ನಿತೀಶ್ ಕುಮಾರ್ ರಾಜಕೀಯ ಸಿದ್ಧಾಂತ ಯಾವುದು? ಮುಂದಿದೆ ಸವಾಲುಗಳ ಸರಮಾಲೆ

ಮೋದಿ ವಿರೋಧಿಸಿ ಭಾರಿ ರಾಜಕೀಯ ಹೊಡೆತ ಅನುಭವಿಸಿದ್ದ ಪ್ರಭಾವಿ

Team Udayavani, Aug 10, 2022, 5:55 PM IST

web ex d 2 copy nithish

ಇತ್ತೀಚಿಗಿನ ಬಿಹಾರದ ಪ್ರಮುಖ ರಾಜಕಾರಣಿಗಳ ಹೆಸರನ್ನು ನೆನಪಿಸಿಕೊಂಡರೆ ಕೇಳಿ ಬರುವ ಹೆಸರೇ ಲಾಲು ಪ್ರಸಾದ್ ಯಾದವ್, ಅವರನ್ನು ಬಲವಾಗಿ ವಿರೋಧಿಸಿ ಸಮಾಜವಾದ ಸಿದ್ಧಾಂತದಲ್ಲಿ ರಾಜಕೀಯ ಮಾಡಿಕೊಂಡು ಬಂದ ಇನ್ನೋರ್ವ ಪ್ರಮುಖ ರಾಜಕಾರಣಿಯೇ ನಿತೀಶ್ ಕುಮಾರ್.

ಬಿಹಾರದ ಪ್ರಮುಖ ಕೂರ್ಮಿ ಸಮುದಾಯದ ನಾಯಕರಾಗಿರುವ ನಿತೀಶ್ 8 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದೂ ರಾಜಕಾರಣದಲ್ಲಿ ಒಂದು ದಾಖಲೆಯೇ. ಸದ್ಯ 71 ರ ಹರೆಯದಲ್ಲಿರುವ ನಿತೀಶ್ ಕುಮಾರ್ ಅವರ ರಾಜಕೀಯ ನಡೆ ಕಳೆದೊಂದು ದಶಕದಿಂದ ಪರಸ್ಪರ ವೈರುಧ್ಯಗಳಿಂದಲೇ ಕೂಡಿ ಜನತೆಗೆ ಗೊಂದಲ ಹುಟ್ಟಿಸುವಂತಹ ದಾರಿಯಲ್ಲಿ ಸಾಗಿದೆ.

ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿಯನ್ನು ಗಳಿಸಿದ ಬಳಿಕ ಬಿಹಾರ ರಾಜ್ಯ ವಿದ್ಯುತ್ ಮಂಡಳಿಗೆ ಸೇರಿ, ಅಲ್ಲಿ ಒಲ್ಲದ ಮನಸ್ಸಿನಿಂದ ಕೆಲಸ ಮಾಡುವುದು ಸಾಧ್ಯವಾಗದೆ ರಾಜಕಾರಣಕ್ಕೆ ಧುಮುಕಿದವರು. ರಾಜಕಾರಣದ ಆರಂಭದಲ್ಲಿ ರಾಮ್ ಮನೋಹರ್ ಲೋಹಿಯಾ, ಎಸ್.ಎನ್. ಸಿನ್ಹಾ, ಕರ್ಪೂರಿ ಠಾಕೂರ್, ಮತ್ತು ವಿ.ಪಿ. ಸಿಂಗ್ ಅವರೊಂದಿಗೆ ಹೋರಾಟದಲ್ಲಿ ತೊಡಗಿಕೊಂಡಿದ್ದ ನಿತೀಶ್ 1974 ಮತ್ತು 1977 ನಡುವೆ ಜಯಪ್ರಕಾಶ್ ನಾರಾಯಣ್ ಅವರ ಚಳವಳಿಯಲ್ಲಿ ಭಾಗವಹಿಸುವ ಮೂಲಕ ಮತ್ತು ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ಜನತಾ ಪಕ್ಷಕ್ಕೆ ಸೇರಿ ರಾಜಕಾರಣದ ಒಂದೊಂದೆ ಮೆಟ್ಟಿಲು ಏರಿದವರು.

