ಹೀಗೂ ಉಂಟೇ: ಕುರೂಪಿ ವ್ಯಕ್ತಿಯನ್ನು ಮದುವೆಯಾಗಲು “ಈ ದೇಶದಲ್ಲಿ” ಬಹು ಬೇಡಿಕೆ!

ಹೊಟ್ಟೆ ಬೆಳೆಸಲು ಎಲ್ಲಾ ತಯಾರಿ ಮಾಡಿಕೊಂಡು ಪ್ರಯತ್ನ ನಡೆಸುತ್ತಾರೆ.

Team Udayavani, Aug 9, 2021, 12:06 PM IST

ಹೀಗೂ ಉಂಟೇ: ಕುರೂಪಿ ವ್ಯಕ್ತಿಯನ್ನು ಮದುವೆಯಾಗಲು “ಈ ದೇಶದಲ್ಲಿ” ಬಹು ಬೇಡಿಕೆ!

ಅಲೆಮಾರಿ ಜನಾಂಗ ಹಾಗೂ ಬುಡಕಟ್ಟು ವಾಸಿಗಳಲ್ಲಿ ಇನ್ನೂ ಕೆಲವೊಂದು ವಿಚಿತ್ರ ಆಚರಣೆ-ಸಂಪ್ರದಾಯಗಳು ಉಳಿದುಕೊಂಡಿವೆ. ಅದರಲ್ಲೂ ಕೆಲವೊಂದು ದೇಶಗಳಲ್ಲಿ ಬೀಡು ಬಿಟ್ಟಿರುವ ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಲ್ಲಿರುವ ಕೆಲವೊಂದು ಪದ್ಧತಿಗಳಿಗೆ ತದ್ವಿರುದ್ಧವಾದ ಪದ್ಧತಿ ನಡೆಸಿಕೊಂಡು ಬರುತ್ತಿರುತ್ತಾರೆ. ಇಥಿಯೋಪಿಯಾದ ಓಮೋ ಕಣಿವೆಯಲ್ಲಿ ವಾಸಿಸುವ ಬೋಡಿ ಬುಡಕಟ್ಟು ಜನಾಂಗದವರಲ್ಲಿ ಒಂದು ಆಚರಣೆ ಇದೆ. ಅದರ ಬಗ್ಗೆ ಕೇಳಿದರೆ ನೀವು ಖಂಡಿತವಾಗಿಯೂ ಬೆರಗುಗೊಳ್ಳುತ್ತೀರಿ. ಹಾಗಾದರೆ ಅದು ಯಾವ ಆಚರಣೆ ಅಂತಿರಾ ? ಮುಂದೆ ಓದಿ..

ಹೌದು, ಸಖತ್ ಹೈಟ್, ಕಟ್ಟುಮಸ್ತಾದ ಬಾಡಿ ಹೊಂದಿದ ಯುವಕರನ್ನು ಮದುವೆಯಾಗಲು ಹುಡುಗಿಯರು ಕ್ಯೂನಲ್ಲಿ ನಿಲ್ಲುತ್ತಾರೆ ಎನ್ನುವುದು ನಮ್ಮ ನಿಮ್ಮೆಲ್ಲರ ಊಹೆ. ಆದರೆ, ಇದನ್ನು ಸುಳ್ಳಾಗಿಸುವಂತಹ ಪದ್ಧತಿ ಬೋಡಿ ಜನಾಂಗದಲ್ಲಿದೆ. ಅತೀ ಕೆಟ್ಟದಾಗಿ ಕಾಣುವ ಯುವಕನನ್ನು ಮದುವೆಯಾಗಲು ಹುಡುಗಿಯರು ತುದಿಗಾಲಿನ ಮೇಲೆ ನಿಂತಿರುತ್ತಾರೆ ಎಂದರೆ ನೀವು ನಂಬಲೇ ಬೇಕು.

ಹುಡುಗಿಯರಿಗಾಗಿ ಅಂಧಗೆಡಿಸಿಕೊಳ್ಳುವ ಹುಡುಗರು :
ಡೊಳ್ಳು ಹೊಟ್ಟೆ, ವಿಕಾರವಾದ ದೇಹ ಸಿರಿ ಹೊಂದಲು ಯಾವ ಯುವಕತಾನೆ ಮುಂದಾಗುತ್ತಾನೆ ಹೇಳಿ ? ಆದರೆ ಬೋಡಿ ಬುಡಕಟ್ಟಿನ ಯುವಕರು ಹೊಟ್ಟೆ ಬೆಳೆಸಿಕೊಂಡು, ವಿರೂಪವಾಗಿ ಕಾಣಿಸಿಕೊಳ್ಳಲು ಹರಸಾಹಸ ಪಡುತ್ತಾರೆ. ಅವರ ಈ ವಿರೂಪತನಕ್ಕೆ ಕಾರಣ ‘ಹೆಣ್ಣು’….ಬೋಡಿ ಬುಡಕಟ್ಟು ಜನಾಂಗದಲ್ಲಿ ದೊಡ್ಡಹೊಟ್ಟೆ ಹೊಂದಿದವರನ್ನು ಸುಂದರ ಎಂದು ಪರಿಗಣಿಸಲಾಗುತ್ತದೆ.

