ಆರೋಗ್ಯ ಸಂಜೀವಿನಿ: ರೋಗ ನಿರೋಧಕ ಚಹಾ


ಆದರ್ಶ ಕೊಡಚಾದ್ರಿ, May 31, 2021, 12:55 PM IST

Tea resistant

ಚಹಾ ಕುಡಿಯುವ ಅಭ್ಯಾಸ ಯಾರಿಗಿಲ್ಲ ಹೇಳಿ… ಬೆರಳೆಣಿಕೆಯಷ್ಟು ಜನರನ್ನು ಹೊರತುಪಡಿಸಿದರೆ ಉಳಿದವರೆಲ್ಲರೂ  ಚಹಾವನ್ನು ಸರ್ವೆ ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ. ಕೆಲವರು ದಿನದಲ್ಲಿ ಒಂದು ಬಾರಿ ಚಹಾ ಸೇವನೆ ಮಾಡಿದರೆ, ಇನ್ನೂ ಕೆಲವರು ದಿನದಲ್ಲಿ ಐದಾರು ಸಲ ಚಹಾ ಸೇವಿಸುತ್ತಾರೆ.

ಚಹಾ ಸೇವನೆ ಒಂದು ವಿಧವಾದ ಅಡಿಕ್ಷನ್ ಕೂಡಾ ಹೌದು. ನಿಗದಿತ ಸಮಯಕ್ಕೆ ಸರಿಯಾಗಿ ಚಹಾ ಸೇವೆನೆ ಮಾಡದಿದ್ದರೆ ಕೆಲ ವ್ಯಕ್ತಿಗಳ ಮನಸ್ಥಿತಿಗಳಲ್ಲಿ ಬದಲಾವಣೆಗಳಾಗುವುದನ್ನು ಗಮನಿಸಬಹುದಾಗಿದೆ. ರಾತ್ರಿ ವೇಳೆ ಚಹಾ ಸೇವನೆ ಮಾಡುವುದರಿಂದ  ನಿದ್ರೆಯನ್ನು ತಡೆಯಬಹುದೆಂದು ಹಲವರು ರಾತ್ರಿ ವೇಳೆ ಚಹಾ ಸೇವನೆ ಮಾಡುವುದನ್ನು ನೊಡಬಹುದು.

ಈ ಚಹಾದಲ್ಲಿಯೂ ಹಲವಾರು ವಿಧಗಳಿದ್ದು ಹಲವರು ಮಸಾಲಾ ಪದಾರ್ಥಗಳನ್ನು ಸೇರಿಸಿ ಸೇವಿಸುತ್ತಾರೆ. ಈ ನಡುವೆ ಚಹಾ ತಯಾರಿಸುವಾಗ ಕೆಲವು ನೈಸರ್ಗಿಕ ಗಿಡಮೂಲಿಕೆಗಳನ್ನು ಬಳಸುವುದರಿಂದ ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಚಹಾದೊಂದಿಗೆ ವಿಶ್ರಣ ಮಾಡಬಹುದಾದ ಗಿಡಮೂಲಿಕೆಗಳು

ತುಳಸಿ

ತುಳಸಿ ಸಾಮಾನ್ಯವಾಗಿ ವಿಟಮಿನ್ ಸಿ ಮತ್ತು ಸತುಗಳಿಂದ ತುಂಬಿರುತ್ತದೆ. ಈ ಸಸ್ಯವು ಆ್ಯಂಟಿ ವೈರಲ್ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ- ವಿರೋಧಿ ಗುಣಗಳಿಂದ ಕೂಡಿದೆ. ಇದನ್ನು ನಿತ್ಯದ ಚಹಾ ಅಥವಾ ಕಷಾಯದಲ್ಲಿ ಸೇರಿಸಿ ಕುಡಿಯಬಹುದಾಗಿದೆ. ಇದರಲ್ಲಿ ಆ್ಯಂಟಿ -ಆಕ್ಸಿಡೆಂಟ್ ಸಂಯುಕ್ತಗಳಾದ ರೋಸ್ಮರಿನಿಕ್ ಆಮ್ಲಗಳನ್ನು ಒಳಗೊಂಡಿದೆ. ಇದು ಉಸಿರಾಟದ ಸಮಸ್ಯೆ ಪರಿಹರಿಸಿ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಏಲಕ್ಕಿ

ಚಹಾದಲ್ಲಿ ಏಲಕ್ಕಿಯನ್ನು ಬೆರೆಸಿ ಸೇವನೆ ಮಾಡುವುದರಿಂದ  ನಮ್ಮಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಭಾರತೀಯ ಮಸಾಲೆಗಳಲ್ಲಿ ಅತ್ಯುನ್ನತ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಏಲಕ್ಕಿ ಪರಿಮಳವು ಆಹಾರ ಪದಾರ್ಥಗಳ ಪರಿಮಳವನ್ನು ಹೆಚ್ಚಿಸುತ್ತದೆ. ಜೊತೆಗೆ ಆರೋಗ್ಯ ಸುಧಾರಣೆಗೆ ಸಹಾಯ ಮಾಡುವುದು. ನಿತ್ಯದ ಚಹಾ ಅಥವಾ ನಿಯಮಿತ ಸೇವನೆಯಿಂದಾಗಿ ದೇಹದಲ್ಲಿ ವೈರಸ್ ನಿರೋಧಕ ಕೋಶಗಳ ಬೆಳವಣಿಗೆ ಆಗುವುದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಮತ್ತು ಖನಿಜಗಳು ಸಮೃದ್ಧವಾಗಿರುವುದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಒಂದೆಲಗ

