‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು


Team Udayavani, Apr 15, 2021, 9:00 AM IST

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

ಕೆಲವೊಂದು ಹಾಡುಗಳು ಕೇಳಲು ತುಂಬಾ ಮಜಾವಾಗಿರುತ್ತವೆ. ಮತ್ತೆ ಮತ್ತೆ ಪ್ಲೇ ಮಾಡಿ ಕೇಳಿಸಿಕೊಳ್ಳುವಷ್ಟು ಇಂಪಾಗಿಯೂ ಟಪ್ಪಂಗುಚ್ಚಿಯಾಗಿಯೂ ಇರುತ್ತವೆ. ಆದರೆ ಹಾಡನ್ನು ಕೇಳುವ ಭರದಲ್ಲಿ ನಾವು ಅದರ ಸಾಹಿತ್ಯದ ಒಳಾರ್ಥವನ್ನು ಅರಿತುಕೊಳ್ಳಲು ಹೋಗುವುದೇ ಇಲ್ಲ. ಬರೀ ಹಾಡನ್ನು ಕೇಳುತ್ತಾ ಅರೆ ಕಣ್ಣು ಮುಚ್ಚಿ  ಅದರ ಮಾಂತ್ರಿಕತೆಯಲ್ಲೇ ಕಳೆದು ಹೋಗುತ್ತೇವೆ.

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ’.. ಈ ಹಾಡು ಯಾರು ಕೇಳಿಲ್ಲ ಹೇಳಿ ? ವ್ಯಾಟ್ಯಾಪ್ / ಇನ್ಸ್ಟಾ ಸ್ಟೇಟಸ್ ನಿಂದ ಹಿಡಿದು, ಶಾರ್ಟ್ ವೀಡಿಯೋಗಳ ಮೋಜಿನಿಂದಿಡಿದು, ಮನರಂಜನೆಗೆ ಡಿಜೆ ಆಗಿಯೂ ಹಾಡು ವೈರಲ್ ಆಗಿದೆ. ಹಾಗಿದೆ ಈ ಹಾಡಿನ ಕಿಕ್.

ಅಂದ ಹಾಗೆ ಇದೊಂದು ತಮಿಳು ಹಾಡು. ಇದನ್ನು ಬರೆದು ಹಾಡಿನ ಧ್ವನಿಗೆ ಜತೆ ಆದವರು 27 ವರ್ಷದ ಚೆನ್ನೈ ಮೂಲದ ಅರಿವು. ಇವರೊಂದಿಗೆ ಹಾಡಿಗೆ ಭಾವ ತುಂಬಿರುವವರು ಶ್ರೀಲಂಕಾ – ಆಸ್ಟ್ರೇಲಿಯಾ ಮೂಲದ ಹಿನ್ನೆಲೆ ಗಾಯಕಿ ಧೀ. (ಧೀಕ್ಷಿತ ವೆಂಕಟೇಶನ್)

 ಹಾಡು ಮಾತ್ರವಲ್ಲ ಕಳೆದುಕೊಂಡಿರುವ ಪಾಡು ! :

ಎಂಜಾಯ್ ಎಂಜಾಮಿ ಕೇಳುತ್ತಾ ಇದ್ದರೆ ಇದೊಂದು ಪಕ್ಕಾ ಡ್ಯಾನ್ಸ್ ಸಾಂಗ್ ಅಂಥ ಅನ್ನಿಸಬಹುದು. ಆದರೆ ಈ ಸಾಂಗ್ ನ ಹಿಂದಿರುವ ನೋವು – ನಲಿವಿನ ಕಥೆ ಎಂಥವವರ ಮನಸ್ಸನ್ನೂ ಕಲುಕಬಹುದು.

