ಉದ್ಘಾಟನಾ ಪಂದ್ಯದಲ್ಲೇ ಭಾರತದ ಆಟ: ಗಾವಸ್ಕರ್‌ ಬ್ಯಾಟಿಂಗ್‌ ಅಭ್ಯಾಸ!

ಇಂಗ್ಲೆಂಡ್‌-ಭಾರತ ನಡುವೆ ನಡೆದಿತ್ತು ವಿಶ್ವಕಪ್‌ ಮೊದಲ ಪಂದ್ಯ

Team Udayavani, May 17, 2019, 9:38 AM IST

suniul

ವಿಶ್ವಕಪ್‌ ಚರಿತ್ರೆಯ ಉದ್ಘಾಟನಾ ಪಂದ್ಯದಲ್ಲೇ ಭಾರತ ಆಡಲಿಳಿದಿತ್ತು ಎಂಬುದು ಹೆಮ್ಮೆಯ ಸಂಗತಿ. 1975ರ ಜೂನ್‌ 7ರಂದು ಆತಿಥೇಯ ಇಂಗ್ಲೆಂಡ್‌ ಮತ್ತು ಭಾರತ ತಂಡಗಳು ಐತಿಹಾಸಿಕ ಲಾರ್ಡ್ಸ್‌ ನಲ್ಲಿ ಕಣಕ್ಕಿಳಿಯುವುದರೊಂದಿಗೆ ವಿಶ್ವಕಪ್‌ಗೆ ಅಧಿಕೃತ ಚಾಲನೆ ಲಭಿಸಿತು.

ಏಕದಿನ ಮಟ್ಟಿಗೆ ಆಗ ಎಲ್ಲವೂ ಅನನುಭವಿ ತಂಡಗಳೇ. ಭಾರತ ಅದುವರೆಗೆ ಕೇವಲ 3 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿತ್ತು. ಹೀಗಾಗಿ ಸೀಮಿತ ಓವರ್‌ಗಳ ಪಂದ್ಯದ ಪರಿಭಾಷೆ, ಆಟದ ಶೈಲಿ… ಯಾವುದನ್ನೂ ಅರ್ಥೈಸಿಕೊಂಡಿರಲಿಲ್ಲ. ಭಾರತ ಆಗಿನ್ನೂ ಟೆಸ್ಟ್‌ ಗುಂಗಿನಲ್ಲೇ ಇತ್ತು. ಇದಕ್ಕೆ ಉದ್ಘಾಟನಾ ಪಂದ್ಯದ ಫ‌ಲಿತಾಂಶವೇ ಸಾಕ್ಷಿ.

202 ರನ್ನುಗಳ ಭಾರೀ ಸೋಲು ಈ ಪಂದ್ಯದಲ್ಲಿ ಭಾರತಕ್ಕೆ ಎದುರಾದದ್ದು 202 ರನ್ನುಗಳ ಸೋಲು! ಮೈಕ್‌ ಡೆನ್ನಿಸ್‌ ನೇತೃತ್ವದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ನಡೆಸಿ 4 ವಿಕೆಟಿಗೆ 344 ರನ್‌ ಪೇರಿಸಿತು. ಭಾರತದ ಸ್ಕೋರ್‌ 60 ಓವರ್‌ಗಳಲ್ಲಿ 3 ವಿಕೆಟಿಗೆ 132 ರನ್‌!

