ಆಸ್ಟ್ರೇಲಿಯಾ ಕ್ರಿಕೆಟ್ ನಲ್ಲಿ ಮಿಂಚುತ್ತಿರುವ ಭಾರತೀಯ ಕ್ಯಾಬ್ ಡ್ರೈವರ್ ಮಗ


ಕೀರ್ತನ್ ಶೆಟ್ಟಿ ಬೋಳ, Mar 27, 2021, 8:19 AM IST

tanveer sangha

ಒಂದು ದೇಶದ ಆಟಗಾರರು ಮತ್ತೊಂದು ದೇಶಕ್ಕೆ ವಲಸೆ ಹೋಗಿ ಅಲ್ಲಿನ ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ನೋಡಿದ್ದೇವೆ. ಸದ್ಯದ ಇಂಗ್ಲೆಂಡ್ ತಂಡ ಇದಕ್ಕೆ ಉತ್ತಮ ಉದಾಹರಣೆ. ಭಾರತೀಯ ಮೂಲದ ಆಟಗಾರರು ಕೂಡಾ ಬೇರೆ ಬೇರೆ ದೇಶಗಳ ಪರವಾಗಿ ಆಡಿದ್ದಾರೆ. ಭಾರತದ ವಿರುದ್ಧವೂ ಆಡಿದವರಿದ್ದಾರೆ. ಇದಕ್ಕೆ ಇತ್ತೀಚಿನ ಸೇರ್ಪಡೆಯೆಂದರೆ ಲೆಗ್ ಸ್ಪಿನ್ನರ್ ತನ್ವೀರ್ ಸಂಘಾ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ಯಾಬ್ ಡ್ರೈವರ್ ಆಗಿರುವ ಜೋಗಾ ಸಿಂಗ್ ಸಂಘಾ ಮೂಲತಃ ಭಾರತದ ಪಂಜಾಬ್ ನ ಜಲಂಧರ್ ನವರು. ಜಲಂಧರ್ ನಲ್ಲಿ ಕೃಷಿಕರಾಗಿದ್ದ ಜೋಗಾ ಸಂಘಾ 1997ರಲ್ಲಿ ಆಸ್ಟ್ರೇಲಿಯಾಗೆ ತೆರಳುತ್ತಾರೆ. ಅಲ್ಲಿ ಕೆಲಸಕ್ಕೆ ಸೇರಿದ ಅವರು ನಂತರ ಕ್ಯಾಬ್ ಓಡಿಸಲು ಆರಂಭಿಸುತ್ತಾರೆ. ಈ ಜೋಗಾ ಸಂಘಾ ಮಗನೇ ಸದ್ಯ ಆಸ್ಟ್ರೇಲಿಯಾದಲ್ಲಿ ಮಿಂಚುತ್ತಿರುವ ತನ್ವೀರ್ ಸಂಘಾ.

ತನ್ವೀರ್ ಜನಿಸಿದ್ದು 2001ರ ನವೆಂಬರ್ 26ರಂದು. ಸಿಡ್ನಿಯಲ್ಲಿ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಆತ ವಾಲಿಬಾಲ್, ರಗ್ಬಿ, ಕಬಡ್ಡಿ ತಂಡದಲ್ಲಿ ಸ್ಥಾನ ಪಡೆದಿದ್ದ. ತನ್ನ ಹತ್ತನೇ ವಯಸ್ಸಿನಲ್ಲಿ ಈತನ ಕ್ರಿಕೆಟ್ ಮೇಲಿನ ಆಸಕ್ತಿ ಕಂಡ ಜೋಗಾ ಸಂಘಾ , ಮಗನನ್ನು ಕ್ರಿಕೆಟ್ ತರಬೇತಿಗೆ ಸೇರಿಸುತ್ತಾರೆ. ಮೊದಲೇ ಪ್ರತಿಭಾನ್ವಿತನಾಗಿದ್ದ ಬಾಲಕ ತನ್ವೀರ್ 12 ವರ್ಷವಿರುವಾಗಲೇ ಸ್ಥಳೀಯ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದ.

