ವಾಟ್ಸಾಪ್ ಪಿಂಕ್ ಹೆಸರಿನಲ್ಲಿ ದಾಳಿಯಿಟ್ಟ ಹ್ಯಾಕರ್ಸ್: ನೀವು ಲಿಂಕ್ ಕ್ಲಿಕ್ ಮಾಡಿದ್ದೀರಾ ?

ಅನಗತ್ಯ ಆ್ಯಪ್ ಗಳನ್ನು ಅನ್ ಇನ್ ಸ್ಟಾಲ್ ಮಾಡಿ.

Team Udayavani, Apr 21, 2021, 8:45 AM IST

whatsapp-pink

ಇಂದು ವಾಟ್ಸಾಪ್ ಬಳಕೆದಾರರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಇದರ ನಡುವೆ ವಾಟ್ಸಾಪ್ ಕೂಡ ಹೊಸ ಹೊಸ ಫೀಚರ್ ಗಳ ಮೂಲಕ ಬಳಕೆದಾರರನ್ನು ಸೆಳೆಯುತ್ತಿದೆ. ಏತನ್ಮಧ‍್ಯೆ ‘ವಾಟ್ಸಾಪ್ ಪಿಂಕ್’ ಎಂಬ ಹೆಸರಿನಲ್ಲಿ ಕಳೆದ ಕೆಲವು ದಿನಗಳಿಂದ ಲಿಂಕ್ ಒಂದು ಹರಿದಾಡುತ್ತಿದ್ದು ಪ್ರತಿಯೊಬ್ಬರು ಎಚ್ಚರದಿಂದಿರಬೇಕಾದ ತುರ್ತು ಅಗತ್ಯವಿದೆ.

ಏನಿದು ವಾಟ್ಸಾಪ್ ಪಿಂಕ್ ?

ಆನ್ ಲೈನ್ ನಲ್ಲಿ ದುಷ್ಕರ್ಮಿಗಳು ಮತ್ತೊಂದು ಮಹಾಸಂಚನ್ನು ರೂಪುಗೊಳಿಸಿದ್ದು ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿ ದಾಂಗುಡಿಯಿಟ್ಟಿದ್ದಾರೆ. ವಾಟ್ಸಾಪ್ ಚಾಟ್ ಮೂಲಕ ಲಿಂಕ್ ಒಂದನ್ನು ಶೇರ್ ಮಾಡಿರುವ ಹ್ಯಾಕರ್ಸ್, ಅದನ್ನು ಕ್ಲಿಕ್ ಮಾಡಿರುವ ಬಳಕೆದಾರರ ಡಿವೈಸ್ ಗಳಿಗೆ ಲಗ್ಗೆಯಿಡುತ್ತಿದ್ದಾರೆ.

ಹೌದು. ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿ ಲಿಂಕ್ ಒಂದನ್ನು ಕ್ರಿಯೇಟ್ ಮಾಡಿರುವ ಹ್ಯಾಕರ್ ಗಳು ಹಸಿರು ಬಣ್ಣದಲ್ಲಿರುವ ವಾಟ್ಸಾಪ್,  ಪಿಂಕ್ ಬಣ್ಣಕ್ಕೆ ಬದಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಮಾತ್ರವಲ್ಲದೆ ವಾಟ್ಸಾಪ್ ಸಂಪೂರ್ಣವಾಗಿ ಹೊಸತನದಲ್ಲಿರುತ್ತದೆ ಎಂಬ ಅಮಿಷವೊಡ್ಡಿದ್ದಾರೆ. ಈಗಾಗಲೇ ಹಲವಾರು ಬಳಕೆದಾರರ ವಾಟ್ಸಾಪ್ ಅನ್ನು ಈ ಲಿಂಕ್ ತಲುಪಿದ್ದು, ಬಹುತೇಕರು ಇದರ ಮರ್ಮ ಅರಿಯದೆ ಫಾರ್ವರ್ಡ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದರ ಪರಿಣಾಮ ಕೆಲವರ ಸ್ಮಾರ್ಟ್ ಫೋನ್ ಗಳಿಗೆ APK ( ಆ್ಯಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ಗಳು ಕೂಡ ಇನ್ ಸ್ಟಾಲ್ ಆಗಿದೆ.

ಸೈಬರ್ ಪರಿಣಿತರ ಪ್ರಕಾರ ನಿರ್ದಿಷ್ಟ ಡಿವೈಸ್ ಅಥವಾ ಸ್ಮಾರ್ಟ್ ಫೋನ್ ಗಳನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ಹಾಗೆಯೇ ಡೇಟಾಗಳನ್ನು ಅಪಹರಿಸಲು ಈ ತೆರೆನಾದ ಲಿಂಕ್ ಅನ್ನು ಹರಿಯಬಿಡಲಾಗಿದೆ ಎಂದು ತಿಳಿಸಿದ್ದಾರೆ. ಈ ಲಿಂಕ್ ಬಳಕೆದಾರರ ವಾಟ್ಸಾಪ್ ಅಕೌಂಟ್ ಅನ್ನು ಲಾಕ್ ಮಾಡುವುದು, ಮಾತ್ರವಲ್ಲದೆ ಕೆಲವೊಮ್ಮೆ ಸಂಪೂರ್ಣ ಮೊಬೈಲ್ ಅನ್ನು ನಿಷ್ಕ್ರೀಯಗೊಳಿಸುತ್ತದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸೈಬರ್ ಸೆಕ್ಯೂರಿಟಿ ಪರಿಣಿತ ರಾಜ್ ಶೇಖರ್ ರಜಾರಿಯಾ, ವಾಟ್ಸಾಪ್ ಪಿಂಕ್ ಕುರಿತು ಎಚ್ಚರಿಕೆಯಿಂದಿರಿ. ವೈರಸ್ ಒಂದು APK ಡೌನ್ ಲೋಡ್ ಲಿಂಕ್ ಜೊತೆಗೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್ ಪಿಂಕ್ ಎಂಬ ಹೆಸರಿನಲ್ಲಿರುವ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದು ನಿಮ್ಮ ಸ್ಮಾರ್ಟ್ ಫೋನ್ ಪ್ರವೇಶಿಸಲು ಹ್ಯಾಕರ್ ಗಳಿಗೆ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.

