ಅಚ್ಚರಿ ಮೂಡಿಸುವ ಕಾಂಬೋಡಿಯಾದ ಸಹಸ್ರಲಿಂಗ !

ಅದು ಶಿರಸಿ, ಇದು ಸಾವಿರಾರು ಮೈಲಿ ದೂರದಲ್ಲಿರುವ ಕಾಂಬೋಡಿಯಾದ ಸಿಯಾಮ್

Team Udayavani, Dec 25, 2020, 4:07 PM IST

ಅಚ್ಚರಿ ಮೂಡಿಸುವ ಕಾಂಬೋಡಿಯಾದ ಸಹಸ್ರಲಿಂಗ !

ಬೆಳಿಗ್ಗೆ ತಿಂಡಿಗೆ ಅಕ್ಕಿ ಗಂಜಿ, ಊಟಕ್ಕೆ ಅಕ್ಕಿ ನೂಡಲ್ಸ್‌ , ಸಂಜೆಗೆ ಹುರಿದ ಅಕ್ಕಿಯ ಕೇಕ್‌, ರಾತ್ರಿ ಅಕ್ಕಿ ಸೂಪ್‌… ಅಂತೂ ಕಾಂಬೋಡಿಯಾದ ಐದು ದಿನಗಳ ಪ್ರವಾಸದಲ್ಲಿ ನಾವು ತಿಂದದ್ದು ಬರೀ ಅಕ್ಕಿಯಿಂದ ಮಾಡಿದ ತಿಂಡಿ-ತಿನಿಸುಗಳು ಮತ್ತು ಕುಡಿದದ್ದು ಎಳನೀರು ! ನೋಡಿದ್ದು ಹರಿಯುವ ನದಿ, ಹಳ್ಳ-ಕೊಳ್ಳಗಳು, ಮರಗಳ ನಡುವೆ ಭವ್ಯವಾಗಿ ನಿಂತ ಶೈವ, ವೈಷ್ಣವ ಬೌದ್ಧದೇಗುಲಗಳು ಮತ್ತು ಕಣ್ಮನ ತುಂಬುವ ಹಸಿರು ಭತ್ತದ ಗದ್ದೆಗಳು ! ಅವನ್ನು ತೋರಿಸುತ್ತ ಸುಮಾರು ಸಾವಿರಕ್ಕೂ ಹೆಚ್ಚು ಭತ್ತದ ತಳಿ ಹೊಂದಿರುವ ನಮ್ಮ ದೇಶ ಜಗತ್ತಿನ “ಭತ್ತದ ಬಟ್ಟಲು’; ನಮಗೆ ಅಕ್ಕಿ ಆಹಾರ ಮಾತ್ರವಲ್ಲ , ಪೂಜ್ಯ. “ನಮ್ಮಲ್ಲಿ ಇಷ್ಟು ಸಮೃದ್ಧವಾಗಿ ಭತ್ತ ಬೆಳೆಯಲು ವಿಶೇಷ ನೀರು ಕಾರಣ’ ಎಂದ ನಮ್ಮೊಂದಿಗೆ ಗೈಡ್‌ ಆಗಿದ್ದ ಹಾನ್‌.

ವಿಶೇಷ ನೀರು ಎಂದೊಡನೆ ಪ್ರಶ್ನಾರ್ಥಕವಾಗಿ ನೋಡಿದ ನಮಗೆ ಅದು ಸಹಸ್ರಲಿಂಗಗಳ ಮೇಲೆ ಹಾದು ಬರುವ ಪವಿತ್ರ ಜಲ ಎಂಬ ಉತ್ತರ ಸಿಕ್ಕಿತು. ಟ್ರಾಕ್‌ ಜಾಮ್‌ನ ಕಿರಿಕಿರಿ ಇಲ್ಲದೇ, ಸುತ್ತಮುತ್ತಲ ಪ್ರಕೃತಿ ಸೌಂದರ್ಯ, ಜನಜೀವನವನ್ನು ಆರಾಮವಾಗಿ ನೋಡುತ್ತ ಟುಕ್‌ ಟುಕ್‌ನ ರಿಕ್ಷಾದಲ್ಲಿ ಪಯಣಿಸುತ್ತಿದ್ದವಳಿಗೆ ಸಹಸ್ರ ಲಿಂಗ ಎಂದೊಡನೆ ಮನಸ್ಸು ಅಜ್ಜನ ಊರಾದ ಶಿರಸಿಗೆ ಜಿಗಿದಿತ್ತು.

