ODI World Cup; ಪಾಕಿಗೆ ಎಂಟನೇ ಏಟು ಕೊಟ್ಟ ಭಾರತ ಅಗ್ರ ಸ್ಥಾನದಲ್ಲಿ

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಪಾಕ್ ಆಟಗಾರರಿಗೆ ಮುಖಭಂಗ

Team Udayavani, Oct 14, 2023, 8:11 PM IST

1-qwe-qw

ಅಹ್ಮದಾಬಾದ್‌: ವಿಶ್ವದ ಅತೀ ದೊಡ್ಡ ಕ್ರೀಡಾಂಗಣ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ಜಾಗತಿಕ ಕ್ರಿಕೆಟಿನ ಬದ್ಧ ಎದುರಾಳಿಗಳ ಶನಿವಾರದ ಹೋರಾಟದಲ್ಲಿ ಪರಿಪೂರ್ಣ ಮೇಲುಗೈ ಸಾಧಿಸಿದ ಭಾರತ ಅಮೋಘ ಜಯ ದಾಖಲಿಸಿ ಈ ವಿಶ್ವಕಪ್‌ನ ಹ್ಯಾಟ್ರಿಕ್‌ ಜಯವನ್ನು ಸ್ಮರಣೀಯವಾಗಿಸಿದೆ. ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೆ ಏರಿದೆ.

ಏಕದಿನ ವಿಶ್ವಕಪ್‌ನಲ್ಲಿ ಈವರೆಗೆ ಭಾರತದ ವಿರುದ್ಧ ಪಾಕಿಸ್ಥಾನ ಗೆದ್ದದ್ದೇ ಇಲ್ಲ. 1992ರಿಂದ ಮೊದಲ್ಗೊಂಡು 2019ರ ವರೆಗಿನ ಎಲ್ಲ 8 ಪಂದ್ಯಗಳಲ್ಲೂ ಟೀಮ್‌ ಇಂಡಿಯಾ ಜಯಭೇರಿ ಮೊಳಗಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಬಿಗಿ ಬೌಲಿಂಗ್ ದಾಳಿ ಸಂಘಟಿಸಿತು. ಅತ್ಯುತ್ತಮ ನಿರ್ವಹಣೆ ತೋರಿದ ಎಲ್ಲ ಬೌಲರ್ ಗಳು ಬ್ಯಾಟಿಂಗ್ ಬಲವಿರುವ ಪಾಕಿಸ್ಥಾನವನ್ನು 42.5 ಓವರ್ ಗಳಲ್ಲಿ 191 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಗುರಿ ಬೆನ್ನಟ್ಟಿದ ಭಾರತ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ನಾಯಕ ರೋಹಿತ್ ಶರ್ಮ ಮತ್ತೆ ಅಬ್ಬರಿಸಿದರು. 63 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು. 6ಸಿಕ್ಸರ್ ಮತ್ತು 6 ಬೌಂಡರಿ ಗಳನ್ನು ಬಾರಿಸಿದರು. ಶುಭಮನ್ ಗಿಲ್ 16 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಕೂಡ 16 ರನ್ ಗಳಿಸಿ ಔಟಾದರು. ಉತ್ತಮ ನಿರ್ವಹಣೆ ತೋರಿದ ಶ್ರೇಯಸ್ ಅಯ್ಯರ್ ತಾಳ್ಮೆಯ ಆಟವಾಡಿ ಅರ್ಧಶತಕ ಗಳಿಸಿದರು. ಬೌಂಡರಿ ಮೂಲಕ ಗೆಲುವಿನ ಗುರಿ ತಲುಪಿದರು.62 ಎಸೆತಗಳಲ್ಲಿ ಅಜೇಯ 53 ಗಳಿಸಿದರು. ಕೆಎಲ್ ರಾಹುಲ್ 19 ರನ್ ಗಳಿಸಿ ಔಟಾಗದೆ ಉಳಿದರು.

ಭಾರತದ ಪರ ಬಿಗಿ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 7 ಓವರ್ ಗಳಲ್ಲಿ1 ಮೇಡನ್ ಸಹಿತ 19 ರನ್(2.70ಎಕಾನಮಿ) ಮಾತ್ರ ಬಿಟ್ಟು ಕೊಟ್ಟು 2 ವಿಕೆಟ್ ಕಿತ್ತಿದ್ದರು.

ಪಾಕ್ ಪರ ಆರಂಭಿಕರಾದ ಅಬ್ದುಲ್ಲಾ ಶಫೀಕ್ 20 ,ಇಮಾಮ್-ಉಲ್-ಹಕ್ 36 ರನ್ ಗಳಿಸಿ ಔಟಾದರು. ಶಫೀಕ್ ಅವರನ್ನು ಸಿರಾಜ್ ಎಲ್ಬಿಡಬ್ಲ್ಯೂ ಮಾಡುವ ಮೂಲಕ ಮೊದಲ ವಿಕೆಟ್ ಕಬಳಿಸಿ ಆಘಾತ ನೀಡಿದರು.

ನಾಯಕ ಬಾಬರ್ ಆಜಮ್ ಗರಿಷ್ಠ 50 ರನ್ ಗಳಿಸಿ ಔಟಾದರೆ ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದ್ದ ವೇಳೆ ಔಟಾದರು. ,ಸೌದ್ ಶಕೀಲ್ 6, ಇಫ್ತಿಕರ್ ಅಹ್ಮದ್4 , ಶಾದಾಬ್ ಖಾನ್ 2, ಮೊಹಮ್ಮದ್ ನವಾಜ್4 , ಹಸನ್ ಅಲಿ 12 , ಹಾರಿಸ್ ರೌಫ್ 2 ರನ್ ಗಳಿಸಿ ಔಟಾದರು. ಶಾಹೀನ್ ಅಫ್ರಿದಿ (2) ಔಟಾಗದೆ ಉಳಿದರು.

ಪ್ರತಿಷ್ಠೆಯ ಪಂದ್ಯದಲ್ಲಿ ಅಮೋಘ ನಿರ್ವಹಣೆ ತೋರಿದ ಭಾರತದ ಬೌಲರ್ ಗಳು ನಿರೀಕ್ಷೆಗೂ ಮೀರಿದ ನಿರ್ವಹಣೆ ತೋರಿ ಗಮನಸೆಳೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಅವರು ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.