Mohammed Shami ಭಾರತದ ಬೌಲಿಂಗ್‌ ಸೂಪರ್‌ಸ್ಟಾರ್‌

ಆಡದಿದ್ದರೂ ಅವರ ಮನಃಸ್ಥಿತಿ ಉತ್ತಮವಾಗಿ ಇರುತ್ತದೆ...

Team Udayavani, Nov 17, 2023, 1:24 AM IST

1-dSS-s

ಮುಂಬಯಿ: ನ್ಯೂಜಿ ಲ್ಯಾಂಡ್‌ ವಿರುದ್ಧದ ಅದ್ಭುತ ಸೆಮಿಫೈನಲ್‌ ಹೋರಾಟದ ವೇಳೆ ಭಾರತದ ಇಬ್ಬರು ದಿಗ್ಗಜರಾದ ವಿರಾಟ್‌ ಕೊಹ್ಲಿ ಮತ್ತು ಮೊಹಮ್ಮದ್‌ ಶಮಿ ಅವರು ತಮ್ಮ ಕ್ಷೇತ್ರದಲ್ಲಿ ವಿರಾಟ್‌ ದರ್ಶನ ನೀಡಿ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ ಶತಕಗಳ ವಿಶ್ವದಾಖಲೆ ಮಾಡುವಾಗ ಪ್ರೇಕ್ಷಕರು ಕೊಹ್ಲಿ ಕೊಹ್ಲಿ ಎಂದು ಕೂಗಿದರೆ ಶಮಿ ಬೌಲಿಂಗ್‌ ದಾಳಿಗೆ ಇಳಿಯುವಾಗಲೂ ಪ್ರೇಕ್ಷಕರು ಶಮಿ ಶಮಿ ಎಂದು ಕೂಗಿ ಬೌಲರನ್ನು ಪ್ರೋತ್ಸಾಹಿಸಿದ್ದು ಕಂಡು ಬಂತು.

ಈ ವಿಶ್ವಕಪ್‌ನಲ್ಲಿ ಶಮಿಯ ಸಾಧನೆ ಅತ್ಯದ್ಭುತ ಎನ್ನಬಹುದು. ಭಾರತದ ಬೌಲಿಂಗ್‌ ಸೂಪರ್‌ ಸ್ಟಾರ್‌ ಆಗಿ ಮೂಡಿರುವ ಅವರು ಬ್ಯಾಟಿಂಗ್‌ನಲ್ಲಿ ಕೊಹ್ಲಿ ಮಾಡಿರುವಷ್ಟೇ ಸಾಧನೆಯನ್ನು ಶಮಿ ಬೌಲಿಂಗ್‌ನಲ್ಲಿ ಮಾಡಿ ತೋರಿಸಿದ್ದಾರೆ. ಅವರ ಈ ಸಾಧನೆ ಕೇವಲ ನ್ಯೂಜಿಲ್ಯಾಂಡ್‌ ವಿರುದ್ಧದ ಪಂದ್ಯವೊಂದರಲ್ಲಿ ಮಾತ್ರವಲ್ಲ. ಆಡಿದ ಎಲ್ಲ ಪಂದ್ಯಗಳಲ್ಲಿ ಅಮೋಘ ನಿರ್ವಹಣೆ ನೀಡಿರುವ ಅವರು ಉಳಿದ ಬೌಲರ್‌ಗಳ ನಿರ್ವಹಣೆಗಿಂತ ಮುಂದಿದ್ದಾರೆ.

ಅವರು ವಿಶ್ವಕಪ್‌ನಲ್ಲಿ ಪಡೆದ ವಿಕೆಟ್‌ಗಳ ಸಂಖ್ಯೆಯೇ ಅವರ ಸಾಧನೆಯನ್ನು ಹೇಳುತ್ತದೆ. ಆಡಿದ ಆರು ಪಂದ್ಯಗಳಿಂದ ಅವರು 23 ವಿಕೆಟ್‌ ಉರುಳಿಸಿದ್ದಾರೆ. ಅದರಲ್ಲಿ ಮೂರು ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ. 10.9 ಸ್ಟ್ರೈಕ್‌ರೇಟ್‌ನಲ್ಲಿ ಬೌಲಿಂಗ್‌ ನಿರ್ವಹಣೆ ಮಾಡಿ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

