“ನಾನು ಈಗಲೇ ನಿವೃತ್ತಿಯಾಗಬೇಕೆಂದು ಹಲವರು ಕಾಯುತ್ತಿದ್ದಾರೆ’


Team Udayavani, Jul 7, 2019, 12:48 PM IST

dhoni

ಲಂಡನ್‌: ವಿಶ್ವಕಪ್‌ ಮುಕ್ತಾಯದ ಹಂತಕ್ಕೆ ಬಂದಿದೆ. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ ನಿವೃತ್ತಿಯಾಗುತ್ತಾರೆನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಮೊದಲ ಬಾರಿ ಸ್ವತಃ ಧೋನಿ ಮೌನ ಮುರಿದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾನು ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಮುನ್ನವೇ ನಿವೃತ್ತಿಯಾಗಬೇಕೆಂದು ಬೇಕಾದಷ್ಟು ಮಂದಿ ಹಾರೈಸುತ್ತಿದ್ದಾರೆ. ಆದರೆ ಯಾವಾಗ ನಿವೃತ್ತಿಯಾಗುತ್ತೇನೆಂದು ನನಗೇ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಈ ಹೇಳಿಕೆ ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ಪ್ರಸ್ತುತ ವಿಶ್ವಕಪ್‌ನಲ್ಲಿ ಧೋನಿ ಕಳಪೆ ಬ್ಯಾಟಿಂಗ್‌ ಮಾಡಿದ್ದಾರೆಂದು ಸಚಿನ್‌ ತೆಂಡುಲ್ಕರ್‌, ಸೌರವ್‌ ಗಂಗೂಲಿ ಸಹಿತ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಅನಾಮಿಕ ಬಿಸಿಸಿಐ ಅಧಿಕಾರಿಯೊಬ್ಬರು, ಧೋನಿಗೆ ವಿಶ್ವಕಪ್ಪೇ ಕೊನೆ ಎಂದು ಹೇಳಿದ್ದರು. ಇದರ ಬಳಿಕ ಧೋನಿ ನಿವೃತ್ತಿಯ ಕುರಿತು ಸತತವಾಗಿ ಚರ್ಚೆ ಆರಂಭವಾಗಿದೆ. ಆದರೆ ಧೋನಿ ಮಾತ್ರ ತಮ್ಮ ಅಚ್ಚರಿಯ ಹೇಳಿಕೆ ಮೂಲಕ ಎಲ್ಲರನ್ನೂ ಸ್ಟಂಪ್‌ಔಟ್‌ ಮಾಡಿದ್ದಾರೆ. ಈ ಹೇಳಿಕೆ ಯಾರನ್ನು ಕುರಿತಾಗಿ ನೀಡಿದ್ದು ಎಂಬುದೇ ಗೊಂದಲ ಮೂಡಿಸಿದೆ.

ಅಲ್ಲದೇ ತಂಡದೊಳಗೆ ಯಾರನ್ನಾದರೂ ಉದ್ದೇಶಿಸಿದ್ದೇ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿತ್ತು. ಹಾಗೇನು ಇಲ್ಲ ಎಂದು ಧೋನಿಯೇ ಸ್ಪಷ್ಟೀಕರಿಸಿದ್ದಾರೆ. ಇದಕ್ಕಿಂತ ಕುತೂಹಲ ಮೂಡಿಸಿರುವುದು ಧೋನಿ ತಾನು ಯಾವಾಗ ನಿವೃತ್ತಿಯಾಗುತ್ತೇನೆಂದು ತನಗೇ ಗೊತ್ತಿಲ್ಲ ಎಂದಿರುವುದು. ಹಿಂದಿನ
ಲೆಕ್ಕಾಚಾರಗಳ ಪ್ರಕಾರ, ವಿಶ್ವಕಪ್‌ಗೆ ಧೋನಿ ಆಟ ಅಂತ್ಯ ಎಂದು ಹೇಳಲಾಗಿತ್ತು. ಈಗ ಧೋನಿ ಇನ್ನೂ ಒಂದಷ್ಟು ಕಾಲ ಆಡುವ ಬಯಕೆ
ಹೊಂದಿರುವಂತಹ ಸುಳಿವನ್ನು ತಮ್ಮ ಹೇಳಿಕೆ ಮೂಲಕ ನೀಡಿದ್ದಾರೆ.