ಪೇಟೆಯಲ್ಲಿದ್ದ ಅಜ್ಜನ ಮನೆಯಿಂದ ಸುಮಾರು ಹದಿನೇಳು ಕಿ. ಮೀ. ದೂರದಲ್ಲಿ ಶಾಲ್ಮಲಾ ನದಿಯಲ್ಲಿ ಕಾಣುವ ಸಹಸ್ರಲಿಂಗಗಳು ಎಂದರೆ ಮಕ್ಕಳಾಗಿದ್ದ ನಮಗೆ ಆಕರ್ಷಣೆ. ಬೇಸಿಗೆಯಲ್ಲಿ ನೀರು ಕಡಿಮೆ ಇದ್ದಾಗ ಅಲ್ಲಲ್ಲಿ ಬಂಡೆಯ ಮೇಲೆ ಕುಳಿತು ಲಿಂಗಗಳನ್ನು ಲೆಕ್ಕ ಮಾಡುವುದು ಆಟವಾಗಿತ್ತು. ಯಾರು, ಯಾಕೆ ಕಟ್ಟಿಸಿದರು ಎಂಬ ನಮ್ಮ ಪ್ರಶ್ನೆಗೆ, ಬಹಳ ಹಿಂದೆ ಶಿರಸಿಯ ರಾಜನಾಗಿದ್ದ ಸದಾಶಿವರಾಯ ತನಗೆ ಸಂತಾನ ಭಾಗ್ಯ ದೊರೆಯಲಿ ಎಂಬ ಕಾರಣಕ್ಕೆ ಇಷ್ಟು ಲಿಂಗಗಳನ್ನು ಕೆತ್ತಿಸಿದನಂತೆ ಎಂದು ಅಜ್ಜ ಹೇಳುತ್ತಿದ್ದರು. ಶಿವರಾತ್ರಿಯಂದು ಅಲ್ಲಿಗೆ ಹೋಗಿ ಪೂಜೆ ಮಾಡಿದರೆ ಪುಣ್ಯ ಎಂಬ ನಂಬಿಕೆ ಇದ್ದಿದ್ದರಿಂದ ದೂರದೂರದಿಂದ
ಪ್ರವಾಸಿಗರು ಸೇರುತ್ತಿದ್ದರು. ಈಗ ತೂಗು ಸೇತುವೆ ಹೊಂದಿರುವ ಸಹಸ್ರಲಿಂಗ, ಶಿರಸಿಯ ಧಾರ್ಮಿಕ ಮತ್ತು ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ. ಅದು ಶಿರಸಿ, ಇದು ಸಾವಿರಾರು ಮೈಲಿ ದೂರದಲ್ಲಿರುವ ಕಾಂಬೋಡಿಯಾದ ಸಿಯಾಮ್‌ ರೀಪ್‌. ಇಲ್ಲಿಯೂ ಸಹಸ್ರಲಿಂಗವೆ! ಎಂದು ಆಶ್ಚರ್ಯವಾಯಿತು. ನೋಡುವ ಕುತೂಹಲವೂ ಮೂಡಿತು.

ಇರುವುದೆಲ್ಲಿ?
ಕುಲೆನ್‌ ಬೆಟ್ಟಗಳ ಇಳಿಜಾರಿನಲ್ಲಿ, ಸ್ಟಂಗ್‌ ಕ್ಬಾಲ್‌ ಸ್ಪೀನ್‌ ನದಿಯಲ್ಲಿ ಕಂಡು ಬರುವ ಸುಮಾರು ನೂರಾಐವತ್ತು ಮೀ. ಜಾಗದಲ್ಲಿ ಈ ಸಹಸ್ರ ಲಿಂಗಗಳು ಕಂಡುಬರುತ್ತವೆ. ಕ್ಬಾಲ್‌ ಸ್ಪೀನ್‌ ಎಂದರೆ ಸೇತುವೆಯ ತಲೆ ಎಂದರ್ಥ. ಈ ಸ್ಥಳದಲ್ಲಿರುವ ನಿಸರ್ಗನಿರ್ಮಿತ ಕಲ್ಲಿನ ಸೇತುವೆಯಿಂದ ಈ ಹೆಸರು ಬಂದಿದೆ. ಇದು ಸಿಯಾಮ್‌ ರೀಪ್‌ ನ ಮುಖ್ಯ ದೇವಸ್ಥಾನ ಆಂಗೋರ್‌ವಾಟ್‌ನಿಂದ ಸುಮಾರು ಇಪ್ಪತ್ತೈದು ಕಿಮೀ ದೂರದಲ್ಲಿದೆ. ಕಾಂಬೋಡಿಯಾದ ತುಂಬೆಲ್ಲಾ ಹಿಂದೂ ಸಂಸ್ಕೃತಿಯನ್ನು ಸಾರುವ ನೂರಾರು ದೇವಾಲಯಗಳಿದ್ದು ಬಹಳಷ್ಟು ಇನ್ನೂ ಬೆಳಕಿಗೆ ಬಂದಿಲ್ಲ ಎನ್ನಲಾಗುತ್ತದೆ. ಅದೇ ರೀತಿ ದಟ್ಟ ಕಾಡಿನ ನಡುವೆ ಹೊರಜಗತ್ತಿಗೆ ಅಪರಿಚಿತವಾಗಿದ್ದ ಈ ಸ್ಥಳವನ್ನು 1969ರಲ್ಲಿ ಜೀನ್‌ ಬಾಲೆºಟ್‌ ಎಂಬ ಅನ್ವೇಷಕ, ಯೋಗಿಯೊಬ್ಬನ ನೆರವಿನಿಂದ ಕಂಡುಹಿಡಿದ. ದಟ್ಟವಾದ ಕಾಡಿನ ಹಾದಿಯಲ್ಲಿ ಸುಮಾರು ಎರಡು ಕಿ. ಮೀ. ಹಾದಿಯ ಪಯಣ.

