World Cup ಫೈನಲ್‌ಗೆ ಮೋದಿ, ಆಸ್ಟ್ರೇಲಿಯ ಪ್ರಧಾನಿ ಸೇರಿ ಗಣ್ಯರು


Team Udayavani, Nov 17, 2023, 11:52 PM IST

1—asasaSAsa-S

ಅಹ್ಮದಾಬಾದ್‌ : ರವಿವಾರ ಭಾರತ-ಆಸ್ಟ್ರೇಲಿಯ ನಡುವಿನ ಫೈನಲ್‌ ಪಂದ್ಯದ ವೀಕ್ಷಣೆ ಗಣ್ಯರ ದಂಡೇ ಆಗಮಿಸಲಿದೆ. ಇವರಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತದ ಹಿಂದಿನೆರಡು ವಿಶ್ವಕಪ್‌ ವಿಜೇತ ತಂಡಗಳ ನಾಯಕರಾದ ಕಪಿಲ್‌ದೇವ್‌ ಮತ್ತು ಮಹೇಂದ್ರ ಸಿಂಗ್‌ ಧೋನಿ ಪ್ರಮುಖರು.

ಆಸ್ಟ್ರೇಲಿಯದ ಪ್ರಧಾನಿ ಆ್ಯಂಥೋನಿ ಅಲ್ಬನಿಸ್‌ ಅವರನ್ನೂ ಆಹ್ವಾನಿಸಲಾಗಿದೆ. ಫೈನಲ್‌ ಪಂದ್ಯದ ದಿನವೇ ಅವರು ಅಹ್ಮದಾಬಾದ್‌ಗೆ ಆಗಮಿಸುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ರವಿವಾರ ಅಪರಾಹ್ನವೇ ಪಂದ್ಯವನ್ನು ವೀಕ್ಷಿಸಲಿದ್ದಾರೆ. ಮೋದಿ ಅವರ ಭೇಟಿಯ ಪ್ರತೀ ನಿಮಿಷದ ವಿವರವನ್ನು ಪರಿಶೀಲಿಸಲಾಗಿದೆ. ಅವರು ಸಂಚರಿಸುವ ಸ್ಥಳ ಹಾಗೂ ಮಾರ್ಗವನ್ನೂ ತಪಾಸಣೆ ಮಾಡಲಾಗಿದೆ.

ಈವರೆಗಿನ ವಿಶ್ವಕಪ್‌ ವಿಜೇತ ತಂಡಗಳ ನಾಯಕರೆಲ್ಲರಿಗೂ ಆಹ್ವಾನ ನೀಡಲಾಗಿದೆ. ಈ ನಾಯಕರೆಂದರೆ ಕ್ಲೈವ್‌ ಲಾಯ್ಡ, ಕಪಿಲ್‌ದೇವ್‌, ಅಲನ್‌ ಬೋರ್ಡರ್‌, ಅರ್ಜುನ ರಣತುಂಗ, ಸ್ಟೀವ್‌ ವೋ, ರಿಕಿ ಪಾಂಟಿಂಗ್‌, ಧೋನಿಮೈಕಲ್‌ ಕ್ಲಾರ್ಕ್‌, ಇಯಾನ್‌ ಮಾರ್ಗನ್‌. ಆದರೆ ಭ್ರಷ್ಟಾಚಾರದ ಆರೋಪಕ್ಕೆ ಸಿಲುಕಿ ಜೈಲು ಪಾಲಾಗಿರುವ 1992ರ ವಿಶ್ವಕಪ್‌ ವಿಜೇತ ಪಾಕಿಸ್ಥಾನ ತಂಡದ ನಾಯಕ ಇಮ್ರಾನ್‌ ಖಾನ್‌ ಪಾಲ್ಗೊಳ್ಳುತ್ತಿಲ್ಲ.

ಭಾರತದ ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡುಲ್ಕರ್‌, ಯುವರಾಜ್‌ ಸಿಂಗ್‌, ವೀರೇಂದ್ರ ಸೆಹವಾಗ್‌, ಅನಿಲ್‌ ಕುಂಬ್ಳೆ, ಸೌರವ್‌ ಗಂಗೂಲಿ ಮೊದಲಾದವರು ಫೈನಲ್‌ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.

ಖ್ಯಾತ ತಾರೆಗಳಾದ ಅಮಿತಾಭ್‌ ಬಚ್ಚನ್‌, ರಜನೀಕಾಂತ್‌, ಕಮಲಹಾಸನ್‌, ಮೋಹನ್‌ಲಾಲ್‌, ವಿಕ್ಟರಿ ವೆಂಕಟೇಶ್‌, ನಾಗಾರ್ಜುನ, ರಾಮ್‌ಚರಣ್‌ ಕೂಡ ಸ್ಟೇಡಿಯಂಗೆ ಆಗಮಿಸಿ ಪ್ರಶಸ್ತಿ ಸಮರವನ್ನು ಕಣ್ತುಂಬಿಸಿಕೊಳ್ಳಲಿದ್ದಾರೆ.

ಏರ್‌ ಶೋ ರಿಹರ್ಸಲ್‌
ವಿಶ್ವಕಪ್‌ ಫೈನಲ್‌ ಪಂದ್ಯದ ಪ್ರಮುಖ ಆಕರ್ಷಣೆ ಎಂದರೆ ಅಹ್ಮದಾಬಾದ್‌ ಸ್ಟೇಡಿಯಂ ಮೇಲೆ ಲೋಹದ ಹಕ್ಕಿಗಳ ಹಾರಾಟ, ಏರ್‌ ಶೋ. ಇದನ್ನು ಭಾರತೀಯ ವಾಯುಪಡೆಯ ಸೂರ್ಯ ಕಿರಣ್‌ ತಂಡ ನಡೆಸಿ ಕೊಡಲಿದೆ. ಇದರ ರಿಹರ್ಸಲ್‌ ಶುಕ್ರವಾರ ನಡೆಯಿತು. ಇದು ಪ್ರೇಕ್ಷಕರಿಗೆ ಅದ್ಭುತ ಅನುಭವ ನೀಡುವುದರಲ್ಲಿ ಅನುಮಾನವಿಲ್ಲ.
ಫೈನಲ್‌ ಪಂದ್ಯದ ಆರಂಭಕ್ಕೂ 10 ನಿಮಿಷ ಮೊದಲು ಈ ಏರ್‌ಶೋ ನಡೆಯಲಿದೆ ಎಂದು ಗುಜರಾತ್‌ ಕ್ರಿಕೆಟ್‌ ಮಂಡಳಿಯ ವಕ್ತಾರ ಜಗತ್‌ ಪಟೇಲ್‌ ಮಾಧ್ಯಮಗಳಿಗೆ ತಿಳಿಸಿದರು.

ಸಂಗೀತ ಮನೋರಂಜನೆ ಫೈನಲ್‌ ಪಂದ್ಯದ ಇನ್ನೊಂದು ಆಕರ್ಷಣೆ. “ಖಲಾಸಿ’ ಖ್ಯಾತಿಯ ಗಾಯಕರಾದ ದುವಾ ಲಿಪಾ, ಆದಿತ್ಯ ಗಢವಿ, ಗಾಯಕಿ ಜೊನಿಟಾ ಗಾಂಧಿ, ಸಂಗೀತ ನಿರ್ದೇಶಕ ಪ್ರೀತಮ್‌ ಚಕ್ರವರ್ತಿ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.