3500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್ ಲೈನ್ ಶಿಕ್ಷಣವನ್ನು ಬೋಧಿಸುವ ಶಿಕ್ಷಕ.!


Team Udayavani, Jun 17, 2021, 9:00 AM IST

Untitled-1

ಗುರುವಾಗಿ ಗುರಿ ಮುಟ್ಟಿಸುವ ಶಿಕ್ಷಕರನ್ನು ಮರೆಯೋದು ಸುಲಭವಲ್ಲ. ಬಾಲ್ಯದಿಂದ ಯೌವನದ ಹಂತ ಮುಗಿದು ಭವಿಷ್ಯ ರೂಪಿಸಿಕೊಳ್ಳುವಲ್ಲಿ ಗುರುವಿನ ಶ್ರಮ,ಸಹಕಾರ,ಸಲಹೆಯನ್ನು ಬದುಕಿಗೆ ಜೋಳಿಗೆ ಹಾಕಿ ಬೆಳೆಯುವ ವಿದ್ಯಾರ್ಥಿಗಳು ಯಶಸ್ಸಿನ ಘಟ್ಟಕ್ಕೆ ತಲುಪಿದಾಗ ಮೊದಲಿಗೆ ನೆನೆಯುವುದು ಗುರುವನ್ನು.

ಲಾಕ್ ಡೌನ್ ನಿಂದಾಗಿ ಶೈಕ್ಷಣಿಕ ವ್ಯವಸ್ಥೆ ನಲುಗಿ ಹೋಗಿದೆ. ನೂರಾರು ವಿದ್ಯಾರ್ಥಿಗಳಿಗೆ ಅಕ್ಷರ ಕಲಿಸುವ ಶಾಲೆಯ ಬಾಗಿಲುಗಳು ಬಂದ್ ಆಗಿದೆ. ಇಂಥ ಸಮಯದಲ್ಲಿ ಸರ್ಕಾರ ಹೇಗಾದರೂ ಮಾಡಿ ಶಿಕ್ಷಣವನ್ನು ಮುಂದುವರೆಸಲು ಆನ್ಲೈನ್ ಶಿಕ್ಷಣದ ಮೂಲಕ ಪ್ರಯತ್ನಿಸುತ್ತಿದೆ.

ಇಲ್ಲೊಬ್ಬ ಶಿಕ್ಷಕರು ಲಾಕ್ ಡೌನ್ ಸಮಯದಲ್ಲಿ ಮಕ್ಕಳ ಕಲಿಕೆ ನಿರಂತರವಾಗಿರಬೇಕೆಂದು ತಮ್ಮ ಸ್ವಂತ ಖರ್ಚಿನಿಂದ ಕಲಿಕೆಯ ಅನುಭವನ್ನು ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ಹೇಳಿಕೊಡುತ್ತಿದ್ದಾರೆ.

ಪಂಜಾಬ್ ಬಟಿಂಡಾ ಊರಿನವರಾದ ಸಂಜೀವ್ ಕುಮಾರ್, ಕಳೆದ 18 ವರ್ಷಗಳಿಂದ ಶಿಕ್ಷಕರಾಗಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಮಕ್ಕಳ ಬುದ್ಧಿ ಶಕ್ತಿಯನ್ನು ಅರಿತು, ಮಕ್ಕಳಿಗೆ ಸುಲಭವಾಗಿ ಅಕ್ಷರವನ್ನು ಅರ್ಥೈಸುವ ಇವರು ಕಳೆದ ವರ್ಷದ ಲಾಕ್ ಡೌನ್ ವೇಳೆಯಲ್ಲಿ ಒಂದು ವಿಶೇಷ ಪ್ರಯೋಗಕ್ಕೆ ಮುಂದಾಗುತ್ತಾರೆ. ಅದುವೇ ಆನ್ ಲೈನ್ ಮೂಲಕ ಉಚಿತವಾಗಿ ಮಕ್ಕಳಿಗೆ ಶಿಕ್ಷಣವನ್ನು ಹೇಳಿಕೊಡುವ ಯೋಜನೆ.

ಸಂಜೀವ್ ಕುಮಾರ್ ವಿದ್ಯಾರ್ಥಿಗಳಿಗೆ ಕಬ್ಬಿಣ್ಣದ ಕಡಲೆಕಾಯಿ ಎಂದೇ  ಖ್ಯಾತವಾಗಿರುವ ಗಣಿತ ವಿಷಯದ ಶಿಕ್ಷಕರು. ಕಳೆದ ವರ್ಷ ಲಾಕ್ ಡೌನ್ ವೇಳೆಯಲ್ಲಿ ಕೆಲ ವಿದ್ಯಾರ್ಥಿಗಳು ಗಣಿತ ವಿಷಯದ ಕುರಿತು ಪಾಠ ಹೇಳಿ ಎಂದಾಗ, ಸಂಜೀವ್ ಅವರಿಗೆ ಆನ್ ಲೈನ್ ಮೂಲಕ ಶಿಕ್ಷಣವನ್ನು ಹೇಳಿಕೊಡುವ ಯೋಜನೆ ಯೋಚನೆಗೆ ಬಂತು.

