ದಟ್ಟ ಕಾನನದೊಳಗೊಂದು ವಿಭೂತಿ ಜಲಪಾತ


Team Udayavani, Jun 13, 2021, 7:55 AM IST

6821545

ಕರ್ನಾಟಕದ ಕಾಶ್ಮೀರ, ಜಲಪಾತಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಶುರುವಾಯಿತು ಎಂದರೆ ಮುಗಿಯಿತು. ಅಲ್ಲಲ್ಲಿ ಸಣ್ಣ-ಪುಟ್ಟ ಜಲಧಾರೆಗಳು ಹುಟ್ಟಿಕೊಳ್ಳುತ್ತವೆ. ಹಾಗೂ ವರ್ಷದ ಹನ್ನೆರಡು ತಿಂಗಳು ಧುಮ್ಮುಕ್ಕುವ ದೊಡ್ಡ ಜಲಪಾತಗಳು ಜೀವ ಕಳೆ ಪಡೆದುಕೊಳ್ಳುತ್ತವೆ.

ಪ್ರಕೃತಿ ಸೌಂದರ್ಯವನ್ನು ಮಡಿಲಲ್ಲಿ ತುಂಬಿಕೊಂಡಿರುವ ಈ ಜಿಲ್ಲೆಯಲ್ಲಿ ಮಳೆಗಾಲ ಕಳೆಯುವುದೇ ಒಂದು ಅದ್ಬುತ ಅನುಭವ. ಇಲ್ಲಿಯ ಮಳೆಯಲಿ ನೆನೆಯುವುದೇ ಒಂದು ತಹರದ ಖುಷಿ. ಅದರಲ್ಲೂ ಚಿಕ್ಕ ಪುಟ್ಟ ನದಿ ತೊರೆಗಳಿದ್ದರಂತು ಮುಗಿದೇ ಹೋಯಿತು ಅದರ ಸೌಂದರ್ಯ ಸೊಬಗು ವೈಯ್ಯಾರಗಳನ್ನು ನೋಡುತ್ತಾ ದಿನ ಕಳೆಯುವುದೇ ನಮಗೆ ತಿಳಿಯುವುದಿಲ್ಲ ಅದರಲ್ಲೂ ತುಂಬಿ ಹರಿಯುವ ಜಲಪಾತಗಳಿದ್ದರೆ ನಮಗೆ ಇನ್ನಷ್ಟು ಆನಂದ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ.

ಉತ್ತರ ಕನ್ನಡ (ಕಾರವಾರ) ಜಿಲ್ಲೆಯು ಕರ್ನಾಟಕ ರಾಜ್ಯದ ವಾಯವ್ಯ ದಿಕ್ಕಿನಲ್ಲಿ ನೆಲೆಸಿರುವ ಒಂದು ಕೊಂಕಣ ಜಿಲ್ಲೆಯಾಗಿದ್ದು ಮಲೆನಾಡು ಮತ್ತು ಸಹ್ಯಾದ್ರಿಗಳಿಗೆ ಹೊಂದಿಕೊಂಡು ತನ್ನ ಕಲೆ ಸಂಸ್ಕೃತಿ ಹಾಗೂ ಪ್ರವಾಸೋದ್ಯಮಗಳಿಂದ ಹೆಸರುವಾಸಿಯಾಗಿರುವ ಪ್ರದೇಶವಾಗಿದೆ. ಈ ಜಿಲ್ಲೆಯು ಕರ್ನಾಟಕದ ಕಾಶ್ಮೀರ ಎನ್ನುವ ಬಿರುದನ್ನು ಹೊಂದಿರುವುದರ ಜೊತೆಗೆ ಜಲಪಾತಗಳ ತವರು ಎಂಬ ಹೆಗ್ಗಳಿಕೆಗೂ ಸಹ ಪಾತ್ರವಾಗಿದೆ. ಪಶ್ಚಿಮ ಘಟ್ಟಗಳ ನಡುವೆ ಭವ್ಯ ಪರ್ವತ ಸಿರಿಗಳಲ್ಲಿ ನೆಲೆಸಿರುವ ಉತ್ತರ ಕನ್ನಡ ಜಿಲ್ಲೆಯು ಪ್ರವಾಸೋದ್ಯಮದ ದೃಷ್ಟಿಯಿಂದ ಹೆಚ್ಚಿನ ಮಹತ್ವವನ್ನು ಪಡೆದಿದ್ದು ಹಲವಾರು ಗಮ್ಯವಾದಂತಹ ಪ್ರವಾಸಿ ಆಕರ್ಷಣೆಗಳನ್ನು ಈ ಜಿಲ್ಲೆಯಲ್ಲಿ ನೋಡಬಹುದಾಗಿದೆ.  ಅದರಲ್ಲೂ ಮಳೆಗಾಲದಲ್ಲಿ ಜಲಪಾತಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದೆ ಒಂದು ಹಬ್ಬ.  ಇಂದು ನಾವು ಪ್ರಸಿದ್ಧ ವಿಭೂತಿ ಫಾಲ್ಸ್ ಬಗ್ಗೆ ತಿಳಿದುಕೊಳ್ಳೋಣ.