ಆಡುವ ಬಳಗದಲ್ಲಿರಲಿಲ್ಲ
ನಿಜವಾಗಿ ಹೇಳುವುದಾದರೆ ಶಮಿ ಅವರು ಆರಂಭದ ನಾಲ್ಕು ಪಂದ್ಯಗಳಲ್ಲಿ ಆಟವಾಡುವ 11 ಸದಸ್ಯರ ಬಳಗದಲ್ಲಿ ಇರಲಿಲ್ಲ. ಎಂಟನೇ ಕ್ರಮಾಂಕದಲ್ಲಿ ಹೆಚ್ಚುವರಿ ಭದ್ರತಾ ಕಾರಣಗಳಿಗಾಗಿ ಆಲ್‌ರೌಂಡರ್‌ ಒಬ್ಬರನ್ನು ತಂಡದಲ್ಲಿ ಸೇರಿಸಿಕೊಳ್ಳುವುದು ಭಾರತದ ನಿರ್ಧಾರವಾಗಿತ್ತು. ಅದಕ್ಕಾಗಿ ಆರ್‌. ಅಶ್ವಿ‌ನ್‌ ಅವರನ್ನು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಡಿಸಲಾಯಿತು. ಪಾಕಿಸ್ಥಾನ, ಬಾಂಗ್ಲಾ ಮತ್ತು ಅಫ್ಘಾನಿಸ್ಥಾನ ವಿರುದ್ಧ ಶಾರ್ದೂಲ್‌ ಠಾಕೂರ್‌ ಅವರನ್ನು ಆಡಿಸಲಾಯಿತು.

ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್‌ ಪಾಂಡ್ಯ ಗಾಯಗೊಂಡ ಬಳಿಕ ಭಾರತೀಯ ತಂಡ ಯಾರನ್ನು ಆಯ್ಕೆ ಮಾಡುವ ಕುರಿತು ಗೊಂದಲದಲ್ಲಿ ಸಿಲುಕಿತು. ಬ್ಯಾಟ್ಸ್‌ಮನ್‌ ಮತ್ತು ಬೌಲಿಂಗಿನಲ್ಲಿ ಸಮರ್ಥರಿರುವ ಆಟಗಾರನ ಆಯ್ಕೆಯನ್ನು ತಂಡ ವ್ಯವಸ್ಥಾಪಕರು ಬಯಸಿದ್ದರು. ಇಂತಹ ಸಮಯದಲ್ಲಿ ಶಮಿ ತಂಡಕ್ಕೆ ಪ್ರವೇಶ ಪಡೆದರಲ್ಲದೇ ನ್ಯೂಜಿಲ್ಯಾಂಡ್‌ ವಿರುದ್ಧದ ಲೀಗ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದು ಗಮನ ಸೆಳೆದರು.

ಶಮಿ ಅವರೊಬ್ಬ ವಿಶೇಷ ಬೌಲರ್‌. ಅವರು ನಿಜವಾಗಿಯೂ ಉತ್ತಮವಾಗಿ ಬೌಲಿಂಗ್‌ ಮಾಡುತ್ತಾರೆ. ತಂಡದ ಹೊಂದಾಣಿಕೆಯಿಂದಾಗಿ ಅವರು ಆಯ್ಕೆಯಾಗುವುದು ಸ್ವಲ್ಪ ಕಷ್ಟ. ಆದರೆ ಅವರು ಆಡದಿದ್ದರೂ ಅವರ ಮನಃಸ್ಥಿತಿ ಉತ್ತಮವಾಗಿ ಇರುತ್ತದೆ ಎಂದು ಭಾರತದ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌ ಹೇಳಿದ್ದಾರೆ.

ನ್ಯೂಜಿಲ್ಯಾಂಡ್‌ ವಿರುದ್ಧದ ಸೆಮಿಫೈನಲ್‌ ಹೋರಾಟದ ವೇಳೆಯೂ ಶಮಿ ಶ್ರೇಷ್ಠ ಬೌಲಿಂಗ್‌ ಪ್ರದರ್ಶನ ನೀಡಿದ್ದರು. ಡೇವನ್‌ ಕಾನ್ವೇ ಮತ್ತು ರಚಿನ್‌ ರವೀಂದ್ರ ಅವರ ವಿಕೆಟನ್ನು ಹಾರಿಸುವ ಮೂಲಕ ಅವರು ಭಾರತಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆಬಳಿಕ ಕೇನ್‌ ವಿಲಿಯಮ್ಸನ್‌ ಮತ್ತು ಡ್ಯಾರಿಲ್‌ ಮಿಚೆಲ್‌ ಅಮೋಘವಾಗಿ ಆಡಿ ಮೂರನೇ ವಿಕೆಟಿಗೆ 181 ರನ್ನುಗಳ ಜತೆಯಾಟದಲ್ಲಿ ಭಾಗಿಯಾದರು. ಈ ಹಂತದಲ್ಲಿ ಮತ್ತೆ ದಾಳಿಗೆ ಇಳಿದ ಶಮಿ ಕಿವೀಸ್‌ ಮೇಲೆ ಮಾರಕವಾಗಿ ಎರಗಿದರು. ಅವರ ವೈವಿಧ್ಯಮಯ ಬೌಲಿಂಗ್‌ಗೆ ನ್ಯೂಜಿಲ್ಯಾಂಡ್‌ ಸಂಪೂರ್ಣ ಶರಣಾಯಿತು.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.