ಲಂಕೆಗೆ ಕಾದಿದೆ ಕಿವೀಸ್‌ ಟೆಸ್ಟ್‌


Team Udayavani, Jun 1, 2019, 6:00 AM IST

SRI-LANKA

ಕಾರ್ಡಿಫ್: ಕಳೆದ ಸಲದ ರನ್ನರ್‌ ಅಪ್‌ ನ್ಯೂಜಿಲ್ಯಾಂಡ್‌ ಶನಿವಾರ “ಸೋಫಿಯಾ ಗಾರ್ಡನ್‌’ನಲ್ಲಿ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಎದುರಾಳಿ ದುರ್ಬಲ ಶ್ರೀಲಂಕಾ.

ಈ 4 ವರ್ಷಗಳಲ್ಲಿ ನ್ಯೂಜಿಲ್ಯಾಂಡ್‌ ತಂಡ ದಲ್ಲಿ ಭಾರೀ ಬದಲಾವಣೆ ಸಂಭವಿಸಿಲ್ಲ. ನಾಯಕತ್ವ ಎನ್ನುವುದು ಬ್ರೆಂಡನ್‌ ಮೆಕಲಮ್‌ ಅವರಿಂದ ಕೇನ್‌ ವಿಲಿಯಮ್ಸನ್‌ ಹೆಗಲೇರಿದೆ. ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇರಿಸಿದ್ದೊಂದು ಹೆಗ್ಗಳಿಕೆ. ತವರಿನಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ಮತ್ತು ಭಾರತದ ವಿರುದ್ಧ ಸೋಲನುಭವಿಸಿದೆ.

ಆದರೆ ನ್ಯೂಜಿಲ್ಯಾಂಡ್‌ ಮೇಲೆ ಯಾರೂ ವಿಪರೀತ ನಂಬಿಕೆ ಇರಿಸಿಲ್ಲ, ಅದು ಫೇವರಿಟ್‌ ಟ್ಯಾಗ್‌ ಕೂಡ ಅಂಟಿಸಿಕೊಂಡಿಲ್ಲ. ಏನಿದ್ದರೂ ಅಂಡರ್‌ ಡಾಗ್ಸ್‌ ಆಗಿಯೇ ಉಳಿದಿದೆ. ಹೀಗಾಗಿ ಒತ್ತಡರಹಿತವಾಗಿ ಆಡಲು ಸಾಧ್ಯವಾಗಲಿದೆ ಎಂಬುದು ಅಲ್ಲಿನ ಮಾಜಿ ವೇಗಿ ಜೇಮ್ಸ್‌ ಫ್ರ್ಯಾಂಕ್ಲಿನ್‌ ಅಭಿಪ್ರಾಯ.

ನ್ಯೂಜಿಲ್ಯಾಂಡಿನ ಬ್ಯಾಟಿಂಗ್‌ ಸರದಿ ಸಶಕ್ತವಾಗಿದೆ. ಬೌಲರ್‌ಗಳಿಗೆ ಇಂಗ್ಲೆಂಡ್‌ ಪಿಚ್‌ ಹೆಚ್ಚು ಸೂಟ್‌ ಆಗಲಿದೆ. ಅಭ್ಯಾಸ ಪಂದ್ಯದಲ್ಲಿ ಭಾರತವನ್ನು ಮಣಿಸಿದ್ದರಿಂದ ಆತ್ಮವಿಶ್ವಾಸ ಸಹಜವಾಗಿಯೇ ಹೆಚ್ಚಿದೆ. ವೆಸ್ಟ್‌ ಇಂಡೀಸಿಗೆ 400 ರನ್‌ ಬಿಟ್ಟುಕೊಟ್ಟರೂ ಚೇಸಿಂಗ್‌ ವೇಳೆ 330ರ ತನಕ ಮುನ್ನುಗ್ಗಿ ಬಂದದ್ದು ಸಾಮಾನ್ಯ ಸಾಧನೆಯೇನಲ್ಲ.
ಶನಿವಾರದ ಮುಖಾಮುಖೀಯಲ್ಲಿ ನ್ಯೂಜಿಲ್ಯಾಂಡೇ ಫೇವರಿಟ್‌ ಎಂಬುದರಲ್ಲಿ ಅನುಮಾನವೇ ಇಲ್ಲ.