ಕಿರಿದಾದ ಏರುಹಾದಿಯಾದ್ದರಿಂದ ಎರಡು ತಾಸು ಹತ್ತಲು ಬೇಕು. ಇದಲ್ಲದೇ ಸಹಸ್ರ ಲಿಂಗಗಳು ಇದ್ದರೂ ಅವುಗಳಿಗೆ ಪೂಜೆ ಸಲ್ಲಿಸಲಾಗುವುದಿಲ್ಲ. ಹೀಗಾಗಿ, ಈಗಲೂ ಇಲ್ಲಿಗೆ ಹೆಚ್ಚು ಜನ ಭೇಟಿ ನೀಡುವುದಿಲ್ಲ. ಜುಲೈನಿಂದ ಅಕ್ಟೋಬರ್‌ ಇಲ್ಲಿಗೆ ಹೋಗಲು ಸೂಕ್ತ ಕಾಲ. ಬೆಳಿಗ್ಗೆ ಎಂಟರಿಂದ ಚಾರಣಕ್ಕೆ ತೆರೆದಿದ್ದು, ಸಂಜೆ ಮೂರೂವರೆಯ ನಂತರ ಪ್ರವೇಶ ನಿಷೇಧಿಸಲಾಗಿದೆ. ಸರ್ಕಾರದಿಂದ ನೀಡುವ ಅಂಗೋರ್‌ವಾಟ್‌ ದೇಗುಲ ಸಮುಚ್ಚಯದ ಟಿಕೆಟ್‌ನಲ್ಲಿ ಇದರ ದರವೂ ಸೇರಿದೆ.

ಕಟ್ಟಿಸಿದವರಾರು?
ಹನ್ನೊಂದು-ಹನ್ನೆರಡನೇ ಶತಮಾನದಲ್ಲಿ ಆಳಿದ ಅರಸರಾದ ಒಂದನೆಯ ಸೂರ್ಯವರ್ಮನ್‌ ಮತ್ತು ಎರಡನೆಯ ಉದಯಾದಿತ್ಯವರ್ಮನ್‌ ಈ ಲಿಂಗಗಳನ್ನು ಕೆತ್ತಿಸಿದರು ಎನ್ನಲಾಗುತ್ತದೆ. ರಾಜಾ ಎರಡನೇ ಉದಯಾದಿತ್ಯವರ್ಮನ್‌ ಇಲ್ಲಿ ಚಿನ್ನದ ಲಿಂಗವನ್ನು ಸ್ಥಾಪಿಸಿದ್ದ ಎನ್ನುವ ಮಾತೂ ಕೇಳಿಬರುತ್ತದೆ. ನದಿಯ ಹರಿಯುವಾಗ ಅದರ ತಳದಲ್ಲಿ ಮರಳುಗಲ್ಲುಗಳ ಮೇಲೆ ಸಾವಿರಾರು ಲಿಂಗಗಳನ್ನು ಕೆತ್ತಲಾಗಿದೆ. ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವರ ಕೆತ್ತನೆಗಳನ್ನು ಇಲ್ಲಿ ಕಾಣಬಹುದಾಗಿದೆ.

