ವಿಶ್ವಕಪ್‌ ಸಾಧನೆ


Team Udayavani, Jul 14, 2019, 5:57 AM IST

W

ಲಂಡನ್‌: ಇಂಗ್ಲೆಂಡ್‌ನ‌ಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯು ಮೇ 30ರಂದು ಲೀಗ್‌ ಹಂತದ ಪಂದ್ಯಗಳು ಆರಂಭವಾಗಿ ಇದೀಗ ಪ್ರಶಸ್ತಿ ಸುತ್ತಿನ ಹಂತಕ್ಕೆ ಬಂದು ನಿಂತಿದೆ. ವಿಶ್ವಕಪ್‌ ಕೂಟದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖೀಯಾಗುತ್ತಿರುವ ನ್ಯೂಜಿಲ್ಯಾಂಡ್‌ ಮತ್ತು ಇಂಗ್ಲೆಂಡ್‌ ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಮೊದಲ ವಿಶ್ವಕಪ್‌ ಕಿರೀಟಕ್ಕಾಗಿ ಸೆಣೆಸಾಟ ನಡೆಸಲಿದೆ. ಇಲ್ಲಿ ಯಾರೇ ಗೆದ್ದು ಬಂದರೂ ಮೊದಲ ಬಾರಿಗೆ ವಿಶ್ವಚಾಂಪಿಯನ್‌ ಆಗಿ ಮೂಡಿಬರಲಿದ್ದಾರೆ.

ಇಂಗ್ಲೆಂಡ್‌ಗೆ ನಾಲ್ಕನೇ ಫೈನಲ್‌
ಕ್ರಿಕೆಟ್‌ ಜನಕರೆಂಬ ಖ್ಯಾತಿ ಪಡೆದ ಆಂಗ್ಲರಿಗೆ ಇದು 4ನೇ ವಿಶ್ವಕಪ್‌ ಫೈನಲ್‌. ಆದರೆ ಈ ಹಿಂದಿನ ಮೂರು ವಿಶ್ವಕಪ್‌ (1979, 1987, 1992) ನ ಫೈನಲ್‌ನಲ್ಲಿÉ ಸೋತು ಕಪ್‌ ಗೆಲ್ಲುವ ಅವಕಾಶದಿಂದ ಇಂಗ್ಲೆಂಡ್‌ ವಂಚಿತವಾಗಿತ್ತು. ಆದರೆ ಈ ಬಾರಿ ಹೇಗಾದರೂ ಕಪ್‌ಗೆ ಮುತ್ತಿಡಲು ಮಾರ್ಗನ್‌ ಪಡೆ ಪಣ ತೊಟ್ಟಿದೆ.

ನ್ಯೂಜಿಲ್ಯಾಂಡ್‌ಗೆ 2ನೇ ಫೈನಲ್‌
ಕಿವೀಸ್‌ಗೆ ಇದು ಸತತ 2ನೇ ವಿಶ್ವಕಪ್‌ ಫೈನಲ್‌. 2015ರ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಸೋತು ಕಪ್‌ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. ಆದರೆ ಈ ಬಾರಿ ಅದೃಷ್ಟದ ಬಲದಿಂದ ಫೈನಲ್‌ಗೆ ತಲುಪಿದ ನ್ಯೂಜಿಲ್ಯಾಂಡ್‌ ಹಿಂದಿನ ತಪ್ಪನ್ನು ಪುನರಾವರ್ತಿಸದೆ ಕಪ್‌ ಗೆಲ್ಲುವ ಯೋಜನೆ ಹಾಕಿಕೊಂಡಿದೆ.

ಪ್ರಮುಖ ಆಟಗಾರರ ಪೈಪೋಟಿ
ಜಾಸನ್‌ ರಾಯ್‌- ಮಾರ್ಟಿನ್‌ ಗಪ್ಟಿಲ್‌
ಇಂಗ್ಲೆಂಡ್‌ ತಂಡದ ಸ್ಟಾರ್‌ ಆಟಗಾರರಾಗಿರುವ ಜಾಸನ್‌ ರಾಯ್‌ ಕೂಟದ ಎಲ್ಲ ಪಂದ್ಯಗಳಲ್ಲೂ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಿದ್ದಾರೆ. 2015ರ ವಿಶ್ವಕಪ್‌ನಲ್ಲಿ ಅತ್ಯಧಿಕ ರನ್‌ ಗಳಿಸಿದ್ದ ನ್ಯೂಜಿಲ್ಯಾಂಡಿನ ಆರಂಭಕಾರ ಮಾರ್ಟಿನ್‌ ಗಪ್ಟಿಲ್‌ ಈ ಬಾರಿ ವೈಫ‌ಲ್ಯ ಅನುಭವಿಸಿದ್ದಾರೆ. ಆಡಿದ ಪ್ರತಿ ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿದ್ದರಿಂದ ಅವರ ಮೇಲಿನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಆದರೆ ಇದುವರೆಗೂ ಸ್ಫೋಟಕ ಬ್ಯಾಟಿಂಗ್‌ ನಡೆಸದ ಗಪ್ಟಿಲ್‌ ಫೈನಲ್‌ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ನಡೆಸಿದಲ್ಲಿ ಪಂದ್ಯದ ಗತಿಯೇ ಬದಲಾಗುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ರಾಯ್‌ ಮತ್ತು ಗಪ್ಟಿಲ್‌ ಅವರ ಬ್ಯಾಟಿಂಗ್‌ ಪಂದ್ಯದ ಪ್ರಮುಖ ಆಕರ್ಷಣೆಯಾಗಿದೆ.

ಮ್ಯಾಟ್‌ ಹೆನ್ರಿ- ಕ್ರಿಸ್‌ ವೋಕ್ಸ್‌
ಭಾರತ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಘಾತಕ ಬೌಲಿಂಗ್‌ ನಡೆಸಿದ ಮ್ಯಾಟ್‌ ಹೆನ್ರಿ ಮತ್ತು ಆಸ್ಟ್ರೇಲಿಯ ವಿರುದ್ಧದ 2ನೇ ಸೆಮಿಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಕ್ರಿಸ್‌ ವೋಕ್ಸ್‌ ಫೈನಲ್‌ ಪಂದ್ಯದ ಪ್ರಮುಖ ಬೌಲಿಂಗ್‌ ಆಕರ್ಷಣೆಯಾಗಿದ್ದಾರೆ. ಫೈನಲ್‌ನಲ್ಲಿಯೂ ಇವರಿಂದ ಘಾತಕ ಸ್ಪೆಲ್‌ ನಡೆಯುವುದೇ ಎನ್ನುವುದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.