ಜನತಾದಳ ವಿಭಜನೆಯಾದ ವೇಳೆ 1994 ರಲ್ಲಿ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ‘ಸಮತಾ ಪಾರ್ಟಿ’ ಯನ್ನು ಕಟ್ಟಿ ಹೊಸ ಸಾಹಸಕ್ಕೆ ನಿತೀಶ್ ಕುಮಾರ್ ಕೈ ಹಾಕಿದವರು. 2003 ರಲ್ಲಿ ಶರದ್ ಯಾದವ್ ನೇತೃತ್ವದ ಜನತಾ ದಳದ ಭಾಗ, ಜಾರ್ಜ್ ಫರ್ನಾಂಡಿಸ್ ಮತ್ತು ನಿತೀಶ್ ಅವರ ಸಮತಾ ಪಾರ್ಟಿ ಮತ್ತು ಲೋಕ ಶಕ್ತಿ ಪಕ್ಷ ಒಂದಾಗಿ ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷವನ್ನು ಹುಟ್ಟು ಹಾಕಿ ಹೊಸ ಶಕ್ತಿಯನ್ನಾಗಿ ಬೆಳೆಸಿದರು. ಪಕ್ಷವನ್ನು ನಿತೀಶ್ ಮುನ್ನಡೆಸಿಕೊಂಡು ಬಂದು ಪ್ರಭಾವಿ ನಾಯಕನಾಗಿ ಬೆಳೆದರು.

2003ರಲ್ಲಿ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ ನಿತೀಶ್ 2013ರ ವರೆಗೆ ಎನ್ ಡಿಎಯ ಪ್ರಮುಖ ಮಿತ್ರ ಪಕ್ಷವಾಗಿದ್ದು, ಅಧಿಕಾರವನ್ನು ಅನುಭವಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರಕಾರದಲ್ಲಿ ರೈಲ್ವೆಯಂತಹ ಪ್ರಮುಖ ಖಾತೆಯನ್ನು ನಿಭಾಯಿಸಿದ್ದರು.

2014 ರಲ್ಲಿ ಬಿಜೆಪಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದಾಗಿ ಘೋಷಿಸಿದಾಗ ಸಮಾಜವಾದಿ ಸಿದ್ದಾಂತದ ಪ್ರತಿಪಾದಕರಾಗಿದ್ದ ನಿತೀಶ್ ಬಹಿರಂಗವಾಗಿ ವಿರೋಧಿಸಿ ಎನ್ ಡಿಎ ಮೈತ್ರಿಕೂಟದಿಂದ ಹೊರ ನಡೆದರು. ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಒಟ್ಟು 40 ಸ್ಥಾನಗಳ ಪೈಕಿ ಬಿಜೆಪಿ 22 ಸ್ಥಾನಗಳನ್ನು ಗೆದ್ದರೆ, ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ 6 ಮತ್ತು ರಾಷ್ಟ್ರೀಯ ಲೋಕ ಸಮತಾ ಪಕ್ಷ 3 ಸ್ಥಾನಗಳನ್ನು ಗೆದ್ದಿದ್ದವು. 20 ಸ್ಥಾನಗಳನ್ನು ಹೊಂದಿದ್ದ ಜೆಡಿಯು ಮೋದಿ ಅಲೆಯ ಹೊಡೆತಕ್ಕೆ ಸಿಲುಕಿ 18 ಸ್ಥಾನಗಳನ್ನು ಕಳೆದುಕೊಂಡು ಕೇವಲ 2 ಸ್ಥಾನಗಳನ್ನು ಗಳಿಸಿ ಭಾರಿ ಮುಖಭಂಗ ಅನುಭವಿಸಿತು. ಸೋಲಿನ ಆಘಾತಕ್ಕೆ ಸಿಲುಕಿದ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಜಿತನ್ ರಾಮ್ ಮಾಂಝಿ ಅವರಿಗೆ ಅಧಿಕಾರ ನೀಡಿದ್ದರು.

ಭವಿಷ್ಯದ ರಾಜಕಾರಣದ ಬಗ್ಗೆ ಚಿಂತಿಸಿದ ನಿತೀಶ್ ಹೊಸ ಮಾರ್ಗ ಕಂಡು ಕೊಂಡು ”ಮಹಾ ಘಟ್ ಬಂಧನ್” ಮೂಲಕ ವಿರೋಧಿಗಳ ಕೈ ಜೋಡಿಸಿದರು. ಆರ್ ಜೆಡಿ ಮತ್ತು ಕಾಂಗ್ರೆಸ್ ಜತೆ ಸೇರಿ 2015 ರ ವಿಧಾನಸಭಾ ಚುನಾವಣೆ ಎದುರಿಸಿ ಭರ್ಜರಿ ಜಯ ಸಾಧಿಸಿ ಮತ್ತೆ ಸಿಎಂ ಆದರು. ಜೆಡಿಯು+ಆರ್‌ಜೆಡಿ+ಕಾಂಗ್ರೆಸ್‌ 243 ಸ್ಥಾನಗಳಲ್ಲಿ 178ರಲ್ಲಿ ಜಯಭೇರಿ ಬಾರಿಸಿತು. ಬಿಜೆಪಿ ಮಿತ್ರಪಕ್ಷಗಳು ಕೇವಲ 58 ಸ್ಥಾನಗಳನ್ನು ಮಾತ್ರ ಗಳಿಸಲು ಯಶಸ್ವಿಯಾಗಿದ್ದವು.

