ವಾಟ್ಸಾಪ್ ಪಿಂಕ್ ಹೆಸರಿನಲ್ಲಿ ದಾಳಿಯಿಟ್ಟ ಹ್ಯಾಕರ್ಸ್: ನೀವು ಲಿಂಕ್ ಕ್ಲಿಕ್ ಮಾಡಿದ್ದೀರಾ ?

ಅನಗತ್ಯ ಆ್ಯಪ್ ಗಳನ್ನು ಅನ್ ಇನ್ ಸ್ಟಾಲ್ ಮಾಡಿ.

Team Udayavani, Apr 21, 2021, 8:45 AM IST

whatsapp-pink

ಇಂದು ವಾಟ್ಸಾಪ್ ಬಳಕೆದಾರರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಇದರ ನಡುವೆ ವಾಟ್ಸಾಪ್ ಕೂಡ ಹೊಸ ಹೊಸ ಫೀಚರ್ ಗಳ ಮೂಲಕ ಬಳಕೆದಾರರನ್ನು ಸೆಳೆಯುತ್ತಿದೆ. ಏತನ್ಮಧ‍್ಯೆ ‘ವಾಟ್ಸಾಪ್ ಪಿಂಕ್’ ಎಂಬ ಹೆಸರಿನಲ್ಲಿ ಕಳೆದ ಕೆಲವು ದಿನಗಳಿಂದ ಲಿಂಕ್ ಒಂದು ಹರಿದಾಡುತ್ತಿದ್ದು ಪ್ರತಿಯೊಬ್ಬರು ಎಚ್ಚರದಿಂದಿರಬೇಕಾದ ತುರ್ತು ಅಗತ್ಯವಿದೆ.

ಏನಿದು ವಾಟ್ಸಾಪ್ ಪಿಂಕ್ ?

ಆನ್ ಲೈನ್ ನಲ್ಲಿ ದುಷ್ಕರ್ಮಿಗಳು ಮತ್ತೊಂದು ಮಹಾಸಂಚನ್ನು ರೂಪುಗೊಳಿಸಿದ್ದು ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿ ದಾಂಗುಡಿಯಿಟ್ಟಿದ್ದಾರೆ. ವಾಟ್ಸಾಪ್ ಚಾಟ್ ಮೂಲಕ ಲಿಂಕ್ ಒಂದನ್ನು ಶೇರ್ ಮಾಡಿರುವ ಹ್ಯಾಕರ್ಸ್, ಅದನ್ನು ಕ್ಲಿಕ್ ಮಾಡಿರುವ ಬಳಕೆದಾರರ ಡಿವೈಸ್ ಗಳಿಗೆ ಲಗ್ಗೆಯಿಡುತ್ತಿದ್ದಾರೆ.

ಹೌದು. ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿ ಲಿಂಕ್ ಒಂದನ್ನು ಕ್ರಿಯೇಟ್ ಮಾಡಿರುವ ಹ್ಯಾಕರ್ ಗಳು ಹಸಿರು ಬಣ್ಣದಲ್ಲಿರುವ ವಾಟ್ಸಾಪ್,  ಪಿಂಕ್ ಬಣ್ಣಕ್ಕೆ ಬದಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಮಾತ್ರವಲ್ಲದೆ ವಾಟ್ಸಾಪ್ ಸಂಪೂರ್ಣವಾಗಿ ಹೊಸತನದಲ್ಲಿರುತ್ತದೆ ಎಂಬ ಅಮಿಷವೊಡ್ಡಿದ್ದಾರೆ. ಈಗಾಗಲೇ ಹಲವಾರು ಬಳಕೆದಾರರ ವಾಟ್ಸಾಪ್ ಅನ್ನು ಈ ಲಿಂಕ್ ತಲುಪಿದ್ದು, ಬಹುತೇಕರು ಇದರ ಮರ್ಮ ಅರಿಯದೆ ಫಾರ್ವರ್ಡ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದರ ಪರಿಣಾಮ ಕೆಲವರ ಸ್ಮಾರ್ಟ್ ಫೋನ್ ಗಳಿಗೆ APK ( ಆ್ಯಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ಗಳು ಕೂಡ ಇನ್ ಸ್ಟಾಲ್ ಆಗಿದೆ.

ಸೈಬರ್ ಪರಿಣಿತರ ಪ್ರಕಾರ ನಿರ್ದಿಷ್ಟ ಡಿವೈಸ್ ಅಥವಾ ಸ್ಮಾರ್ಟ್ ಫೋನ್ ಗಳನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ಹಾಗೆಯೇ ಡೇಟಾಗಳನ್ನು ಅಪಹರಿಸಲು ಈ ತೆರೆನಾದ ಲಿಂಕ್ ಅನ್ನು ಹರಿಯಬಿಡಲಾಗಿದೆ ಎಂದು ತಿಳಿಸಿದ್ದಾರೆ. ಈ ಲಿಂಕ್ ಬಳಕೆದಾರರ ವಾಟ್ಸಾಪ್ ಅಕೌಂಟ್ ಅನ್ನು ಲಾಕ್ ಮಾಡುವುದು, ಮಾತ್ರವಲ್ಲದೆ ಕೆಲವೊಮ್ಮೆ ಸಂಪೂರ್ಣ ಮೊಬೈಲ್ ಅನ್ನು ನಿಷ್ಕ್ರೀಯಗೊಳಿಸುತ್ತದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸೈಬರ್ ಸೆಕ್ಯೂರಿಟಿ ಪರಿಣಿತ ರಾಜ್ ಶೇಖರ್ ರಜಾರಿಯಾ, ವಾಟ್ಸಾಪ್ ಪಿಂಕ್ ಕುರಿತು ಎಚ್ಚರಿಕೆಯಿಂದಿರಿ. ವೈರಸ್ ಒಂದು APK ಡೌನ್ ಲೋಡ್ ಲಿಂಕ್ ಜೊತೆಗೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿರುವ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದು ನಿಮ್ಮ ಸ್ಮಾರ್ಟ್ ಫೋನ್ ಪ್ರವೇಶಿಸಲು ಹ್ಯಾಕರ್ ಗಳಿಗೆ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.

