ಕೋವಿಡ್ ಕಾಲದಲ್ಲಿ True caller ಬಳಕೆದಾರರ ಸಂಖ್ಯೆ ದ್ವಿಗುಣ: ಕಾರಣವೇನು ?


Team Udayavani, Oct 20, 2020, 9:10 PM IST

true-caller

ಟ್ರೂ ಕಾಲರ್…. ಇಂದು ಹಲವರು ಬಳಸುತ್ತಿರುವ ಅಪ್ಲಿಕೇಶನ್. ಯಾವುದಾದರು ಹೊಸ ನಂಬರ್‌ನಿಂದ ಕರೆ ಬಂದರೇ ಅದು ಯಾರ ನಂಬರ್ ಎಂದು ತಿಳಿಯಲು ಮೊದಲು ನೆರವಾಗುವುದೇ ‘ಟ್ರೂ ಕಾಲರ್’. ಸಾಮಾನ್ಯವಾಗಿ ಬಹುತೇಕರ ಸ್ಮಾರ್ಟ್‌ಫೋನ್‌ ಗಳಲ್ಲಿ ಈ ಅಪ್ಲಿಕೇಶನ್  ಇನ್‌ಸ್ಟಾಲ್‌ ಆಗಿರುತ್ತದೆ.  ಆ ಮೂಲಕ ಅಜ್ಞಾತ (Unknown numbers) ಸಂಖ್ಯೆಯನ್ನು ಕಂಡುಹಿಡಿಯಲು ಟ್ರೂ ಕಾಲರ್ ಸಹಾಯವಾಗಿದೆ ಎನ್ನಬಹುದು.

ಇಂದು ಟ್ರೂ ಕಾಲರ್ ಎಂಬುದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ಕಾರಣವೇನೆಂದರೇ ಇದಕ್ಕೆ ತಿಂಗಳಿನಲ್ಲಿ ಸುಮಾರು 250 ಮಿಲಿಯನ್ ಸಕ್ರಿಯ ಬಳಕೆದಾರರಿದ್ದು, ಭಾರತದಲ್ಲೇ 185 ಮಿಲಿಯನ್ ಜನರು ನಿಯಮಿತವಾಗಿ ಬಳಸುತ್ತಾರೆ. ತಿಂಗಳ ಸಕ್ರಿಯ ಬಳಕೆದಾರರನ್ನು MAU (monthly Active users) ಎಂದು ಪರಿಗಣಿಸಲಾಗುತ್ತದೆ.

ಈ ಅಪ್ಲಿಕೇಶನ್ ನನ್ನು ದಿನವೊಂದಕ್ಕೆ (DAU-Daily Active Users) 200 ಮಿಲಿಯನ್ ಜನರು ಬಳಸುತ್ತಿದ್ದು, ಭಾರತದಲ್ಲೇ 150 ಮಿಲಿಯನ್ ಸಕ್ರಿಯ ಬಳಕೆದಾರರಿದ್ದಾರೆ ಎಂದು ಟ್ರೂ ಕಾಲರ್ ಸಂಸ್ಥೆ ತಿಳಿಸಿದೆ.

ಕೋವಿಡ್ ಸಾಂಕ್ರಮಿಕ ರೋಗದ ನಂತರ ಟ್ರೂ ಕಾಲರ್ ಬಳಕೆದಾರರ ಸಂಖ್ಯೆ 40 ಮಿಲಿಯನ್ ಹೆಚ್ಚಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಬರುತ್ತಿದ್ದ ಬೇಡದ ಕರೆಗಳಿಂದ ಪಾರಾಗಲು ಹೆಚ್ಚಿನ ಜನರು ಈ ಅಪ್ಲಿಕೇಶನ್ ನನ್ನು ಡೌನ್ ಲೋಡ್ ಮಾಡಿಕೊಂಡಿದ್ದರು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲರೊಂದಿಗಿನ ಫೋನ್ ಸಂವಹನವನ್ನು ಉತ್ಕೃಷ್ಟಗೊಳಿಸಿಲು ಟ್ರೂಕಾಲರ್ ಅನ್ನು ರೂಪಿಸಲಾಗಿದೆ. ಕಳೆದೊಂದು ವರ್ಷದಿಂದ ಈ ಅಪ್ಲಿಕೇಷನ್ ಅತ್ಯುತ್ತಮ ಬೆಳವಣಿಗೆಯನ್ನು ಕಂಡಿದೆ. ಟ್ರೂ ಕಾಲರ್ ಸ್ಥಾಪನೆಯಾಗಿದ್ದೇ ಕಾಲರ್ ಐಡಿ ಗುರುತಿಸಲು. ಅದರೀಗ ಇದೀಗ SMS ಬ್ಲಾಕಿಂಗ್  ಸೇರಿದಂತೆ ಅತ್ಯುತ್ತಮ ಫೀಚರ್ ಹೊಂದಿದ್ದೇವೆ. ಇದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಉತ್ಸುಕರಾಗಿದ್ದೇವೆ. ಬಳಕೆದಾರರು ನಮ್ಮ ಮೇಲಿರಿಸಿದ ನಂಬಿಕೆಗೆ ಕೃತಜ್ಞರಾಗಿದ್ದೇವೆ ಎಂದು ಟ್ರೂ ಕಾಲರ್ ಸಿಇಒ ಮತ್ತು ಸಹ ಸಂಸ್ಥಾಪಕ ಅಲನ್ ಮಮೇದಿ  ತಿಳಿಸಿದ್ದಾರೆ.

