ಟಿ20 ವಿಶ್ವಕಪ್ ಗಿಂತಲೂ ಐಪಿಎಲ್ ಮುಖ್ಯ! ಕಾರಣವೇನು ಗೊತ್ತಾ?

ಭಾರತದ ಕ್ರಿಕೆಟ್ ಕೂಟ ನಡೆಯದಿದ್ದರೆ ಐಸಿಸಿಗೂ ಸಂಕಷ್ಟ!

Team Udayavani, Jul 10, 2020, 5:55 PM IST

ಟಿ20 ವಿಶ್ವಕಪ್ ಗಿಂತಲೂ ಐಪಿಎಲ್ ಮುಖ್ಯ! ಕಾರಣವೇನು ಗೊತ್ತಾ?

ಕೋವಿಡ್-19 ಸೋಂಕು ಒಂದು ಅಲ್ಲದಿದ್ದರೆ ಇಷ್ಟು ಹೊತ್ತಿಗೆ 13ನೇ ಆವೃತ್ತಿಯ ಐಪಿಎಲ್ ಮುಗಿದು, ಭಾರತ ಟಿ 20 ವಿಶ್ವಕಪ್ ಗೆ ತಯಾರಿ ನಡೆಸುತ್ತಿರುತ್ತಿತ್ತು. ಐಪಿಎಲ್ ನಲ್ಲಿ ಹೊಸದಾಗಿ ಹುಟ್ಟಿಕೊಂಡ ದೇಶೀಯ ಪ್ರತಿಭೆಗಳು ರಾಷ್ಟ್ರೀಯ ತಂಡದ ಕದ ತಟ್ಟುತ್ತಿದ್ದರು. ಆದರೆ ಕೋವಿಡ್-19 ಎಂಬ ಕಣ್ಣಿಗೆ ಕಾಣದ ವೈರಸ್ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ.

ಕೋವಿಡ್-19 ಸೋಂಕು ವಿಶ್ವವನ್ನೇ ಆವರಿಸಿದ ನಂತರ ಎಲ್ಲಾ ಕ್ರೀಡಾಕೂಟಗಳು ಮುಂದೂಡಿಕೆಯಾಗಿದೆ. ಕೆಲವು ರದ್ದಾಗಿದೆ. ತನ್ನ ಓಟವನ್ನು ಸಂಪೂರ್ಣ ನಿಲ್ಲಿಸಿದ್ದ ಕ್ರಿಕೆಟ್ ಈಗ ನಿಧಾನವಾಗಿ ಚಲಿಸಲಾರಂಭಿಸುತ್ತಿದೆ. ಕಾರಣ ಇಂಗ್ಲೆಂಡ್ ನಲ್ಲಿ ಮುಚ್ಚಿದ ಬಾಗಿಲಲ್ಲಿ ಟೆಸ್ಟ್ ಕ್ರಿಕೆಟ್ ಆರಂಭವಾಗಿದೆ. ವಿಶ್ವ ಕ್ರಿಕೆಟ್ ನ್ನು ತನ್ನತ್ತ ಸೆಳೆಯುತ್ತಿದ್ದ ಐಪಿಎಲ್ ಕೂಡಾ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

ಶತಾಯಗತಾಯ ಈ ವರ್ಷದ ಐಪಿಎಲ್ ನಡೆಸಲೇ ಬೇಕು ಎಂದು ಬಿಸಿಸಿಐ ಪಟ್ಟು ಹಿಡಿದಿದೆ. ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡುತ್ತಿದೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷನಾದ ಬಳಿಕ ಇದು ಮೊದಲ ಐಪಿಎಲ್. ಹಾಗಾಗಿ ಅವರಿಗಿದು ಪ್ರತಿಷ್ಠೆಯ ಪ್ರಶ್ನೆ. 2020ರಲ್ಲಿ ಐಪಿಎಲ್ ನಡೆಸಿಯೇ ನಡೆಸುತ್ತೇನೆ ಎಂದು ದಾದಾ ಇತ್ತೀಚೆಗೆ ಹೇಳಿದ್ದಾರೆ. ಒಂದು ವೇಳೆ ಈ ಬಾರಿ ಐಪಿಎಲ್ ನಡೆಯದೇ ಇದ್ದರೆ ಬಿಸಿಸಿಐಗೆ 525 ಮಿಲಿಯನ್ ಡಾಲರ್ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಇಷ್ಟೊಂದು ನಷ್ಟ ಮಾಡಿಕೊಳ್ಳಲು ಬಿಸಿಸಿಐ ತಯಾರಿಲ್ಲ. ಹಾಗಾದರೆ ಕೋವಿಡ್ ಬಿಟ್ಟು ಐಪಿಎಲ್ ಗೆ ಅಡ್ಡಿಯಾಗಿರುವುದೇನು? ಅದುವೇ ಟಿ 20 ವಿಶ್ವಕಪ್.

