World Cup; ಲಂಕಾಕ್ಕೆ ಸೋಲಿನ ಶಾಕ್: ಅಫ್ಘಾನ್ ಗೆ ಮೂರನೇ ಗೆಲುವಿನ ಕಿಕ್

ಸವಾಲಿನಿಂದ ಕೂಡಿದೆ ಹಾದಿ... ಸೆಮಿಗೇರುವುದೇ ಅಫ್ಘಾನ್ ?

Team Udayavani, Oct 30, 2023, 9:53 PM IST

1-asdsadsa

ಪುಣೆ: ಸೋಮವಾರ ಇಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅಮೋಘ ನಿರ್ವಹಣೆ ತೋರಿದ ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ವಿರುದ್ಧ ಮತ್ತೊಂದು ಸ್ಮರಣೀಯ ಜಯವನ್ನು ತನ್ನದಾಗಿಸಿಕೊಂಡಿದೆ. ಈ ಸೋಲಿನೊಂದಿಗೆ ಶ್ರೀಲಂಕಾದ ಸೆಮಿ ಫೈನಲ್ ಕನಸು ದೂರವಾಗಿದೆ.

ಅಫ್ಘಾನಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಶ್ರೀಲಂಕಾ 49.3 ಓವರ್ ಗಳಲ್ಲಿ 241 ರನ್‌ಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಅಫ್ಘಾನ್ ತಂಡ 45.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿ ಜಯಭೇರಿ ಬಾರಿಸಿತು.

ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟನ್ನು ಅಫ್ಘಾನ್ ತಂಡ ರನ್ ಗಳಿಸುವ ಮೊದಲೇ  ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ನಂತರ ತಾಳ್ಮೆಯ ಆಟವಾಡಿದ ಇಬ್ರಾಹಿಂ ಜದ್ರಾನ್ 39 ರನ್ ಗಳಿಸಿ ಔಟಾದರು. ಬಳಿಕ ಅಮೋಘ ಅರ್ಧ ಶತಕ ಬಾರಿಸಿದ ರಹಮತ್ ಶಾ 62 ರನ್ ಗಳಿಸಿ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರು. ಬಳಿಕ ನಾಯಕ ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಆಕರ್ಷಕ ಜತೆಯಾಟವಾಡಿದರು. ಶಾಹಿದಿ ರನ್  58* , ಅಜ್ಮತುಲ್ಲಾ73* ರನ್  ದೊಡ್ಡ ಕೊಡುಗೆ ಸಲ್ಲಿಸಿ ಗೆಲುವಿನ ಕೇಕೆ ಹಾಕಿದರು.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಪಾಕಿಸ್ಥಾನ ತಂಡಗಳಿಗೆ ಸೋಲಿನ ಶಾಕ್ ನೀಡಿದ್ದ ಅಫ್ಘಾನ್ ತಂಡ ಅಮೋಘ ಆಟದ ಮೂಲಕ ಮೂರನೇ ಗೆಲುವನ್ನು ಸಂಭ್ರಮಿಸಿತು.

ಅಫ್ಘಾನ್ ಇನ್ನುಳಿದ ಮೂರು ಪಂದ್ಯಗಳನ್ನು ನೆದರ್ ಲ್ಯಾಂಡ್ಸ್ , ಪ್ರಬಲ ತಂಡಗಳಾದ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಶ್ರೀಲಂಕಾ ತಂಡ ಭಾರತ, ಬಾಂಗ್ಲಾದೇಶ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ.

ಲಂಕಾ ಪರ ಆರಂಭಿಕ ಆಟಗಾರ ಪಾಥುಮ್ ನಿಸ್ಸಾಂಕ 46ರನ್ , ಕುಸಾಲ್ ಮೆಂಡಿಸ್ 39, ಸದೀರ ಸಮರವಿಕ್ರಮ 36 ರನ್ ಗಳಿಸಿದರೂ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಅಫ್ಘಾನ್ ಬೌಲರ್‌ಗಳು ನಿಯಮಿತವಾಗಿ ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಮಹೇಶ್ ತೀಕ್ಷಣ 29 ರನ್ ಮತ್ತು ಏಂಜೆಲೊ ಮ್ಯಾಥ್ಯೂಸ್ 23 ರನ್ ಗಳಿಸಿ ಎಂಟನೇ ವಿಕೆಟ್‌ಗೆ 42 ಎಸೆತಗಳಲ್ಲಿ ಅಮೂಲ್ಯ 45 ರನ್ ಸೇರಿಸಿದರು.
ಫಜಲ್ಕ್ ಫಾರೂಕಿ (4/34) ನಾಲ್ಕು ವಿಕೆಟ್‌ಗಳನ್ನು ಕಿತ್ತು ಅಫ್ಘಾನಿಸ್ಥಾನದ ಅತ್ಯಂತ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದರು. ಮುಜೀಬ್ ಉರ್ ರೆಹಮಾನ್ (2/38), ಅಜ್ಮತುಲ್ಲಾ ಒಮರ್ಜಾಯ್ (1/37) ರಶೀದ್ ಖಾನ್ (1/50) ಎಲ್ಲರೂ ಸಾಮೂಹಿಕ ಪ್ರಯತ್ನದಿಂದ ಲಂಕಾ ವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.