ಆಫ್ರಿಕಾ ಗೆಲ್ಲಲೇಬೇಕಿದೆ: ಜಾಕ್‌ ಕ್ಯಾಲಿಸ್‌


Team Udayavani, Jun 4, 2019, 6:00 AM IST

bangla

ಲಂಡನ್‌: ದಕ್ಷಿಣ ಆಫ್ರಿಕಾ ವಿಶ್ವಕಪ್‌ನ ಮುಂದಿನ ಯಾವುದೇ ಪಂದ್ಯಗಳಲ್ಲಿ ತಪ್ಪು ಮಾಡಲೇಬಾರದು ಮತ್ತು ಸೆಮಿಫೈನಲಿಗೇರುವ ಆಸೆ ಜೀವಂತವಿರಿಸಿಕೊಳ್ಳಬೇಕಾದರೆ ಇನ್ನುಳಿದ ಏಳೂ ಪಂದ್ಯಗಳಲ್ಲಿ ಗೆಲುವು ಸಾಧಿಸಲೇ ಬೇಕಾಗಿದೆ ಎಂದು ಮಾಜಿ ಆಲ್‌ರೌಂಡರ್‌ ಜಾಕ್‌ ಕ್ಯಾಲಿಸ್‌ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಆರಂಭಿಕ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡಿಗೆ 104 ರನ್ನಿನಿಂದ ಶರಣಾಗಿದ್ದರೆ, ರವಿವಾರ ಬಾಂಗ್ಲಾದೇಶದ ವಿರುದ್ಧ 21 ರನ್ನಿನಿಂದ ಸೋತು ತೀವ್ರ ಆಘಾತಕ್ಕೆ ಒಳಗಾಗಿದೆ.

ರನ್‌ಧಾರಣೆ ಅಗತ್ಯ
ದಕ್ಷಿಣ ಆಫ್ರಿಕಾ ಕಡಿಮೆಪಕ್ಷ ಆರು ಪಂದ್ಯಗಳಲ್ಲಿ ಗೆಲ್ಲಬೇಕಿದೆ. ಐದು ಪಂದ್ಯಗಳಲ್ಲಿ ಉತ್ತಮ ರನ್‌ಧಾರಣೆ ಯೊಂದಿಗೆ ಗೆದ್ದರೆ ಅಗ್ರ ನಾಲ್ಕರಲ್ಲಿ ಸ್ಪರ್ಧೆ ಮುಗಿಸಬಹುದು ಎಂದು ಕ್ಯಾಲಿಸ್‌ ವಿವರಿಸಿದರು.

ರೌಂಡ್‌ ರಾಬಿನ್‌ ಮಾದರಿಯ ಈ ಕೂಟದಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲಿಗೇರಲಿವೆ. ಹಾಗಾಗಿ ಬುಧವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಒಂದು ವೇಳೆ ಸೋತರೆ ದಕ್ಷಿಣ ಆಫ್ರಿಕಾದ ರನ್‌ಧಾರಣೆ ಮತ್ತು ಮುನ್ನಡೆಗೆ ಹೊಡೆತ ಬೀಳುವ ಸಾಧ್ಯತೆಯಿದೆ. ಯಾಕೆಂದರೆ ಒಂದು ವೇಳೆ ಅಂಕ ಮತ್ತು ಗೆಲುವು ಸಮನಾದರೆ ಮುನ್ನಡೆಯ ನಿರ್ಧಾರವನ್ನು ರನ್‌ರೇಟ್‌ ಮೂಲಕ ಮಾಡಲಾಗುತ್ತದೆ.

ಭಾರತದ ಸವಾಲು ಸುಲಭವಲ್ಲ
“ಭಾರತ ವಿರುದ್ಧದ ಪಂದ್ಯ ನಮಗೆ ಸುಲಭವಲ್ಲ. ಆದರೆ ಅದು ಭಾರತಕ್ಕೆ ಮೊದಲ ಪಂದ್ಯವಾಗಿದ್ದರೆ ನಮಗೆ ಮೂರನೆಯದು. ಹಾಗಾಗಿ ಸ್ವಲ್ಪಮಟ್ಟಿಗೆ ನಾವು ಮೇಲುಗೈ ಸಾಧಿಸಬಹುದು. ಭಾರತ ಕಳೆದೊಂದು ವಾರದಿಂದ ಆಡಿಲ್ಲ. ಅವರಿಗೆ ಮೊದಲ ಪಂದ್ಯದ ನರ್ವಸ್‌ ಇರಬಹುದು. ಆದರೆ ನಾವು ಪಂದ್ಯಕ್ಕೆ ಒಗ್ಗಿಕೊಂಡಿದ್ದೇವೆ’ ಎಂದರು ಕ್ಯಾಲಿಸ್‌.

“ಕ್ರಿಕೆಟ್‌ನಲ್ಲಿ ಕೆಲವೊಮ್ಮೆ ಪವಾಡ ನಡೆಯುತ್ತದೆ. ಒಂದು ವೇಳೆ ನಾವು ಭಾರತ ವಿರುದ್ಧ ಗೆದ್ದರೆ ಮುಂದಿನ ಪಂದ್ಯಗಳಲ್ಲಿ ಗೆಲ್ಲಲು ಪ್ರಯತ್ನಿಸಬಹುದು ಮತ್ತು ಸೆಮಿಫೈನಲ್‌ ರೇಸ್‌ನಲ್ಲಿ ನಾವು ಕೂಡ ಸ್ಪರ್ಧಿಯಾಗಬಹುದು’ ಎಂದು ಕ್ಯಾಲಿಸ್‌ ಹೇಳಿದರು.

ಬಾಂಗ್ಲಾ ವಿರುದ್ಧದ ಪಂದ್ಯದ ವೇಳೆ ನಾಯಕ ಫಾ ಡು ಪ್ಲೆಸಿಸ್‌ ಸಮರ್ಪಕ ಪರ್ಯಾಯ ಯೋಜನೆ ಹಾಕಿಕೊಂಡಿಲ್ಲ ಎಂದು ಕ್ಯಾಲಿಸ್‌ ಟೀಕಿಸಿದರು. ಪಂದ್ಯದ ಬಗ್ಗೆ ಯೋಜನೆ ಹಾಕಿಕೊಳ್ಳುವುದು ಒಳ್ಳೆಯದು. ಆದರೆ ಒಂದು ವೇಳೆ ಅದು ಕಾರ್ಯಗತಗೊಳ್ಳದಿದ್ದ ಸಂದರ್ಭ ನಮ್ಮಲ್ಲಿ ಪರ್ಯಾಯ ಯೋಜನೆ ಇರುವ ಅಗತ್ಯವಿರುತ್ತದೆ ಎಂದ ಕ್ಯಾಲಿಸ್‌, ಈ ಪಂದ್ಯದಲ್ಲಿ ನಾವು ಒಂದು ಹೆಜ್ಜೆ ಹಿಂದೆ ಇದ್ದೆವು ಎಂದರು. ದಕ್ಷಿಣ ಆಫ್ರಿಕಾ ವೇಗದ ಬೌಲರ್‌ಗಳಿಗೆ ಗಾಯವಾಗಿರುವುದರಿಂದ ತಂಡಕ್ಕೆ ಹೊಡೆತ ಬಿದ್ದಿದೆ ಎಂಬುದನ್ನು ಕ್ಯಾಲಿಸ್‌ ಒಪ್ಪಿಕೊಂಡರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.