ಟಿ20 ವಿಶ್ವಕಪ್ ಭವಿಷ್ಯವೇನು?

ಐಪಿಎಲ್ ನಡೆಸಲು ಮೊದಲ ಆತಂಕವೆಂದರೆ ದೇಶದಲ್ಲಿ ಏರಿಕೆ ಕಾಣುತ್ತಿರುವ ಕೋವಿಡ್ -19 ಸೋಂಕಿತರ ಸಂಖ್ಯೆ. ಮತ್ತೊಂದು ಟಿ 20 ವಿಶ್ವಕಪ್. ಆಸ್ಟ್ರೇಲಿಯಾದಲ್ಲಿ ಮುಂದಿನ ಅಕ್ಟೋಬರ್ ನಲ್ಲಿ ಟಿ 20 ವಿಶ್ವಕಪ್ ನಡೆಯಬೇಕಿದೆ. ಕಾಂಗರೂ ದೇಶವೂ ಬಹುತೇಕ ಸಿದ್ದತೆಗಳನ್ನು ಮಾಡಿಕೊಂಡಿದೆ. ಒಂದು ವೇಳೆ ವಿಶ್ವಕಪ್ ಕೂಟ ನಡೆದರೆ ಐಪಿಎಲ್ ನಡೆಸಲು ಸಮಯ ಸಿಗುವುದಿಲ್ಲ. ಈ ಕಾರಣದಿಂದ ಬಿಸಿಸಿಐ ವಿಶ್ವಕಪ್ ರದ್ದು ಮಾಡುವಂತೆ ಐಸಿಸಿ ಮೇಲೆ ಒತ್ತಡ ಹಾಕುತ್ತಿದೆ.

ಸಾಧ್ಯತೆಗಳೇನು

ಐಸಿಸಿ ನಡೆಸುವ ವಿಶ್ವಕಪ್ ಕೂಟವನ್ನು ರದ್ದು ಮಾಡಿ ಒಂದು ದೇಶದ ಕೂಟ ನಡೆಸಲು ಅವಕಾಶ ನೀಡುವುದು ಸುಲಭದ ಮಾತಲ್ಲ. ಇದಕ್ಕೆ ಇತರ ದೇಶಗಳು ಒಪ್ಪಿಗೆ ನೀಡಬೇಕು. ಒಂದು ವೇಳೆ ವಿರೋಧ ಅಥವಾ ಟೀಕೆಗಳು ಎದುರಾದರೆ ಅದನ್ನೂ ಎದುರಿಸಬೇಕಾಗುತ್ತದೆ. ಆದರೆ ವಿಶ್ವಕಪ್ ಕೂಟ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರಣ ಐಸಿಸಿ ಮೇಲಿರುವ ಬಿಗಿ ಹಿಡಿತ.

ಮುಂದಿನ ವರ್ಷವೂ ಟಿ20 ವಿಶ್ವಕಪ್ ನಡೆಯಲಿದೆ. ಭಾರತ ಅದರ ಆತಿಥ್ಯ ವಹಿಸಲಿದೆ. ಈ ವರ್ಷದ ವಿಶ್ವಕಪ್ ರದ್ದಾದರೆ ಮುಂದಿನ ವರ್ಷದ ಕೂಟ ಆಯೋಜಿಸುವ ಅವಕಾಶವನ್ನು ಬಿಸಿಸಿಐ ಆಸ್ಟ್ರೇಲಿಯಾಗೆ ನೀಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇದು ಈ ವರ್ಷ ಆಸೀಸ್ ಕ್ರಿಕೆಟ್ ಬೋರ್ಡ್ ಅನುಭವಿಸುವ ನಷ್ಟವನ್ನು ಸರಿದೂಗಿಸುವ ಪ್ರಯತ್ನವಾಗಿರಲಿದೆ.

ಬಹಳಷ್ಟು ವಿದೇಶಿ ಆಟಗಾರರು ಐಪಿಎಲ್ ಆಡಲು ಉತ್ಸುಕರಾಗಿದ್ದಾರೆ. ಕೋವಿಡೋತ್ತರದ ಕ್ರಿಕೆಟ್ ಉಳಿವಿಗೆ ಐಪಿಎಲ್ ನಡೆಯುವುದು ಮುಖ್ಯ ಎನ್ನುತ್ತಿದ್ದಾರೆ. ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್ ಕೂಡಾ ಐಪಿಎಲ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಐಸಿಸಿಗೆ ಐಪಿಎಲ್ ಯಾಕೆ ಮುಖ್ಯ?