ಅದು ಬಡ ವರ್ಗದ ಕುಟುಂಬಗಳು. ತಾವು ಕಷ್ಟ ಪಟ್ಟಾದ್ದರೂ ತಮ್ಮ ಮುಂದಿನ ಜನಾಂಗ, ತನ್ನ ಮನೆಯ ಕಿರಿಯ ಸದಸ್ಯರು ತಮ್ಮಂತೆ ಬದುಕನ್ನೂ ಕಷ್ಟದ ಕತ್ತಲಾ ಕೂಪದೊಳಗೆ ಸಾಗಿಸಬಾರದು, ಒಂದೊಳ್ಳೆ ಬದುಕನ್ನು ರೂಪಿಸಿಕೊಳ್ಳಬೇಕೆಂದು, ಉಳ್ಳವರ ಮಾತಿಗೆ, ದುಡಿಯಲು 19 ನೇ ಶತಮಾನದಲ್ಲಿ ಸಿಲೋನ್ ಗೆ ವಲಸೆ ಹೋಗುತ್ತಾರೆ. ವರ್ಷಾನುಗಟ್ಟಲೆ ಬೆಟ್ಟ – ಗುಡ್ಡವನ್ನು ತನ್ನ ಶ್ರಮದಿಂದ, ಬೆವರು ರಕ್ತವನ್ನು ಒಂದಾಗಿಸಿ ರಬ್ಬರ್ ಹಾಗೂ ಕಾಫಿ ತೋಟವನ್ನಾಗಿ ಪರಿವರ್ತಿಸಿದ ಎಷ್ಟೋ ಮಂದಿಗೆ ಫಲದ ರೂಪದಲ್ಲಿ ದಕ್ಕಿದ್ದು ಬರೀ ಹತಾಶೆಯಷ್ಟೇ. ನಿರೀಕ್ಷೆ ಮಾಡಿದ ಭೂಮಿಯೂ ದಕ್ಕಿಲ್ಲ, ಕನಸು ತುಂಬಿ ಭರವಸೆ ಮೂಡಿಸಿದ ಹಣವೂ ದಕ್ಕಿಲ್ಲ. ರಾತ್ರೋ ರಾತ್ರಿ ದುಡಿದು, ದಣಿದ ದೇಹಗಳು, ಹೆಜ್ಜೆ ಹಾಕುತ್ತಾ ಊರ ಗ್ರಾಮಕ್ಕೆ ಬಂದು ತಲುಪಿದರು.

ಹಾಡು ಅನ್ಯರ ಕಥೆಯಲ್ಲ ; ನಮ್ಮದೇ ಮಣ್ಣಿನವರ ವ್ಯಥೆ :

ಹಾಡನ್ನು ನೋಡುವಾಗ, ಆಫ್ರಿಕಾದ ಕಾಡು ಜನಾಂಗ ತನ್ನ ಸಂಪ್ರದಾಯವನ್ನು ಹೇಳುವ ಹಾಗೆ ಇದೆ. ಆದರೆ ಇದು ತಮಿಳು ಕಾರ್ಮಿಕರ ಬದುಕಿನ ಚಿತ್ರಣ. ಹಾಡಿನಲ್ಲಿ ಬರುವ ಎಂಜಾಮಿ ಪದದ ಅರ್ಥ ತಮಿಳಿನಲ್ಲಿ ‘ಎನ್ನಸಾಮಿ’. ಕೆಲಸದಾಳುಗಳು ಒಡೆಯರನ್ನು ಕೈಮುಗಿದು ಹೀಗೆಯೇ ಕರೆಯುತ್ತಿದ್ದರು. ಇಲ್ಲಿ ‘ ಎಂಜಾಯ್’ ಎಂದರೆ ಇಂಗ್ಲಿಷಿನ ಅರ್ಥವಲ್ಲ, ಇದರ ಅರ್ಥ ‘ಎನ್ನ ತಾಯಿ’ ಎನ್ನುವುದು.