ಪ್ರಕೃತಿಯೇ ಹಾಗೆ ನಮಗೆ ಅರಿವಿಲ್ಲದೇ ನಮ್ಮೊಳಗೆ ಬೆರೆತಿರುತ್ತದೆ. ತನ್ನ ಮಡಿಲಲ್ಲಿ ಅನೇಕ ಕೌತುಕುತೆಗಳನ್ನು ಇರಿಸಿ ಹೆಜ್ಜೆಹೆಜ್ಜೆಗೂ ವಿಸ್ಮಯವನ್ನು ಸೃಷ್ಟಿಸುತ್ತಾ ಅದರ ನಡುವೆಯೇ ನಮಗೆ ಬೇಕಾದ ಎಲ್ಲವನ್ನು ನೀಡಿ ನಮ್ಮನ್ನು ಪೋಷಿಸುವುದಲ್ಲದೇ ತನ್ನದೇ ಸೃಷ್ಟಿಯಿಂದ ನಮ್ಮನ್ನು ಇನ್ನಷ್ಟು ಚಕಿತಗೊಳಿಸುತ್ತದೆ. ಅದರಲ್ಲಿ ಈ ಜಲಪಾತಗಳು ಒಂದು. ಪ್ರವಾಸಿಗರಿಗೆ ರಸದೌತಣ ನೀಡುವ ಈ ಜಲಪಾತಗಳು ನೋಡುಗರನ್ನು ರೋಮಾಂಚನಗೊಳಿಸುವುದಂತೂ ಸುಳ್ಳಲ್ಲ.

ವಿಭೂತಿ ಜಲಪಾತ

ಉತ್ತರ ಕನ್ನಡ ಜಿಲ್ಲೆಯ ವಿಶೇಷವಾದ ಜಲಪಾತಗಳಲ್ಲಿ ಇದು ಒಂದು. ಇದು ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿದ್ದು ಇದನ್ನು ಸರ್ವಋತು ಜಲಪಾತ ಎಂತಲೂ ಕರೆಯುತ್ತಾರೆ. ವರ್ಷಪೂರ್ತಿ ಹರಿಯುವ ಈ ಜಲಪಾತವು ನಿಸರ್ಗದ ನಿಗೂಡತೆಯನ್ನು ತನ್ನಲ್ಲಿ ಇರಿಸಿಕೊಂಡಿದೆ. ಇಲ್ಲಿ ಅಪರೂಪದ ಸಸ್ಯಗಳು ಮತ್ತು ವಿಶೇಷ ಜೀವ ವೈವಿಧ್ಯತೆಯನ್ನು ನಾವು ಕಾಣಬಹುದಾಗಿದೆ. ಇದು ದಟ್ಟವಾದ ಕಾಡಾಗಿದ್ದು, ಇಲ್ಲಿ ಕೇವಲ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಔಷಧಿ ಸಸ್ಯಗಳನ್ನು ಇಲ್ಲಿ ಕಾಣಬಹುದಾಗಿದೆ. ಇದು ಯಾಣದಿಂದ ಸೂಮಾರು 10 ರಿಂದ 12 ಕಿಮೀ ದೂರದಲ್ಲಿದೆ.

ಜಲಪಾತವು ೩೦ ಅಡಿ ಎತ್ತರದಲ್ಲಿದ್ದು, ಹಚ್ಚಹಸಿರಿನ ಕಾಡು, ಬಿದಿರಿನ ತೋಪು ಹಾಗು ಕಾಡುಹೂವುಗಳು ಎಲ್ಲೆಡೆ ಇವೆ. ಇದಕ್ಕೆ ಹತ್ತಿರವಿರುವ ಸುಣ್ಣದ ಕಲ್ಲಿನ ಬಂಡೆಯಿಂದಾಗಿ ಈ ಜಲಪಾತಕ್ಕೆ ಅದರ ಹೆಸರು ಬಂದಿದೆ ಎಂಬುದು ಸ್ಥಳೀಯರ ನಂಬಿಕೆ. ಸುಣ್ಣದ ಕಲ್ಲಿನ ಬಂಡೆಯಲ್ಲದೆ ಇನ್ನೂ ಎರಡು ಬೃಹದಾಕಾರದ ಬಂಡೆಗಳು ಈ ಜಲಪಾತದ ಸಾನಿಧ್ಯದಲ್ಲಿವೆ. ಈ ಜಲಪಾತವನ್ನು  ತಲುಪಲು ಮುಖ್ಯ ಜಲಪಾತದಿಂದ ಸುಮಾರು 2 ಕಿಮೀ ಗಳಷ್ಟು  ಉದ್ದದ ಕಾಲುದಾರಿ ಇದೆ. ಅಲ್ಲದೆ ಪ್ರವಾಸಿಗರಿಗಾಗಿ ಕಾಡುದಾರಿ ಇದ್ದು,ಈ ಮಾರ್ಗದ  ಬಲಕ್ಕೆ ಹೊಲ ಹಾಗೂ ಎಡಕ್ಕೆ ಅರಣ್ಯವನ್ನು ಕಾಣಬಹುದು.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇನ್ನೂ ಹಲವಾರು ಚಿಕ್ಕ ಚಿಕ್ಕ ಜಲಪಾತಗಳಿದ್ದು ಮಳೆಗಾಲದಲ್ಲಿ ಮಾತ್ರ ಕೆಲವೊಂದು ಕಾಣಸಿಗುತ್ತವೆ. ಸಾಮಾನ್ಯವಾಗಿ ಈ ಎಲ್ಲಾ ಜಲಪಾತಗಳು ಕಾನನದೊಳಗಿರುವ ಕಾರಣ ಮಳೆಗಾಲದಲ್ಲಿ ಉಂಬಳದ ಕಾಟವಿರುತ್ತದೆ ಆದ ಕಾರಣ ತುಸು ಜಾಗರೂಕತೆಯಿಂದ ತೆರಳುವುದು ಒಳಿತು.

 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.