ತಾಲಿಬಾನ್ ಅಟ್ಟಹಾಸ: ಪಂಜ್ ಶೀರ್ ಸಿಂಹ “ಶಾ” ಸಮಾಧಿ ಧ್ವಂಸ, ನಾರ್ವೆ ರಾಯಭಾರ ಕಚೇರಿ ವಶಕ್ಕೆ

ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ಅಹ್ಮದ್ ಶಾ ಮಸೌದ್ ಅವರನ್ನು ಹತ್ಯೆಗೈಯಲಾಗಿತ್ತು.

Team Udayavani, Sep 9, 2021, 3:55 PM IST

ತಾಲಿಬಾನ್ ಅಟ್ಟಹಾಸ: ಪಂಜ್ ಶೀರ್ ಸಿಂಹ  “ಶಾ” ಸಮಾಧಿ ಧ್ವಂಸ, ನಾರ್ವೆ ರಾಯಭಾರ ಕಚೇರಿ ವಶಕ್ಕೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಆರಂಭಗೊಂಡ ಬೆನ್ನಲ್ಲೇ ಅಟ್ಟಹಾಸವನ್ನು ಮುಂದುವರಿಸಿದ್ದು, ಗುರುವಾರ (ಸೆಪ್ಟೆಂಬರ್ 09) ಅಫ್ಘಾನಿಸ್ತಾನದ ದಂತಕಥೆ, ಬಂಡುಕೋರ ಕಮಾಂಡರ್ ಅಹ್ಮದ್ ಶಾ ಮಸೌದ್ ಅವರ ಸಮಾಧಿಯನ್ನು ತಾಲಿಬಾನ್ ಉಗ್ರರು ಧ್ವಂಸಗೊಳಿಸಿದ್ದಾರೆ. ಈ ಘಟನೆ ಬಳಿಕ ಅಫ್ಘಾನಿಸ್ತಾನದ ಜನರು ತಾಲಿಬಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹ್ಮದ್ ಶಾ ಮಸೌದ್ ಅವರನ್ನು ಪಂಜ್ ಶೀರ್ ನ ಸಿಂಹ ಎಂದೇ ಕರೆಯಲಾಗುತ್ತದೆ. ಅಫ್ಘಾನ್ ಮುಜಾಹಿದೀನ್ ನಾಯಕರಲ್ಲಿ ಪ್ರಮುಖರಾಗಿದ್ದ ಮಸೌದ್, 1989ರಲ್ಲಿ ಸೋವಿಯತ್ ಒಕ್ಕೂಟದ ಸೈನಿಕರನ್ನು ಪರಾಜಯಗೊಳಿಸಿದ್ದರು.

ಅಫ್ಘಾನಿಸ್ತಾನದಲ್ಲಿನ ದುರಾಡಳಿತದ ವಿರುದ್ಧ ಹೋರಾಟ ಆರಂಭಿಸಿದ್ದ ಶಾ ಮಸೌದ್ ಪಂಜ್ ಶೀರ್ ಸ್ವತಂತ್ರವಾಗಿರಬೇಕು ಎಂದು ಬಯಸಿ ತಮ್ಮದೇ ಸ್ವಂತ ಪಡೆಯನ್ನು ಕಟ್ಟಿಕೊಂಡು ಹೋರಾಟ ನಡೆಸಿದ್ದರು. ಅದರ ಪರಿಣಾಮ ಸುಮಾರು 40 ವರ್ಷಗಳ ಕಾಲ ಪಂಜ್ ಶೀರ್ ಪ್ರದೇಶವನ್ನು ವಶಕ್ಕೆ ತೆಗೆದುಕೊಳ್ಳಲು ಯಾರಿಂದಲೂ ಸಾಧ್ಯವಾಗಿಲ್ಲವಾಗಿತ್ತು.

1996ರಲ್ಲಿ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ಆಡಳಿತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿಯೂ ಸುಮಾರು ಐದು ವರ್ಷಗಳ ಕಾಲ ಪಂಜ್ ಶೀರ್ ಪ್ರದೇಶ ತಾಲಿಬಾನ್ ಹಿಡಿತಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವಾಗಿತ್ತು.

