ಬ್ಯಾಟಿಂಗ್‌ ವೈಫ‌ಲ್ಯ; ಭಾರತ ಪರಾಭವ

ಕೊಹ್ಲಿ ಪಡೆಗೆ 6 ವಿಕೆಟ್‌ ಸೋಲು

Team Udayavani, May 26, 2019, 9:47 AM IST

dhwan

ಲಂಡನ್‌: ಭಾರೀ ನಿರೀಕ್ಷೆಯೊಂದಿಗೆ ಇಂಗ್ಲೆಂಡಿಗೆ ಸಾಗಿದ ಭಾರತ ತಂಡ ನ್ಯೂಜಿಲ್ಯಾಂಡ್‌ ಎದುರಿನ ಶನಿವಾರದ ಓವಲ್‌ ಅಭ್ಯಾಸ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫ‌ಲ್ಯಕ್ಕೆ ಸಿಲುಕಿ 6 ವಿಕೆಟ್‌ಗಳ ಸೋಲನುಭವಿಸಿದೆ.

ವೇಗಿ ಟ್ರೆಂಟ್‌ ಬೌಲ್ಟ್ ಮತ್ತು ಮಧ್ಯಮ ವೇಗಿ ಜಿಮ್ಮಿ ನೀಶಮ್‌ ದಾಳಿಗೆ ತತ್ತರಿಸಿದ ಕೊಹ್ಲಿ ಪಡೆ 39.2 ಓವರ್‌ಗಳಲ್ಲಿ 179 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು. ಜವಾಬಿತ್ತ ನ್ಯೂಜಿಲ್ಯಾಂಡ್‌ 37.1 ಓವರ್‌ಗಳಲ್ಲಿ 4 ವಿಕೆಟಿಗೆ 180 ರನ್‌ ಬಾರಿಸಿತು. ಭಾರತ ಮಂಗಳವಾರ ಬಾಂಗ್ಲಾದೇಶವನ್ನು ಎದುರಿಸಲಿದೆ.

ಚೇಸಿಂಗ್‌ ವೇಳೆ ಕಿವೀಸ್‌ ಆರಂಭಿಕರಾದ ಗಪ್ಟಿಲ್‌ (22) ಮತ್ತು ಮುನ್ರೊ (4) ಅವರನ್ನು ಬೇಗನೇ ಕಳೆದುಕೊಂಡರೂ ನಾಯಕ ವಿಲಿಯಮ್ಸನ್‌ (67) ಮತ್ತು ರಾಸ್‌ ಟೇಲರ್‌ (71) ದಿಟ್ಟ ಬ್ಯಾಟಿಂಗ್‌ ನಡೆಸಿದರು.

ಭಾರತದ ಸರದಿಯಲ್ಲಿ ರವೀಂದ್ರ ಜಡೇಜ ಅವರ ಅರ್ಧ ಶತಕದ ಹೊರತಾಗಿ ಬೇರೆ ದೊಡ್ಡ ಸ್ಕೋರ್‌ ದಾಖಲಾಗಲಿಲ್ಲ. 8ನೇ ಕ್ರಮಾಂಕದಲ್ಲಿ ಆಡಲಿಳಿದ ಜಡೇಜ ಭರ್ತಿ 50 ಎಸೆತ ಎದುರಿಸಿ 54 ರನ್‌ ಹೊಡೆದರು. ಇದರಲ್ಲಿ 6 ಬೌಂಡರಿ ಮತ್ತು ಇನ್ನಿಂಗ್ಸಿನ ಎರಡೂ ಸಿಕ್ಸರ್‌ ಸೇರಿತ್ತು.