ಮಾಡರ್ನ್ ಸ್ವಯಂ ವರ :
ಈ ಬುಡಕಟ್ಟು ಜನಾಂಗದಲ್ಲಿ ಪ್ರತಿವರ್ಷ ಒಂದು ಸ್ಪರ್ಧೆ ನಡೆಯುತ್ತದೆ. ಅದೇನೆಂದರೆ ಕೆಟ್ಟ ಮನುಷ್ಯ ಸ್ಪರ್ಧೆ. ಅತ್ಯಂತ ಕೆಟ್ಟ ಮನುಷ್ಯನ ಸ್ಪರ್ಧೆಯಲ್ಲಿ ಗೆದ್ದವರಿಗೆ ಅತ್ಯಂತ ಸುಂದರ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಆತನನ್ನು ಮದುವೆಯಾಗಲು ಹುಡುಗಿಯರ ನಡುವೆ ಪೈಪೋಟಿಯೇ ನಡೆಯುತ್ತದೆ. ಈ ಸ್ಪರ್ಧೆಯನ್ನು ಗೆಲ್ಲಲು ಬುಡಕಟ್ಟು ಜನಾಂಗದ ಪುರುಷರು ಆರು ತಿಂಗಳ ಮೊದಲೇ ತಯಾರಿಯನ್ನು ಆರಂಭಿಸುತ್ತಾರೆ. ಹೊಟ್ಟೆ ಬೆಳೆಸಲು ಎಲ್ಲಾ ತಯಾರಿ ಮಾಡಿಕೊಂಡು ಪ್ರಯತ್ನ ನಡೆಸುತ್ತಾರೆ.

ಹಸುವಿನ ರಕ್ತ ಸೇವನೆ :
ನಾವು ನೀವು ಕಟ್ಟುಮಸ್ತಾದ ದೇಹ ಹೊಂದಲು ಜಿಮ್ ಮೊರೆ ಹೋಗುತ್ತೇವೆ. ಆದರೆ, ಈ ಜನಾಂಗದ ಯುವಕರು ತಮ್ಮ ದೇಹವನ್ನು ವಿರೂಪಗೊಳಿಸಲು ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳುತ್ತಾರೆ. ಹಸುವಿನ ರಕ್ತ, ಹಾಲು ಕುಡಿಯುತ್ತಾರೆ. ಸ್ಪರ್ಧೆಯ ಆರು ತಿಂಗಳ ಮೊದಲು ಪುರುಷರು ಪ್ರತ್ಯೇಕ ಗುಡಿಸಲುಗಳಲ್ಲಿ ವಾಸವಾಗಿರುತ್ತಾರೆ. ಈ ಸಮಯದಲ್ಲಿ ಅವರು ಲೈಂಗಿಕ ಸಂಬಂಧ ಹೊಂದಲು ಅವಕಾಶ ಇರುವುದಿಲ್ಲ.

ನಂತರ ಸ್ಪರ್ಧೆಯ ದಿನದಂದು ತಮ್ಮ ಭಾರವಾದ ಹೊಟ್ಟೆ ಹೊತ್ತುಕೊಂಡು ಸ್ಪರ್ಧೆಗೆ ಬರುತ್ತಾರೆ. ಯಾರು ಹೆಚ್ಚು ದಪ್ಪನಾಗಿರುತ್ತಾನೋ ಅವನು ಸುಂದರ ಎಂದು ಪರಿಗಣಿಸಲಾಗುತ್ತದೆ. ನಂತರ ಗ್ರಾಮಸ್ಥರು ಅತ್ಯಂತ ಕೆಟ್ಟ ವ್ಯಕ್ತಿಗೆ ನಾಯಕ ಎಂಬ ಬಿರುದು ನೀಡುತ್ತಾರೆ. ಇನ್ನು ಹುಡುಗಿಯರು ಸೌಂದರ್ಯವತಿಯರೆಂದು ತೀರ್ಮಾನಿಸಲು ಇವರು ಬೇರೆಯದೇ ಮಾನದಂಡ ಉಪಯೋಗಿಸುತ್ತಾರೆ. ಈ ಬುಡಕಟ್ಟು ಸಮುದಾಯದ ಹುಡುಗಿಯರ ದೇಹದ ಮೇಲೆ ಹೆಚ್ಚು ಹಚ್ಚೆ ಗುರುತುಗಳನ್ನು ಸುಂದರವೆಂದು ಪರಿಗಣಿಸಲಾಗುತ್ತದೆ. ಚಾಕು ಅಥವಾ ಬ್ಲೇಡ್ ಗಳಿಂದ ಹುಡುಗಿಯರ ದೇಹಗಳನ್ನು ಕತ್ತರಿಸಿದ ಗುರುತು ಮಾಡಲಾಗುತ್ತದೆ. ಅಂತ ಹುಡುಗಿಯರನ್ನು ಪುರುಷರು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗಿದೆ.

*ಗಣೇಶ್ ಹಿರೇಮಠ್

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.