ರಾಜಕೀಯ ಪ್ರತಿಷ್ಠೆಯ ದಾಳವಾದ ಹಾಸನದ ಟ್ರಕ್‌ ಟರ್ಮಿನಲ್‌


Team Udayavani, May 5, 2022, 11:15 AM IST

ರಾಜಕೀಯ ಪ್ರತಿಷ್ಠೆಯ ದಾಳವಾದ ಹಾಸನದ ಟ್ರಕ್‌ ಟರ್ಮಿನಲ್‌

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರ ಹೇಮಗಂಗೋತ್ರಿ ಹಾಸನದಲ್ಲಿ ಪ್ರಾರಂಭವಾಗಿ 30 ವರ್ಷಗಳಾಗಿವೆ. ಈ ಕೇಂದ್ರದಲ್ಲಿ ಏಳು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ 380 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಕೇಂದ್ರ ಮೂರು ದಶಕಗಳಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಸುದ್ದಿಯಾಗುವುದಕ್ಕಿಂತ ಅಲ್ಲೀಗ ಟ್ರಕ್‌ ಟರ್ಮಿನಲ್‌ ನಿರ್ಮಾಣದ ವಿವಾದದಿಂದಾಗಿ ಜನರ ಗಮನ ಸೆಳೆದಿದೆ.

ಹಾಸನ ನಗರದಿಂದ ಮೂರ್‍ನಾಲ್ಕು ಕಿ.ಮೀ. ದೂರದಲ್ಲಿ ಬೆಂಗಳೂರು ಕಡೆಗೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಪಕ್ಕದಲ್ಲಿ ಸ್ನಾತಕೋತ್ತರ ಕೇಂದ್ರ ನಿರ್ಮಾಣವಾಗಿದೆ. ಒಟ್ಟು 70 ಎಕ್ರೆ ವಿಸ್ತೀರ್ಣದ ಹೇಮಗಂಗೋತ್ರಿ ಕ್ಯಾಂಪಸ್‌ ನಡುವೆಯೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೆದ್ದಾರಿಯ ಒಂದು ಬದಿಯಲ್ಲಿ ಸ್ನಾತಕೋತ್ತರ ಕೇಂದ್ರದ ಪ್ರಧಾನ ಕಟ್ಟಡಗಳು, ಗ್ರಂಥಾಲಯ ಕಟ್ಟಡ, ಆಟದ ಮೈದಾನ ವಿದ್ದರೆ ಹೆದ್ದಾರಿಯ ಮತ್ತೂಂದು ಬದಿಯಲ್ಲಿ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳ ಕಟ್ಟಡಗಳು, ಆರೋಗ್ಯ ಕೇಂದ್ರ, ಸಿಬಂದಿಯ ವಸತಿಗೃಹದ ಸಂಕೀರ್ಣವಿದೆ. ಈಗ ಟ್ರಕ್‌ ಟರ್ಮಿನಲ್‌ ನಿರ್ಮಾಣದ 3.40 ಎಕ್ರೆ ಗೋಮಾಳದ ಪ್ರದೇಶದ ದಕ್ಷಿಣಕ್ಕೆ ಎರಡು ವಿದ್ಯಾರ್ಥಿ ನಿಲಯಗಳು, ಪೂರ್ವಕ್ಕೆ ಆರೋಗ್ಯ ಕೇಂದ್ರ ಮತ್ತು ಸಿಬಂದಿ ವಸತಿಗೃಹದ ಸಂಕೀರ್ಣವಿದೆ. ದಕ್ಷಿಣಕ್ಕೆ ರಾಷ್ಟ್ರೀಯ ಹೆದ್ದಾರಿ, ಪಶ್ಚಿಮಕ್ಕೆ ಖಾಸಗಿ ಕಟ್ಟಡಗಳು ತಲೆ ಎತ್ತಿವೆ.

