ಸುಭದ್ರವಾಗಿದೆ ಟೀಂ ಇಂಡಿಯಾ ಭವಿಷ್ಯ… ಐಪಿಎಲ್ ನಲ್ಲಿ ಮಿಂಚುತ್ತಿರುವ ಯುವ ಆಟಗಾರರು


Team Udayavani, Oct 9, 2020, 4:50 PM IST

ಸುಭದ್ರವಾಗಿದೆ ಟೀಂ ಇಂಡಿಯಾ ಭವಿಷ್ಯ.. ಐಪಿಎಲ್ ನಲ್ಲಿ ಮಿಂಚುಹರಿಸುತ್ತಿದ್ದಾರೆ ಯುವ ಆಟಗಾರರು

ಕೋವಿಡ್ ಕಾರಣದಿಂದ 13ನೇ ಆವೃತ್ತಿಯ ಐಪಿಎಲ್ ಯುಎಇಗೆ ಸ್ಥಳಾಂತರವಾದಾಗ ಭಾರತೀಯ ಯುವ ಪ್ರತಿಭೆಗಳಿಗೆ ಕಷ್ವವಾಗಬಹುದು ಎಂದು ಹಲವರು ಅಂದಾಜಿಸಿದ್ದರು. ಭಾರತದ ಪಿಚ್ ಗಳಲ್ಲಿ ಆಡಿ ಅನುಭವವಿರುವ ಯುವ ಆಟಗಾರರು ಯುಎಇನಲ್ಲಿ ಹೇಗೆ ಆಡುತ್ತಾರೆ, ಈ ಬಾರಿಯೂ ವಿದೇಶಿಗರೇ ಐಪಿಎಲ್ ನಲ್ಲಿ ಮಿಂಚುತ್ತಾರೆ ಎನ್ನುವ ಲೆಕ್ಕಾಚಾರವನ್ನು ಕ್ರಿಕೆಟ್ ಪಂಡಿತರು ಹಾಕಿದ್ದರು. ಆದರೆ ಅವರ ಲೆಕ್ಕಾಚಾರಗಳು ಐಪಿಎಲ್ ನ ಮೊದಲ ಮೂರು ವಾರದಲ್ಲೇ ಬುಡಮೇಲಾಗಿದೆ.

ಹೌದು, ಈ ಬಾರಿಯ ಐಪಿಎಲ್ ನಲ್ಲಿ ಭಾರತೀಯ ಯುವ ಆಟಗಾರರು ಮಿಂಚು ಹರಿಸುತ್ತಿದ್ದಾರೆ. ಪ್ರತಿ ವರ್ಷ ವಿದೇಶಿಗರೇ ಐಪಿಎಲ್ ನಲ್ಲಿ ದೊಡ್ಡ ಹೆಸರು ಮಾಡುತ್ತಿದ್ದರು. ಆದರೆ ಈ ಬಾರಿ ಭಾರತೀಯ ಯುವ ಕ್ರಿಕೆಟರ್ಸ್ ಐಪಿಎಲ್ ನಲ್ಲಿ ನಮ್ಮದೇ ಹವಾ ಎನ್ನುವಂತೆ ಆಡುತ್ತಿದ್ದಾರೆ.

ಹಿರಿಯರ ಸಾಧಾರಣ ಪ್ರದರ್ಶನ
ಈ ಬಾರಿಯ ಐಪಿಎಲ್ ನಲ್ಲಿ ಟೀಂ ಇಂಡಿಯಾ ಸದಸ್ಯರು ಸಾಧಾರಣ ಪ್ರದರ್ಶನ ತೋರುತ್ತಿದ್ದಾರೆ. ವಿರಾಟ್, ರೋಹಿತ್ ಒಂದೊಂದು ಅರ್ಧಶತಕ ಬಾರಿಸಿದ್ದರೂ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡುತ್ತಿಲ್ಲ. ಬೌಲರ್ ಗಳಾದ ಭುವಿ, ಬುಮ್ರಾ, ಕುಲದೀಪ್ ಕೂಡಾ ಇದುವರೆಗೆ ಮಿಂಚಿಲ್ಲ. (ಭುವಿ ಕೂಟದಿಂದಲೇ ಔಟಾಗಿದ್ದಾರೆ) ಆದರೆ ರಾಹುಲ್- ಮಯಾಂಕ್ ಉತ್ತಮ ಪ್ರದರ್ಶನ ನೀಡಿದ್ದಾರೆ)

ಪಡಿಕ್ಕಲ್ ಪವರ್ ಹಿಟ್ಟಿಂಗ್

ಪಡಿಕ್ಕಲ್ ಪವರ್ ಹಿಟ್ಟಿಂಗ್

ಕಳೆದೆರಡು ವರ್ಷಗಳಿಂದ ಆರ್ ಸಿಬಿ ತಂಡದ ಸದಸ್ಯನಾಗಿದ್ದರೂ ಬೆಂಚ್ ಕಾಯ್ದಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಈ ಬಾರಿ ದೊರೆತ ಮೊದಲ ಅವಕಾಶವನ್ನೇ ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಇದುವರೆಗೆ ಆಡಿರುವ ಐದು ಪಂದ್ಯಗಳಿಂದ ಮೂರು ಅರ್ಧಶತಕ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಆ ಮೂರು ಪಂದ್ಯಗಳನ್ನು ಆರ್ ಸಿಬಿ ಗೆದ್ದುಕೊಂಡಿದೆ. ಎಡಗೈ ಆರಂಭಿಕ ಆಟಗಾರನಾಗಿರುವ ಪಡಿಕ್ಕಲ್ ತನ್ನ ಕಲಾತ್ಮಕ ಆಟ ಮತ್ತು ಟೈಮಿಂಗ್ ನಿಂದ ಯಶಸ್ಸು ಗಳಿಸುತ್ತಿದ್ದಾರೆ.