ಕಾಡಿದ ಟ್ರೆಂಟ್‌ ಬೌಲ್ಟ್
ಟ್ರೆಂಟ್‌ ಬೌಲ್ಟ್ ಮೊದಲ ಓವರಿನಿಂದಲೇ ಭಾರತದ ಆಟಗಾರರ ಪಾಲಿಗೆ ಸಿಂಹಸ್ವಪ್ನರಾದರು. ತಮ್ಮ ಮೊದಲ ಓವರಿನಲ್ಲಿ ರೋಹಿತ್‌ ಶರ್ಮ ಅವರನ್ನು ಲೆಗ್‌ ಬಿಫೋರ್‌ ಬಲೆಗೆ ಬೀಳಿಸಿದರೆ, ಮುಂದಿನ ಓವರಿನಲ್ಲೇ ಧವನ್‌ಗೆ ಪೆವಿಲಿಯನ್‌ ಹಾದಿ ತೋರಿಸಿದರು. ಇಬ್ಬರ ಗಳಿಕೆಯೂ 2 ರನ್‌.
ನಾಯಕ ಕೊಹ್ಲಿ 24 ಎಸೆತಗಳಿಂದ 18 ರನ್‌ ಮಾಡಿ (3 ಬೌಂಡರಿ) ಗ್ರ್ಯಾಂಡ್‌ಹೋಮ್‌ಗೆ ಬೌಲ್ಡ್‌ ಆದರು. 4ನೇ ಕ್ರಮಾಂಕದಲ್ಲಿ ಬಂದ ರಾಹುಲ್‌ ಕೂಡ ಕ್ಲಿಕ್‌ ಆಗಲಿಲ್ಲ. ಕೇವಲ 6 ರನ್‌ ಮಾಡಿ ಬೌಲ್ಟ್ ಎಸೆತಕ್ಕೆ ಸ್ಟಂಪ್‌ ಎಗರಿಸಿಕೊಂಡರು.

115ಕ್ಕೆ 8 ವಿಕೆಟ್‌ ಪತನ
ಭಡ್ತಿ ಪಡೆದ ಪಾಂಡ್ಯ ಉತ್ತಮ ಲಯದಲ್ಲಿದ್ದಂತೆ ಕಂಡು ಬಂದರು. 6 ಬೌಂಡರಿ ನೆರವಿನಿಂದ 30 ರನ್‌ ಮಾಡಿದರು. ಧೋನಿ ಗಳಿಕೆ 42 ಎಸೆತಗಳಿಂದ 17 ರನ್‌. ಕಾರ್ತಿಕ್‌ ಕಾಣಿಕೆ ನಾಲ್ಕೇ ರನ್‌. 29ನೇ ಓವರಿನಲ್ಲಿ ಭಾರತ 8ಕ್ಕೆ 115 ಮಾಡಿ ಕುಂಟುತ್ತಿತ್ತು.  ಇಂಥ ಸಂದಿಗ್ಧ ಹಂತದಲ್ಲಿ ನೆರವಿಗೆ ಬಂದವರು ಜಡೇಜ. ಅವರಿಗೆ ಕುಲದೀಪ್‌ (19) ಉತ್ತಮ ಬೆಂಬಲವಿತ್ತರು. 9ನೇ ವಿಕೆಟಿಗೆ 62 ರನ್‌ ಒಟ್ಟುಗೂಡಿತು.

ಸಂಕ್ಷಿಪ್ತ ಸ್ಕೋರ್‌
ಭಾರತ-39.2 ಓವರ್‌ಗಳಲ್ಲಿ ಆಲೌಟ್‌ 179 (ಜಡೇಜ 54, ಪಾಂಡ್ಯ 30, ಕುಲದೀಪ್‌ 19, ಕೊಹ್ಲಿ 18, ಧೋನಿ 17, ಬೌಲ್ಟ್ 33ಕ್ಕೆ 4, ನೀಶಮ್‌ 26ಕ್ಕೆ 3). ನ್ಯೂಜಿಲ್ಯಾಂಡ್‌-37.1 ಓವರ್‌ಗಳಲ್ಲಿ 4 ವಿಕೆಟಿಗೆ 180 (ಟೇಲರ್‌ 71, ವಿಲಿಯಮ್ಸನ್‌ 67, ಬುಮ್ರಾ 2ಕ್ಕೆ 1, ಪಾಂಡ್ಯ 26ಕ್ಕೆ 1, ಜಡೇಜ 27ಕ್ಕೆ 1, ಚಾಹಲ್‌ 37ಕ್ಕೆ 1).

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.