ಲಂಕೆಯನ್ನು ಮಣಿಸಲು ಆಸ್ಟ್ರೇಲಿಯ ಸಜ್ಜು

ಅಗ್ರಸ್ಥಾನಕ್ಕೇರಲು ಕಾಂಗರೂ ಪ್ರಯತ್ನ ; ಗೆಲ್ಲಲೇಬೇಕಾದ ಒತ್ತಡದಲ್ಲಿ ಶ್ರೀಲಂಕಾ

Team Udayavani, Jun 15, 2019, 5:34 AM IST

AU-S

ಲಂಡನ್‌: ಬುಧವಾರ ನಡೆದ ಪಂದ್ಯದಲ್ಲಿ ಪಾಕಿಸ್ಥಾನವನ್ನು 41 ರನ್ನುಗಳಿಂದ ಬಗ್ಗುಬಡಿದ ಆಸ್ಟ್ರೇಲಿಯ ತಂಡವು ಏಶ್ಯ ಖಂಡದ ಇನ್ನೊಂದು ತಂಡವಾದ ಶ್ರೀಲಂಕಾವನ್ನು ಎದುರಿಸಲು ಸಜ್ಜಾಗಿದೆ.

ಸಂಕಷ್ಟದಲ್ಲಿ ಶ್ರೀಲಂಕಾ
ಓವಲ್‌ನಲ್ಲಿ ನಡೆಯಲಿರುವ ಈ ಪಂದ್ಯ ಶ್ರೀಲಂಕಾಕ್ಕೆ ಮಹತ್ವದ ಪಂದ್ಯವಾಗಿದೆ. ಜೂ. 4ರಂದು ಅಫ್ಘಾನಿಸ್ಥಾನಎದುರಿಸಿದ ಬಳಿಕ ಆಡಿದ ಎರಡು ಪಂದ್ಯಗಳನ್ನು ಮಳೆಯಿಂದ ಕಳೆದುಕೊಂಡ ಶ್ರೀಲಂಕಾ ಸಂಕಷ್ಟದಲ್ಲಿದೆ. ಇನ್ನೂ ಈ ಪಂದ್ಯವೂ ಮಳೆಯಿಂದ ರದ್ದುಗೊಂಡರೆ ಲಂಕಾಕ್ಕೆ ಮುಂದಿನ ಹಾದಿ ಕಠಿನವಾಗಲಿದೆ.

ವಿಶ್ವಕಪ್‌ನಲ್ಲಿ ಬಲಾಬಲದ ಲೆಕ್ಕಾಚಾರದಲ್ಲಿ ಆಸೀಸ್‌ 10 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ ಆಸ್ಟ್ರೇಲಿಯಕ್ಕೆ ಹೆಚ್ಚಿನ ಅವಕಾಶ ಎನ್ನಲಡ್ಡಿಯಿಲ್ಲ. ಆದರೆ ಲಂಕಾದ ಮಾಲಿಂಗ ಅವರ ಘಾತಕ ಬೌಲಿಂಗ್‌ ದಾಳಿಯನ್ನು ಕೂಡ ಮರೆಯುವಂತಿಲ್ಲ. ಈ ಪಂದ್ಯದಲ್ಲಿ ಮಾಲಿಂಗ ತಮ್ಮ ಹಳೆಯ ಫಾರ್ಮ್ಗೆ ಮರಳಿದರೆ ಶ್ರೀಲಂಕಾ ಗೆಲುವು ಸಾಧಿಸಬಹುದು.

