ಪಾಕ್‌-ಲಂಕಾ: ಏಶ್ಯನ್‌ ತಂಡಗಳ ಮೇಲಾಟ

ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಎಲ್ಲ 7 ಪಂದ್ಯ ಗೆದ್ದಿರುವ ಪಾಕಿಸ್ಥಾನ!

Team Udayavani, Jun 7, 2019, 6:00 AM IST

PAK-Sl

ಬ್ರಿಸ್ಟಲ್‌: ವಿಶ್ವಕಪ್‌ ಕೂಟದ ಶುಕ್ರವಾರದ ಸ್ಪರ್ಧೆ ಏಶ್ಯನ್‌ ತಂಡಗಳೆರಡರ ಮೇಲಾಟಕ್ಕೆ ಸಾಕ್ಷಿ ಯಾಗಲಿದೆ. ಬ್ರಿಸ್ಟಲ್‌ನಲ್ಲಿ ಪಾಕಿಸ್ಥಾನ ಮತ್ತು ಶ್ರೀಲಂಕಾ ಮುಖಾಮುಖೀಯಾಗಲಿದ್ದು, ಎರಡೂ ತಂಡಗಳಿಗೆ ಇದು ಮಹತ್ವದ ಪಂದ್ಯವಾಗಿದೆ.

ಇಲ್ಲಿ ಹೆಚ್ಚಿನ ಆತ್ಮವಿಶ್ವಾಸದಿಂದ ಕಣಕ್ಕಿಳಿಯುವ ತಂಡವೆಂದರೆ ಪಾಕಿಸ್ಥಾನ. ಇದಕ್ಕೆ 2 ಕಾರಣಗಳಿವೆ. ಒಂದು, ವೆಸ್ಟ್‌ ಇಂಡೀಸ್‌ ವಿರುದ್ಧ 105 ರನ್ನಿಗೆ ಕುಸಿದ ಬಳಿಕ ಬಲಿಷ್ಠ ಇಂಗ್ಲೆಂಡ್‌ ವಿರುದ್ಧ 348 ರನ್‌ ಪೇರಿಸಿ ಗೆಲುವಿನ ಹಳಿ ಏರಿದ್ದು; ಇನ್ನೊಂದು, ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಅಜೇಯ ದಾಖಲೆ ಕಾಯ್ದುಕೊಂಡು ಬಂದದ್ದು.

ಹೌದು, ವಿಶ್ವಕಪ್‌ ಇತಿಹಾಸದಲ್ಲಿ ಭಾರತದೆ ದುರು ಪಾಕಿಸ್ಥಾನ ಈವರೆಗೆ ಹೇಗೆ ಗೆಲ್ಲಲಿಲ್ಲವೋ, ಅದೇ ರೀತಿ ಪಾಕಿಸ್ಥಾನದ ಎದುರು ಶ್ರೀಲಂಕಾ ಈವ ರೆಗೆ ಗೆಲುವಿನ ಖಾತೆ ತೆರೆದಿಲ್ಲ. 1975-2011ರ ಅವಧಿಯ ಆಡಿದ ಏಳೂ ಪಂದ್ಯ ಗಳಲ್ಲಿ ಪಾಕಿಸ್ಥಾನ ಲಂಕೆಯನ್ನು ಮಣಿಸಿದೆ. ಇದನ್ನು ಎಂಟಕ್ಕೆ ವಿಸ್ತರಿಸುವ ಹಾದಿಯೊಂದು ಪಾಕ್‌ ಮುಂದಿದೆ.

