Pakistan ಗೆಲುವು ಗಾಜಾ ಜನತೆಗೆ ಅರ್ಪಿಸಿದ ರಿಜ್ವಾನ್!; ತೀವ್ರ ಟೀಕೆ
Team Udayavani, Oct 11, 2023, 11:25 PM IST
ಹೈದರಾಬಾದ್: ಶ್ರೀಲಂಕಾ ವಿರುದ್ಧ ಪಾಕಿಸ್ಥಾನ ಸಾಧಿಸಿದ ಗೆಲುವನ್ನು ಮೊಹಮ್ಮದ್ ರಿಜ್ವಾನ್ “ಗಾಜಾದಲ್ಲಿರುವ ಸಹೋದರ, ಸಹೋದರಿಯರಿಗೆ’ ಅರ್ಪಿಸಿ ತೀವ್ರ ಟೀಕೆಗೆ ಒಳಗಾಗಿದ್ದಾರೆ.
ಶ್ರೀಲಂಕಾ ವಿರುದ್ಧದ ದೊಡ್ಡ ಮೊತ್ತದ ಚೇಸಿಂಗ್ ವೇಳೆ ಮೊಹಮ್ಮದ್ ರಿಜ್ವಾನ್ ಅಜೇಯ ಶತಕ ಬಾರಿಸಿ ತಂಡದ ಜಯಭೇರಿ ಮೊಳಗಿಸಿದ್ದರು. ಅವರ ಆಟಕ್ಕೆ ಎಲ್ಲ ದಿಕ್ಕುಗಳಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು. ಆದರೆ ಗಾಜಾ ಹೇಳಿಕೆಯಿಂದ ನೆಟ್ಟಿಗರು ಅಸಮಾಧಾನಗೊಂಡಿದ್ದಾರೆ.
ಮೊಹಮ್ಮದ್ ರಿಜ್ವಾನ್ ಕ್ರಿಕೆಟ್ನತ್ತ ಮಾತ್ರ ಗಮನ ಹರಿಸುವುದು ಒಳ್ಳೆಯದು. ಜಗತ್ತಿನ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ ಎಂದಿದ್ದಾರೆ.
“ಈ ಗೆಲುವು ಗಾಜಾದಲ್ಲಿರುವ ನಮ್ಮ ಸಹೋದರ, ಸಹೋದರಿಯರಿಗಾಗಿ. ತಂಡಕ್ಕೆ ಗೆಲುವಿನ ಕೊಡುಗೆ ತಂದಿತ್ತಿದ್ದಕ್ಕೆ ಖುಷಿಯಾಗಿದೆ. ಜಯವನ್ನು ಸುಲಭಗೊಳಿಸಿದ ಅಬ್ದುಲ್ಲ ಶಫೀಕ್ ಮತ್ತು ಹಸನ್ ಅಲಿ ಅವರಿಗೆ ಶ್ರೇಯಸ್ಸು ಸಲ್ಲಬೇಕು. ಹೈದರಾಬಾದ್ ಜನತೆಯ ಅಮೋಘ ಆತಿಥ್ಯ ಮತ್ತು ಬೆಂಬಲಕ್ಕೆ ಧನ್ಯವಾದಗಳು’ ಎಂಬುದಾಗಿ ಮೊಹಮ್ಮದ್ ರಿಜ್ವಾನ್ “ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್