ಮಾರ್ಚ್ 29, 2020 ರಂದು ಸ್ನೇಹಿತರ ಮಕ್ಕಳಿಗೆ ಸೇರಿ 50 ಮಂದಿಗೆ ಪ್ರಾಯೋಗಿಕವಾಗಿ ಆನ್ ಲೈನ್ ಮೂಲಕ ಬೀಜಗಣಿತ ಹಾಗೂ ರೇಖಾಗಣಿತದ ವಿಷಯವನ್ನು ಸುಲಭವಾಗಿ ವಿವರಿಸಿ ಹೇಳಿ ಕೊಡುತ್ತಾರೆ. ಕೆಲವೇ ದಿನಗಳಲ್ಲಿ 50 ಮಂದಿ ಇದ್ದ ವಿದ್ಯಾರ್ಥಿಗಳ ಸಂಖ್ಯೆ 700 ದಾಟುತ್ತದೆ. ವರ್ಷ ಕಳೆಯುತ್ತಲೇ 2500 ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಜೀವ್ ಪಾಠ ಕೇಳಲು ಆನ್ ಲೈನ್ ನಲ್ಲಿ ಕಾಯುತ್ತಾರೆ. ಇಷ್ಟು ಮಂದಿ ವಿದ್ಯಾರ್ಥಿಗಳನ್ನು ಒಂದೇ ಬಾರಿಗೆ ನಿಭಾಯಿಸಲು ಕಷ್ಟವಾದಾಗ ಸಂಜೀವ್ ಅವರು ಝೂಮ್ ಬ್ಯುಸೆನೆಸ್ ಯೋಜನೆಯನ್ನು ಖರೀದಿ ಮಾಡುತ್ತಾರೆ.

ಹಂತ ಹಂತವಾಗಿ ವಿದ್ಯಾರ್ಥಿಗಳಿಗೆ ಪಾಠದ ಅವಧಿಯನ್ನು ಫಿಕ್ಸ್ ಮಾಡುತ್ತಾರೆ. ಜಮ್ಮು ಕಾಶ್ಮೀರ,ತಮಿಳುನಾಡು,ಕೇರಳ,ಕರ್ನಾಟಕ ಸೇರಿದಂತೆ ಕೀನ್ಯಾ, ದುಬೈ, ಮಲೇಶ್ಯಾ,ಸೌದಿ ಅರೇಬಿಯಾದಲ್ಲಿ ವಾಸವಾಗಿರುವ ವಿದ್ಯಾರ್ಥಿಗಳೂ ಕೂಡ ಸಂಜೀವ್ ಅವರ ಪಾಠ ಕೇಳುತ್ತಾರೆ. ತರಗತಿ ಮುಗಿದ ಬಳಿಕ ವಿಶೇಷವಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಮತ್ತೆ ಪಾಠ ಮಾಡುತ್ತಾರೆ. ಪ್ರತಿ ತಿಂಗಳು ಪರೀಕ್ಷೆ ಮಾಡುತ್ತಾರೆ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದವರಿಗೆ ವಿಷಯ ಸಂಬಂಧಿತ ಪಠ್ಯ ಪುಸ್ತಕವನ್ನು ಉಡುಗೊರೆಯಾಗಿ ನೀಡುತ್ತಾರೆ.

ಪ್ರತಿದನಕ್ಕೆ 1 ಗಂಟೆಯ 5 ತರಗತಿಯನ್ನು ತೆಗೆದುಕೊಳ್ಳುತ್ತಾರೆ. ಅಪರೂಪಕ್ಕೊಮ್ಮೆ ವಿದ್ಯಾರ್ಥಿಗಳಿಗಾಗಿ ಕೆಲ ವೈದ್ಯರು, ಶಿಕ್ಷಕರು ಹಾಗೂ ನಟರನ್ನು ವಿಶೇಷ ಉಪನ್ಯಾಸವನ್ನು ನೀಡಲು ಆಹ್ವಾನಿಸುತ್ತಾರೆ.ಸಂಜೀವ್ ಅವರ ಪತ್ನಿ ಕೂಡ ಶಿಕ್ಷಕಿ ಆಗಿದ್ದು, ಪಾಠವಾದ ಕೂಡಲೇ ವಿದ್ಯಾರ್ಥಿಗಳಿಗೆ ನೋಟ್ಸ್ ಗಳನ್ನು ಕಳಿಸುವ ಜವಬ್ದಾರಿ ಅವರದು.ಪ್ರತಿ ತಿಂಗಳು ಸಂಜೀವ್ ಅವರು ವಿದ್ಯಾರ್ಥಿಗಳ ಉಚಿತ ಆನ್ ಲೈನ್ ಕ್ಲಾಸ್ ಗಾಗಿ ತಮ್ಮ ಸ್ವಂತ ಖರ್ಚಿನಿಂದ 20 ಸಾವಿರ ರೂಪಾಯಿಯನ್ನು ವ್ಯಯಿಸುತ್ತಾರೆ. ಇವರ ತರಗತಿಗೆ ಸುಮಾರು 3500 ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಹಾಜರಾಗುತ್ತಾರೆ.

 

-ಸುಹಾನ್ ಶೇಕ್

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.