ಪ್ರವಾಸಿಗರ ಸ್ವರ್ಗ ಎತ್ತಿನಭುಜ


Team Udayavani, Oct 18, 2021, 3:10 PM IST

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಚಿಕ್ಕಮಗಳೂರು: ಕಾಫಿನಾಡು ಭೂಲೋಕದ ಸ್ವರ್ಗದಂತಿದ್ದು, ಪ್ರಕೃತಿ ಸೌಂದರ್ಯವನ್ನು ಸವಿಯಲು ದೇಶ- ವಿದೇಶದಿಂದ ವರ್ಷದ ಎಲ್ಲಾ ಋತುವಿನಲ್ಲೂ ಪ್ರವಾಸಿಗರು ದಂಡು ಹರಿದು ಬರುತ್ತದೆ.

ದಕ್ಷಿಣ ಭಾರತದ ಅತ್ಯಂತ ಎತ್ತರದ ಗಿರಿಶ್ರೇಣಿಯಾದ ಮುಳ್ಳಯ್ಯನಗಿರಿ, ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ದರ್ಗಾ, ಕೆಮ್ಮಣ್ಣುಗುಂಡಿ, ಕುದುರೆಮುಖ ಸೇರಿದಂತೆ ಪರ್ವತ ಶ್ರೇಣಿಗಳು, ಜಲಪಾತಗಳು ಎಂತವರನ್ನೂ ಮೂಕವಿಸ್ಮಿತರನ್ನಾಗಿಸುತ್ತವೆ. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಬಹುತೇಕ ಪ್ರವಾಸಿಗರು ಟ್ರಕಿಂಗ್‌ ಮಾಡಲು ಆಸಕ್ತರಾಗಿದ್ದು, ಇಲ್ಲಿ ಟ್ರಕ್ಕಿಂಗ್‌ಗೆ ವಿಫುಲವಾದ ಅವಕಾಶಗಳಿವೆ. ಅಂತಹ ಟ್ರಕ್ಕಿಂಗ್‌ಗೆ ಹೇಳಿ ಮಾಡಿಸಿದ ಪ್ರಸಿದ್ಧ ಸ್ಥಳವೇ ಎತ್ತಿನಭುಜ.

ಇದೊಂದು ರೀತಿಯಲ್ಲಿ ಟ್ರಕಿಂಗ್‌ ಪ್ರಿಯರ ಸ್ವರ್ಗದಂತಿದೆ. ಎತ್ತಿನಭುಜ ಜಿಲ್ಲೆಯ ಮೂಡಿಗೆರೆ ತಾಲೂಕಿನಿಂದ ಸುಮಾರು 35 ಕಿ.ಮೀ.ದೂರದಲ್ಲಿದ್ದು, ನಿತ್ಯ ಇಲ್ಲಿಗೆ ನೂರಾರು ನಿಸರ್ಗ ಪ್ರಿಯರು ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾರೆ. ಪ್ರಕೃತಿ ಸೌಂದರ್ಯದೊಂದಿಗೆ ಚಾರಣಿಗರಿಗೆ ಹೇಳಿ ಮಾಡಿಸಿದ ವಿಸ್ಮಯ ಮತ್ತು ಆಕರ್ಷಕ ಕೇಂದ್ರವಾಗಿದೆ.

ಎತ್ತಿನಭುಜಕ್ಕೆ ಮೂಡಿಗೆರೆ ಪಟ್ಟಣದಿಂದ ಬೇಲೂರು ರಸ್ತೆಯಲ್ಲಿ ಸ್ವಲ್ಪ ದೂರ ಸಾಗಿ ಅಲ್ಲಿಂದ ಭೈರಾಪುರಕ್ಕೆ ನಾಣ್ಯಭೈರವೇಶ್ವರ ದೇವಸ್ಥಾನ ತಲುಪಬೇಕು. ದೇವಸ್ಥಾನದ ಬುಡದಿಂದ ಸಾಗುವ ಕಾಡುದಾರಿಯಲ್ಲಿ ಸುಮಾರು ಎರಡೂವರೆಯಿಂದ ಮೂರು ಕಿ.ಮೀ. ಸಾಗಿದರೆ ಎತ್ತಿನಭುಜಕ್ಕೆ ತಲುಪಬಹುದಾಗಿದೆ. ನಾಣ್ಯಭೈರವೇಶ್ವರ ದೇವಸ್ಥಾನದಿಂದ ಸಾಗುವ ಕಾಡುದಾರಿ ನಿಮ್ಮನ್ನು ಇನ್ನೊಂದು ಲೋಕಕ್ಕೆ ಕರೆದೊಯ್ಯುತ್ತದೆ.

