ವಿಶ್ವಕಪ್ ನಲ್ಲಿ ಹೆಚ್ಚು ಸಿಕ್ಸ್ ಬಾರಿಸಿದವರು ಯಾರು ಗೊತ್ತಾ ?


Team Udayavani, Jun 29, 2019, 3:16 PM IST

dhoni

ಲಂಡನ್: ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಈಗಾಗಲೇ ದೊಡ್ಡ ದೊಡ್ಡ ಪಂದ್ಯಗಳನ್ನು ಕಂಡಿದೆ. ಮೊದಲ ಕೆಲವು ಪಂದ್ಯಗಳು ಬ್ಯಾಟ್ಸಮನ್ ಗಳ ಮೇಲಾಟಕ್ಕೆ ಸಾಕ್ಷಿಯಾದರೆ, ನಂತರದ ಕೆಲವು ಪಂದ್ಯಗಳು ಬೌಲರ್ ಗಳ ಅತ್ಯುತ್ತಮ ಪ್ರದರ್ಶನಕ್ಕೆ ಸಾಕ್ಷಿಯಾಗಿವೆ.

ಶುಕ್ರವಾರದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ನಂತರ ಯಾರು ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿದ್ದಾರೆ, ಯಾರು ಉತ್ತಮ ಬೌಲಿಂಗ್ ನಡೆಸಿದ್ದಾರೆ ನೋಡೋಣ.

ಅತೀ ಹೆಚ್ಚು ಸಿಕ್ಸ್
ಅಫ್ಘಾನಿಸ್ಥಾನ ವಿರುದ್ಧ ಹೊಡಿಬಡಿ ಪ್ರದರ್ಶನ ನೀಡಿದ ಇಂಗ್ಲೆಡ್ ಕಪ್ತಾನ ಇಯಾನ್ ಮೋರ್ಗನ್ ಈ ವಿಶ್ವಕಪ್ ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಮೋರ್ಗನ್ ಆರು ಇನ್ನಿಂಗ್ಸ್ ಗಳಲ್ಲಿ ಒಟ್ಟು 22 ಸಿಕ್ಸ್ ಬಾರಿಸಿದ್ದು, ಅಫ್ಘಾನ್ ವಿರುದ್ಧ ಒಂದೇ ಪಂದ್ಯದಲ್ಲಿ 17 ಸಿಕ್ಸ್ ಬಾರಿಸಿದ್ದರು. ಆಸೀಸ್ ನಾಯಕ ಆರೋನ್ ಫಿಂಚ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಅವರು 18 ಸಿಕ್ಸ್ ಬಾರಿಸಿದ್ದಾರೆ. 10 ಸಿಕ್ಸ್ ಬಾರಿಸಿರುವ ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿದ್ದರೆ, ಭಾರತೀಯ ರೋಹಿತ್ ಶರ್ಮಾ ಏಳು ಸಿಕ್ಸ್ ಬಾರಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಅತೀ ಹೆಚ್ಚು ಬೌಂಡರಿ
ಈ ಕೂಟದಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್. ಅವರು ಆರು ಪಂದ್ಯಗಳಲ್ಲಿ 48 ಬೌಂಡರಿ ಬಾರಿಸಿದ್ದಾರೆ. ಅಸೀಸ್ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ತಲಾ 46 ಬೌಂಡರಿ ಬಾರಿಸಿ ನಂತರದೆರಡು ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು 31 ಬೌಂಡರಿ ಬಾರಿಸಿದ್ದಾರೆ.

ಅತ್ಯುತ್ತಮ ಬ್ಯಾಟಿಂಗ್ ಸರಾಸರಿ
ಕಿವೀಸ್ ನಾಯಕ ಕೇನ್ ವಿಲಿಯುಮ್ಸನ್ ಈ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ. ಐದು ಇನ್ನಿಂಗ್ಸ್ ಗಳಲ್ಲಿ 414 ರನ್ ಗಳಿಸಿರುವ ಕೇನ್ ಬ್ಯಾಟಿಂಗ್ ಸರಾಸರಿ 128.0. ಎರಡನೇ ಸ್ಥಾನದಲ್ಲಿರುವ ಶಕೀಬ್ ಬ್ಯಾಟಿಂಗ್ ಸರಾಸರಿ 95.30. ಭಾರತದ ರೋಹಿತ್ ಶರ್ಮಾ ಕೂಡಾ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ಅವರು 84.50 ಸರಾಸರಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅತ್ಯುತ್ತಮ ಬೌಲಿಂಗ್ ಸ್ಟ್ರೈಕ್ ರೇಟ್
ಇನ್ನು ಬೌಲರ್ ಗಳ ವಿಷಯಕ್ಕೆ ಬರುವುದಾದರೆ ಸತತ ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಕಿತ್ತ, ವಿಶ್ವಕಪ್ ಹ್ಯಾಟ್ರಿಕ್ ವೀರ ಮೊಹಮ್ಮದ್ ಶಮಿ ಈ ಕೂಟದಲ್ಲಿ ಅತ್ಯುತ್ತಮ ಬೌಲಿಂಗ್ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಶಮಿ ಸ್ಟ್ರೈಕ್ ರೇಟ್ 12.12. ಎರಡನೇ ಸ್ಥಾನದಲ್ಲಿರುವ ಆಸೀಸ್ ವೇಗಿ ಜೇಸನ್ ಬೆಹ್ರಾಂಡಫ್ 19ರ ಸ್ಟ್ರೈಕ್ ರೇಟ್ ನಲ್ಲಿ ಬೌಲಿಂಗ್ ನಡೆಸಿದ್ದಾರೆ. ಅಸಿಸ್ ಘಾತಕ ವೇಗಿ ಮಿಚೆಲ್ ಸ್ಟಾರ್ಕ್ ಏಳು ಪಂದ್ಯಗಳಲ್ಲಿ 20.42ರ ಬೌಲಿಂಗ್ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.