ಬಾಂಗ್ಲಾ ಹುಲಿಗಳೆದುರು ಕಿವೀಸ್‌ ಸೆಣಸಾಟ


Team Udayavani, Jun 5, 2019, 6:06 AM IST

edurali

ಓವಲ್: ವಿಶ್ವಕಪ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದ ಖುಷಿಯಲ್ಲಿರುವ ಬಾಂಗ್ಲಾ ಮತ್ತು ನ್ಯೂಜಿಲ್ಯಾಂಡ್‌ ಓವಲ್ ಅಂಗಳದಲ್ಲಿ ಮುಖಾಮುಖೀಯಾಗಲು ಸಜ್ಜಾಗಿವೆ. ವಿಶ್ವಕಪ್‌ನಲ್ಲಿ ಬಲಾಬಲದ ಲೆಕ್ಕಾಚಾರದಲ್ಲಿ ನ್ಯೂಜಿಲ್ಯಾಂಡ್‌ ಬಲಿಷ್ಠವಾಗಿದೆ. ಯಾಕೆಂದರೆ ಈ ಹಿಂದೆ ಆಡಿದ ನಾಲ್ಕು ಪಂದ್ಯವನ್ನು ನ್ಯೂಜಿಲ್ಯಾಂಡ್‌ ಗೆದ್ದಿದೆ. ಆದರೆ ಬಾಂಗ್ಲಾ ಹುಲಿಗಳನ್ನು ಈ ಬಾರಿ ಕಡೆಗಣಿಸುವಂತಿಲ್ಲ. ಶನಿವಾರದ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 21ರನ್‌ಗಳ ಗೆಲುವು ದಾಖಲಿಸಿದ ಬಾಂಗ್ಲಾ ಇದೀಗ ಎರಡನೇ ಗೆಲುವಿನ ಹಾಗೂ ವಿಶ್ವಕಪ್‌ ಮುಖಾಮುಖೀಯಲ್ಲಿ ನೂಜಿಲ್ಯಾಂಡ್‌ ವಿರುದ್ಧ ಮೊದಲ ಗೆಲುವು ದಾಖಲಿಸಲು ಬಾಂಗ್ಲಾ ಕಾದು ಕುಳಿತಿದೆ.

ನ್ಯೂಜಿಲ್ಯಾಂಡ್‌ ಬಲಿಷ್ಠ

ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಸುಲಭ ಗೆಲುವು ಪಡೆದ ನ್ಯೂಜಿಲ್ಯಾಂಡ್‌ ಅತ್ಯಂತ ಬಲಿಷ್ಠ ತಂಡ ಎನ್ನಲಡ್ಡಿಯಿಲ್ಲ. 2015ರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನದೊಂದಿಗೆ ನೂಜಿಲ್ಯಾಂಡ್‌ ಫೈನಲ್ ತಲುಪಿತ್ತು. ಆದರೆ ಫೈನಲ್ನಲ್ಲಿ ತೀರಾ ಕಳಪೆ ಪ್ರದರ್ಶನ ತೋರಿ ಆಸ್ಟ್ರೇಲಿಯ ವಿರುದ್ಧ ಸೋಲನುಭವಿಸಿತ್ತು. ಆದರೆ ಈ ಬಾರಿ ಅಂತಹ ತಪ್ಪು ಮತ್ತೆ ಮರುಕಳಿಸಬಾರದು ಎಂದು ಪಣ ತೊಟ್ಟಿರುವ ವಿಲಿಯಮ್ಸ್‌ ಪಡೆ ವಿಶ್ವ ಚಾಂಪಿಯನ್‌ ಪಟ್ಟಕ್ಕೇರಲು ಸಜ್ಜಾಗಿ ನಿಂತಿದೆ.

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಕಿವೀಸ್‌ ಸಶಕ್ತವಾಗಿದೆ. ಆರಂಭಿಕ ಆಟಗಾರರಾದ ಕಾಲಿನ್‌ ಮುನ್ರೊ, ಮಾರ್ಟಿನ್‌ ಗಪ್ಟಿಲ್ ಎದುರಾಳಿ ತಂಡದ ದಾಳಿಯನ್ನು ಪುಡಿಮಾಡುವುದರಲ್ಲಿ ಅನುಮಾನವಿಲ್ಲ. ಇದಕ್ಕೆ ಶ್ರೀಲಂಕಾ ವಿರುದ್ಧದ ಪಂದ್ಯವೇ ಸಾಕ್ಷಿ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಕೇನ್‌ ವಿಲಿಯಮ್ಸನ್‌, ರಾಸ್‌ ಟೇಲರ್‌ ತಂಡಕ್ಕೆ ನೆರವಾಗಬಲ್ಲರು. ಕಿವೀಸ್‌ ಬೌಲಿಂಗ್‌ ಘಾತಕವಾಗಿದೆ. ಟ್ರೆಂಟ್ ಬೌಲ್r, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಮಿಚೆಲ್ ಸ್ಯಾಂಟ್ನರ್‌, ಮ್ಯಾಟ್ ಹೆನ್ರಿ, ಲಾಕಿ ಫ‌ರ್ಗ್ಯುಸನ್‌, ಜೆಮ್ಮಿ ನೀಶಮ್‌ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಬಾಂಗ್ಲಾಕ್ಕೆ ಬ್ಯಾಟಿಂಗ್‌ ಬಲ

ಬಾಂಗ್ಲಾದೇಶಕ್ಕೆ ತನ್ನ ಬ್ಯಾಟಿಂಗ್‌ ಮೇಲೆ ಹೆಚ್ಚು ವಿಶ್ವಾಸ ಎನ್ನುವಂತಿದೆ. ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಬೌಲರ್‌ಗಳು ಬಾಂಗ್ಲಾ ತಂಡದಲ್ಲಿಲ್ಲ ಮತ್ತು ಫೀಲ್ಡಿಂಗ್‌ ಕೂಡ ಕಳಪೆ ಮಟ್ಟದಲ್ಲಿದೆ. ಸುಲಭದ ಕ್ಯಾಚ್‌ಗಳನ್ನೆಲ್ಲ ಕೈಚೆಲ್ಲುತ್ತಿದ್ದಾರೆ. ಕಳೆದ ದ. ಆಫ್ರಿಕಾ ವಿರುದ್ಧದ ಪಂದ್ಯವೇ ಇದಕ್ಕೆ ಸಾಕ್ಷಿ. ಆದರೆ ಬ್ಯಾಟಿಂಗ್‌ ತುಂಬಾ ಬಲಿಷ್ಠವಾಗಿದೆ.

ತಮೀಮ್‌ ಇಕ್ಬಾಲ್, ಸೌಮ್ಯ ಸರ್ಕಾರ್‌, ಶಕಿಬ್‌ ಅಲ್ ಹಸನ್‌, ಮುಶ್ಫಿಕರ್‌ ರಹಿಂ, ಮೊಹಮ್ಮದುಲ್ಲ ಉತ್ತಮ ಫಾರ್ಮ್ನಲ್ಲಿ ದ್ದಾರೆ. ಆದ್ದರಿಂದ ಬಾಂಗ್ಲಾ ಟಾಸ್‌ ಗೆದ್ದರೆ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಎದುರಾಳಿಗೆ ದೊಡ್ಡ ಮೊತ್ತದ ಗುರಿ ನೀಡುವ ಯೋಜನೆ ಹಾಕಿಕೊಳ್ಳಬಹುದು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.