ಕಡಿದಾದ ಮಣ್ಣಿನ ದಾರಿಯಲ್ಲಿ ಸಾಗುತ್ತಿದ್ದರೆ ಸುತ್ತಲೂ ಹಚ್ಚಹಸಿರಿನ ಸೊಬಗು, ಕಾಡುಪ್ರಾಣಿಗಳ ಭಯ, ಹಕ್ಕಿಗಳ ಕಲರವ ಪ್ರಕೃತಿಯ ಸೊಬಗು, ಬೋರ್ಗರೆಯುವ ನೀರಿನ ಸದ್ದು ಕಣ್ಣಿಗೆ ಇಂಪು ನೀಡುತ್ತದೆ. ಕಲ್ಲುಗಳಿಂದ ಕೂಡಿದ ಕೊರಕಲು ದಾರಿ, ಮಳೆಗಾಲದಲ್ಲಿ ದಾರಿಯುದ್ದಕ್ಕೂ ಕಾಲುಗಳಿಗೆ ಮೆತ್ತಿಕೊಳ್ಳುವ ಜಿಗಣೆ, ಅಲ್ಲಲ್ಲಿ ದಾರಿ ತಪ್ಪಿಸುವ ಕವಲುದಾರಿ ಇವೆಲ್ಲವನ್ನು ಮೀರಿ ಮುಂದೆ ಸಾಗಿದರೆ ಕಣ್ಣಿಗೆ ಎತ್ತಿನಭುಜದ ದರ್ಶನವಾಗುತ್ತದೆ.

ಶಿಶಿರ ಭೈರಾಪುರ ಬೆಟ್ಟಸಾಲುಗಳಲ್ಲಿ ಬರುವ ಈ ಎತ್ತಿನಭುಜ, ನೋಡಲು ಎತ್ತಿನಭುಜದ ಆಕಾರದಲ್ಲಿರುವುದರಿಂದ ಇದನ್ನು ಎತ್ತಿನಭುಜ ಎಂದು ಕರೆಯಲಾಗುತ್ತದೆ. ಎತ್ತಿನಭುಜ ಸಮೀಪಿಸುತ್ತಿದ್ದಂತೆ ಎತ್ತಿನಭುಜ ಬೆಟ್ಟದಡಿಯಿಂದ ತಲೆಎತ್ತಿ ಮುಗಿಲು ನೋಡಿದರೆ ಈ ಬೆಟ್ಟ ಆಕಾಶಕ್ಕೆ ಮುತ್ತಿಡುತ್ತಿದೆಯೋ ಏನೋ ಎಂದು ಭಾಸವಾಗುತ್ತದೆ.