ಉನ್ನತ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ 3.40 ಎಕ್ರೆ ಗೋಮಾಳವನ್ನು ಹೇಮಗಂಗೋತ್ರಿಗೆ ವಹಿಸಬೇಕೆಂದು 6 ವರ್ಷಗಳಿಂದಲೂ ಬೇಡಿಕೆ ಇದೆ. ಆ ಜಾಗದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಬೇಕೆಂಬ ಕೆಂಚಟ್ಟಹಳ್ಳಿ ಗ್ರಾಮಸ್ಥರ ಬೇಡಿಕೆಯೂ ಇತ್ತು. ಈ ಬೇಡಿಕೆಗಳನ್ನು ಬದಿಗೊತ್ತಿ ಜಿಲ್ಲಾಡಳಿತವು ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಮಂಜೂರು ಮಾಡಿರುವುದರಿಂದ ಈಗ ವಿವಾದ ಸೃಷ್ಟಿಯಾಗಿದೆ.

ಈಗ ವಿದ್ಯಾರ್ಥಿಗಳು ಹಾಗೂ ಕೆಂಚಟ್ಟ ಹಳ್ಳಿ ಗ್ರಾಮಸ್ಥರ ಪರವಾಗಿ ಜೆಡಿಎಸ್‌ ಹೋರಾಟಕ್ಕಿಳಿದಿದೆ. ಎಚ್‌.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್‌ ಹೋರಾಟಕ್ಕಿಳಿದಿದ್ದರಿಂದ ಹಾಸನ ಕ್ಷೇತ್ರದ ಶಾಸಕ ಪ್ರೀತಂಗೌಡ ಕೆರಳಿದ್ದಾರೆ. ಈಗ ಟ್ರಕ್‌ ಟರ್ಮಿನಲ್‌ ನಿರ್ಮಾಣದ ಸಾಧಕ, ಬಾಧಕದ ಚರ್ಚೆಗಿಂತ ಎಚ್‌.ಡಿ.ರೇವಣ್ಣ – ಪ್ರೀತಂಗೌಡ ನಡುವಿನ ಪ್ರತಿಷ್ಠೆಯಾಗಿ ಟ್ರಕ್‌ ಟರ್ಮಿನಲ್‌ ನಿರ್ಮಾಣ ವಿವಾದ ಪರಿವರ್ತನೆಯಾಗಿದೆ.

ಟ್ರಕ್‌ ಟರ್ಮಿನಲ್‌ ನಿರ್ಮಾಣವಾಗಲೇ ಬೇಕೆಂದು ಶಾಸಕ ಪ್ರೀತಂಗೌಡ ಅವರ ಒತ್ತಡಕ್ಕೆ ಮಣಿದಿರುವ ಜಿಲ್ಲಾಡಳಿತವು ಈಗ ವಿದ್ಯಾ ರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಪ್ರತಿರೋಧ ಎದುರಿಸುವಂತಾಗಿದೆ. ಪ್ರತಿ ರೋಧ ಎದುರಾದ ತಕ್ಷಣ ಜಿಲ್ಲಾಡಳಿತವು ಪರ್ಯಾಯ ಜಾಗ ಹುಡುಕಿದ್ದರೆ ವಿವಾದವೇ ಎದುರಾಗುತ್ತಿರಲಿಲ್ಲ. ಆದರೆ ಆಡಳಿತಾರೂಢ ಪಕ್ಷದ ಶಾಸಕರ ಹಿತಾಸಕ್ತಿ ಹಾಗೂ ರಾಜಕೀಯ ಒತ್ತಡದ ಅಡಕತ್ತರಿಯಲ್ಲಿ ಜಿಲ್ಲಾಡಳಿತ ಸಿಕ್ಕಿಕೊಂಡಿದೆ. ಜನಪರವಾದ ಹೋರಾಟವೊಂದಕ್ಕೆ ಜೆಡಿಎಸ್‌ಗೆ ಶಾಸಕ ಪ್ರೀತಂಗೌಡ ಅವರೇ ಅವಕಾಶ ನೀಡಿದಂ ತಾಗಿದೆ, ವಿವಾದ ಈಗ ಕಂದಾಯ ಸಚಿವರ ಅಂಗಳದಲ್ಲಿದ್ದು ಅವರ ನಿರ್ಧಾರಕ್ಕೆ ಹಾಸನದ ಜನರು ಎದುರು ನೋಡುತ್ತಿದ್ದಾರೆ. ಸಚಿವ ಆರ್‌. ಅಶೋಕ್‌ ಅವರ ಸೂಕ್ತ ನಿರ್ಧಾರ ಕೈಗೊಳ್ಳುವರೇ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.