ಹಾಲ್ಗಡಲಿನಲ್ಲಿ ಅನಂತ ನಾಗನ ಮೇಲೆ ಮಲಗಿರುವ ಮಲಗಿರುವ ವಿಷ್ಣು ಮತ್ತು ಕಾಲ ಬಳಿ ಲಕ್ಷ್ಮೀ, ಉಮೆಯೊಂದಿಗಿರುವ ಶಿವ ಮತ್ತು ಪದ್ಮನಾಭನಿಂದ ಬ್ರಹ್ಮ ಮುಂತಾದ ಸುಂದರ ಕೆತ್ತನೆಗಳನ್ನು ನೀರಿನಲ್ಲಿ ಮತ್ತು ತಟದ ಇಕ್ಕೆಲಗಳ ಕಲ್ಲಿನಲ್ಲಿ ಕಾಣಬಹುದು. ಇದಲ್ಲದೆ ನಂದಿ, ಕಪ್ಪೆ, ಮೊಸಳೆ, ನಾಗ ಮುಂತಾದ ಪ್ರಾಣಿಗಳ ಉಬ್ಬು ಕೆತ್ತನೆಗಳನ್ನೂ ಅಲ್ಲಲ್ಲಿ ಕಾಣಬಹುದು. ಒಟ್ಟಿನಲ್ಲಿ ರಾಮಾಯಣದ ಹಲವು ದೇವ-ದೇವಿಯರು, ಚಿತ್ರ-ಕತೆಗಳನ್ನು ಒಳಗೊಂಡ ಶಿಲ್ಪ-ಕೆತ್ತನೆಗಳು ಇಲ್ಲಿವೆ.

ವಿಶೇಷ ಶಕ್ತಿಯ ನೀರು !
ಚಿಕ್ಕ ಜಲಪಾತದಿಂದ ಧುಮುಕಿ ಹರಿವ ನೀರು ಈ ಸಾವಿರ ಲಿಂಗಗಳ ಮೇಲೆ ಹರಿಯುತ್ತಿದ್ದಂತೆ ಅದಕ್ಕೆ ವಿಶೇಷ ಶಕ್ತಿ ಲಭ್ಯವಾಗುತ್ತದೆ ಎಂದು ನಂಬಲಾಗುತ್ತದೆ. ಆದ್ದರಿಂದಲೇ ಪ್ರಾಚೀನ ಕಾಲದಲ್ಲಿ ರಾಜರು ಇಲ್ಲಿಗೆ ಬಂದು ಸ್ನಾನ ಮಾಡುತ್ತಿದ್ದರು ಎಂಬ ಅಭಿಪ್ರಾಯವಿದೆ. ನದಿಯಲ್ಲಿ ಅಲ್ಲಲ್ಲಿ ಕಾಣುವ ಆಯತಾಕಾರದ ಕಟ್ಟೋಣಗಳು ಇದಕ್ಕೆ ಪುಷ್ಟಿ ನೀಡುತ್ತವೆ. ಇದಲ್ಲದೆ ಪೂಜಾರಿಗಳು ಇಲ್ಲಿ ಬಂದು ಪೂಜೆ ಮಾಡಿ ಬದುಕಿಗೆ ಮೂಲಾಧಾರವಾದ ನೀರನ್ನು ನೀಡಿದ ದೈವಗಳಿಗೆ ವಂದನೆ ಸಲ್ಲಿಸುತ್ತಿದ್ದರು ಎಂದೂ ಹೇಳಲಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಇಲ್ಲಿಂದ ನೀರು ಭತ್ತದ ಗದ್ದೆಗಳಿಗೆ ಹರಿದು ಫ‌ಲವತ್ತತೆ ಮತ್ತು ಸಮೃದ್ಧಿಗೆ ಕಾರಣವಾಗಿದೆ ಎಂಬುದು ಕೃಷಿಕರ ಬಲವಾದ ನಂಬಿಕೆ. ಒಳ್ಳೆಯ ಅದೃಷ್ಟಕ್ಕಾಗಿ ಪ್ರವಾಸಿಗರು ಈ ನದಿಯ ನೀರನ್ನು ಪ್ರೋಕ್ಷಣೆ ಮಾಡುವುದು ಈಗ ರೂಢಿಯಲ್ಲಿದೆ.

ಹಿಂದೂ ಧರ್ಮ ಅತ್ಯಂತ ಪ್ರಬಲವಾಗಿದ್ದ ಕಾಂಬೋಡಿಯಾದಲ್ಲಿ ಕಲ್ಲಿನ ಲಿಂಗ, ಶಿವ-ವಿಷ್ಣು ಮೂರ್ತಿಗಳು ಕಂಡುಬಂದದ್ದು ಸಹಜ. ಆದರೆ, ನಮ್ಮ ಶಾಲ್ಮಲಾ ನದಿಯಂತೆ ಅಲ್ಲಿನ ಸ್ಟಂಗ್‌ ನದಿಯಲ್ಲಿ ಸಹಸ್ರಲಿಂಗದ ಕೆತ್ತನೆ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ !

ಕೆ. ಎಸ್‌. ಚೈತ್ರಾ

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.