ಅಲ್ಲಿಗೆ ಅವರ ಸ್ಥಾನ ತುಂಬಲು ಕಾಯುತ್ತಿರುವ ರಿಷಭ್‌ ಪಂತ್‌ರಂತಹ ವಿಕೆಟ್‌ ಕೀಪರ್‌ಗಳು ಇನ್ನೂಕಾಯುವ ಪರಿಸ್ಥಿತಿ ಬರಬಹುದು. ಈ ಹಿಂದೆ ಧೋನಿ ಟೆಸ್ಟ್‌, ಸೀಮಿತ ಓವರ್‌ಗಳ ನಾಯಕತ್ವವನ್ನು ತ್ಯಜಿಸಿದಾಗ, ಅದನ್ನು ಹಠಾತ್ತನೆ ಪ್ರಕಟಿಸಿದ್ದರು. ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಿರಲಿಲ್ಲ. ಈಗಲೂ ಅಂತಹ ಹಠಾತ್‌ ಘೋಷಣೆಯೊಂದನ್ನು ಅಭಿಮಾನಿಗಳು ನಿರೀಕ್ಷಿಸಿದ್ದಾರೆ.

ಧೋನಿ ಒಂದು ಹೆಸರಲ್ಲ, ಅದ್ಭುತ ಪರಂಪರೆ
ಭಾನುವಾರ ಧೋನಿ ಹುಟ್ಟುಹಬ್ಬವಿದೆ. ಎಲ್ಲ ಕಡೆಯಿಂದ ಅಭಿಮಾನದ ಮಹಾಪೂರವೇ ಹರಿದುಬರುತ್ತಿದೆ. ಧೋನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಂಸ್ಥೆ ವಿಶೇಷವಾಗಿ ಅಭಿನಂದಿಸಿದೆ. “ಧೋನಿಯೆಂದರೆ ಕೇವಲ ಒಂದು ಹೆಸರಲ್ಲ, ಅವರೊಂದು ಮರೆಯಲಾಗದ ಪರಂಪರೆ. ಅವರು ಭಾರತೀಯ ಕ್ರಿಕೆಟ್‌ನ ಚಹರೆಯನ್ನೇ ಬದಲಿಸಿದರು. ಜಾಗತಿಕವಾಗಿ ಲಕ್ಷಾಂತರ ಮಂದಿಯನ್ನು ಪ್ರಭಾವಿಸಿದ ವ್ಯಕ್ತಿ ಅವರು ಎಂದು ಐಸಿಸಿ ಹೇಳಿದೆ. ಧೋನಿ ನಾಯಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡ ಮೂರೂ ಮಾದರಿಯಲ್ಲಿ ಅವರ ನಾಯಕತ್ವದಡಿಯಲ್ಲಿ ವಿಶ್ವ ನಂ.1 ಎನಿಸಿತ್ತು. ನಾಯಕನಾಗಿ ಅವರು ಒಂದು ಟಿ20, ಒಂದು ಏಕದಿನ ವಿಶ್ವಕಪ್‌ ಗೆದ್ದಿದ್ದಾರೆ. ಹಾಗೆಯೇ ಮಿನಿ ವಿಶ್ವಕಪ್‌ ಎಂದು ಕರೆಸಿಕೊಳ್ಳುವ ಚಾಂಪಿಯನ್ಸ್‌ ಟ್ರೋಯನ್ನು ಗೆದ್ದಿದ್ದಾರೆ. ವಿಶ್ವದ ಬೇರಾವುದೇ ನಾಯಕ ಈ ಮೂರು ಕಿರೀಟಗಳನ್ನು ಗೆದ್ದಿಲ್ಲ. ಇದು ವಿಶ್ವದಾಖಲೆಯಾಗಿದೆ. ಮೇಲು ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ, ಕಡೆಯ ಕಡೆಯ ಹಂತದ ಬ್ಯಾಟ್ಸ್‌ಮನ್‌ ಆಗಿ ಅವರು ಜಾಗತಿಕ ಖ್ಯಾತಿ ಗಳಿಸಿದ್ದಾರೆ. ಈಗಲೂ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಅವರಿಗೆ ಅತ್ಯಂತ ಮಹತ್ವದ ಸ್ಥಾನವಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.