ಬೆಟ್ಟದಡಿಯಿಂದ ಅರ್ಧ ಕಿ.ಮೀ. ಬೆಟ್ಟ ಏರಬೇಕು. ಅರ್ಧದಾರಿಗೆ ಸಾಗುತ್ತಿದ್ದಂತೆ ಸುತ್ತಲ ಪರ್ವತ ಶ್ರೇಣಿಗಳು ಹಚ್ಚ ಹಸಿರಿನಿಂದ ಕಂಗೊಳಿಸುವುದನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಅರ್ಧದಷ್ಟು ಬೆಟ್ಟ ಏರಲು ಅಷ್ಟು ಅಯಾಸ ಎನಿಸದಿದ್ದರೂ ಬೆಟ್ಟದ ವ್ಯೂ ಪಾಯಿಂಟ್‌ ಏರಬೇಕಾದರೆ ತ್ರಾಸದಾಯಕ ಎನಿಸುತ್ತದೆ. ಅರ್ಧಬೆಟ್ಟದಿಂದ ಅತ್ಯಂತ ಕ್ಲಿಷ್ಟಕರವಾದ ಕಾಲುದಾರಿಯಲ್ಲಿ ಸಾಗಬೇಕು. ಬೆಟ್ಟದ ತುತ್ತ ತುದಿ ಏರಬೇಕಾದರೆ ಬಂಡೆಗಳ ನಡುವೆ ಅತ್ಯಂತ ಎಚ್ಚರದಿಂದ ಎರಬೇಕು. ಎಚ್ಚರ ತಪ್ಪಿದರೆ ಅಪಾಯ ತಪ್ಪಿದ್ದಲ್ಲ. ಹೇಗೋ ಕಷ್ಟಪಟ್ಟು ಬೆಟ್ಟದ ತುತ್ತತುದಿ ಏರಿ ವ್ಯೂ ಪಾಯಿಂಟ್‌ ತಲುಪುತ್ತಿದ್ದಂತೆ ಆಯಾಸ ಕಡಿಮೆಯಾಗಿ ಅಲ್ಲಿಯ ಪ್ರಕೃತಿಯ ವೈಭವ ಮತ್ತೂಂದು ಲೋಕಕ್ಕೆ ಕರೆದೊಯ್ಯುತ್ತದೆ.

ಬೆಟ್ಟದ ತುದಿ ಏರುತ್ತಿದ್ದಂತೆ ಕಣ್ಣು ಹಾಯಿಸಿದಷ್ಟೂ ಹಚ್ಚಹಸಿರಿನ ಪರ್ವತ ಶ್ರೇಣಿಗಳ ಸಾಲು, ಅಲ್ಲಲ್ಲಿ ಬೆಳ್ಳಿಗೆರೆಯಂತೆ ಕಾಣುವ ಸಣ್ಣ ತೊರೆಗಳು, ಬೆಟ್ಟಕ್ಕೆ ಮುತ್ತಿಕ್ಕುವ ಮೋಡಗಳು, ಸುತ್ತಲೂ ಮಂಜು ಮುಸುಕಿದ ವಾತಾವರಣ, ಬೆಟ್ಟದ ತಡಿಗಳಲ್ಲಿ ಏಳುವ ಮುಗಿಲೆತ್ತರದ ಮಂಜಿನ ಸೊಬಗು ಭೂಲೋಕದ ಸ್ವರ್ಗದಂತೆ ಭಾಸವಾಗುತ್ತದೆ.

ಕರಿಗಲ್ಲಿನ ಸುಂದರಿ:

ಬೆಟ್ಟದ ತುತ್ತತುದಿ ಕರಿಬಂಡೆಗಳಿಂದ ಕೂಡಿದ್ದು, ಬೆಟ್ಟಕ್ಕೆ ಕಳಸವಿಟ್ಟಂತಿದೆ. ದೂರದಿಂದ ನೋಡಿದರೆ ಕರಿಗಲ್ಲಿನ ಸುಂದರಿಯಂತೆ ಕಂಗೊಳಿಸುತ್ತದೆ. ಕರಿಬಂಡೆಗಳ ನಡುವಿನ ಕ್ಲಿಷ್ಟ ಕಾಲುದಾರಿಯಲ್ಲಿ ಸಾಗಿದರೆ ಪ್ರಕೃತಿಯ ಸೊಬಗು ಕೈಬೀಸಿ ಕರೆಯುತ್ತದೆ. ಕಣ್ಣು ಹಾಯಿಸಿದಷ್ಟೂ ಹಚ್ಚಹಸಿರಿನ ಸೊಬಗು ಕಣ್ತುಂಬಿಕೊಂಡು ಸುಂದರ ಫೋಟೋಗಳನ್ನು ಸೆರೆ ಹಿಡಿಯಬಹುದಾಗಿದೆ.

-ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.