ಒಂದೆಲಗವನ್ನು ಸಾಮಾನ್ಯವಾಗಿ  ಚಟ್ನಿ ಹಾಗೂ ಕಷಾಯವನ್ನು ಮಾಡಿ ಸೇವನೆ ಮಾಡುತ್ತಾರೆ. ಇದು ಸಹ ಸೋಂಕು ಮತ್ತು ರೋಗಾಣುಗಳನ್ನು ನಿವಾರಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳೊಂದಿಗೆ ದೇಹವನ್ನು ಪೋಷಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವುದು. ಹಾಗಾಗಿ ಒಂದೆಲಗವನ್ನು ನಿಯಮಿತವಾಗಿ ಸೇವಿಸಬಹುದು ಎಂದು ಹೇಳಲಾಗುವುದು. ಚಹಾವನ್ನು ತಯಾರಿಸುವಾಗ ಸ್ಪಲ್ಪ ಪ್ರಮಾಣದಲ್ಲಿ ಒಂದೆಲಗದ ಸೊಪ್ಪನ್ನು ಸೇರಿಸುವುರಿಂದ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಪಡೆಯಬಹುದಾಗಿದೆ.

ಶುಂಠಿ

ಶುಂಠಿಯನ್ನು ಸಾಮಾನ್ಯವಾಗಿ ಸಾಂಬಾರು ಪದಾರ್ಥವಾಗಿ ಬಳಸಲಾಗುತ್ತದೆ. ಇದು ಕೇವಲ ಸಾಂಬಾರಿನಲ್ಲಿ ಬೆರೆತು ಬಾಯಿಗೆ ರುಚಿ ನೀಡುವುದು ಮಾತ್ರವಲ್ಲದೆ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಕೂಡಾ ಇದು ಒಳಗೊಂಡಿದೆ. ಗಡ್ಡೆ ರೂಪದ ಈ ಗಿಡಮೂಲಿಕೆಯು ವಿಟಮಿನ್ ಬಿ ನಂತಹ ಪೋಷಕಾಂಶಗಳಿಂದ ತುಂಬಿರುತ್ತದೆ. ಯುಗಯುಗಾಂತರಗಳಿಂದಲೂ ಇದನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ಜೊತೆಗೆ ಪರಿಪೂರ್ಣವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು.

ಶುಂಠಿಯನ್ನು ಚಹಾ ತಯಾರಿಸುವಾಗ ಬೆರೆಸಿದರೆ ಅದ್ಬುತ ಸ್ವಾದದ ಜೊತೆ ಜೊತೆಗೆ ದೇಹದಲ್ಲಿ ರೊಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಶೀತ, ಕಫದಂತಹಾ ಸಮಸ್ಯೆಯಿಂದ ಬಳಲುತ್ತಿರುವವರು ಶುಂಠಿಯನ್ನು ಸೇವನೆ ಮಾಡುವುದರಿಂದ ಬಹುಬೇಗ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಕಾಳುಮೆಣಸು

ಕಾಳುಮೆಣಸು ಭಾರತೀಯ ಸಾಂಬಾರು ಪದಾರ್ಥಗಳಲ್ಲಿ ಅತ್ಯಂತ ಬೇಡಿಕೆಯ ಮಸಾಲೆಯಾಗಿದ್ದು. ಮಸಾಲೆಯುಕ್ತ ಪದಾರ್ಥಗಳನ್ನು ತಯಾರಿಸುವಾಗ ಕಾಳುಮೆಣಸನ್ನು ಸರ್ವೆ ಸಾಮಾನ್ಯವಾಗಿ ಬಳಸಲಾಗುತ್ತದೆ.

ಚಹಾ ತಯಾರಿಸುವಾಗ ಒಂದೆರಡು ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಸೇರಿಸಿ ಸೇವನೆ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಾಮಾನ್ಯ ಶೀತದ ಸಮಸ್ಯೆಯಿಂದ ಬಳಲುತ್ತಿರುವವರು ಕಾಳು ಮೆಣಸನ್ನು ಸೇವನೆ ಮಾಡುವುದು ಉತ್ತಮ. ಕಾಳುಮೆಣಸಿನ ಪುಡಿ ಬೆರೆಸಿರುವ ಚಹಾ ಸೇವನೆಯಿಂದಾಗಿ ಗಂಟಲಿನಲ್ಲಿ ಕಿರಿ-ಕಿರಿ ಯಂತಹ ಸಮಸ್ಯೆಗಳಿಂದ ಬಹುಬೇಗ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಈ ಕಾಳುಮೆಣಸಿನ ಚಹಾ ಸೇವನೆ ದೇಹದ ಆರೋಗ್ಯಕ್ಕೆ ಬಹಳ  ಉತ್ತಮವಾದದ್ದು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.