2001ರ ಸೆಪ್ಟೆಂಬರ್ 11ರಂದು ಅಲ್ ಖೈದಾ ಉಗ್ರಗಾಮಿ ಸಂಘಟನೆ ಸಂಚು ರೂಪಿಸಿ, ಅರಬ್ ಪತ್ರಕರ್ತರಂತೆ ವೇಷಧರಿಸಿ ಸಂದರ್ಶನ ಮಾಡುವ ನೆಪದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ಅಹ್ಮದ್ ಶಾ ಮಸೌದ್ ಅವರನ್ನು ಹತ್ಯೆಗೈಯಲಾಗಿತ್ತು. ಇದೀಗ ಪಂಜ್ ಶೀರ್ ನಲ್ಲಿ ಶಾ ಪುತ್ರ ಅಹ್ಮದ್ ಮಸೌದ್ ಹಾಗೂ ಅಫ್ಘಾನ್ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ನೇತೃತ್ವದಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಹೋರಾಟ ಮುಂದುವರಿದಿದೆ.

ನಾರ್ವೆ ರಾಯಭಾರ ಕಚೇರಿಯಲ್ಲಿ ತಾಲಿಬಾನ್ ಅಟ್ಟಹಾಸ:

ಕಾಬೂಲ್ ನಲ್ಲಿರುವ ನಾರ್ವೆ ರಾಯಭಾರ ಕಚೇರಿಯನ್ನು ತಾಲಿಬಾನ್ ವಶಕ್ಕೆ ತೆಗೆದುಕೊಂಡ ಬಳಿಕ, ಅಲ್ಲಿರುವ ವೈನ್ ಬಾಟಲಿಗಳನ್ನು ಒಡೆದು ಹಾಕಿ, ಪುಸ್ತಕಗಳನ್ನು ನಾಶಪಡಿಸಿರುವುದಾಗಿ ವರದಿ ಹೇಳಿದೆ.

ವಿದೇಶಗಳ ರಾಜತಾಂತ್ರಿಕ ಕಚೇರಿ ಹಾಗೂ ರಾಯಭಾರ ಕಚೇರಿಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಾಲಿಬಾನ್ ಈ ಮೊದಲು ಹೇಳಿಕೆ ನೀಡಿತ್ತು. ಅಫ್ಘಾನಿಸ್ತಾನದಲ್ಲಿನ ಭದ್ರತಾ ಸ್ಥಿತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಕಳೆದ ತಿಂಗಳು ತಮ್ಮ ಸಿಬಂದಿಗಳನ್ನು ಸುರಕ್ಷಿತವಾಗಿ ವಾಪಸ್ ಸ್ವದೇಶಕ್ಕೆ ಕರೆಯಿಸಿ ಕೊಂಡ ಬಳಿಕ, ಡೆನ್ಮಾರ್ಕ್ ಮತ್ತು ನಾರ್ವೆ ಕಾಬೂಲ್ ನಲ್ಲಿರುವ ತಮ್ಮ ರಾಯಭಾರ ಕಚೇರಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದವು.

ಏತನ್ಮಧ್ಯೆ ಅಫ್ಘಾನಿಸ್ತಾನದಲ್ಲಿರುವ ಪ್ರಜೆಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ನಾರ್ವೆ ತಿಳಿಸಿದೆ. ಮತ್ತೊಂದೆಡೆ ಅಮೆರಿಕದ ಸೇನಾ ಪಡೆಗಳು ಅಫ್ಘಾನಿಸ್ತಾನವನ್ನು ತೊರೆದು ಹೋದ ನಂತರ 200 ಅಮೆರಿಕ ಪ್ರಜೆಗಳು ಮತ್ತು ಇತರ ವಿದೇಶಿ ನಾಗರಿಕರಿಗೆ ಅಫ್ಘಾನಿಸ್ತಾನದಿಂದ ತೆರಳಲು ತಾಲಿಬಾನ್ ಅವಕಾಶ ನೀಡಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.