ಇಂಗ್ಲೆಂಡ್‌ ವಿರುದ್ಧದ ತೋರಿದ ನಿರ್ವಹಣೆ ಯನ್ನೇ ಪುನರಾವರ್ತಿಸಿದರೆ ಶ್ರೀಲಂಕಾವನ್ನು ಸೋಲಿಸುವುದು ಪಾಕಿಸ್ಥಾನಕ್ಕೆ ದೊಡ್ಡ ಸಮಸ್ಯೆ ಎನಿಸದು. ಆದರೆ ಆಂಗ್ಲರ ಎದುರು ಪಾಕಿಸ್ಥಾನ ಮಿಂಚಿದ್ದು ಬ್ಯಾಟಿಂಗಿನಲ್ಲಿ ಮಾತ್ರ. ಉಳಿದಂತೆ ಬೌಲಿಂಗ್‌ ಹಾಗೂ ಫೀಲ್ಡಿಂಗ್‌ ತೀರಾ ಕಳಪೆಯಾಗಿತ್ತು. ಇದರ ಲಾಭವೆತ್ತಿದರೆ ಕರುಣರತ್ನೆ ಪಡೆಗೆ ಮೇಲುಗೈ ಸಾಧ್ಯತೆ ಇಲ್ಲದಿಲ್ಲ.

ಲಂಕೆಗೆ ಕಷ್ಟದ ಗೆಲುವು
ಶ್ರೀಲಂಕಾ ಕೂಡ ಮೊದಲ ಪಂದ್ಯದಲ್ಲಿ ಶೋಚನೀಯ ಪ್ರದರ್ಶನ ನೀಡಿದ ಬಳಿಕ ಹಳಿ ಏರಿದ ತಂಡ. ನ್ಯೂಜಿಲ್ಯಾಂಡ್‌ ವಿರುದ್ಧ ಎದುರಾದದ್ದು 10 ವಿಕೆಟ್‌ಗಳ ಭಾರೀ ಸೋಲು. ಇಲ್ಲಿನ ಸೇಡನ್ನು ಅಫ್ಘಾನಿಸ್ಥಾನ ವಿರುದ್ಧ ತೀರಿಸಿಕೊಂಡಿತು. ಆದರೆ ಇದೇನೂ ಅಧಿಕಾರಯುತ ಗೆಲುವಲ್ಲ. ತೀವ್ರ ಬ್ಯಾಟಿಂಗ್‌ ಕುಸಿತ ಲಂಕೆಯನ್ನು ಚಿಂತಿಸುವಂತೆ ಮಾಡಿದೆ. ಜತೆಗೆ ಅಫ್ಘಾನ್‌ ಬ್ಯಾಟಿಂಗ್‌ ದೌರ್ಬಲ್ಯದ ಪಾಲೂ ಇತ್ತು!

ಸಂಭಾವ್ಯ ತಂಡಗಳು
ಶ್ರೀಲಂಕಾ: ದಿಮುತ್‌ ಕರುಣರತ್ನೆ (ನಾಯಕ), ಕುಸಲ್‌ ಪೆರೆರ, ಲಹಿರು ತಿರಿಮನ್ನೆ, ಕುಸಲ್‌ ಮೆಂಡಿಸ್‌, ಏಂಜೆಲೊ ಮ್ಯಾಥ್ಯೂಸ್‌, ಧನಂಜಯ ಡಿ ಸಿಲ್ವ, ತಿಸರ ಪೆರೆರ, ಇಸುರು ಉದಾನ, ಸುರಂಗ ಲಕ್ಮಲ್‌, ಲಸಿತ ಮಾಲಿಂಗ, ನುವಾನ್‌ ಪ್ರದೀಪ್‌.

ಪಾಕಿಸ್ಥಾನ: ಇಮಾಮ್‌ ಉಲ್‌ ಹಕ್‌, ಫ‌ಕಾರ್‌ ಜಮಾನ್‌, ಬಾಬರ್‌ ಆಜಂ, ಹ್ಯಾರಿಸ್‌ ಸೊಹೈಲ್‌, ಸಫ‌ìರಾಜ್‌ ಅಹ್ಮದ್‌ (ನಾಯಕ), ಮೊಹಮ್ಮದ್‌ ಹಫೀಜ್‌, ಇಮಾದ್‌ ವಾಸಿಮ್‌, ಶಾದಾಬ್‌ ಖಾನ್‌, ಹಸನ್‌ ಅಲಿ, ವಹಾಬ್‌ ರಿಯಾದ್‌, ಮೊಹಮ್ಮದ್‌ ಆಮಿರ್‌.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.