ಟ್ರೂ ಕಾಲರ್ ಮುಖ್ಯ ಕಚೇರಿ ಸ್ವೀಡನ್ ನ ಸ್ಟಾಕ್ ಹೋಮ್ ನಲ್ಲಿದೆ. ಭಾರತದಲ್ಲಿ ಬೆಂಗಳೂರು, ಗುರುಗಾಂವ್, ಮುಂಬೈ ನಲ್ಲೂ ಕಚೇರಿಗಳನ್ನು ಹೊಂದಿದೆ.  2009ರಲ್ಲಿ ಅಲನ್ ಮಮೇದಿ ಮತ್ತು ನಮಿ ಜರಿಂಗ್ ಹಾಮ್ ಸೇರಿ ಈ ಕಂಪೆನಿಯನ್ನು ಆರಂಭಿಸಿದರು.

ಟ್ರೂ ಕಾಲರ್ ಉಚಿತ ಅಪ್ಲಿಕೇಶನ್ ಆಗಿದ್ದು, ಕಾಲರ್ ಗಳನ್ನು ಗುರುತಿಸಲು ಮತ್ತು ಸ್ಪ್ಯಾಮ್ ಕರೆಗಳನ್ನು ಫೀಲ್ಟರ್ ಮಾಡಲು ನೆರವಾಗುತ್ತದೆ. ಇದು ಯಾವುದೇ  ಮೊಬೈಲ್ ನಂಬರ್ ಗಳನ್ನು ನಿರ್ಬಂಧಿಸುವುದಿಲ್ಲ. ಬದಲಿಗೆ ಕೇವಲ ಗುರುತಿಸವಿಕೆ ಮತ್ತು ಮ್ಯಾನುವಲ್ ಬ್ಲಾಕ್ ಮಾಡಲು ನೆರವಾಗುತ್ತದೆ. ಇದರಲ್ಲಿ ಕಾಲರ್ ಐಡೆಂಟಿಫಿಕೇಶನ್, ಕಾಲ್ ಬ್ಲಾಕಿಂಗ್, ಫ್ಲ್ಯಾಶ್ ಮೆಸೆಂಜಿಂಗ್, ಕಾಲ್ ರೆಕಾರ್ಡಿಂಗ್ ಮುಂತಾದ ಹಲವು ಆಯ್ಕೆಗಳಿವೆ.

ಆದರೇ ಟ್ರೂ ಕಾಲರ್ ನಿಂದ ಅಪಾಯವು ಇದ್ದು ಈ ವರ್ಷಾರಂಭದಲ್ಲಿ ಸೈಬರ್ ಅಪರಾಧಿಗಳು ಸುಮಾರು 4.75 ಕೋಟಿ ಭಾರತೀಯರ ದಾಖಲೆಗಳನ್ನು ಡಾರ್ಕ್ ವೆಬ್ ನಲ್ಲಿ ಮಾರಾಟಕಿಟ್ಟಿದ್ದರು. ಮಾತ್ರವಲ್ಲದೆ ಈ ದಾಖಲೆಗಳು 75 ಸಾವಿರ ರೂ. ಗಳಿಗೆ ಟ್ರೂ ಕಾಲರ್ ನಿಂದಲೇ ಲಭ್ಯವಾಗಿತ್ತು ಎಂದು ಅನ್ ಲೈನ್ ಇಂಟಲಿಜೆನ್ಸ್ ಫರ್ಮ್ ಸೈಬರ್ ತಿಳಿಸಿತ್ತು. ಆದರೇ ಈ ಆರೋಪವನ್ನು ಟ್ರೂ ಕಾಲರ್ ಸಂಸ್ಥೆ ನಿರಾಕರಿಸಿತ್ತು.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.