ಆಸ್ಟ್ರೇಲಿಯ ಬಲಿಷ್ಠ
ಆಸ್ಟ್ರೇಲಿಯ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ವಿಭಾಗದಲ್ಲಿ ಬಲಿಷ್ಠವಾಗಿದ್ದು ಗೆಲ್ಲುವ ಫೇವರಿಟ್‌ ತಂಡವಾಗಿ ಗುರುತಿಸಿದೆ. ಪ್ರಚಂಡ ಬ್ಯಾಟಿಂಗ್‌ ಫಾರ್ಮ್ಗೆ ಮರಳಿರುವ ನಾಯಕ ಆರನ್‌ ಫಿಂಚ್‌ ತಂಡಕ್ಕೆ ಹೆಚ್ಚು ಬಲತುಂಬಿದ್ದಾರೆ. ಇನ್ನೂ ಆಸೀಸ್‌ನ ಆರಂಭಿಕರು ಅಪಾಯಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಫಿಂಚ್‌, ವಾರ್ನರ್‌ ಎದುರಾಳಿ ಬೌಲರ್‌ಗಳ ಬೆಂಡೆತ್ತಿ ಬೃಹತ್‌ ಮೊತ್ತದ ಜತೆಯಾಟ ಆಡುತ್ತಿದ್ದಾರೆ. ಇದಕ್ಕೆ ಪಾಕಿಸ್ಥಾನದ ವಿರುದ್ಧದ ಪಂದ್ಯವೇ ಸಾಕ್ಷಿ. ಮಧ್ಯಮ ಕ್ರಮಾಂಕದಲ್ಲಿ ಸ್ಮಿತ್‌, ಮ್ಯಾಕ್ಸ್‌ ವೆಲ್‌, ಅಲೆಕ್ಸ್‌ ಕ್ಯಾರಿ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸುತ್ತಿದ್ದಾರೆ. ಒಟ್ಟಾರೆಯಾಗಿ ಆಸ್ಟ್ರೇಲಿಯ ಹೆಚ್ಚು ಸಂತುಲಿತ ತಂಡವಾಗಿದೆ. ಒತ್ತಡವನ್ನು ನಿಭಾಯಿಸಿ ಹೇಗೆ ಪಂದ್ಯವನ್ನಾಡಬೇಕು ಎಂಬುದು ಕಾಂಗರೂ ಪಡೆಗೆ ಕರಗತ. ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಮಿಚೆಲ್‌ ಸ್ಟಾರ್ಕ್‌, ಕೇನ್‌ ರಿಚರ್ಡ್‌ಸನ್‌, ನಥನ್‌ ಕೋಲ್ಟರ್‌ ನೈಲ್‌, ಪ್ಯಾಟ್‌ ಕಮಿನ್ಸ್‌ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥ ರಿದ್ದಾರೆ.

ಲಂಕಾದಲ್ಲಿ ಸ್ಥಿರತೆಯ ಕೊರತೆ
ಶ್ರೀಲಂಕಾ ಸರದಿಯಲ್ಲಿ ಅಲ್ಲಲ್ಲಿ ಅನುಭವಿ ಆಟಗಾರರು ಕಾಣಸಿಗುತ್ತಾರಾದರೂ ಯಾರ ಮೇಲೂ ನಂಬಿಕೆ ಇಡುವಂತಿಲ್ಲ. ಮ್ಯಾಚ್‌ ವಿನ್ನರ್‌ ಆಟಗಾರನಂತೂ ಇಲ್ಲವೇ ಇಲ್ಲ. ಯಾವ ಬ್ಯಾಟ್ಸ್‌ ಮನ್‌ ಕೂಡ ಫಾರ್ಮ್ನಲ್ಲಿಲ್ಲ. ಕಿವೀಸ್‌ ಮತ್ತು ಅಫ್ಘಾನಿಸ್ಥಾನದ ಎದುರಿನ ಪಂದ್ಯದಲ್ಲಿ ಪೂರ್ತಿ 50 ಓವರ್‌ ನಿಭಾಯಿಸುವಲ್ಲಿ ಲಂಕಾ ವಿಫ‌ಲವಾಗಿದೆ. ಬೌಲಿಂಗ್‌ ವಿಭಾಗ ಲೆಕ್ಕದ ಭರ್ತಿಗೆಂಬಂತಿದೆ.ಲಸಿತ ಮಾಲಿಂಗ ಕೂಡ ಮೋಡಿ ಮಾಡುವುದನ್ನು ಮರೆತಿದ್ದಾರೆ. ಇನ್ನೂ ಬ್ಯಾಟಿಂಗ್‌ನಲ್ಲಿ ಒಂದು ಹಂತದವರೆಗೆ ಉತ್ತಮ ಆಟವಾಡಿ ಬೃಹತ್‌ ಮೊತ್ತ ಪೇರಿಸುವ ಸೂಚನೆ ನೀಡಿ ಹಠಾತ್‌ ಕುಸಿತ ಕಾಣುತ್ತಿರುದರಿಂದ ಲಂಕಾ ಮೇಲೆ ನಿರೀಕ್ಷೆ ಇಡುವುದು ಕಷ್ಟಕರವಾಗಿದೆ. ನುವಾನ್‌ ಪ್ರದೀಪ್‌ ಗಾಯಾಳಾಗಿರುವುದು ತಂಡಕ್ಕೆ ಮತ್ತಷ್ಟು ಹೊಡೆತ ಬಿದ್ದಂತಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.