ಗಮನಿಸಬೇಕಾದ ಅಂಶವೆಂದರೇ ಈವರೆಗೂ ಫೇಸ್ ಬುಕ್ ಒಡೆತನದ ವಾಟ್ಸಾಪ್ ಸಂಸ್ಥೆ, ತನ್ನ ಪಿಂಕ್ ವರ್ಷನ್ ಅಪ್ ಡೇಟ್ ಕುರಿತು ಮಾಹಿತಿ ನೀಡಿಲ್ಲ. ಹೀಗಾಗಿ ಯಾವುದೇ ಅನುಮಾನಗಳಿಲ್ಲದೆ ಇದೊಂದು ಹ್ಯಾಕರ್ ಗಳ ಕೃತ್ಯ ಎಂದು ತಿಳಿಯಬಹುದು.

ಈ ಸಮಯದಲ್ಲಿ ಪ್ರತಿಯೊಬ್ಬ ಬಳಕೆದಾರರು ಅನುಸರಿಸಬೇಕಾದ ಸರಳ ಸೂತ್ರವೆಂದರೆ ಯಾವುದೇ ಅನಧಿಕೃತ ಲಿಂಕ್ ಗಳನ್ನು ಕ್ಲಿಕ್ ಮಾಡದೆ ನಿರ್ಲಕ್ಷಿಸುವುದು. ಹಾಗೊಮ್ಮೆ ಬಣ್ಣ ಬದಲಾಗುವುದು ಸೇರಿದಂತೆ ಹೊಸ ಫೀಚರ್ ಗಳು ಬಂದಾಕ್ಷಣ ವಾಟ್ಸಾಪ್ ಸಂಸ್ಥೆಯೇ ಪ್ರತಿಯೊಬ್ಬರಿಗೂ ತಿಳಿಯುವಂತೆ ಮಾಹಿತಿ ನೀಡುತ್ತದೆ. ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವ ಮುನ್ನ ವಾಟ್ಸಾಪ್ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗಳನ್ನು ಗಮನಿಸಿ.

ಸೈಬರ್ ಇಂಟಲಿಜೆನ್ಸ್ ಫರ್ಮ್ ನ ನಿರ್ದೇಶಕ ಜಿತೆನ್ ಜೈನ್ ಹೇಳುವಂತೆ, ವಾಟ್ಸಾಪ್ ಪಿಂಕ್ ಎಂಬುದು ಕೀಬೋರ್ಡ್ ಆಧಾರಿತ ಮಾಲ್ವೇರ್ ಆಗಿದ್ದು, ಇದರ ಮೂಲಕ ನೀವು ಸ್ಮಾರ್ಟ್ ಫೋನ್ ಗಳಲ್ಲಿ ಟೈಪಿಸುವ ಪ್ರತಿಯೊಂದು ಪದಗಳು ಕೂಡ ರೆಕಾರ್ಡ್ ಆಗುತ್ತವೆ. ಇದರ ಜೊತೆಗೆ ಫೋಟೋಗಳು, ಎಸ್ ಎಂಎಸ್, ಕಾಂಟ್ಯಾಕ್ಟ್ ಗಳು ಕೂಡ ಸುಲಭವಾಗಿ ದುಷ್ಕರ್ಮಿಗಳ ಪಾಲಾಗುತ್ತದೆ ಎಂದಿದ್ದಾರೆ.

ನೀವೇನಾದರೂ ಈ ಲಿಂಕ್ ಕ್ಲಿಕ್ ಮಾಡಿದ್ದರೇ ಈ ಕ್ರಮ ಅನುಸರಿಸಿ

  • ಕೂಡಲೇ ವಾಟ್ಸಾಪ್ ಅನ್ ಇನ್ ಸ್ಟಾಲ್ ಮಾಡಿ ಹೊಸದಾಗಿ ಡೌನ್ ಲೋಡ್ ಮಾಡಿಕೊಳ್ಳಿ.
  • ವಾಟ್ಸಾಪ್ ವೆಬ್ ಡಿವೈಸ್ ಗಳನ್ನು ಅನ್ ಲಿಂಕ್ ಮಾಡಿ.
  • ಗೂಗಲ್ ಬ್ರೌಸರ್ / ನೀವು ಬಳಸುತ್ತಿರುವ ಬ್ರೌಸರ್ ಗಳ ಹಿಸ್ಟರಿ ಕ್ಲಿಯರ್ ಮಾಡಿ. (Clear Browser cache also)
  • ಡಿವೈಸ್ ನಲ್ಲಿರುವ ಎಲ್ಲಾ ಅಪ್ಲಿಕೇಶನ್ ಗಳನ್ನು ಪರಿಶೀಲಿಸಿ. ಹಾಗೂ ಯಾವೆಲ್ಲಾ ಪರ್ಮಿಶನ್ (ಅನುಮತಿ) ನೀಡಿದ್ದೀರಿ ಎಂಬುದನ್ನು ಗಮನಿಸಿ. ಅನಗತ್ಯ ಆ್ಯಪ್ ಗಳನ್ನು ಅನ್ ಇನ್ ಸ್ಟಾಲ್ ಮಾಡಿ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.