ತನ್ವೀರ್ ಸಂಘಾ ಆಸ್ಟ್ರೇಲಿಯಾದ ವಯೋಮಿತಿ ತಂಡದಲ್ಲಿ ಸ್ಥಾನ ಪಡೆದಿದ್ದ. 2018ರಲ್ಲಿ ಅಂಡರ್ -16 ಕೂಟದಲ್ಲಿ ಪಾಕ್ ವಿರುದ್ಧ ಆಡುತ್ತಿದ್ದ ವೇಳೆ ಪಾಕಿಸ್ಥಾನ ಮೂಲದ ಆಸೀಸ್ ಕ್ರಿಕೆಟಿಗ ಫಾವದ್ ಅಹಮದ್ ಕಣ್ಣಿಗೆ ಬಿದ್ದಿದ್ದ. ನಂತರ ಫಾವದ್ ಅಹಮದ್ ಜೊತೆ ಸೇರಿದ ತನ್ವೀರ್ ಲೆಗ್ ಸ್ಪಿನ್ ಬಗ್ಗೆ ಹೆಚ್ಚಿನ ತರಬೇತಿ ಪಡೆದ.

ಬೌಲಿಂಗ್ ಮಾತ್ರವಲ್ಲದೆ ತನ್ವೀರ್ ಉತ್ತಮ ಬ್ಯಾಟ್ಸಮನ್ ಕೂಡಾ. ಅಂಡರ್ 19 ವಿಶ್ವಕಪ್ ನಲ್ಲಿ 85ರ ಸ್ಟ್ರೇಕ್ ರೇಟ್ ನಲ್ಲಿ ಬ್ಯಾಟ್ ಬೀಸಿದ್ದರು.  ಅಂದಹಾಗೆ ತನ್ವೀರ್ ಆರಂಭಿಕ ದಿನಗಳಲ್ಲಿ ವೇಗದ ಬೌಲರ್ ಆಗಿದ್ದರು. ಆದರೆ ವೇಗದ ಬೌಲರ್ ಗಳಿಗೆ ಆಗಾಗ ಕಾಡುವ ಭುಜದ ನೋವು ಸಮಸ್ಯೆಯ ಕಾರಣ ಅವರು ಸ್ಪಿನ್ ಬೌಲರ್ ಆದರಂತೆ!

ಅಂಡರ್ 19 ವಿಶ್ವಕಪ್ ನಲ್ಲಿ 15 ವಿಕೆಟ್ ಕಿತ್ತು ಆಸೀಸ್ ತಂಡದ ಪರ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿದ್ದರು.  ಬಿಗ್ ಬ್ಯಾಶ್ ಲೀಗ್ ನಲ್ಲೂ ಉತ್ತಮ ಪ್ರದರ್ಶನ ತೋರಿದ್ದರು. ಇದೇ ಕಾರಣದಿಂದ ಕಳೆದ ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿಗೆ ಆಸೀಸ್ ಪ್ರಧಾನ ತಂಡಕ್ಕೆ ಆಯ್ಕೆಯಾಗಿದ್ದರು.

ಈ ಹಿಂದೆಯೂ ಆಡಿದ್ದರು: ಭಾರತದಲ್ಲಿ ಜನಿಸಿದವರು, ಭಾರತೀಯ ಮೂಲದವರು ಆಸೀಸ್ ತಂಡದಲ್ಲಿ ಆಡಿದ್ದರು. ಆರು ವರ್ಷಗಳ ಹಿಂದೆ ಭಾರತೀಯ ಮೂಲದ ಗುರಿಂಧರ್ ಸಂಧು ಆಸೀಸ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಈ ಹಿಂದೆ ಆಡಿದ್ದ ಆಸೀಸ್ ತಂಡದಲ್ಲಿ ರೆಕ್ಸ್ ಸೆಲ್ಲರ್ ಮತ್ತು ಬ್ರಾನ್ಸ್ಬಿ ಕೂಪರ್ ಭಾರತದಲ್ಲಿ ಜನಿಸಿದವರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.