ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯೋಗಿ?

"ಯೋಗಿ ಮುಂದಿನ ಪ್ರಧಾನಿ' ಧ್ವನಿಗೆ ಮತ್ತಷ್ಟು ಬಲ; "ದೆಹಲಿ ಪ್ರವೇಶ'ದ ಬಾಗಿಲು ತೆರೆದ ಈ ಫ‌ಲಿತಾಂಶ

Team Udayavani, Mar 11, 2022, 11:30 AM IST

ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯೋಗಿ?

ಪ್ರಸಕ್ತ ಚುನಾವಣೆಯ ಫ‌ಲಿತಾಂಶವು ಯೋಗಿ ಆದಿತ್ಯನಾಥ್‌ ಅವರ “ದೆಹಲಿ ಪ್ರವೇಶ’ದ ಬಾಗಿಲನ್ನು ತೆರೆಯಲಿದೆಯೇ?

“2022ರ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಭೂತಪೂರ್ವ ಜಯ ಗಳಿಸಿದ್ದೇ ಆದಲ್ಲಿ ಯೋಗಿ ಆದಿತ್ಯನಾಥ್‌ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಉತ್ತರಾಧಿಕಾರಿಯ ಪಟ್ಟಕ್ಕೇರಲಿದ್ದಾರೆ’ ಎಂಬ ಮಾತುಗಳು ಚುನಾವಣೆಗೂ ಮುನ್ನವೇ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಈಗ ಈ ಗೆಲುವು ಯೋಗಿ ಅವರ “ಪ್ರಧಾನಿ ಹುದ್ದೆ’ಯ ಹಾದಿಯನ್ನು ಸಲೀಸು ಮಾಡಿದಂತಿದೆ.

2024ರ ವೇಳೆಗೆ ಪ್ರಧಾನಿ ಮೋದಿ ಅವರಿಗೆ 73 ವರ್ಷ ತುಂಬಲಿವೆ. ಬಿಜೆಪಿಯ ಇತಿಹಾಸವನ್ನು ನೋಡಿದರೆ, 75 ವರ್ಷ ದಾಟಿದ ನಾಯಕರಿಗೆ ಈವರೆಗೆ ಪ್ರಧಾನಿ ಹುದ್ದೆ ಸಿಕ್ಕಿಲ್ಲ. ಹೀಗಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೂ, ಪ್ರಧಾನಿ ಹುದ್ದೆಗೆ ಬೇರೊಬ್ಬ ನಾಯಕನನ್ನು ಪಕ್ಷ ಆಯ್ಕೆ ಮಾಡಬಹುದು ಎಂಬ ಗುಸು ಗುಸು ಕೇಳಿಬರುತ್ತಲೇ ಇದೆ.

ಪ್ರಧಾನಿ ಮೋದಿ ಅವರ ಬಲಗೈ ಬಂಟ, ಬಿಜೆಪಿಯ ಚಾಣಕ್ಯ ಎಂದು ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೋದಿ ಬಳಿಕ “ಪ್ರಧಾನಿ’ ಸ್ಥಾನ ತುಂಬಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಟ್ರೆಂಡ್‌ ಬದಲಾಗುತ್ತಿದೆ. ಉತ್ತರಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಯಶಸ್ವಿ ಆಡಳಿತ ನಡೆಸಿರುವ ಹಾಗೂ ಮತ್ತೊಮ್ಮೆ ಜನಾಭಿಪ್ರಾಯವನ್ನು ತಮ್ಮತ್ತ ಸೆಳೆದಿರುವ ಯೋಗಿ ಆದಿತ್ಯನಾಥ್‌ “ಮುಂದಿನ ಪಿಎಂ’ ಆಗಲಿ ಎಂಬ ಧ್ವನಿಗೆ ಈ ಫ‌ಲಿತಾಂಶ ಬಲ ನೀಡಿದೆ.

ಅಲ್ಲದೇ, ಅಮಿತ್‌ ಶಾ ಅವರಿಗೆ ಹೋಲಿಸಿದರೆ ಯೋಗಿಯವರ ವರ್ಚಸ್ಸು ದೇಶಾದ್ಯಂತ ಹೆಚ್ಚಳವಾಗುತ್ತಿದೆ.

ಉತ್ತರಪ್ರದೇಶದಲ್ಲಿ ಯೋಗಿ ಅವರು ಆಡಳಿತ-ವಿರೋಧಿ ಅಲೆಯನ್ನು ಹಿಮ್ಮೆಟ್ಟಿಸಿದ್ದು ಮಾತ್ರವವಲ್ಲದೇ, “ಆಡಳಿತ-ಪರ’ವಾಗಿ ಹೊಸ ಅಲೆ ಎಬ್ಬಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಿಜೆಪಿಯ ನಂ.2 ನಾಯಕನಾಗಿ ಹೊರಹೊಮ್ಮಿದ್ದಾರೆ.

ಮೋದಿ-ಯೋಗಿ ಸಾಮ್ಯತೆ ಏನು?
ಹಿಂದುತ್ವದ ಜೊತೆಗೆ ಉತ್ತರಪ್ರದೇಶದಲ್ಲಾದ ಅಭಿವೃದ್ಧಿಯು ಯೋಗಿಗೆ ಪ್ಲಸ್‌ ಪಾಯಿಂಟ್‌. ಮೋದಿಯವರಂತೆಯೇ, ಯೋಗಿ ಕೂಡ ಬಲಿಷ್ಠ ರಾಜಕೀಯ ನಾಯಕ. ಅಂತೆಯೇ ಆಡಳಿತದಲ್ಲಿ ಗಟ್ಟಿಯಾದ ಹಿಡಿತವೂ ಇದೆ. ವೈಯಕ್ತಿಕ ವಿಚಾರಕ್ಕೆ ಬಂದರೆ, ಯೋಗಿ ಹಾಗೂ ಮೋದಿ ಇಬ್ಬರೂ ಕೌಟುಂಬಿಕ ಸಂಬಂಧಗಳಿಂದ ದೂರವಿರುವವರು. ಬಿಜೆಪಿಯಲ್ಲಿರುವ ಬೇರೆ ನಾಯಕರಿಗೆ ಹೋಲಿಸಿದರೆ ಜನರೊಂದಿಗಿನ ಸಂಪರ್ಕದಲ್ಲೂ ಯೋಗಿ ಸೈ ಎನಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಪೈಪೋಟಿ ನೀಡುವ ಸಾಮರ್ಥ್ಯ ಯೋಗಿಗೆ ಇದೆಯಾದರೂ, ಪಿಎಂ ಹುದ್ದೆಗೆ “ಅತ್ಯುತ್ತಮ ಆಯ್ಕೆ’ಯಾಗಿ ಹೊರಹೊಮ್ಮಬೇಕೆಂದರೆ ಅವರು ದೇಶವ್ಯಾಪಿಯಾಗಿ ತಮ್ಮ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕಾದ, ವಾಕ್ಚಾತುರ್ಯವನ್ನು ವೃದ್ಧಿಸಿಕೊಳ್ಳಬೇಕಾದ ಅಗತ್ಯವಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ವಾದ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.