2017 ರಲ್ಲಿ ಮಹಾ ಘಟ್ ಬಂಧನ್ ನಿಂದ ಹೊರ ಬಂದ ನಿತೀಶ್ ಬಿಜೆಪಿಯೊಂದಿಗೆ ಮತ್ತೆ ಸಖ್ಯ ಮಾಡಿಕೊಂಡರು. ಎನ್ ಡಿಎ ಭಾಗವಾದ ಅವರು ರಾಜಕೀಯ ಲಾಭ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಮೋಡಿ ಮಾಡಿದ್ದ ಎನ್ ಡಿಎ 40 ಸ್ಥಾನಗಳ ಪೈಕಿ 39 ನ್ನು ಬಾಚಿಕೊಂಡಿತ್ತು. ಬಿಜೆಪಿ 17, ಜೆಡಿಯು 16 ಮತ್ತು ಎಲ್ ಜೆಪಿ 6 ಸ್ಥಾನಗಳನ್ನು ಗೆದ್ದಿದ್ದವು.

2020 ರಲ್ಲಿ ಎನ್ ಡಿಎ ಮೈತ್ರಿ ಕೂಟದ ಹಲವು ಗೊಂದಲದ ನಡುವೆ ಚುನಾವಣೆ ಎದುರಿಸಿ ಪ್ರಯಾಸಕರ ಗೆಲುವು ಸಾಧಿಸಿ ನಿತೀಶ್ ಮತ್ತೆ ಸಿಎಂ ಆಗಿದ್ದರು. 243 ವಿಧಾನಸಭಾ ಸ್ಥಾನಗಳ ಪೈಕಿ ಜೆಡಿಯು ನಿತೀಶ್ ನಾಯಕತ್ವದಲ್ಲಿ 43 ಸ್ಥಾನಗಳನ್ನು ಮಾತ್ರ ಗೆದ್ದು ಕೊಂಡಿತ್ತಾದರೂ ಬಿಜೆಪಿ ಆಡಿದ ಮಾತಿನಂತೆ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿತ್ತು. ಬಿಜೆಪಿ 19.5% ಮತ ಪ್ರಮಾಣ ಗಳಿಸಿದ್ದರೆ ಜೆಡಿಯು 15.4%, ಆರ್ ಜೆ ಡಿ 23.1% ಮತ ಗಳಿಸಿದ್ದವು.

ಮತ್ತೆ ಮಹಾ ಘಟ”ಬಂಧನ ”ದ ಮೂಲಕ ಹೊಸ ಮಾದರಿಯ ಆಡಳಿತಕ್ಕೆ ಹೊರಟಿರುವ ನಿತೀಶ್ ರಾಜಕೀಯ ಹಾದಿಯಲ್ಲಿ ಸವಾಲುಗಳೇ ಹೆಚ್ಚಿರುವುದರಲ್ಲಿ ಅನುಮಾನವಿಲ್ಲ. ಹತ್ತಿರ ಚುನಾವಣೆ ಇಲ್ಲದೆ ಹೋದರೂ ಬಿಜೆಪಿ ಪಕ್ಷ ಸಂಘಟಿಸಿ ಇತರ ಮಿತ್ರ ಪಕ್ಷಗಳೊಂದಿಗೆ ಹೋರಾಟಕ್ಕೆ ವೇದಿಕೆ ಸೃಷ್ಟಿಸುವ ಎಲ್ಲಾ ಲಕ್ಷಣಗಳಿವೆ. ಈ ಹಿಂದೆ ತೇಜಸ್ವಿ ಯಾದವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಮುಂದೆ ಯಾವ ರೀತಿ ಪಕ್ಷ ಮತ್ತು ಆಡಳಿತ ಮುಂದುವರಿಸುತ್ತಾರೆ ಎನ್ನುವ ಕುತೂಹಲವೂ ರಾಜಕೀಯವಲಯದಲ್ಲಿ ಹುಟ್ಟಿಕೊಂಡಿದೆ.

ವಿಷ್ಣುದಾಸ್ ಪಾಟೀಲ್

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.