2nd Semi-Final: ಸಂಕಷ್ಟದಲ್ಲೂ ಮಿಲ್ಲರ್ ಶತಕ;ಆಸೀಸ್ ಎದುರು ಸಾಧಾರಣ ಗುರಿ
Team Udayavani, Nov 16, 2023, 6:31 PM IST
ಕೋಲ್ಕತಾ : ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ನಡೆಯುತ್ತಿರುವ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆಘಾತಕ್ಕೆ ಸಿಲುಕಿತಾದರೂ ಆಪದ್ಬಾಂಧವನಂತೆ ಡೇವಿಡ್ ಮಿಲ್ಲರ್ ಅವರು ಶತಕ ಸಿಡಿಸಿ ತಂಡ ಇನ್ನೂರರ ಗಡಿ ದಾಟಲು ನೆರವಾದರು.
24 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಮುಳುಗುವ ಹಂತಕ್ಕೆ ಸಿಲುಕಿದ ದಕ್ಷಿಣ ಆಫ್ರಿಕಾ ತಂಡ ಬ್ಯಾಟ್ಸ್ ಮ್ಯಾನ್ ಗಳ ದಂಡೇ ಇರುವ ಆಸ್ಟ್ರೇಲಿಯಕ್ಕೆ 213 ರನ್ ಗಳ ಸಾಧಾರಣ ಗುರಿ ಮುಂದಿಟ್ಟಿದೆ.
ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿ ಕಾಕ್(3) , ಐಡೆನ್ ಮಾರ್ಕ್ರಾಮ್(10), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್(6) ಅವರು ಬೇಗನೆ ನಿರ್ಗಮಿಸಿದರು. ಆಬಳಿಕ ಅಮೋಘ ಆಟವಾಡಿದ ಮಿಲ್ಲರ್ ಕೊನೆಯವರೆಗೂ ಕ್ರೀಸ್ ನಲ್ಲಿದ್ದು, ಶತಕದ ಸಂಭ್ರಮಾಚರಣೆ ಮಾಡಿ ನಿರ್ಗಮಿಸಿದರು. 116 ಎಸೆತಗಳಿಂದ 101 ರನ್ ಗಳಿಸಿದರು. 8ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಸಿಡಿಸಿದರು. ಮಿಲ್ಲರ್ ಗೆ ಸಾಥ್ ನೀಡಿದ ಹೆನ್ರಿಕ್ ಕ್ಲಾಸೆನ್ 47 ರನ್ ಗಳಿಸಿದ್ದ ವೇಳೆ ಬೌಲ್ಡ್ ಆದರು. ಜೆರಾಲ್ಡ್ ಕೋಟ್ಜೇ 19, ಕಗಿಸೊ ರಬಾಡ 10 ರನ್ ಗಳಿಸಿ ಔಟಾದರು. 49.4 ಓವರ್ ಗಳಲ್ಲಿ 212 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿತು.
ಬಿಗಿ ಬೌಲಿಂಗ್ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್, ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ 3 ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್ವುಡ್ ಮತ್ತು ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಕಿತ್ತರು.
3.12 ರ ವೇಳೆ ತುಂತುರು ಮಳೆ ಬಂದಿದ್ದು ಪಿಚ್ ಮೇಲೆ ಕವರ್ಗಳನ್ನು ಹಾಕಲಾಯಿತು. ದಕ್ಷಿಣ ಆಫ್ರಿಕಾ 44ಕ್ಕೆ 4 ವಿಕೆಟ್ ಕಳೆದುಕೊಂಡು ಹೆಣಗಾಡುತ್ತಿತ್ತು. ಆಟಗಾರರು ಪೆವಿಲಿಯನ್ಗೆ ಹಿಂತಿರುಗಿದರು. ಮಧ್ಯಾಹ್ನ 3:55ಕ್ಕೆ ಆಟವನ್ನು ಪುನರಾರಂಭಿಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