ಯಾರ್ಕರ್ ಸ್ಪೆಶಲಿಸ್ಟ್ ಟಿ ನಟರಾಜನ್

ಯಾರ್ಕರ್ ಸ್ಪೆಶಲಿಸ್ಟ್ ಟಿ ನಟರಾಜನ್
ತಮಿಳುನಾಡಿನ ಎಡಗೈ ವೇಗಿ ತಂಗರಸು ನಟರಾಜನ್ ಈ ಐಪಿಎಲ್ ನಲ್ಲಿ ಬೆಳಕಿಗೆ ಬಂದ ಪ್ರತಿಭೆ. 29 ವರ್ಷದ ನಟರಾಜನ್ ಈ ಹಿಂದೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿದ್ದರೂ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯುತ್ತಿರುವ ಇವರು ನಿಖರ ಯಾರ್ಕರ್ ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ತನ್ನ ಪ್ರದರ್ಶನ ಹೀಗೆ ಮುಂದುವರಿಸಿದಲ್ಲಿ ಭಾರತ ತಂಡದಲ್ಲಿ ಖಾಲಿಯಿರುವ ಎಡಗೈ ವೇಗಿ ಜಾಗವನ್ನು ತುಂಬುವುದರಲ್ಲಿ ಅನುಮಾನವಿಲ್ಲ.

ಸ್ಪಿನ್ನರ್ ರವಿ ಬಿಶ್ನೋಯಿ

ಸ್ಪಿನ್ನರ್ ರವಿ ಬಿಶ್ನೋಯಿ

ಇನ್ನೂ 20ರ ಹರೆಯದ ರಾಜಸ್ಥಾನ ಮೂಲಕ ಯುವಕ. 2019ರ ಅಂಡರ್ 19 ವಿಶ್ವಕಪ್ ನಲ್ಲಿ ಮಿಂಚಿದ್ದ ರವಿ ಬಿಶ್ನೋಯಿಯನ್ನು ಪಂಜಾಬ್ ಫ್ರಾಂಚೈಸಿ ಖರೀದಿಸಿತ್ತು. ಲೆಗ್ ಸ್ಪಿನ್ನರ್ ಆಗಿರುವ ರವಿಗೆ ಕೋಚ್ ಅನಿಲ್ ಕುಂಬ್ಳೆ ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸದ್ಯ ತಂಡದ ಪ್ರಮುಖ ಸ್ಪಿನ್ನರ್ ಆಗಿರುವ ಬಿಶ್ನೋಯಿ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ ವಾರ್ನರ್ ಮತ್ತು ಬೆರಿಸ್ಟೋ ವಿಕೆಟ್ ಪಂದ್ಯದ ಗತಿ ಬದಲಿಸಿದ್ದರು.

ವೇಗಿ ಶಿವಂ ಮಾವಿ

ವೇಗಿ ಶಿವಂ ಮಾವಿ
2018ರ ಅಂಡರ್ 19 ವಿಶ್ವಕಪ್ ನಲ್ಲಿ ಮಿಂಚಿದ ಭಾರತದ ಯುವ ವೇಗಿ. ವಯಸ್ಸು ಇನ್ನೂ 20. ಅಂಡರ್ 19 ವಿಶ್ವಕಪ್ ನಲ್ಲಿ ಭಾರಿ ಸದ್ದು ಮಾಡಿದ್ದ ಮಾವಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿತ್ತು. ಆದರೆ ಗಾಯದ ಸಮಸ್ಯೆ ಮಾವಿಯನ್ನು ಕಾಡಿತ್ತು. ಆದರೆ ಈ ಬಾರಿ ಕೆಕೆಆರ್ ತಂಡದಲ್ಲಿ ಉತ್ತಮ ದಾಳಿ ಸಂಘಟಿಸುತ್ತಿರುವ ಮಾವಿ ತನ್ನ ವೇಗ ಮತ್ತು ಚಾಣಾಕ್ಷ ಬೌಲಿಂಗ್ ನಿಂದ ಹೆಸರಾಗಿದ್ದಾನೆ. ಸ್ಥಿರ ಪ್ರದರ್ಶನ ಮುಂದುವರಿಸಿದರೆ ಕೆಲವೇ ವರ್ಷಗಳಲ್ಲಿ ಟೀಂ ಇಂಡಿಯಾ ಕದ ತಟ್ಟುವುದರಲ್ಲಿ ಅನುಮಾನವಿಲ್ಲ.

-ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.