174 ಎಸೆತಗಳಿಂದ 36 ರನ್‌! ಆರಂಭಕಾರ ಸುನೀಲ್‌ ಗಾವಸ್ಕರ್‌ ಪೂರ್ತಿ 60 ಓವರ್‌ಗಳ ತನಕ ಕ್ರೀಸ್‌ ಆಕ್ರಮಿಸಿ ಕೊಂಡು, 174 ಎಸೆತಗಳಿಂದ ಔಟಾಗದೆ 36 ರನ್‌ ಮಾಡುವ ಮೂಲಕ ಭಾರತದ “ಏಕದಿನ ಸಾಮರ್ಥ್ಯ’ವನ್ನು ಜಗಜ್ಜಾಹೀರು ಮಾಡಿದರು! 59 ಎಸೆತಗಳಿಂದ 37 ರನ್‌ ಮಾಡಿದ ಗುಂಡಪ್ಪ ವಿಶ್ವನಾಥ್‌ ಅವರದೇ ಭಾರತದ ಸರದಿಯ ಅತ್ಯಧಿಕ ವೈಯಕ್ತಿಕ ಗಳಿಕೆ. ಇಂಗ್ಲೆಂಡ್‌ ಪರ ಆರಂಭಕಾರ ಡೆನ್ನಿಸ್‌ ಅಮಿಸ್‌ 147 ಎಸೆತಗಳಿಂದ 137 ರನ್‌ ಬಾರಿಸಿ ವಿಶ್ವಕಪ್‌ ಇತಿಹಾಸದ ಮೊದಲ ಶತಕಕ್ಕೆ ಸಾಕ್ಷಿಯಾದರು. ವಿಶ್ವಕಪ್‌ನಲ್ಲಿ ಮೊದಲ ವಿಕೆಟ್‌ ಉರುಳಿಸಿದ ಸಾಧಕನೆಂಬ ಹೆಗ್ಗಳಿಕೆ ಮೊಹಿಂದರ್‌ ಅಮರನಾಥ್‌ ಅವರದಾಯಿತು.

ಗಾವಸ್ಕರ್‌ ಬ್ಯಾಟಿಂಗ್‌ ಅಭ್ಯಾಸ!
ಉದ್ಘಾಟನಾ ಪಂದ್ಯದಲ್ಲಿ ಸುನೀಲ್‌ ಗಾವಸ್ಕರ್‌ ಅವರ ಆಮೆಗತಿಯ ಆಟ ಕಂಡು ರೋಸಿಹೋದ ಅಭಿಮಾನಿಯೊಬ್ಬ ಅಂಗಳಕ್ಕೆ ಹಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ಸಂಭವಿಸಿತ್ತು. ಬಳಿಕ ತಮ್ಮ ಆಟದ ಕುರಿತು ಪ್ರತಿಕ್ರಿಯಿಸಿದ ಗಾವಸ್ಕರ್‌, “ಇಂಗ್ಲೆಂಡಿನ ಆ ಬೃಹತ್‌ ಮೊತ್ತವನ್ನು ಹಿಂದಿಕ್ಕಲು ನಮ್ಮಿಂದ ಹೇಗೂ ಆಗುತ್ತಿರಲಿಲ್ಲ. ಹೀಗಾಗಿ ನಾನು ಬ್ಯಾಟಿಂಗ್‌ ಪ್ರ್ಯಾಕ್ಟೀಸ್‌ ನಡೆಸಿದೆ’ ಎಂದಿದ್ದರು!

ಭಾರತ ತಂಡ
ಎಸ್‌. ವೆಂಕಟರಾಘವನ್‌ (ನಾಯಕ), ಸುನೀಲ್‌ ಗಾವಸ್ಕರ್‌, ಅಂಶುಮನ್‌ ಗಾಯಕ್ವಾಡ್‌,  ಏಕನಾಥ್‌ ಸೋಲ್ಕರ್‌, ಜಿ.ಆರ್‌. ವಿಶ್ವನಾಥ್‌, ಬೃಜೇಶ್‌ ಪಟೇಲ್‌, ಮೊಹಿಂದರ್‌ ಅಮರನಾಥ್‌,  ಫ‌ರೂಖ್‌ ಇಂಜಿನಿಯರ್‌, ಅಬಿದ್‌ ಅಲಿ, ಮದನ್‌ಲಾಲ್‌, ಕರ್ಸನ್‌ ಘಾವ್ರಿ, ಬಿಶನ್‌ ಸಿಂಗ್‌ ಬೇಡಿ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.