ಹಾಡಿನಲ್ಲಿ ಆಕ್ರೋಶವಿಲ್ಲ ದಮನಿತರ ಅಕ್ರಂದನದ ಭಾವವಿದೆ : ಹಾಡು ಪ್ರಾರಂಭವಾಗುವುದು ಭೂಮಿಯನ್ನು ಸ್ಪರ್ಶಿಸುವ ಮೂಲಕ. ಹಾಡಿನ ರೂಪ ಹೊಸ ಕಾಲದ ಮೊಮ್ಮಗನಿಗೆ ಗತ ಕಾಲದ ಅಜ್ಜಿಯೊಬ್ಬಳು ಕಳೆದು ಹೋದ ಪೂರ್ವಜರು, ಕಳೆದು ಹೋದ ಭೂಮಿ, ಈ ಭೂಮಿಯ ಮಹತ್ವ, ಜಾತಿ, ಉಳ್ಳವರು, ಸಮಾನತೆ, ತಾರತಮ್ಯದ ಎಳೆಯನ್ನು ಹೇಳುವ ಹಾಗೆ ಚಿತ್ರಿತವಾಗಿದೆ. ತಾವು ದುಡಿದು ಮೋಸ ಹೋಗಿದ್ದೇವೆ, ಬೆಂದ ಬೆವರು ಭುವಿಗಿಳಿದು ತೋಟಗಳಾಗಿ ಬೆಳೆದು ನಿಂತರೂ ತಮಗೆ ನ್ಯಾಯ ಸಿಕ್ಕಿಲ್ಲ, ಅನ್ಯಾಯ ಎಸಗಿದವರನ್ನು ನೇರವಾಗಿ ಎಲ್ಲೂ ತರಾಟೆಗೆ ತೆಗೆದುಕೊಳ್ಳಲಿಲ್ಲ, ಬದಲಾಗಿ ಹಾಡಿನ ರಾಗವೇ ಅನ್ಯಾಯದ ವಿರುದ್ಧ ಚಾಟಿ ಬೀಸಿದಂತೆ ಇದೆ.

ಹಾಡಿನಲ್ಲಿ ಕಾಫಿ ತೋಟದಲ್ಲಿ ದುಡಿದು ದಣಿದ ಅರಿವು ಅವರ ಅಜ್ಜಿ ದಣಿದವರ ಜನಾಂಗದ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ.

ಹಾಡಿಗೆ ಸಿಕ್ಕ ಜನಪ್ರಿಯತೆ ಜನಮಾನ ಮುಟ್ಟಿತು :  ಈ ಹಿಂದೆ ಮಾರಿ -2 ಚಿತ್ರದ ರೌಡಿ ಬೇಬಿ ಹಾಡಿನಲ್ಲಿ ಧನುಷ್ ಜತೆ ಧ್ವನಿಯಾಗಿದ್ದ ಧೀ. ಮೊದಲ ಬಾರಿ ಸ್ವತಂತ್ರ ಕಲಾವಿದೆ ಆಗಿ ಈ ಹಾಡಿನಲ್ಲಿ ಹಾಡಿ ನಟಿಸಿದ್ದಾರೆ. ತಮಿಳಿನ ಸಂಗೀತ ನಿರ್ಮಾಪಕ ಸಂತೋಷ್ ನಾರಾಯಣ್ ತುಂಬಾ ಗ್ರ್ಯಾಂಡ್ ಆಗಿ ಹಾಡನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಣದ ಯೋಜನೆಗೆ ತಕ್ಕಂತೆ ನಿರ್ದೇಶನ ಮಾಡಿದ್ದಾರೆ ಅಮಿತ್ ಕೃಷ್ಣನ್.

ಈ ಹಿಂದೆ ಸಿಎಎ – ಎನ್ ಆರ್ ಸಿ ಪ್ರತಿಭಟನೆಯ ಸಂದರ್ಭದಲ್ಲಿ “Sanda Seivom” ಹಾಡು ಬರೆದು ಪ್ರತಿಭಟನೆಗೆ ಸಾಥ್ ನೀಡಿ ಗಮನ ಸೆಳೆದಿದ್ದ ಅರಿವು. ಎಂಜಾಯ್ ಎಂಜಾಮಿ ಹಾಡಿನ ರೂವಾರಿ.

ಈಗಾಗಲೇ ಈ ಹಾಡು ಎಲ್ಲೆಡೆ ವೂರಲ್ ಆಗಿದ್ದು, ಎ.ಆರ್ ರೆಹಮಾನ್, ನಟ ಸೂರ್ಯ,ವಿಜಯ್ ಸೇರಿದಂತೆ ಹಲವಾರು ಮಂದಿ ಸ್ಟಾರ್ಸ್ – ಸಾಮಾನ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಾಡನ್ನು  13 ಕೋಟಿಗೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

 

ಸುಹಾನ್ ಶೇಕ್

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.