ಮೈದುಂಬಿ ಧುಮ್ಮುಕ್ಕುತ್ತಿದೆ ಗೋಕಾಕ್ ಜಲಪಾತ


Team Udayavani, Jun 20, 2021, 8:30 AM IST

01

ಅಮೆರಿಕದ ಜಗತ್ಪ್ರಸಿದ್ಧ ನಯಾಗರ ಜಲಪಾತಕ್ಕೆ ಹೋಲಿಸಲಾಗುವ ಗೋಕಾಕ್‌ ಜಲಪಾತ ಬೆಳಗಾವಿಯಿಂದ 58 ಕಿ.ಮೀ ಹಾಗೂ ಗೋಕಾಕ್‌ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಮಳೆಗಾಲ ಶುರುವಾಯಿತು ಎಂದರೆ ಈ ಜಲಪಾತ ಮೈದುಂಬಿ ಹರಿಯುತ್ತದೆ. ಇದೀಗ ಬೆಳಗಾವಿಯಲ್ಲಿ ಸತತ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಗೋಕಾಲ್ ಜಲಪಾತ ರುದ್ರ ರಮಣೀಯವಾಗಿ ಧುಮ್ಮುಕ್ಕುತ್ತಿದೆ.

ಈ ಜಲಪಾತದಲ್ಲಿ ಘಟಪ್ರಭಾ ನದಿ 52 ಮೀ. ಎತ್ತರದಿಂದ ಧುಮ್ಮಿಕ್ಕಿ ಆಳ ಕಣಿವೆಗೆ ಬೀಳುತ್ತದೆ. ಈ ನಯನ ಮನೋಹರ ದೃಶ್ಯ ತುಂಬಾ ಸುಂದರವಾಗಿರುತ್ತದೆ. ಈ ಜಲಪಾತಕ್ಕಿಂತ ಸ್ವಲ್ಪ ಮುಂಚೆಯೇ ನದಿ ದಡಗಳ ಮೇಲೆ ಜನ ಸಂಚಾರಕ್ಕೆ ಅನುಕೂಲ ಕಲ್ಪಿಸಲು 201 ಮೀಟರ್‌ ಉದ್ದದ ತೂಗು ಸೇತುವೆ ನಿರ್ಮಿಸಲಾಗಿದೆ.

ಈ ಸೇತುವೆ ಮೇಲೆ ನಡೆಯುವುದೇ ಒಂದು ಥ್ರಿಲ್‌. ಈ ಜಲಪಾತದ ಬಳಿ ಒಂದು ಸುಂದರ ಗಾರ್ಡನ್‌ ಕೂಡಾ ಇದೆ. ಎಲ್‌ ಶೇಪ್‌ನಲ್ಲಿರುವ ಗೋಕಾಕ್‌ ಜಲಪಾತ ಕರ್ನಾಟಕದ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದು.

ಗೋಕಾಕ್ ಜಲಪಾತ ಉತ್ತರ ಕರ್ನಾಟಕದ ಜನಪ್ರಿಯ ಜಲಪಾತಗಳಲ್ಲಿ ಒಂದಾಗಿದೆ. ಗೋಕಾಕ್ ಜಲಪಾತವು ಹೆದ್ದಾರಿಗೆ ಹತ್ತಿರದಲ್ಲಿದೆ ಮತ್ತು ಪ್ರವೇಶಿಸಲು ಸುಲಭವಾಗಿದೆ.

ಘಟಪ್ರಭಾ ನದಿ ಕುದುರೆಯ ಲಾಳದ  ಆಕಾರದ ಬಂಡೆಯ ಮೇಲ್ಭಾಗದಿಂದ ಸುಮಾರು 52 ಮೀಟರ್ ಎತ್ತರದಿಂದ ಧುಮುಕಿದಾಗ ಗೋಕಾಕ್ ಜಲಪಾತವು ರೂಪುಗೊಳ್ಳುತ್ತದೆ. ಇತರ ಜಲಪಾತಗಳಿಗೆ ಹೋಲಿಸಿದರೆ ಗೋಕಾಕ ಜಲಪಾತ ಸಾಕಷ್ಟು ಅಗಲವಿದ್ದು (ಒಟ್ಟು 177 ಮೀಟರ್) ದೂರದಿಂದ ನೋಡಿದರೂ ತುಂಬಾ ರಮಣೀಯವಾಗಿ ಕಾಣಿಸುತ್ತದೆ ಮತ್ತು ಜಲಪಾತದ ಭೋರ್ಗೆರೆತ ದೂರದಿಂದಲೇ ಕೇಳಿಸುತ್ತದೆ.

ಹತ್ತಿರದಲ್ಲಿ ಇನ್ನೇನಿದೆ?

ಗೋಕಾಕ್ ಜಲಪಾತದ ಜೊತೆಗೆ ಗೋಡಚಿನಮಲ್ಕಿ ಜಲಪಾತಗಳು (ಗೋಕಾಕ್ ಜಲಪಾತದಿಂದ 13 ಕಿ.ಮೀ) ಮತ್ತು ಸೌಂಡಟ್ಟಿ ಯೆಲ್ಲಮ್ಮ (73 ಕಿ.ಮೀ) ಕ್ಷೇತ್ರಕ್ಕೆ ಭೇಟಿ ಕೊಡಬಹುದಾಗಿದೆ.

ಗೋಕಾಕ್ ಜಲಪಾತವನ್ನು ತಲುಪುವುದು ಹೇಗೆ?

ಗೋಕಾಕ್ ಜಲಪಾತ ಬೆಂಗಳೂರಿನಿಂದ 622 ಕಿ.ಮೀ ಮತ್ತು ಬೆಳಗಾವಿಯಿಂದ 62 ಕಿ.ಮೀ ದೂರದಲ್ಲಿದೆ. ಬೆಳಗಾವಿ ಹತ್ತಿರದ ವಿಮಾನ ನಿಲ್ದಾಣ ಮತ್ತು ಪ್ರಮುಖ ರೈಲು ನಿಲ್ದಾಣವಾಗಿದೆ. ಬೆಳಗಾವಿ ವಾಯು, ರೈಲು ಮತ್ತು ರಸ್ತೆಯ ಮೂಲಕ ಕರ್ನಾಟಕದ ಉಳಿದ ಭಾಗಗಳಿಗೆ ಉತ್ತಮ ಸಂಪರ್ಕ ಹೊಂದಿದೆ. ಬೆಳಗಾವಿಯಿಂದ ಟ್ಯಾಕ್ಸಿ ಪಡೆದು ಗೋಕಾಕ್ ಜಲಪಾತವನ್ನು ತಲುಪಬಹುದಾಗಿದೆ.

ರಜೆಯ ಮಜಾ ಸವಿಯಲು ಸುಂದರ ತಾಣ :

ಸ್ಥಳೀಯ ಜನರಿಗೆ ವೀಕೆಂಡ್ ಸುಂದರವಾಗಿ ಕಳೆಯಲು ಗೋಕಾಕ್ ಜಲಪಾತ ಸುಂದರವಾದ ಸ್ಥಳವಾಗಿದೆ. ಆದರೆ, ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಪ್ರವಾಸಿಗರಿಗೆ ನಿರ್ಬಂದ ಹೇರಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.