ಐಸಿಸಿಯ ಆದಾಯದ ಬಹುಮುಖ್ಯ ಮೂಲ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ. ಒಂದು ಮಾಹಿತಿಯ ಪ್ರಕಾರ ಐಸಿಸಿಯ ಶೇ.80ರಷ್ಟು ಆದಾಯ ಬಿಸಿಸಿಐ ನಿಂದ ಬರುತ್ತದೆ. ಅಂದರೆ ಐಸಿಸಿ ಬಹುತೇಕ ಬಿಸಿಸಿಐಯನ್ನೇ ಅವಲಂಬಿಸಿದೆ. ಬಿಸಿಸಿಐಗೆ ಪ್ರಮುಖ ಆದಾಯದ ಮೂಲ ಐಪಿಎಲ್. ಒಂದು ವೇಳೆ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ ನಷ್ಟವಾಗುತ್ತದೆ. ಇದರಿಂದ ನೇರ ಹೊಡೆತ ಐಸಿಸಿಗೆ ಬೀಳುತ್ತದೆ.

ಒಂದು ವೇಳೆ ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಅವಕಾಶ ನೀಡದೆ, ಮುಚ್ಚಿದ ಬಾಗಿಲಿನಲ್ಲಿ ಐಪಿಎಲ್ ನಡೆಸಿದರೂ ಟಿ20 ವಿಶ್ವಕಪ್ ಗಿಂತ ಹೆಚ್ಚಿನ ಆದಾಯವನ್ನು ಭಾರತೀಯ ಕೂಟ ತಂದುಕೊಡಬಹುದು ಎನ್ನುತ್ತವೆ ಲೆಕ್ಕಾಚಾರಗಳು. ಪ್ರಾಯೋಜಕರು, ಟಿವಿ ವೀಕ್ಷಕರ ಸಂಖ್ಯೆ ಎಲ್ಲವೂ ಐಪಿಎಲ್ ಗೆ ಜಾಸ್ತಿ ಇದೆ. ಟಿ20 ವಿಶ್ವಕಪ್ ಗಿಂತ ಐಪಿಎಲ್ ನಲ್ಲಿ ಹೆ್ಚ್ಚಿನ ಪಂದ್ಯಗಳು ನಡೆಯುತ್ತದೆ. ಇದು ಕೂಡಾ ಆದಾಯ ಹೆಚ್ಚಿಸುತ್ತದೆ.

ಟಿ20 ವಿಶ್ವಕಪ್ ನಲ್ಲಿ ಬೆರಳೆಣಿಕೆಯ ಪಂದ್ಯಗಳು ಮಾತ್ರ ಜಿದ್ದಾಜಿದ್ದಿನಿಂದ ಕೂಡಿರುತ್ತದೆ. ಉಳಿದ ನೀರಸ ಪಂದ್ಯಗಳಲ್ಲಿ ಪ್ರೇಕ್ಷಕರನ್ನು ಟಿವಿ ಪರದೆಯತ್ತ ಸೆಳೆಯುವುದು ಕಷ್ಟ. ಈ ಪಂದ್ಯಗಳಿಗೆ ಪ್ರಾಯೋಜಕರೂ ಸಿಗುವುದೂ ಕಷ್ಟ. ಆದರೆ ಐಪಿಎಲ್ ನಲ್ಲಿ ಪ್ರತಿಯೊಂದು ಪಂದ್ಯವೂ ಜಿದ್ದಾಜಿದ್ದಿನಿಂದ ಕೂಡಿರುತ್ತದೆ. ಇದು ಕ್ರಿಕೆಟ್ ನ ಜನಪ್ರಿಯತೆ ಹೆಚ್ಚಿಸಲೂ ಸಹಕಾರಿ ಎನ್ನುವುದು ಸದ್ಯದ ವಾದ.

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಐಪಿಎಲ್ ನಡೆಸುವುದು ಕೂಡಾ ಕಷ್ಟ. ಶ್ರೀಲಂಕಾ, ಯುಎಇ ದೇಶಗಳು ಈ ಕೂಟವನ್ನು ಆಯೋಜಿಸಲು ಮುಂದೆ ಬಂದಿದೆ. ಭಾರತದಲ್ಲೇ ಐಪಿಎಲ್ ನಡೆಸುವುದು ನಮ್ಮ ಉದ್ದೇಶ ಎಂದು ಬಿಸಿಸಿಐ ಹೇಳಿದೆ. ಏನೇ ಆದರೂ ಟಿ20 ವಿಶ್ವಕಪ್ ಕೂಟ ನಡೆಸುವ ನಿರ್ಧಾರದ ಮೇಲೆ ಐಪಿಎಲ್ ಭವಿಷ್ಯ ನಿಂತಿದೆ.

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.