ಗಮನಿಸಬೇಕಾದ ಅಂಶವೆಂದರೇ ಈವರೆಗೂ ಫೇಸ್ ಬುಕ್ ಒಡೆತನದ ವಾಟ್ಸಾಪ್ ಸಂಸ್ಥೆ, ತನ್ನ ಪಿಂಕ್ ವರ್ಷನ್ ಅಪ್ ಡೇಟ್ ಕುರಿತು ಮಾಹಿತಿ ನೀಡಿಲ್ಲ. ಹೀಗಾಗಿ ಯಾವುದೇ ಅನುಮಾನಗಳಿಲ್ಲದೆ ಇದೊಂದು ಹ್ಯಾಕರ್ ಗಳ ಕೃತ್ಯ ಎಂದು ತಿಳಿಯಬಹುದು.

ಈ ಸಮಯದಲ್ಲಿ ಪ್ರತಿಯೊಬ್ಬ ಬಳಕೆದಾರರು ಅನುಸರಿಸಬೇಕಾದ ಸರಳ ಸೂತ್ರವೆಂದರೆ ಯಾವುದೇ ಅನಧಿಕೃತ ಲಿಂಕ್ ಗಳನ್ನು ಕ್ಲಿಕ್ ಮಾಡದೆ ನಿರ್ಲಕ್ಷಿಸುವುದು. ಹಾಗೊಮ್ಮೆ ಬಣ್ಣ ಬದಲಾಗುವುದು ಸೇರಿದಂತೆ ಹೊಸ ಫೀಚರ್ ಗಳು ಬಂದಾಕ್ಷಣ ವಾಟ್ಸಾಪ್ ಸಂಸ್ಥೆಯೇ ಪ್ರತಿಯೊಬ್ಬರಿಗೂ ತಿಳಿಯುವಂತೆ ಮಾಹಿತಿ ನೀಡುತ್ತದೆ. ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವ ಮುನ್ನ ವಾಟ್ಸಾಪ್ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗಳನ್ನು ಗಮನಿಸಿ.

ಸೈಬರ್ ಇಂಟಲಿಜೆನ್ಸ್ ಫರ್ಮ್ ನ ನಿರ್ದೇಶಕ ಜಿತೆನ್ ಜೈನ್ ಹೇಳುವಂತೆ, ವಾಟ್ಸಾಪ್ ಪಿಂಕ್ ಎಂಬುದು ಕೀಬೋರ್ಡ್ ಆಧಾರಿತ ಮಾಲ್ವೇರ್ ಆಗಿದ್ದು, ಇದರ ಮೂಲಕ ನೀವು ಸ್ಮಾರ್ಟ್ ಫೋನ್ ಗಳಲ್ಲಿ ಟೈಪಿಸುವ ಪ್ರತಿಯೊಂದು ಪದಗಳು ಕೂಡ ರೆಕಾರ್ಡ್ ಆಗುತ್ತವೆ. ಇದರ ಜೊತೆಗೆ ಫೋಟೋಗಳು, ಎಸ್ ಎಂಎಸ್, ಕಾಂಟ್ಯಾಕ್ಟ್ ಗಳು ಕೂಡ ಸುಲಭವಾಗಿ ದುಷ್ಕರ್ಮಿಗಳ ಪಾಲಾಗುತ್ತದೆ ಎಂದಿದ್ದಾರೆ.

ನೀವೇನಾದರೂ ಈ ಲಿಂಕ್ ಕ್ಲಿಕ್ ಮಾಡಿದ್ದರೇ ಈ ಕ್ರಮ ಅನುಸರಿಸಿ

  • ಕೂಡಲೇ ವಾಟ್ಸಾಪ್ ಅನ್ ಇನ್ ಸ್ಟಾಲ್ ಮಾಡಿ ಹೊಸದಾಗಿ ಡೌನ್ ಲೋಡ್ ಮಾಡಿಕೊಳ್ಳಿ.
  • ವಾಟ್ಸಾಪ್ ವೆಬ್ ಡಿವೈಸ್ ಗಳನ್ನು ಅನ್ ಲಿಂಕ್ ಮಾಡಿ.
  • ಗೂಗಲ್ ಬ್ರೌಸರ್ / ನೀವು ಬಳಸುತ್ತಿರುವ ಬ್ರೌಸರ್ ಗಳ ಹಿಸ್ಟರಿ ಕ್ಲಿಯರ್ ಮಾಡಿ. (Clear Browser cache also)
  • ಡಿವೈಸ್ ನಲ್ಲಿರುವ ಎಲ್ಲಾ ಅಪ್ಲಿಕೇಶನ್ ಗಳನ್ನು ಪರಿಶೀಲಿಸಿ. ಹಾಗೂ ಯಾವೆಲ್ಲಾ ಪರ್ಮಿಶನ್ (ಅನುಮತಿ) ನೀಡಿದ್ದೀರಿ ಎಂಬುದನ್ನು ಗಮನಿಸಿ. ಅನಗತ್ಯ ಆ್ಯಪ್ ಗಳನ್ನು ಅನ್ ಇನ್ ಸ್ಟಾಲ್ ಮಾಡಿ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.