ಪೆಟ್ಟಿಗೆಯಲ್ಲಿಟ್ಟು, ಅದನ್ನು ಹೊತ್ತ ಸ್ತ್ರೀ ‘ಉರುಮೆ’ ಅಥವಾ ‘ಅರೆ’ ವಾದ್ಯದ ಬಾರಿಸುತ್ತಿದ್ದಳು. ಆ ಬಡಿತಕ್ಕೆ ತಕ್ಕಂತೆ ಅವಳೊಂದಿಗಿನ ಪೋತರಾಜನ ವೇಷದ ಪುರುಷ ಕುಣಿಯುತ್ತ ಗತ್ತಿನಿಂದ ಹೆಜ್ಜೆ ಹಾಕುತ್ತ ಚಾವಟಿಯಿಂದ ತನ್ನ ಬರಿಮೈಗೆ ಹೊಡೆದುಕೊಳ್ಳುತ್ತಿದ್ದ. ಈ ದೃಶ್ಯ ನೋಡಲು ನಮಗೆ ಭಯವೆನ್ನಿಸುತ್ತಿದ್ದರು. ತದೇಕ ಚಿತ್ತದಿಂದ ಕಣ್ಣು ತುಂಬಿಕೊಳ್ಳುತ್ತಿದ್ದೇವು.

ಅರ್ಧಗಂಟೆಯ ವರೆಗೆ ಬೀದಿಯಲ್ಲಿ ವಾದ್ಯ ಬಾರಿಸಿ, ಚಾಟಿಯಿಂದ ಹೊಡೆದುಕೊಳ್ಳುತ್ತಿದ್ದ ದುರಗ ಮುರಗಿಯರಿಗೆ ನಮ್ಮೂರಿನ ಜನ ಭಕ್ತಿಯಿಂದ ಮೊರದಲ್ಲಿ ದವಸ ಧಾನ್ಯಗಳು, ಜೋಳ, ಕಾಳುಗಳನ್ನು ಅರ್ಪಿಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಮೊರಕ್ಕೆ ಭಂಡಾರ ಇಟ್ಟು ಮರಳಿ ಕೊಡುತ್ತಿದ್ದರು. ಆ ಭಂಡಾರವನ್ನು ನಂತರ ಮನೆ ಮಕ್ಕಳಿಗೆಲ್ಲಾ ಹಚ್ಚುವ ಪರಂಪರೆಯಿತ್ತು.

ಮುರಗಮ್ಮ ಆಗಾಗ ಊರಿಗೆ, ಮನೆಗೆ ಬಂದು ಹೋಗುವುದರಿಂದ ರೋಗ ರುಜಿನಗಳು ದೂರವಾಗುತ್ತವೆ ಎಂದು ಜನ ನಂಬುತ್ತಿದ್ದರು. ಆದರೆ, ಇಂದು ‘ದುರಗ ಮುರುಗಿ’ಯರ ಆಗಮನ ಇಲ್ಲವಾಗಿದೆ. ಆ ಹೆಣ್ಣು ಮಗಳ ವಾದ್ಯದಿಂದ ಕೇಳಿ ಬರುತ್ತಿದ್ದ ‘ದರ್ರಬುರ್ರ’ ಎಂಬ ಶಬ್ದ ಕೇಳಿ ವರ್ಷಗಳೇ ಗತಿಸಿವೆ. ಇಂದು ವೈಜ್ಞಾನಿಕತೆ ಎನ್ನುವುದು ಪ್ರತಿ ಹಳ್ಳಿಗಳಲ್ಲಿಯೂ ಆವರಿಸಿಕೊಂಡಿದೆ. ಕೆಲವೊಂದು ಆಚರಣೆಗಳು ಇತಿಹಾಸದ ಪುಟ ಸೇರುತ್ತಿವೆ ಎಂಬುದಕ್ಕೆ ದುರುಗು ಮುರಗಿಯರು ಮರೆಯಾಗಿರುವುದೇ ಸಾಕ್ಷಿ ಎಂದು ಹೇಳಬಹುದು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.