ಹಿಂದಿನ ಸಾಮರ್ಥ್ಯ ಹೊಂದಿಲ್ಲ
ಮೇಲ್ನೋಟಕ್ಕಷ್ಟೇ ಅಲ್ಲ, ಕಳೆದ ಕೆಲವು ತಿಂಗಳ ಸಾಧನೆಯನ್ನು ವಿಶ್ಲೇಷಿಸುವಾಗಲೂ ಶ್ರೀಲಂಕಾ ಈ ಕೂಟದ ಅತ್ಯಂತ ದುರ್ಬಲ ತಂಡವಾಗಿ ಗೋಚರಿಸುತ್ತಿದೆ. ಆಡಿದ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಲಾಗ ಹಾಕಿದೆ. 1996ರಲ್ಲಿ ಕಪ್‌ ಎತ್ತಿದ, ಅನಂತರ 2 ಸಲ ಫೈನಲ್‌ ಪ್ರವೇಶಿಸಿದ ಲಂಕಾ ತಂಡಕ್ಕೆ ಹೋಲಿಸಿದರೆ ಈಗಿನ ಪಡೆ ಏನೂ ಅಲ್ಲ.
4 ವರ್ಷಗಳ ಬಳಿಕ ತಂಡಕ್ಕೆ ಮರಳಿ ಮೊದಲ ಸಲ ನಾಯಕತ್ವ ವಹಿಸಿದ ಕರುಣರತ್ನೆ ಇಂಥದೊಂದು ಮಹತ್ವದ ಕೂಟದಲ್ಲಿ ಈ ಹೊಣೆಗಾರಿಕೆಯನ್ನು ಹೇಗೆ ನಿಭಾಯಿಸಬಲ್ಲರು ಎಂಬುದು ದೊಡ್ಡ ಪ್ರಶ್ನೆ.

ಸಿಲ್ಲಿ ಪಾಯಿಂಟ್‌
3 ಪಂದ್ಯ 4 ಸೋಲು
ಕಾರ್ಡಿಫ್ನಲ್ಲಿ ಆಡಿದ ನಾಲ್ಕೂ ಪಂದ್ಯಗಳಲ್ಲಿ ಶ್ರೀಲಂಕಾ ಸೋತಿದೆ. ನ್ಯೂಜಿಲ್ಯಾಂಡ್‌ ಕೂಡ ಇಲ್ಲಿ ಕಳೆದ ಮೂರೂ ಪಂದ್ಯಗಳಲ್ಲಿ ಎಡವಿದೆ. 2013ರ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಲಂಕೆಯನ್ನು ಮಣಿಸಿದ ಬಳಿಕ ಕಿವೀಸ್‌ ಇಲ್ಲಿ ಗೆದ್ದಿಲ್ಲ.

13 ಜಯ
ನ್ಯೂಜಿಲ್ಯಾಂಡ್‌ ವಿರುದ್ಧ ಆಡಿದ ಕಳೆದ 20 ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾ ಕೇವಲ ನಾಲ್ಕರಲ್ಲಿ ಜಯಿಸಿದೆ. ನ್ಯೂಜಿಲ್ಯಾಂಡ್‌ 13 ಜಯ ಸಾಧಿಸಿದೆ. 3 ಪಂದ್ಯ ರದ್ದಾಗಿದೆ.

ಕೀಪ್‌ ಟಾಮ್‌ ಬ್ಲಿಂಡೆಲ್‌ ಏಕದಿನ ಪಂದ್ಯವನ್ನಾಡದ ನ್ಯೂಜಿಲ್ಯಾಂಡಿನ ಏಕೈಕ ಆಟಗಾರ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.